Homeಮುಖಪುಟತಮಿಳುನಾಡಿನಲ್ಲಿ ಹಾಲು ಸಂಗ್ರಹಣೆ ಮಾಡದಂತೆ ಅಮುಲ್‌ಗೆ ನಿರ್ದೇಶನ ನೀಡಬೇಕು: ಅಮಿತ್ ಶಾಗೆ ಸ್ಟಾಲಿನ್ ಪತ್ರ

ತಮಿಳುನಾಡಿನಲ್ಲಿ ಹಾಲು ಸಂಗ್ರಹಣೆ ಮಾಡದಂತೆ ಅಮುಲ್‌ಗೆ ನಿರ್ದೇಶನ ನೀಡಬೇಕು: ಅಮಿತ್ ಶಾಗೆ ಸ್ಟಾಲಿನ್ ಪತ್ರ

- Advertisement -
- Advertisement -

ಗುಜರಾತ್ ಮೂಲದ ಡೈರಿ ಅಮುಲ್‌ಗೆ ತಮಿಳುನಾಡಿನಲ್ಲಿ ರಾಜ್ಯದಲ್ಲಿ ಹಾಲು ಸಂಗ್ರಹಣೆ ಮಾಡದಂತೆ ತಕ್ಷಣದಿಂದ ಜಾರಿಗೆ ಬರುವಂತೆ ನಿರ್ದೇಶನ ನೀಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಒತ್ತಾಯಿಸಿ ಪತ್ರ ಬರೆದಿದ್ದಾರೆ.

ಕರ್ನಾಟಕ ರಾಜ್ಯ ಚುನಾವಣಾ ಪೂರ್ವದಲ್ಲಿ ಸಹಕಾರ ಸಚಿವರಾಗಿರುವ ಅಮಿತ್ ಶಾ ಅವರು, ಹಾಲು ಸಹಕಾರ ಸಂಘಗಳ ಸಹಯೋಗದ ಬಗ್ಗೆ ಮಾತನಾಡಿದ್ದರು. ಅದಕ್ಕೆ ಕಾಂಗ್ರೆಸ್‌ನವರು ಕರ್ನಾಟಕದ ಹಾಲು ಸಹಕಾರಿ ಸಂಸ್ಥೆಯಾದ ನಂದಿನಿಯನ್ನು “ಕತ್ತು ಹಿಸುಕಲು” ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದರು. ಇದಾದ ಬಳಿಕ ಇದೀಗ ತಮಿಳುನಾಡು ಸಿಎಂ ಸ್ಟಾಲಿನ್ ಅವರು ಈ ವಿಚಾರವಾಗಿ ಮಾತನಾಡಿದ್ದಾರೆ.

ಈ ಬಗ್ಗೆ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ”ತಮಿಳುನಾಡು ಹಾಲಿನ ಶೆಡ್ ಪ್ರದೇಶದಲ್ಲಿ ಕೈರಾ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಅಮುಲ್) ಹಾಲು ಸಂಗ್ರಹಣೆಯಿಂದ ಸಮಸ್ಯೆಗಳ ಉದ್ಭವಿಸುತ್ತವೆ” ಬಗ್ಗೆ ತಿಳಿಸಿದ್ದಾರೆ.

”ಇತ್ತೀಚಿಗೆ ಅಮುಲ್ ತನ್ನ ಬಹು-ರಾಜ್ಯ ಸಹಕಾರಿ ಪರವಾನಗಿಯನ್ನು ಕೃಷ್ಣಗಿರಿ ಜಿಲ್ಲೆಯಲ್ಲಿ ಶೀತಲೀಕರಣ ಕೇಂದ್ರಗಳು ಹಾಗೂ ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಬಳಸಿಕೊಂಡಿರುವುದು ರಾಜ್ಯ ಸರಕಾರದ ಗಮನಕ್ಕೆ ಬಂದಿದೆ” ಎಂದು ಸ್ಟಾಲಿನ್ ಹೇಳಿದ್ದಾರೆ.

ಅಲ್ಲದೆ, ”ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿ, ವೆಲ್ಲೂರು, ರಾಣಿಪೇಟ್, ತಿರುಪತ್ತೂರ್, ಕಾಂಚೀಪುರಂ ಹಾಗೂ ತಿರುವಳ್ಳೂರು ಜಿಲ್ಲೆಗಳಲ್ಲಿ ಎಫ್‌ಪಿಒಗಳು ಹಾಗೂ ಸ್ವಸಹಾಯ ಸಂಘಗಳ ಮೂಲಕ ಹಾಲನ್ನು ಸಂಗ್ರಹಿಸಲು ಅಮುಲ್ ಯೋಜಿಸಿದೆ” ಎಂದು ನಮಗೆ ತಿಳಿದಿದೆ ಎಂದಿದ್ದಾರೆ.

”ಭಾರತದಲ್ಲಿ ಸಹಕಾರಿ ಸಂಸ್ಥೆಗಳು ಪರಸ್ಪರರ ಹಾಲಿನ ಶೆಡ್ ಪ್ರದೇಶವನ್ನು ಉಲ್ಲಂಘಿಸದೆ ಅಭಿವೃದ್ಧಿ ಹೊಂದಲು ಅವಕಾಶ ನೀಡುವುದು ರೂಢಿಯಾಗಿದೆ. ಈ ರೀತಿ ಹಾಲು ಸಂಗ್ರಹಣೆಯು ‘ಆಪರೇಷನ್ ವೈಟ್ ಫಡ್’ನ ಮನೋಭಾವಕ್ಕೆ ವಿರುದ್ಧವಾಗಿದೆ ಹಾಗೂ ಚಾಲ್ತಿಯಲ್ಲಿರುವ ಹಾಲಿನ ಕೊರತೆಯ ಸನ್ನಿವೇಶದಲ್ಲಿ ಗ್ರಾಹಕರಿಗೆ ಸಮಸ್ಯೆಗಳನ್ನು ಉಲ್ಬಣಗೊಳಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

”ಅಮುಲ್‌ನ ಈ ಕಾರ್ಯವು ಆವಿನ್‌ನ (ಟಿಎನ್ ಕೋ- ಆಪರೇಟಿವ್ ಹಾಲು ಉತ್ಪಾದಕರ ಫೆಡರೇಶನ್) ಹಾಲಿನ ಶೆಡ್ ಪ್ರದೇಶವನ್ನು ಉಲ್ಲಂಘಿಸುತ್ತದೆ. ಇದು ದಶಕಗಳಿಂದ ನಿಜವಾದ ಸಹಕಾರ ಮನೋಭಾವದಿಂದ ಪೋಷಿಸಲ್ಪಟ್ಟಿದೆ. ಅಮುಲ್‌ನ ಈ ಕ್ರಮವು ಹಾಲು ಮತ್ತು ಹಾಲಿನ ಉತ್ಪನ್ನಗಳ ಸಂಗ್ರಹಣೆ ಮತ್ತು ಮಾರಾಟದಲ್ಲಿ ತೊಡಗಿರುವ ಸಹಕಾರಿಗಳ ನಡುವೆ ಅನಾರೋಗ್ಯಕರ ಸ್ಪರ್ಧೆಯನ್ನು ಸೃಷ್ಟಿಸುತ್ತದೆ” ಎಂದು ಸ್ಟಾಲಿನ್ ಪತ್ರದಲ್ಲಿ ಬರೆದಿದ್ದಾರೆ.

”ತಮಿಳುನಾಡು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ ಮತ್ತು ರಾಜ್ಯ ಸರ್ಕಾರದ ಒಡೆತನದ ಆವಿನ್ ಸಹಕಾರಿ ಅಡಿಯಲ್ಲಿ ಗ್ರಾಮೀಣ ಹಾಲು ಉತ್ಪಾದಕರು ಮತ್ತು ಗ್ರಾಹಕರ ಅನುಕೂಲಕ್ಕಾಗಿ 9,673 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಅವರು ಹೇಳಿದ್ದಾರೆ.

”ಅವರು ಸುಮಾರು 4.5 ಲಕ್ಷ ಸುರಿಯುವ ಸದಸ್ಯರಿಂದ 35 LLPD ಹಾಲನ್ನು ಸಂಗ್ರಹಿಸುತ್ತಾರೆ” ಎಂದು ಸ್ಟಾಲಿನ್ ಹೇಳಿದರು. ಈ ವ್ಯವಸ್ಥೆಯಲ್ಲಿ ಹಾಲು ಉತ್ಪಾದಕರಿಗೆ ವರ್ಷವಿಡೀ ಲಾಭದಾಯಕ ಮತ್ತು ಏಕರೂಪದ ಬೆಲೆಗಳ ಭರವಸೆ ಇದೆ” ಎಂದು ಅವರು ಹೇಳಿದ್ದಾರೆ

”ಆವಿನ್ ಜಾನುವಾರು ಆಹಾರ, ಮೇವು, ಖನಿಜ ಮಿಶ್ರಣ, ಪ್ರಾಣಿಗಳ ಆರೋಗ್ಯ ರಕ್ಷಣೆ ಮತ್ತು ಹಾಲು ಉತ್ಪಾದಕರ ಪ್ರಾಣಿಗಳಿಗೆ ತಳಿ ಸೇವೆಗಳನ್ನು ಒದಗಿಸುತ್ತದೆ ಎಂದು ಸ್ಟಾಲಿನ್ ಬರೆದಿದ್ದಾರೆ. ಇದಲ್ಲದೆ, ಇದು ನಮ್ಮ ದೇಶದಲ್ಲಿ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳ ಪೂರೈಕೆ ಮಾಡುತ್ತದೆ. ಹೀಗಾಗಿ, ಗ್ರಾಮೀಣ ಹಾಲು ಉತ್ಪಾದಕರ ಜೀವನೋಪಾಯವನ್ನು ಸುಧಾರಿಸುವಲ್ಲಿ ಮತ್ತು ಗ್ರಾಹಕರ ಪೌಷ್ಟಿಕಾಂಶದ ಅಗತ್ಯವನ್ನು ಪೂರೈಸುವಲ್ಲಿ ಆವಿನ್ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಸ್ಟಾಲಿನ್ ಅವರು ಶಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...