Homeಮುಖಪುಟಮಣಿಪುರ ಹಿಂಸಾಚಾರ: ಅಗತ್ಯ ವಸ್ತುಗಳ ಬೆಲೆ ಮುಗಿಲೆತ್ತರ!

ಮಣಿಪುರ ಹಿಂಸಾಚಾರ: ಅಗತ್ಯ ವಸ್ತುಗಳ ಬೆಲೆ ಮುಗಿಲೆತ್ತರ!

ಎಲ್‌ಪಿಜಿ ಸಿಲಿಂಡರ್‌ ಬೆಲೆ ರೂ. 2,000ಕ್ಕಿಂತ ಹೆಚ್ಚಿದ್ದರೆ, ಪೆಟ್ರೋಲ್ ಬೆಲೆ ರೂ. 250 ಆಗಿದೆ

- Advertisement -
- Advertisement -

ಮಣಿಪುರದಲ್ಲಿ ಎಸ್‌ಟಿ ಮೀಸಲಾತಿ ವಿಚಾರ ಸಂಬಂಧ ಕುಕಿಗಳು ಮತ್ತು ಮೈಥೇಯಿ ಸಮುದಾಯಗಳ ನಡುವೆ ಭುಗಿಲೆದ್ದಿರುವ ಸಂಘರ್ಷವು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿ ಪರಿಣಮಿಸಿದೆ.

ರಾಜ್ಯದ ಹಲವೆಡೆ ನಿರಂತರ ಕರ್ಫ್ಯೂ ಮುಂದುವರಿಕೆ ಆಗುತ್ತಿರುವುದರಿಂದ ಅಡುಗೆ ಅನಿಲ ಮತ್ತು ಪೆಟ್ರೋಲ್‌ನಂತಹ ಅತ್ಯಗತ್ಯ ಸರಕುಗಳು ಸುಲಭವಾಗಿ ಲಭ್ಯವಾಗುತ್ತಿಲ್ಲ. ಕಾಳಸಂತೆಕೋರರು ಸನ್ನಿವೇಶದ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆಂದು ರಾಜ್ಯದ ಜನತೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಎಲ್‌ಪಿಜಿ ಸಿಲಿಂಡರ್‌ನ ಬೆಲೆ 2,000 ರೂ.ಗಿಂತ ಹೆಚ್ಚಿದ್ದರೆ, ಕಾಳಸಂತೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 250 ರೂ. ಏರಿಕೆ ಮಾಡಲಾಗಿದೆ.

ಅದೇ ರೀತಿ ಅಕ್ಕಿ, ಆಲೂಗಡ್ಡೆ, ಈರುಳ್ಳಿ ಮತ್ತು ಇತರ ತರಕಾರಿಗಳಂತಹ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ.

ಇಂಫಾಲ್ ಕಣಿವೆಯ ನಿವಾಸಿ ಶ್ಯಾಮಕುಮಾರ್ ಅಯೆಕ್ಪಾಕ್ ‘ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯಿಸಿ, “ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಪರದಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಇಲ್ಲಿನ ಜನರು ಈಗಾಗಲೇ ಹಿಂಸಾಚಾರದಿಂದ ಜರ್ಜರಿತರಾಗಿದ್ದಾರೆ. ಕರ್ಫ್ಯೂ ಈಗ ಜನರ ಸಂಕಷ್ಟವನ್ನು ಹೆಚ್ಚಿಸಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಏನೂ ಸುಲಭವಾಗಿ ಲಭ್ಯವಾಗುತ್ತಿಲ್ಲ. ಪೆಟ್ರೋಲ್ ಬಂಕ್‌ಗಳನ್ನು ಮುಚ್ಚಲಾಗಿದೆ. ಇದು ಕಾಳಸಂತೆಕೋರರಿಗೆ ಅವಕಾಶ ಒದಗಿಸಿದೆ. ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವುದು ಸೇರಿದಂತೆ ತುರ್ತು ಸೇವೆಗಳಿಗೆ ಪೆಟ್ರೋಲ್ ಅಗತ್ಯವಾಗಿದೆ. ಕಾಳಸಂತೆಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 250 ರೂ. ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ನಿವಾಸಿ ಸರೋಜ್ ಸಿಂಗ್ ಮಾತನಾಡಿ, “ಬಹುತೇಕ ವಿವಿಧ ತಳಿಯ ಅಕ್ಕಿಯ ಬೆಲೆ ಶೇ.50ರಷ್ಟು ಏರಿಕೆಯಾಗಿದೆ. ಅಂಗಡಿಗಳು ಮುಚ್ಚಿರುವುದರಿಂದ ಜನರಿಗೆ ಏನೂ ಸಿಗುತ್ತಿಲ್ಲ. ಅವರು ಅಗತ್ಯ ವಸ್ತುಗಳನ್ನು ಕಾಳಸಂತೆಯಿಂದ ಖರೀದಿಸುವುದು ಅನಿವಾರ್ಯವಾಗಿದೆ” ಎಂದು ವಿಷಾದಿಸಿದ್ದಾರೆ.

“ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಾಗಿದೆ. ಮದುವೆಗಳನ್ನು ಏರ್ಪಡಿಸಿಕೊಂಡಿರುವ ಕುಟುಂಬಗಳು ಭಾರೀ ಬೆಲೆ ತೆರಬೇಕಾಗಿದೆ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಮಣಿಪುರ; ಮತ್ತೆ ಉದ್ವಿಗ್ನತೆ, ಗುಂಡಿನ ದಾಳಿಗೆ ವ್ಯಕ್ತಿ ಬಲಿ

ಇಂಫಾಲ್‌ನ ಹೋಟೆಲ್‌ನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅಸ್ಸಾಂನ ಸುಬೀರ್ ದಾಸ್, “ಪ್ರತಿಯೊಂದು ವಸ್ತುವಿನ ಬೆಲೆ ಗಣನೀಯವಾಗಿ ಹೆಚ್ಚಾಗಿದೆ” ಎಂದಿದ್ದಾರೆ.

“ಒಂದು ಪ್ಲೇಟ್ ಬ್ರಾಯ್ಲರ್ ಮೊಟ್ಟೆ ಈಗ 260 ರಿಂದ 300 ರೂ.ವರೆಗೆ ಏರಿಕೆಯಾಗಿದೆ. ಹಿಂಸಾಚಾರ ಭುಗಿಲೇಳುವ ಮೊದಲು ಒಂದು ಪ್ಲೇಟ್‌ ಮೊಟ್ಟೆ 200 ರೂ.ಗೆ ಮಾರಾಟವಾಗುತ್ತಿತ್ತು. ಬ್ರಾಯ್ಲರ್ ಉಂಡು ಕೋಳಿ ಕೆಜಿಗೆ 200 ರೂ.ನಿಂದ 300 ರೂ.ಗೆ ಏರಿಕೆಯಾಗಿದೆ. ಆಲೂಗಡ್ಡೆ ಕೆಜಿಗೆ ರೂ. 20 ಇತ್ತು. ಈಗ ಕೆಜಿಗೆ 40 ರೂ. ಆಗಿದೆ. ಅದೇ ರೀತಿ ಈರುಳ್ಳಿ ಬೆಲೆ ಕೆಜಿಗೆ 30 ರೂ.ನಿಂದ 50-60 ರೂ.ಗೆ ಏರಿದೆ, ತರಕಾರಿಗಳು ಕೂಡ ದುಬಾರಿಯಾಗಿದೆ” ಎಂದು ದಾಸ್‌ ಆತಂಕ ವ್ಯಕ್ತಪಡಿಸಿದ್ದಾರೆ.

“ನಾಗಾ ಹಿಲ್ಸ್‌ನಲ್ಲಿ ಯಾವುದೇ ಕರ್ಫ್ಯೂ ಇಲ್ಲ. ಆದರೆ ಅಗತ್ಯ ವಸ್ತುಗಳ ಬೆಲೆಗಳು ಅಲ್ಲಿಯೂ ಏರಿಕೆ ಕಂಡಿವೆ. ನಮ್ಮ ಉಖ್ರುಲ್ ಜಿಲ್ಲೆಯಲ್ಲಿ ಪ್ರತಿ ಅಗತ್ಯ ವಸ್ತುಗಳ ಬೆಲೆ ಶೇ.10-20ರಷ್ಟು ಹೆಚ್ಚಾಗಿದೆ” ಎಂದು ನಾಗಾ ಮುಖಂಡ ಮಂಗ್ಯಾಂಗ್ ರಾಮನ್ ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...