Homeಮುಖಪುಟದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

- Advertisement -
- Advertisement -

ನಾನು ಕಟ್ಟುವ ತೆರಿಗೆ ಹಣ ದೇಶದ ಅಭಿವೃದ್ದಿಗಾಗಿಯೇ ಹೊರತು ಉಚಿತ ಹಂಚಿಕೆಗೆ ಅಲ್ಲ ಎಂಬ ಕಥನವೊಂದು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ರೆವ್ಡಿ (ಬಿಟ್ಟಿ) ಸಂಸ್ಕೃತಿ ಎಂದು ಅಣಕ ಮಾಡುತ್ತಿದ್ದರು. ಅದರ ಮುಂದುವರಿದ ಭಾಗವಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿ ಅಧಿಕಾರ ಹಿಡಿದಿದ್ದು 5 ಗ್ಯಾರಂಟಿ ಯೋಜನೆಗಳ ಮೂಲಕ ಬಡಜನರ ಸ್ನೇಹಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಇದನ್ನು ವಿರೋಧಿಸುತ್ತಿರುವ ಮೇಲ್ವರ್ಗದ, ಪ್ರಬಲ ಸಮುದಾಯದ ಜನರು ನಾನು ಕಟ್ಟುವ ತೆರಿಗೆಯನ್ನು ಬಿಟ್ಟಿ ಭಾಗ್ಯಗಳಿಗೆ ಬಳಸಬೇಡಿ ಎನ್ನುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ದೇಶದಲ್ಲಿ ಯಾರು ಹೆಚ್ಚು ತೆರಿಗೆ ಕಟ್ಟುತ್ತಿದ್ದಾರೆ? ಯಾರ ಹಣ ಯಾರಿಗೆ ಬಳಕೆಯಾಗುತ್ತಿದೆ ಎಂಬುದನ್ನು ನೋಡೋಣ.

ನಮ್ಮ ಭಾರತ ದೇಶದಲ್ಲಿ ಸದ್ಯಕ್ಕೆ ಎರಡು ರೀತಿಯ ತೆರಿಗೆ ಪದ್ದತಿ ಇದೆ. ಅವುಗಳೆಂದರೆ

  1. ಪ್ರತ್ಯಕ್ಷ ತೆರಿಗೆ – ಆದಾಯ ತೆರಿಗೆ: ಅಂದರೆ ಸಂಬಳ, ಉದ್ಯಮ ಸೇರಿದಂತೆ ಇತರ ಮೂಲಗಳಿಂದ ಗಳಿಸುವ ವಾರ್ಷಿಕ ಆದಾಯದ ಮೇಲೆ ತೆರಿಗೆ ಕಟ್ಟಬೇಕಿರುತ್ತದೆ. ಇದರಲ್ಲಿ ಐದು ಸ್ಲ್ಯಾಬ್‌ಗಳಲ್ಲಿ ತೆರಿಗೆ ಕಟ್ಟಿಸಿಕೊಳ್ಳಲಾಗುತ್ತದೆ. ಇದನ್ನು ಪ್ರಗತಿಪರ ತೆರಿಗೆ ಪದ್ಧತಿ ಎನ್ನುತ್ತಾರೆ. ಏಕೆಂದರೆ ಇದರಲ್ಲಿ ಬಡವರಿಗೆ ಕಡಿಮೆ ತೆರಿಗೆ ಇದ್ದರೆ, ಶ್ರೀಮಂತರಿಗೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತದೆ. ತೆರಿಗೆ ಸ್ಲ್ಯಾಬ್‌ಗಳು ಕೆಳಗಿನಂತಿವೆ.

3 ಲಕ್ಷ ರೂವರೆಗೆ ಆದಾಯ – ತೆರಿಗೆ ಇಲ್ಲ

3 ಲಕ್ಷ ರೂ ಯಿಂದ 6 ಲಕ್ಷ ರೂ ವರೆಗೆ – ಶೇ 5ರಷ್ಟು ತೆರಿಗೆ

6 ರಿಂದ 9 ಲಕ್ಷ ರೂವರೆಗೆ – ಶೇ 10 ರಷ್ಟು ತೆರಿಗೆ

9 ರಿಂದ 12 ಲಕ್ಷ ರೂ ವರೆಗೆ– ಶೇ 15ರಷ್ಟು ತೆರಿಗೆ

12 ರಿಂದ 15 ಲಕ್ಷ ರೂವರೆಗೆ – ಶೇ 20ರಷ್ಟು ತೆರಿಗೆ

15 ಲಕ್ಷಕ್ಕಿಂತ ಮೇಲ್ಪಟ್ಟ ಆದಾಯಕ್ಕೆ ಶೇ 30ರಷ್ಟು ತೆರಿಗೆ ಹೇರಲಾಗಿದೆ.

ಇದರೊಟ್ಟಿಗೆ 50 ಕೋಟಿ ರೂಗಳಿಗೂ ಹೆಚ್ಚಿನ ವಾರ್ಷಿಕ ವ್ಯವಹಾರ ನಡೆಸುವ ಕಂಪನಿಗಳು ಕಾರ್ಪೋರೇಟ್ ಟ್ಯಾಕ್ಸ್ ಕಟ್ಟಬೇಕು. ಈ ಮೊದಲು ಅತಿ ಹೆಚ್ಚು ಸಂಪತ್ತು ಹೊಂದಿರುವವರಿಗೆ ಸರ್ಕಾರ ತೆರಿಗೆ ವಿಧಿಸುತ್ತಿತ್ತು. ಆದರೆ ಸಂಪತ್ತಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಹಾಕಿದ್ದಾರೆ.

2. ಪರೋಕ್ಷ ತೆರಿಗೆ – ಪ್ರತಿಯೊಬ್ಬರೂ ಪಾವತಿಸುವ ತೆರಿಗೆ: ಯಾವುದೇ ವಸ್ತುಗಳನ್ನು ಕೊಳ್ಳುವ ಮೂಲಕ ಪ್ರತಿಯೊಬ್ಬರೂ ತೆರಿಗೆ ಕಟ್ಟುತ್ತಾರೆ. ದುಡಿಯಲು ಸಾಧ್ಯವಾಗದವರು ಸಹ ಕಟ್ಟುವ ತೆರಿಗೆ ಇದಾಗಿದೆ. ಇದನ್ನು ಪ್ರತಿಗಾಮಿ ತೆರಿಗೆ ವ್ಯವಸ್ಥೆ ಎನ್ನಲಾಗುತ್ತದೆ. ಏಕೆಂದರೆ ದಿನಕ್ಕೆ 100 ರೂ ಸಂಪಾದಿಸುವವರು ಮತ್ತು ದಿನಕ್ಕೆ 100 ಕೋಟಿ ರೂ ಸಂಪಾದಿಸುವವರಿಬ್ಬರೂ ಒಂದೇ ತೆರಿಗೆ ಪಾವತಿಸಬೇಕಿರುತ್ತದೆ. ಅಂದರೆ ಇದು ಎಲ್ಲರಿಗೂ ಸಮಾನ ತೆರಿಗೆಯಾಗಿದೆ.

2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ.

ಅದರಲ್ಲಿಯೂ ಅತ್ಯಂತ ಪ್ರತಿಗಾಮಿ ತೆರಿಗೆ ವ್ಯವಸ್ಥೆಯಾದ ಜಿಎಸ್‌ಟಿ ಜಾರಿಯಾದ ನಂತರ ಈ ದೇಶದ ಶೇ.50 ರಷ್ಟು ಬಡವರು ಶೇ.64.3% ರಷ್ಟು ಜಿಎಸ್‌ಟಿ ಕಟ್ಟುತ್ತಿದ್ದಾರೆ ಎಂದು ಆಕ್ಸ್‌ಫಾಮ್ ವರದಿ ಹೇಳಿದೆ. ಏಕೆಂದರೆ ಅಂದು ದುಡಿದು ಅಂದು ತಿನ್ನುವ ಜನರು ಪ್ರತಿಯೊಂದು ವಸ್ತುಗಳನ್ನು ಕೊಳ್ಳಬೇಕಿದ್ದು ಸದ್ಯ 18% ವರೆಗೂ ಜಿಎಸ್‌ಟಿ ತೆರಿಗೆ ಇರುವುದರಿಂದ ಬಡವರೆ ಈ ದೇಶದ ಅತಿ ದೊಡ್ಡ ತೆರಿಗೆದಾರರಾಗಿದ್ದಾರೆ. ಮಧ್ಯಮ ವರ್ಗದ ಶೇ.40 ರಷ್ಟು ಜನ 33% ರಷ್ಟು ಜಿಎಸ್‌ಟಿ ಪಾವತಿಸಿದರೆ, ಮೇಲ್ವರ್ಗದ 10% ಜನರು ಕೇವಲ 3% ಜಿಎಸ್‌ಟಿ ಪಾವತಿಸುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತದ ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳ ತೆರಿಗೆ ಆದಾಯದಲ್ಲಿ ಶೇ.67 ರಷ್ಟು ಭಾಗ ಪರೋಕ್ಷ ಭಾಗದಿಂದ ಬರುತ್ತದೆ.  ಕಾರ್ಪೋರೇಟ್ ಮತ್ತು ನೇರ ಆದಾಯ ತೆರಿಗೆ 33% ಬರುತ್ತದೆ. ಅದರಲ್ಲಿಯೂ ಈ 33% ತೆರಿಗೆಯನ್ನು ಕೇವಲ ಶ್ರೀಮಂತ ಉದ್ಯಮಿಗಳು ಮಾತ್ರ ಕಟ್ಟುವುದಿಲ್ಲ. ಬದಲಿಗೆ ಸಂಬಳ ಪಡೆಯುವ ಮಧ್ಯಮ ವರ್ಗದ ಜನರು ಸಹ ಆದಾಯ ತೆರಿಗೆಯ ಮೂಲಕ ಪ್ರತ್ಯಕ್ಷ ತೆರಿಗೆ ಕಟ್ಟುತ್ತಾರೆ. ಒಟ್ಟಾರೆಯಾಗಿ ಹೇಳುವುದಾದರೆ ಈ ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ. ಹಾಗಾಗಿ ನನ್ನ ತೆರಿಗೆ ಹಣ ಪೋಲು ಮಾಡಬೇಡಿ ಎಂದು ಹೇಳುವುದಕ್ಕೆ ಯಾವುದೇ ಅರ್ಥವಿರುವುದಿಲ್ಲ.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಸರ್ಕಾರದಿಂದ ಮೊದಲ ಸಿಹಿ ಸುದ್ದಿ: ಶೇ. 4ರಷ್ಟು ತುಟ್ಟಿಭತ್ಯೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...