Homeಮುಖಪುಟಭಾರತ ಯೋಚಿಸುತ್ತಿರುವುದೇನೆಂದು ತಿಳಿಯಲು ಜಗತ್ತು ಬಯಸುತ್ತಿದೆ; ಮೂರು ದೇಶ ಸುತ್ತಿ ಬಂದು ಮೋದಿ ಹೇಳಿದ್ದಿಷ್ಟು

ಭಾರತ ಯೋಚಿಸುತ್ತಿರುವುದೇನೆಂದು ತಿಳಿಯಲು ಜಗತ್ತು ಬಯಸುತ್ತಿದೆ; ಮೂರು ದೇಶ ಸುತ್ತಿ ಬಂದು ಮೋದಿ ಹೇಳಿದ್ದಿಷ್ಟು

- Advertisement -
- Advertisement -

ಭಾರತ ಯೋಚಿಸುತ್ತಿರುವುದು ಏನನ್ನು ಎಂದು ತಿಳಿಯಲು ಇಡೀ ಜಗತ್ತು ಬಯಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ತಿಳಿಸಿದ್ದಾರೆ.

ಮೂರು ದೇಶಗಳ ಪ್ರವಾಸವನ್ನು ಮುಗಿಸಿರುವ ಅವರು ಗುರುವಾರ ಬೆಳಿಗ್ಗೆ ದೆಹಲಿಗೆ ಆಗಮಿಸಿದರು. ಮೋದಿಯವರನ್ನು ಸ್ವಾಗತಿಸಲು ನೆರೆದಿದ್ದ ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.

“ಜಗತ್ತಿಗೆ ವ್ಯಾಕ್ಸಿನ್‌ಗಳನ್ನು ಕಳಿಸಿದ್ದೇಕೆ ಎಂದು ಇಲ್ಲಿನ ಜನರು ನನ್ನನ್ನು ಕೇಳಿದರು. ಇದು ಬುದ್ಧ ಮತ್ತು ಗಾಂಧಿಯ ನಾಡು ಎಂದು ಹೇಳಬಯಸುತ್ತೇನೆ. ನಾವು ನಮ್ಮ ಶತ್ರುಗಳ ಬಗ್ಗೆಯೂ ಕಾಳಜಿ ವಹಿಸುತ್ತೇವೆ. ಇಂದು ಭಾರತ ಏನು ಯೋಚಿಸುತ್ತಿದೆ ಎಂದು ತಿಳಿಯಲು ಜಗತ್ತು ಬಯಸುತ್ತದೆ” ಎಂದು ಮೋದಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಸಿಡ್ನಿಯಲ್ಲಿ ನಡೆದ ಅನಿವಾಸಿ ಭಾರತೀಯರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಧಾನಮಂತ್ರಿಯವರು ‘ಪ್ರಜಾಪ್ರಭುತ್ವದ ವಾತಾವರಣ’ದ ಕುರಿತು ಶ್ಲಾಘನೆ ವ್ಯಕ್ತಪಡಿಸಿದ್ದರು. ಆಸ್ಟ್ರೇಲಿಯಾದ ಪ್ರಧಾನಿ ಮತ್ತು ಆಡಳಿತ ಪಕ್ಷದ ನಾಯಕರು ಮಾತ್ರವಲ್ಲದೆ ಮಾಜಿ ಪ್ರಧಾನಿ, ವಿರೋಧ ಪಕ್ಷದ ಸದಸ್ಯರೂ ಹಾಜರಿದ್ದರು.

20 ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸಿದ ಹಿನ್ನಲೆಯಲ್ಲಿ ಮೋದಿಯವರ ಹೇಳಿಕೆಗಳು ಹೊರಬಿದ್ದಿದೆ. ಕೇಂದ್ರ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬದಿಗೆ ಸರಿಸಿದೆ ಮತ್ತು ರಾಷ್ಟ್ರಪತಿಗಳ ಉನ್ನತ ಸ್ಥಾನವನ್ನು ಕಡೆಗಣಿಸಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ. ಆದರೆ, ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಈ ಬಗ್ಗೆ ನೇರವಾಗಿ ಉಲ್ಲೇಖ ಮಾಡಿಲ್ಲ.

“ದೇಶದ ಸಂಸ್ಕೃತಿಯ ಬಗ್ಗೆ ಮಾತನಾಡುವಾಗ ಪ್ರಪಂಚದ ಕಣ್ಣುಗಳನ್ನು ನೇರವಾಗಿ ನೋಡಬಹುದು. ಭಾರತದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರವನ್ನು ರಚಿಸಲು ಜನರು ಸಹಾಯ ಮಾಡಿದ್ದಾರೆ. ಇಲ್ಲಿಗೆ ಬಂದವರು ಭಾರತವನ್ನು ಪ್ರೀತಿಸುವ ಜನರೇ ಹೊರತು, ಪ್ರಧಾನಿ ಮೋದಿಯನ್ನಲ್ಲ” ಎಂದು ಅವರು ಹೇಳಿದ್ದರು.

ಪಪುವಾ ನ್ಯೂಗಿನಿಯಾದಲ್ಲಿ ‘ತಿರುಕ್ಕುರಲ್’ ಪುಸ್ತಕದ ಅನುವಾದ ಕೃತಿಯಾದ ‘ಟೋಕ್ ಪಿಸಿನ್’ ಬಿಡುಗಡೆ ಮಾಡುವ ಕುರಿತು ಮಾತನಾಡಿದ ಪ್ರಧಾನಿ ಮೋದಿ, “ತಮಿಳು ಭಾಷೆ ನಮ್ಮ ಭಾಷೆ. ಇದು ಪ್ರತಿಯೊಬ್ಬ ಭಾರತೀಯನ ಭಾಷೆ. ಇದು ಪ್ರಪಂಚದ ಅತ್ಯಂತ ಹಳೆಯ ಭಾಷೆಯಾಗಿದೆ. ‘ತಿರುಕ್ಕುರಳ್’ ಪುಸ್ತಕದ ಭಾಷಾಂತರವಾದ ‘ಟೋಕ್ ಪಿಸಿನ್’ ಬಿಡುಗಡೆ ಮಾಡುವ ಅವಕಾಶ ಪಪುವಾ ನ್ಯೂಗಿನಿಯಾದಲ್ಲಿ ನನಗೆ ಸಿಕ್ಕಿತು”’ ಎಂದಿದ್ದರು.

ಇದನ್ನೂ ಓದಿರಿ: ಸಂಸತ್‌ ಭವನ ಉದ್ಘಾಟನೆ ವಿರೋಧ ಸರಿಯಲ್ಲ; ಮೋದಿ ಪರ ನಿಂತ ಬಿಎಸ್‌ಪಿ, ಟಿಡಿಪಿ

ಪ್ರಧಾನಿ ಮೋದಿ ಇತ್ತೀಚೆಗೆ ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾ- ಈ ಮೂರು ರಾಷ್ಟ್ರಗಳಿಗೆ ಭೇಟಿ ನೀಡಿದ್ದರು.

ಗುರುವಾರ, ಮೋದಿ ಅವರು ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದರು, ಅಲ್ಲಿ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಇತರ ಸದಸ್ಯರು ಸ್ವಾಗತಿಸಿದರು.

ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, “ನಿಮ್ಮ ಆಡಳಿತ ಮಾದರಿಯನ್ನು ಜಗತ್ತು ಮೆಚ್ಚುತ್ತದೆ. ಯುಎಸ್ ಅಧ್ಯಕ್ಷ ಜೋ ಬಿಡೆನ್ ನಿಮ್ಮ ಹಸ್ತಾಕ್ಷರವನ್ನು ಕೇಳಿದರು, ನಿಮ್ಮ ನಾಯಕತ್ವದಲ್ಲಿ ಭಾರತವನ್ನು ಜಗತ್ತು ಹೇಗೆ ನೋಡುತ್ತಿದೆ ಎಂಬುದನ್ನು ಇದು ತೋರಿಸುತ್ತದೆ. ಪಪುವಾ ನ್ಯೂಗಿನಿಯಾದ ಪ್ರಧಾನಿ ನಿಮ್ಮ ಪಾದಗಳನ್ನು ಮುಟ್ಟಿದ ರೀತಿ, ಅಲ್ಲಿ ನಿಮಗೆ ಎಷ್ಟು ಗೌರವವಿದೆ ಎಂಬುದನ್ನು ತೋರಿಸುತ್ತದೆ. ನಮ್ಮ ಪ್ರಧಾನಿಯನ್ನು ಈ ರೀತಿ ಸ್ವಾಗತಿಸುತ್ತಿರುವುದನ್ನು ಕಂಡಾಗ ಭಾರತದ ಜನತೆ ಹೆಮ್ಮೆ ಪಡುತ್ತಾರೆ” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...