Homeಮುಖಪುಟಭಾರತ ಯೋಚಿಸುತ್ತಿರುವುದೇನೆಂದು ತಿಳಿಯಲು ಜಗತ್ತು ಬಯಸುತ್ತಿದೆ; ಮೂರು ದೇಶ ಸುತ್ತಿ ಬಂದು ಮೋದಿ ಹೇಳಿದ್ದಿಷ್ಟು

ಭಾರತ ಯೋಚಿಸುತ್ತಿರುವುದೇನೆಂದು ತಿಳಿಯಲು ಜಗತ್ತು ಬಯಸುತ್ತಿದೆ; ಮೂರು ದೇಶ ಸುತ್ತಿ ಬಂದು ಮೋದಿ ಹೇಳಿದ್ದಿಷ್ಟು

- Advertisement -
- Advertisement -

ಭಾರತ ಯೋಚಿಸುತ್ತಿರುವುದು ಏನನ್ನು ಎಂದು ತಿಳಿಯಲು ಇಡೀ ಜಗತ್ತು ಬಯಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ತಿಳಿಸಿದ್ದಾರೆ.

ಮೂರು ದೇಶಗಳ ಪ್ರವಾಸವನ್ನು ಮುಗಿಸಿರುವ ಅವರು ಗುರುವಾರ ಬೆಳಿಗ್ಗೆ ದೆಹಲಿಗೆ ಆಗಮಿಸಿದರು. ಮೋದಿಯವರನ್ನು ಸ್ವಾಗತಿಸಲು ನೆರೆದಿದ್ದ ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.

“ಜಗತ್ತಿಗೆ ವ್ಯಾಕ್ಸಿನ್‌ಗಳನ್ನು ಕಳಿಸಿದ್ದೇಕೆ ಎಂದು ಇಲ್ಲಿನ ಜನರು ನನ್ನನ್ನು ಕೇಳಿದರು. ಇದು ಬುದ್ಧ ಮತ್ತು ಗಾಂಧಿಯ ನಾಡು ಎಂದು ಹೇಳಬಯಸುತ್ತೇನೆ. ನಾವು ನಮ್ಮ ಶತ್ರುಗಳ ಬಗ್ಗೆಯೂ ಕಾಳಜಿ ವಹಿಸುತ್ತೇವೆ. ಇಂದು ಭಾರತ ಏನು ಯೋಚಿಸುತ್ತಿದೆ ಎಂದು ತಿಳಿಯಲು ಜಗತ್ತು ಬಯಸುತ್ತದೆ” ಎಂದು ಮೋದಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಸಿಡ್ನಿಯಲ್ಲಿ ನಡೆದ ಅನಿವಾಸಿ ಭಾರತೀಯರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಧಾನಮಂತ್ರಿಯವರು ‘ಪ್ರಜಾಪ್ರಭುತ್ವದ ವಾತಾವರಣ’ದ ಕುರಿತು ಶ್ಲಾಘನೆ ವ್ಯಕ್ತಪಡಿಸಿದ್ದರು. ಆಸ್ಟ್ರೇಲಿಯಾದ ಪ್ರಧಾನಿ ಮತ್ತು ಆಡಳಿತ ಪಕ್ಷದ ನಾಯಕರು ಮಾತ್ರವಲ್ಲದೆ ಮಾಜಿ ಪ್ರಧಾನಿ, ವಿರೋಧ ಪಕ್ಷದ ಸದಸ್ಯರೂ ಹಾಜರಿದ್ದರು.

20 ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸಿದ ಹಿನ್ನಲೆಯಲ್ಲಿ ಮೋದಿಯವರ ಹೇಳಿಕೆಗಳು ಹೊರಬಿದ್ದಿದೆ. ಕೇಂದ್ರ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬದಿಗೆ ಸರಿಸಿದೆ ಮತ್ತು ರಾಷ್ಟ್ರಪತಿಗಳ ಉನ್ನತ ಸ್ಥಾನವನ್ನು ಕಡೆಗಣಿಸಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ. ಆದರೆ, ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಈ ಬಗ್ಗೆ ನೇರವಾಗಿ ಉಲ್ಲೇಖ ಮಾಡಿಲ್ಲ.

“ದೇಶದ ಸಂಸ್ಕೃತಿಯ ಬಗ್ಗೆ ಮಾತನಾಡುವಾಗ ಪ್ರಪಂಚದ ಕಣ್ಣುಗಳನ್ನು ನೇರವಾಗಿ ನೋಡಬಹುದು. ಭಾರತದಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರವನ್ನು ರಚಿಸಲು ಜನರು ಸಹಾಯ ಮಾಡಿದ್ದಾರೆ. ಇಲ್ಲಿಗೆ ಬಂದವರು ಭಾರತವನ್ನು ಪ್ರೀತಿಸುವ ಜನರೇ ಹೊರತು, ಪ್ರಧಾನಿ ಮೋದಿಯನ್ನಲ್ಲ” ಎಂದು ಅವರು ಹೇಳಿದ್ದರು.

ಪಪುವಾ ನ್ಯೂಗಿನಿಯಾದಲ್ಲಿ ‘ತಿರುಕ್ಕುರಲ್’ ಪುಸ್ತಕದ ಅನುವಾದ ಕೃತಿಯಾದ ‘ಟೋಕ್ ಪಿಸಿನ್’ ಬಿಡುಗಡೆ ಮಾಡುವ ಕುರಿತು ಮಾತನಾಡಿದ ಪ್ರಧಾನಿ ಮೋದಿ, “ತಮಿಳು ಭಾಷೆ ನಮ್ಮ ಭಾಷೆ. ಇದು ಪ್ರತಿಯೊಬ್ಬ ಭಾರತೀಯನ ಭಾಷೆ. ಇದು ಪ್ರಪಂಚದ ಅತ್ಯಂತ ಹಳೆಯ ಭಾಷೆಯಾಗಿದೆ. ‘ತಿರುಕ್ಕುರಳ್’ ಪುಸ್ತಕದ ಭಾಷಾಂತರವಾದ ‘ಟೋಕ್ ಪಿಸಿನ್’ ಬಿಡುಗಡೆ ಮಾಡುವ ಅವಕಾಶ ಪಪುವಾ ನ್ಯೂಗಿನಿಯಾದಲ್ಲಿ ನನಗೆ ಸಿಕ್ಕಿತು”’ ಎಂದಿದ್ದರು.

ಇದನ್ನೂ ಓದಿರಿ: ಸಂಸತ್‌ ಭವನ ಉದ್ಘಾಟನೆ ವಿರೋಧ ಸರಿಯಲ್ಲ; ಮೋದಿ ಪರ ನಿಂತ ಬಿಎಸ್‌ಪಿ, ಟಿಡಿಪಿ

ಪ್ರಧಾನಿ ಮೋದಿ ಇತ್ತೀಚೆಗೆ ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾ- ಈ ಮೂರು ರಾಷ್ಟ್ರಗಳಿಗೆ ಭೇಟಿ ನೀಡಿದ್ದರು.

ಗುರುವಾರ, ಮೋದಿ ಅವರು ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದರು, ಅಲ್ಲಿ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಇತರ ಸದಸ್ಯರು ಸ್ವಾಗತಿಸಿದರು.

ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, “ನಿಮ್ಮ ಆಡಳಿತ ಮಾದರಿಯನ್ನು ಜಗತ್ತು ಮೆಚ್ಚುತ್ತದೆ. ಯುಎಸ್ ಅಧ್ಯಕ್ಷ ಜೋ ಬಿಡೆನ್ ನಿಮ್ಮ ಹಸ್ತಾಕ್ಷರವನ್ನು ಕೇಳಿದರು, ನಿಮ್ಮ ನಾಯಕತ್ವದಲ್ಲಿ ಭಾರತವನ್ನು ಜಗತ್ತು ಹೇಗೆ ನೋಡುತ್ತಿದೆ ಎಂಬುದನ್ನು ಇದು ತೋರಿಸುತ್ತದೆ. ಪಪುವಾ ನ್ಯೂಗಿನಿಯಾದ ಪ್ರಧಾನಿ ನಿಮ್ಮ ಪಾದಗಳನ್ನು ಮುಟ್ಟಿದ ರೀತಿ, ಅಲ್ಲಿ ನಿಮಗೆ ಎಷ್ಟು ಗೌರವವಿದೆ ಎಂಬುದನ್ನು ತೋರಿಸುತ್ತದೆ. ನಮ್ಮ ಪ್ರಧಾನಿಯನ್ನು ಈ ರೀತಿ ಸ್ವಾಗತಿಸುತ್ತಿರುವುದನ್ನು ಕಂಡಾಗ ಭಾರತದ ಜನತೆ ಹೆಮ್ಮೆ ಪಡುತ್ತಾರೆ” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...