Homeಮುಖಪುಟತೆಲಂಗಾಣ: ‘ಜೈ ಶ್ರೀರಾಮ್’ ಕೂಗುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಘಟನೆಯಲ್ಲಿ ಸಿಲುಕಿದ ಮಹಿಳೆಗೆ ಗರ್ಭಪಾತ

ತೆಲಂಗಾಣ: ‘ಜೈ ಶ್ರೀರಾಮ್’ ಕೂಗುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಘಟನೆಯಲ್ಲಿ ಸಿಲುಕಿದ ಮಹಿಳೆಗೆ ಗರ್ಭಪಾತ

- Advertisement -
- Advertisement -

‘ಜೈ ಶ್ರೀ ರಾಮ್’ ಎಂದು ಕೂಗುತ್ತಾ ಬಲಪಂಥೀಯ ಕಾರ್ಯಕರ್ತರ ಗುಂಪೊಂದು ಮುಸ್ಲಿಂ ವ್ಯಕ್ತಿಯನ್ನು ಬರ್ಬರವಾಗಿ ಥಳಿಸಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ.

ಮೇದಕ್ ಜಿಲ್ಲೆಯ ನರಸಾಪುರ ಪ್ರದೇಶದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದ್ದು, ಥಳಿತಕ್ಕೊಳಗಾದ ವ್ಯಕ್ತಿಯನ್ನು ಇಮ್ರಾನ್ ಅಹ್ಮದ್ ಎಂದು ಗುರುತಿಸಲಾಗಿದೆ. ಇಡೀ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಎಲ್‌ಪಿಜಿ ಸಿಲಿಂಡರ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುವ ಲಿಂಗಂ ಎಂಬವರೊಂದಿಗೆ ಇಮ್ರಾನ್ ಜಗಳವಾಡಿದ ಬಳಿಕ ಈ ಬೆಳವಣಿಗೆಯಾಗಿದೆ. ಇಬ್ಬರ ನಡುವೆ ವಾಗ್ವಾದ ಶುರುವಾದ ನಂತರ ಬಂದ ಕೇಸರಿ ವಸ್ತ್ರಧಾರಿಗಳು ಇಮ್ರಾನ್ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಈ ಘಟನೆಯು ಮೇ 7 ರಂದು ನಡೆದಿದೆ ಎಂದು ವರದಿಯಾಗಿದೆ ಮತ್ತು ಅದರ ವೀಡಿಯೊ ಇತ್ತೀಚೆಗೆ ವೈರಲ್ ಆಗಿದೆ.

“ಲಿಂಗಂ ಅವರು ತುಂಬಿದ ಎಲ್ಪಿಜಿ ಸಿಲಿಂಡರ್ ಅನ್ನು ಪೂರೈಸಲು ಇಮ್ರಾನ್ ಅವರ ನಿವಾಸಕ್ಕೆ ಹೋಗಿದ್ದರು. ಸಿಲಿಂಡರ್ ವಿತರಿಸುವಾಗ ಲಿಂಗಂ ಖಾಲಿ ಸಿಲಿಂಡರ್ ಕೇಳಿದ್ದು, ಇಮ್ರಾನ್ ಕುಟುಂಬ ನಿರಾಕರಿಸಿದೆ. ನಾಳೆ ಕೊಡುವುದಾಗಿ ತಿಳಿಸಿದ್ದು, ಆ ಬಳಿಕ ವಾಗ್ವಾದವಾಗಿದೆ” ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

ಇಬ್ಬರ ನಡುವೆ ಜಗಳವಾಯಿತು. ಹನುಮ ಮಾಲೆ ಧರಿಸಿದ್ದ ಲಿಂಗಂ ಅವರಿಗೆ ಇಮ್ರಾನ್‌ ಹೊಡೆದಿದ್ದಾರೆಂದು ಹೇಳಲಾಗುತ್ತಿದೆ. ಬಳಿಕ ಲಿಂಗಂ ಇಲ್ಲಿಂದ ತೆರಳಿದರು. ನಂತರ ಬಂದ ಕೇಸರಿ ವಸ್ತ್ರಧಾರಿಗಳು ಇಮ್ರಾನ್‌ ಅವರನ್ನು ಮನೆಯಿಂದ ಹೊರಗೆ ಎಳೆದು ಸಾರ್ವಜನಿಕವಾಗಿಯೇ ಥಳಿಸಿದ್ದಾರೆ. ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಬೆದರಿಕೆ ಹಾಕಿದ್ದಾರೆ. ಸುತ್ತುವರಿದು ‘ಜೈ ಶ್ರೀರಾಮ್‌’ ಎನ್ನುತ್ತಾ ಇಮ್ರಾನ್ ಅವರ ವಸ್ತ್ರ ಕಳಚುವ ದುಷ್ಕೃತ್ಯಕ್ಕೂ ಕೈ ಹಾಕಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಇಮ್ರಾನ್ ಕೋಪದ ಭರದಲ್ಲಿ ತನ್ನ ಪಾದರಕ್ಷೆಯಿಂದ ಲಿಂಗಮ್‌ಗೆ ಕಪಾಳಕ್ಕೆ ಹೊಡೆದಿದ್ದಾರೆ. ಇದರಿಂದ ಅಸಮಾಧಾನಗೊಂಡ ಲಿಂಗಂ ಸಮೀಪದ ದೇವಸ್ಥಾನದಲ್ಲಿ ಹನುಮ ಮಾಲೆ ಕಾರ್ಯಕ್ರಮದಲ್ಲಿದ್ದ ಇತರರಿಗೆ ದೂರು ನೀಡಿದರು. ಇಮ್ರಾನ್‌ ಮನೆಗೆ ಬಂದ ಗುಂಪು ಇಮ್ರಾನ್‌ ಅವರ ತಾಯಿಯ ಮನವಿಯನ್ನು ನಿರ್ಲಕ್ಷಿಸಿ, ಇಮ್ರಾನ್‌ ಅವರನ್ನು ಮನೆಯಿಂದ ಹೊರಗೆ ಎಳೆದೊಯ್ದು ರಸ್ತೆಯಲ್ಲಿ ಥಳಿಸಿದೆ” ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

“ಸುಮಾರು 10-15 ಜನರು ಸುತ್ತುವರಿದಿದ್ದರು. ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಲು ಆರಂಭಿಸಿದರು. ಇಮ್ರಾನ್ ಅವರ ತಾಯಿ ಮತ್ತು ಗರ್ಭಿಣಿ ಸಹೋದರಿ ಮಧ್ಯದಲ್ಲಿ ಸಿಕ್ಕಿಬಿದ್ದರು. ಜಗಳದ ಬಗ್ಗೆ ಮಾಹಿತಿ ಪಡೆದ ನಾವು 10-15 ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿದೆವು. ಇಮ್ರಾನ್ ಮತ್ತು ಇತರರನ್ನು ಕಸ್ಟಡಿಗೆ ತೆಗೆದುಕೊಂಡೆವು” ಎಂದು ಸಿಐ ಮಝರ್ ಮಾಹಿತಿ ನೀಡಿದ್ದಾರೆ.

“ನರಸಾಪುರ ಪೊಲೀಸರು ಇಮ್ರಾನ್ ವಿರುದ್ಧ ಸೆಕ್ಷನ್ 295 (ಧರ್ಮಕ್ಕೆ ಅವಮಾನ) ಮತ್ತು ಹಲ್ಲೆ ನಡೆಸಿದ ಗುಂಪಿನ 10-15 ಜನರ ವಿರುದ್ಧ ಸೆಕ್ಷನ್ 341 (ತಪ್ಪು ಸಂಯಮ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 506 (ಘೋರವಾದ ಗಾಯವನ್ನು ಉಂಟುಮಾಡುವ ಬೆದರಿಕೆ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.”

ಇದು ಧಾರ್ಮಿಕ ವಿಷಯವಾಗಿ ಪರಿಣಮಿಸುತ್ತದೆ ಎಂಬ ಆಧಾರದ ಮೇಲೆ ಪೊಲೀಸರು ಇಮ್ರಾನ್‌ನನ್ನು ಮಾತ್ರ ಬಂಧಿಸಿದರು. ಅವರನ್ನು ಕಸ್ಟಡಿಗೆ ತೆಗೆದುಕೊಂಡರು. ಉಳಿದವರೆಲ್ಲರಿಗೂ ನೋಟಿಸ್ ಜಾರಿ ಮಾಡಿ ಬಿಟ್ಟು ಕಳುಹಿಸಿದರು ಎಂದು ‘ಕ್ವಿಂಟ್‌’ ವರದಿ ಮಾಡಿದೆ.

ಇಮ್ರಾನ್ ಸಹೋದರಿಗೆ ಗರ್ಭಪಾತ

ಇಮ್ರಾನ್ ಅವರನ್ನು ಬಲ ಪಂಥೀಯ ಗುಂಪು ಥಳಿಸುತ್ತಿದ್ದಾಗ ಇಮ್ರಾನ್ ಅವರ ಗರ್ಭಿಣಿ ಸಹೋದರಿ ಆಯೇಷಾ ಕೂಡ ಮಧ್ಯಪ್ರವೇಶಿಸಿದ್ದಾರೆ. ತುಂಬು ಗರ್ಭಿಯನ್ನೂ ದುಷ್ಕರ್ಮಿಗಳು ತಳ್ಳಾಡಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಈ ಘಟನೆಯಿಂದಾಗಿ ಇಮ್ರಾನ್‌ ಸಹೋದರಿಗೆ ಗರ್ಭಪಾತವಾಗಿದೆ. ಹಸುಗೂಸು ತೀರಿ ಹೋಗಿದೆ ಎಂದು ವರದಿಯಾಗಿದೆ. ಅವರು ಹೈದರಾಬಾದ್‌ನ ನಿಲೋಫರ್ ಆಸ್ಪತ್ರೆಗೆ ದಾಖಲಾಗಿದ್ದರು. ಮಗು ಬ್ರೇನ್‌ ಡೆಡ್‌ನಿಂದ ಸತ್ತಿದೆ ಎಂದು ಹೇಳಲಾಗುತ್ತಿದೆ. ನಿಖರ ಕಾರಣ ಸ್ಪಷ್ಟವಾಗಿಲ್ಲ.

ಇದನ್ನೂ ಓದಿರಿ: ನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ಇಮ್ರಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ನರಸಾಪುರ ಪೊಲೀಸ್ ಠಾಣೆಯ ಹೊರಗೆ ಬಲಪಂಥೀಯ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ಘಟನೆಯೂ ವರದಿಯಾಗಿದೆ.

“ಲಿಂಗಮ್ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಪೊಲೀಸರು ಇದೀಗ ಇಮ್ರಾನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಮ್ರಾನ್ ಮೇಲೆ ಹಲ್ಲೆ ನಡೆಸಿದ ಬಲಪಂಥೀಯ ಕಾರ್ಯಕರ್ತರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಎರಡೂ ಕಡೆಯವರ ಮೇಲೆ ಕ್ರಮ ಕೈಗೊಳ್ಳಲಾಗಿದೆ” ಎಂದು ಡಿಎಸ್ಪಿ ತೂಪ್ರಾನ್ ಹೇಳಿದ್ದಾರೆ.

ಈ ಘಟನೆಯ ಕುರಿತು ಟ್ವೀಟ್ ಮಾಡಿರುವ ತೆಲಂಗಾಣದ ಮುಸ್ಲಿಂ ರಾಜಕೀಯ ಪಕ್ಷವಾದ ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ಅಧ್ಯಕ್ಷ ಅಮ್ಜೆದ್ ಉಲ್ಲಾ ಖಾನ್, “ದಾಳಿಯಲ್ಲಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳನ್ನು ಬಂಧಿಸಬೇಕು ಮತ್ತು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...