Homeಮುಖಪುಟತೆಲಂಗಾಣ: ‘ಜೈ ಶ್ರೀರಾಮ್’ ಕೂಗುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಘಟನೆಯಲ್ಲಿ ಸಿಲುಕಿದ ಮಹಿಳೆಗೆ ಗರ್ಭಪಾತ

ತೆಲಂಗಾಣ: ‘ಜೈ ಶ್ರೀರಾಮ್’ ಕೂಗುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಘಟನೆಯಲ್ಲಿ ಸಿಲುಕಿದ ಮಹಿಳೆಗೆ ಗರ್ಭಪಾತ

- Advertisement -
- Advertisement -

‘ಜೈ ಶ್ರೀ ರಾಮ್’ ಎಂದು ಕೂಗುತ್ತಾ ಬಲಪಂಥೀಯ ಕಾರ್ಯಕರ್ತರ ಗುಂಪೊಂದು ಮುಸ್ಲಿಂ ವ್ಯಕ್ತಿಯನ್ನು ಬರ್ಬರವಾಗಿ ಥಳಿಸಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ.

ಮೇದಕ್ ಜಿಲ್ಲೆಯ ನರಸಾಪುರ ಪ್ರದೇಶದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದ್ದು, ಥಳಿತಕ್ಕೊಳಗಾದ ವ್ಯಕ್ತಿಯನ್ನು ಇಮ್ರಾನ್ ಅಹ್ಮದ್ ಎಂದು ಗುರುತಿಸಲಾಗಿದೆ. ಇಡೀ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಎಲ್‌ಪಿಜಿ ಸಿಲಿಂಡರ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುವ ಲಿಂಗಂ ಎಂಬವರೊಂದಿಗೆ ಇಮ್ರಾನ್ ಜಗಳವಾಡಿದ ಬಳಿಕ ಈ ಬೆಳವಣಿಗೆಯಾಗಿದೆ. ಇಬ್ಬರ ನಡುವೆ ವಾಗ್ವಾದ ಶುರುವಾದ ನಂತರ ಬಂದ ಕೇಸರಿ ವಸ್ತ್ರಧಾರಿಗಳು ಇಮ್ರಾನ್ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಈ ಘಟನೆಯು ಮೇ 7 ರಂದು ನಡೆದಿದೆ ಎಂದು ವರದಿಯಾಗಿದೆ ಮತ್ತು ಅದರ ವೀಡಿಯೊ ಇತ್ತೀಚೆಗೆ ವೈರಲ್ ಆಗಿದೆ.

“ಲಿಂಗಂ ಅವರು ತುಂಬಿದ ಎಲ್ಪಿಜಿ ಸಿಲಿಂಡರ್ ಅನ್ನು ಪೂರೈಸಲು ಇಮ್ರಾನ್ ಅವರ ನಿವಾಸಕ್ಕೆ ಹೋಗಿದ್ದರು. ಸಿಲಿಂಡರ್ ವಿತರಿಸುವಾಗ ಲಿಂಗಂ ಖಾಲಿ ಸಿಲಿಂಡರ್ ಕೇಳಿದ್ದು, ಇಮ್ರಾನ್ ಕುಟುಂಬ ನಿರಾಕರಿಸಿದೆ. ನಾಳೆ ಕೊಡುವುದಾಗಿ ತಿಳಿಸಿದ್ದು, ಆ ಬಳಿಕ ವಾಗ್ವಾದವಾಗಿದೆ” ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

ಇಬ್ಬರ ನಡುವೆ ಜಗಳವಾಯಿತು. ಹನುಮ ಮಾಲೆ ಧರಿಸಿದ್ದ ಲಿಂಗಂ ಅವರಿಗೆ ಇಮ್ರಾನ್‌ ಹೊಡೆದಿದ್ದಾರೆಂದು ಹೇಳಲಾಗುತ್ತಿದೆ. ಬಳಿಕ ಲಿಂಗಂ ಇಲ್ಲಿಂದ ತೆರಳಿದರು. ನಂತರ ಬಂದ ಕೇಸರಿ ವಸ್ತ್ರಧಾರಿಗಳು ಇಮ್ರಾನ್‌ ಅವರನ್ನು ಮನೆಯಿಂದ ಹೊರಗೆ ಎಳೆದು ಸಾರ್ವಜನಿಕವಾಗಿಯೇ ಥಳಿಸಿದ್ದಾರೆ. ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಬೆದರಿಕೆ ಹಾಕಿದ್ದಾರೆ. ಸುತ್ತುವರಿದು ‘ಜೈ ಶ್ರೀರಾಮ್‌’ ಎನ್ನುತ್ತಾ ಇಮ್ರಾನ್ ಅವರ ವಸ್ತ್ರ ಕಳಚುವ ದುಷ್ಕೃತ್ಯಕ್ಕೂ ಕೈ ಹಾಕಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಇಮ್ರಾನ್ ಕೋಪದ ಭರದಲ್ಲಿ ತನ್ನ ಪಾದರಕ್ಷೆಯಿಂದ ಲಿಂಗಮ್‌ಗೆ ಕಪಾಳಕ್ಕೆ ಹೊಡೆದಿದ್ದಾರೆ. ಇದರಿಂದ ಅಸಮಾಧಾನಗೊಂಡ ಲಿಂಗಂ ಸಮೀಪದ ದೇವಸ್ಥಾನದಲ್ಲಿ ಹನುಮ ಮಾಲೆ ಕಾರ್ಯಕ್ರಮದಲ್ಲಿದ್ದ ಇತರರಿಗೆ ದೂರು ನೀಡಿದರು. ಇಮ್ರಾನ್‌ ಮನೆಗೆ ಬಂದ ಗುಂಪು ಇಮ್ರಾನ್‌ ಅವರ ತಾಯಿಯ ಮನವಿಯನ್ನು ನಿರ್ಲಕ್ಷಿಸಿ, ಇಮ್ರಾನ್‌ ಅವರನ್ನು ಮನೆಯಿಂದ ಹೊರಗೆ ಎಳೆದೊಯ್ದು ರಸ್ತೆಯಲ್ಲಿ ಥಳಿಸಿದೆ” ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

“ಸುಮಾರು 10-15 ಜನರು ಸುತ್ತುವರಿದಿದ್ದರು. ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಲು ಆರಂಭಿಸಿದರು. ಇಮ್ರಾನ್ ಅವರ ತಾಯಿ ಮತ್ತು ಗರ್ಭಿಣಿ ಸಹೋದರಿ ಮಧ್ಯದಲ್ಲಿ ಸಿಕ್ಕಿಬಿದ್ದರು. ಜಗಳದ ಬಗ್ಗೆ ಮಾಹಿತಿ ಪಡೆದ ನಾವು 10-15 ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿದೆವು. ಇಮ್ರಾನ್ ಮತ್ತು ಇತರರನ್ನು ಕಸ್ಟಡಿಗೆ ತೆಗೆದುಕೊಂಡೆವು” ಎಂದು ಸಿಐ ಮಝರ್ ಮಾಹಿತಿ ನೀಡಿದ್ದಾರೆ.

“ನರಸಾಪುರ ಪೊಲೀಸರು ಇಮ್ರಾನ್ ವಿರುದ್ಧ ಸೆಕ್ಷನ್ 295 (ಧರ್ಮಕ್ಕೆ ಅವಮಾನ) ಮತ್ತು ಹಲ್ಲೆ ನಡೆಸಿದ ಗುಂಪಿನ 10-15 ಜನರ ವಿರುದ್ಧ ಸೆಕ್ಷನ್ 341 (ತಪ್ಪು ಸಂಯಮ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 506 (ಘೋರವಾದ ಗಾಯವನ್ನು ಉಂಟುಮಾಡುವ ಬೆದರಿಕೆ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.”

ಇದು ಧಾರ್ಮಿಕ ವಿಷಯವಾಗಿ ಪರಿಣಮಿಸುತ್ತದೆ ಎಂಬ ಆಧಾರದ ಮೇಲೆ ಪೊಲೀಸರು ಇಮ್ರಾನ್‌ನನ್ನು ಮಾತ್ರ ಬಂಧಿಸಿದರು. ಅವರನ್ನು ಕಸ್ಟಡಿಗೆ ತೆಗೆದುಕೊಂಡರು. ಉಳಿದವರೆಲ್ಲರಿಗೂ ನೋಟಿಸ್ ಜಾರಿ ಮಾಡಿ ಬಿಟ್ಟು ಕಳುಹಿಸಿದರು ಎಂದು ‘ಕ್ವಿಂಟ್‌’ ವರದಿ ಮಾಡಿದೆ.

ಇಮ್ರಾನ್ ಸಹೋದರಿಗೆ ಗರ್ಭಪಾತ

ಇಮ್ರಾನ್ ಅವರನ್ನು ಬಲ ಪಂಥೀಯ ಗುಂಪು ಥಳಿಸುತ್ತಿದ್ದಾಗ ಇಮ್ರಾನ್ ಅವರ ಗರ್ಭಿಣಿ ಸಹೋದರಿ ಆಯೇಷಾ ಕೂಡ ಮಧ್ಯಪ್ರವೇಶಿಸಿದ್ದಾರೆ. ತುಂಬು ಗರ್ಭಿಯನ್ನೂ ದುಷ್ಕರ್ಮಿಗಳು ತಳ್ಳಾಡಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಈ ಘಟನೆಯಿಂದಾಗಿ ಇಮ್ರಾನ್‌ ಸಹೋದರಿಗೆ ಗರ್ಭಪಾತವಾಗಿದೆ. ಹಸುಗೂಸು ತೀರಿ ಹೋಗಿದೆ ಎಂದು ವರದಿಯಾಗಿದೆ. ಅವರು ಹೈದರಾಬಾದ್‌ನ ನಿಲೋಫರ್ ಆಸ್ಪತ್ರೆಗೆ ದಾಖಲಾಗಿದ್ದರು. ಮಗು ಬ್ರೇನ್‌ ಡೆಡ್‌ನಿಂದ ಸತ್ತಿದೆ ಎಂದು ಹೇಳಲಾಗುತ್ತಿದೆ. ನಿಖರ ಕಾರಣ ಸ್ಪಷ್ಟವಾಗಿಲ್ಲ.

ಇದನ್ನೂ ಓದಿರಿ: ನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ಇಮ್ರಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ನರಸಾಪುರ ಪೊಲೀಸ್ ಠಾಣೆಯ ಹೊರಗೆ ಬಲಪಂಥೀಯ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ಘಟನೆಯೂ ವರದಿಯಾಗಿದೆ.

“ಲಿಂಗಮ್ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಪೊಲೀಸರು ಇದೀಗ ಇಮ್ರಾನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಮ್ರಾನ್ ಮೇಲೆ ಹಲ್ಲೆ ನಡೆಸಿದ ಬಲಪಂಥೀಯ ಕಾರ್ಯಕರ್ತರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಎರಡೂ ಕಡೆಯವರ ಮೇಲೆ ಕ್ರಮ ಕೈಗೊಳ್ಳಲಾಗಿದೆ” ಎಂದು ಡಿಎಸ್ಪಿ ತೂಪ್ರಾನ್ ಹೇಳಿದ್ದಾರೆ.

ಈ ಘಟನೆಯ ಕುರಿತು ಟ್ವೀಟ್ ಮಾಡಿರುವ ತೆಲಂಗಾಣದ ಮುಸ್ಲಿಂ ರಾಜಕೀಯ ಪಕ್ಷವಾದ ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ಅಧ್ಯಕ್ಷ ಅಮ್ಜೆದ್ ಉಲ್ಲಾ ಖಾನ್, “ದಾಳಿಯಲ್ಲಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳನ್ನು ಬಂಧಿಸಬೇಕು ಮತ್ತು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...