Homeಕರ್ನಾಟಕಕನ್ನಡದ ಹಿರಿಯ ವಿಮರ್ಶಕ ಜಿ.ಎಚ್.ನಾಯಕ ನಿಧನ

ಕನ್ನಡದ ಹಿರಿಯ ವಿಮರ್ಶಕ ಜಿ.ಎಚ್.ನಾಯಕ ನಿಧನ

- Advertisement -
- Advertisement -

ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕ, ನೇರ ನಿಷ್ಠುರ ಮಾತುಗಳಿಗೆ ಹೆಸರಾದ ಪ್ರೊ. ಗೋವಿಂದರಾಯ ಹಮ್ಮಣ್ಣ ನಾಯಕ (ಜಿ.ಎಚ್.ನಾಯಕ) ಅವರು ಶುಕ್ರವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ.

ಬಹುಕಾಲದಿಂದ ಅವರು ವಯೋಸಹಜ ಆರೋಗ್ಯ ಸಮಸ್ಯೆಯಲ್ಲಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ನೆಲೆಸಿದ್ದ ಜಿ.ಎಚ್‌.ನಾಯಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿದ್ದಾರೆ.

ಉತ್ತರ ಕನ್ನಡದ ಅಂಕೋಲ ತಾಲ್ಲೂಕಿನ ಸೂರ್ವೆಯಲ್ಲಿ 1935, ಸೆಪ್ಟೆಂಬರ್‌ 18ರಂದು ಜನಿಸಿದ್ದ ಜಿ.ಎಚ್‌.ನಾಯಕ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಿದ್ಯಾರ್ಥಿ ದೆಸೆಯಿಂದಲೂ ಮೈಸೂರಿನಲ್ಲಿಯೇ ನೆಲೆಸಿದ್ದ ಅವರು ಮೈಸೂರು ಸಾಂಸ್ಕೃತಿಕ ಪ್ರಪಂಚ ಮತ್ತು ಪ್ರಗತಿಪರ ಚಳವಳಿಗಳ ಭಾಗವಾಗಿದ್ದರು.

ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಪುರಸ್ಕೃತರಾಗಿದ್ದ ನಾಯಕರ ಪತ್ನಿ, ಸಾಮಾಜಿಕ ಹೋರಾಟಗಾರ್ತಿ ಮೀರಾನಾಯಕ. ಪುತ್ರಿ ದೀಪಾ.

ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬಹುಕಾಲ ಅಧ್ಯಾಪಕರಾಗಿದ್ದ ಅವರು ವಿಮರ್ಶೆ ಜತೆಗೆ ಸಂಪಾದನೆ, ಕನ್ನಡ ಸಣ್ಣಕಥೆಗಳು, ಹೊಸಗನ್ನಡ ಕವಿತೆಗಳನ್ನೂ ರಚಿಸಿದ್ದರು. ‘ಬಾಳು’ ಹೆಸರಲ್ಲಿ ಆತ್ಮಕಥೆಯನ್ನು ಬರೆದಿದ್ದಾರೆ.

ಇದನ್ನೂ ಓದಿರಿ: ಅಂಬೇಡ್ಕರ್‌‌ ನಿಂದನೆ; ಸಿಮ್ಸ್‌ ನಿರ್ದೇಶಕರ ವಿರುದ್ಧ ತನಿಖೆಗೆ ಸಮಿತಿ ರಚನೆ

ಸಮಕಾಲೀನ (1973 ), ಅನಿವಾರ್ಯ (1980), ನಿರಪೇಕ್ಷೆ (1984), ನಿಜದನಿ (1988), ವಿನಯ ವಿಮರ್ಶೆ (1991), ಸಕಾಲಿಕ (1995), ಗುಣ ಗೌರವ (2002), ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (2002), ಕೃತಿ ಸಾಕ್ಷಿ (2006), ಸ್ಥಿತಿ ಪ್ರಜ್ಞೆ (2007), ಮತ್ತೆ ಮತ್ತೆ ಪಂಪ (2008), ಸಾಹಿತ್ಯ ಸಮೀಕ್ಷೆ (2009), ಉತ್ತರಾರ್ಧ (2011) ಅವರ ಬಹುಮುಖ್ಯ ಕೃತಿಗಳು.

ಉತ್ತರಾರ್ಧ ಕೃತಿಗೆ 2019ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಿರಪೇಕ್ಷ ವಿಮರ್ಶಾ ಕೃತಿಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ’ಯ ಪ್ರಶಸ್ತಿ ದೊರೆತಿವೆ. ನಿಜದನಿ ವಿಮರ್ಶಾ ಕೃತಿಗೆ ‘ವಿ.ಎಂ.ಇನಾಂದಾರ ಸ್ಮಾರಕ’ ಪ್ರಶಸ್ತಿ ಜಿ.ಎಚ್‌.ನಾಯಕ ಅವರಿಗೆ ಲಭಿಸಿದೆ.

ಅಡಿಗರ ಗೌರವ ಗ್ರಂಥ ಸಂವೇದನೆ , ಶ್ರೀ ರಾಮಾಯಣ ದರ್ಶನಂ ಕುವೆಂಪು ಸ್ವಹಸ್ತಾಕ್ಷರ ಪ್ರತಿ, ಶತಮಾನದ ಕನ್ನಡ ಸಾಹಿತ್ಯ 1, 2ನೇ ಸಂಪುಟಗಳಿಗೆ ಸಂಪಾದಕರೂ ಆಗಿ ಜಿ.ಎಚ್.ನಾಯಕ ಸೇವೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದು, “ಪ್ರಸಿದ್ಧ ಸಾಹಿತಿ ಪ್ರೊ. ಜಿ.ಎಚ್.ನಾಯಕ್ ಅವರ ಅಗಲಿಕೆ ನನಗೆ ಆಘಾತವನ್ನುಂಟು‌ ಮಾಡಿದೆ. ನನ್ನ ಆತ್ಮೀಯರು ಮತ್ತು ಹಿತಚಿಂತಕರಾಗಿದ್ದ ಜಿ.ಎಚ್.ನಾಯಕ್ ಬರವಣಿಗೆಯ ಜೊತೆಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಳುವಳಿಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಹೊಸ ತಲೆಮಾರನ್ನು ಪ್ರಭಾವಿಸಿದವರು. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ” ಎಂದಿದ್ದಾರೆ.

ಚಿಂತಕರಾದ ಶ್ರೀಪಾದ್ ಭಟ್ ಪ್ರತಿಕ್ರಿಯಿಸಿ, “ಅರವತ್ತರ ದಶಕದ ನವ್ಯ ಕಾಲದ ವಿಮರ್ಶ ವಲಯವು ಲೀವಿಸ್ ಮತ್ತು ಎಂ.ಜಿ.ಕೆ. ನಿಷ್ಠತೆಯಲ್ಲಿ ತನ್ನ ಭಕ್ತಿಯನ್ನು ಪ್ರದರ್ಶಿಸುತ್ತಾ ಪಕ್ಕಾ ಬ್ರಾಹ್ಮಣರ ಒಡ್ಡೋಲಗದಂತಿತ್ತು. ಈ ವಿಪ್ರವೃಂದವು ಬ್ರಾಹ್ಮಣೇತರ ಲೇಖಕ/ಲೇಖಕಿಯರೊಂದಿಗೆ ‘ನೀ ಒಳಗೆ ಬಾ, ಆದರೆ ನಿನ್ನ ಆಸ್ತಿತ್ವವನ್ನು ನಾವು ನಿರ್ಧರಿಸುತ್ತೇವೆ’ ಎಂಬಂತೆ ವರ್ತಿಸುತ್ತಿತ್ತು. ಇಂತಹ ಸಂದರ್ಭದಲ್ಲಿ ತಮ್ಮ ಖಚಿತ ನಿಲುವು ಮತ್ತು ಆಳವಾದ ಒಳನೋಟಗಳ ಮೂಲಕ ವಸ್ತುನಿಷ್ಠ ವಿಮರ್ಶೆಯ ಹೊಸ ದಿಕ್ಕನ್ನು ರೂಪಿಸಿದ ಜಿ. ಎಚ್. ನಾಯಕರು ನಿಷ್ಠುರತೆ ಮತ್ತು ಅಗಾಧ ಓದನ್ನು ಒಳಗೊಂಡ ಬಹು ಮುಖ್ಯ ಪರಂಪರೆಯನ್ನು ಕಟ್ಟಿದ್ದಾರೆ” ಎಂದು ನೆನೆದಿದ್ದಾರೆ.

“ಆಗ ಬ್ರಾಹ್ಮಣ ವಿಮರ್ಶಕರ ಅಸಡ್ಡೆಗೆ ಒಳಗಾಗಿದ್ದ ಕುವೆಂಪು ಸಾಹಿತ್ಯದ ಆ ಶಕ್ತಿ, ವೈಚಾರಿಕತೆ, ಸೃಜನಶೀಲತೆಯನ್ನು ತಮ್ಮದೇ ಶೈಲಿಯಲ್ಲಿ ಕನ್ನಡದ ಓದುಗರ ಮುಂದೆ ಕಟ್ಟಿಕೊಟ್ಟ ನಾಯಕರನ್ನು ಮರೆಯಲು ಸಾಧ್ಯವಿಲ್ಲ. ಇಲ್ಲಿ ತೇಜಸ್ವಿಯವರ ಕೊಡುಗೆಯೂ ಸಹ ಮುಖ್ಯ. ನಿಷ್ಠುರವಾದಿಯಾಗಿದ್ದ ನಾಯಕರು ಮೈಸೂರಿನ ಒಕ್ಕಲಿಗ ಅಕಾಡೆಮಿಕ್ ವಲಯದಿಂದಲೂ ಕಿರಿ ಕಿರಿ ಅನುಭವಿಸಿದರು. ಆದರೆ ತಮ್ಮ ‘ನಿಜದನಿ’ಯನ್ನು ಬದಲಿಸಲಿಲ್ಲ. ಕನ್ನಡ ವಿಮರ್ಶೆಗೆ ಹೊಸ ಪರಿಭಾಷೆ ಬರೆದ ನಾಯಕರಿಗೆ ನಮನಗಳು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...