Homeಕರ್ನಾಟಕಕನ್ನಡದ ಹಿರಿಯ ವಿಮರ್ಶಕ ಜಿ.ಎಚ್.ನಾಯಕ ನಿಧನ

ಕನ್ನಡದ ಹಿರಿಯ ವಿಮರ್ಶಕ ಜಿ.ಎಚ್.ನಾಯಕ ನಿಧನ

- Advertisement -
- Advertisement -

ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕ, ನೇರ ನಿಷ್ಠುರ ಮಾತುಗಳಿಗೆ ಹೆಸರಾದ ಪ್ರೊ. ಗೋವಿಂದರಾಯ ಹಮ್ಮಣ್ಣ ನಾಯಕ (ಜಿ.ಎಚ್.ನಾಯಕ) ಅವರು ಶುಕ್ರವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ.

ಬಹುಕಾಲದಿಂದ ಅವರು ವಯೋಸಹಜ ಆರೋಗ್ಯ ಸಮಸ್ಯೆಯಲ್ಲಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ನೆಲೆಸಿದ್ದ ಜಿ.ಎಚ್‌.ನಾಯಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿದ್ದಾರೆ.

ಉತ್ತರ ಕನ್ನಡದ ಅಂಕೋಲ ತಾಲ್ಲೂಕಿನ ಸೂರ್ವೆಯಲ್ಲಿ 1935, ಸೆಪ್ಟೆಂಬರ್‌ 18ರಂದು ಜನಿಸಿದ್ದ ಜಿ.ಎಚ್‌.ನಾಯಕ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಿದ್ಯಾರ್ಥಿ ದೆಸೆಯಿಂದಲೂ ಮೈಸೂರಿನಲ್ಲಿಯೇ ನೆಲೆಸಿದ್ದ ಅವರು ಮೈಸೂರು ಸಾಂಸ್ಕೃತಿಕ ಪ್ರಪಂಚ ಮತ್ತು ಪ್ರಗತಿಪರ ಚಳವಳಿಗಳ ಭಾಗವಾಗಿದ್ದರು.

ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಪುರಸ್ಕೃತರಾಗಿದ್ದ ನಾಯಕರ ಪತ್ನಿ, ಸಾಮಾಜಿಕ ಹೋರಾಟಗಾರ್ತಿ ಮೀರಾನಾಯಕ. ಪುತ್ರಿ ದೀಪಾ.

ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬಹುಕಾಲ ಅಧ್ಯಾಪಕರಾಗಿದ್ದ ಅವರು ವಿಮರ್ಶೆ ಜತೆಗೆ ಸಂಪಾದನೆ, ಕನ್ನಡ ಸಣ್ಣಕಥೆಗಳು, ಹೊಸಗನ್ನಡ ಕವಿತೆಗಳನ್ನೂ ರಚಿಸಿದ್ದರು. ‘ಬಾಳು’ ಹೆಸರಲ್ಲಿ ಆತ್ಮಕಥೆಯನ್ನು ಬರೆದಿದ್ದಾರೆ.

ಇದನ್ನೂ ಓದಿರಿ: ಅಂಬೇಡ್ಕರ್‌‌ ನಿಂದನೆ; ಸಿಮ್ಸ್‌ ನಿರ್ದೇಶಕರ ವಿರುದ್ಧ ತನಿಖೆಗೆ ಸಮಿತಿ ರಚನೆ

ಸಮಕಾಲೀನ (1973 ), ಅನಿವಾರ್ಯ (1980), ನಿರಪೇಕ್ಷೆ (1984), ನಿಜದನಿ (1988), ವಿನಯ ವಿಮರ್ಶೆ (1991), ಸಕಾಲಿಕ (1995), ಗುಣ ಗೌರವ (2002), ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (2002), ಕೃತಿ ಸಾಕ್ಷಿ (2006), ಸ್ಥಿತಿ ಪ್ರಜ್ಞೆ (2007), ಮತ್ತೆ ಮತ್ತೆ ಪಂಪ (2008), ಸಾಹಿತ್ಯ ಸಮೀಕ್ಷೆ (2009), ಉತ್ತರಾರ್ಧ (2011) ಅವರ ಬಹುಮುಖ್ಯ ಕೃತಿಗಳು.

ಉತ್ತರಾರ್ಧ ಕೃತಿಗೆ 2019ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಿರಪೇಕ್ಷ ವಿಮರ್ಶಾ ಕೃತಿಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ’ಯ ಪ್ರಶಸ್ತಿ ದೊರೆತಿವೆ. ನಿಜದನಿ ವಿಮರ್ಶಾ ಕೃತಿಗೆ ‘ವಿ.ಎಂ.ಇನಾಂದಾರ ಸ್ಮಾರಕ’ ಪ್ರಶಸ್ತಿ ಜಿ.ಎಚ್‌.ನಾಯಕ ಅವರಿಗೆ ಲಭಿಸಿದೆ.

ಅಡಿಗರ ಗೌರವ ಗ್ರಂಥ ಸಂವೇದನೆ , ಶ್ರೀ ರಾಮಾಯಣ ದರ್ಶನಂ ಕುವೆಂಪು ಸ್ವಹಸ್ತಾಕ್ಷರ ಪ್ರತಿ, ಶತಮಾನದ ಕನ್ನಡ ಸಾಹಿತ್ಯ 1, 2ನೇ ಸಂಪುಟಗಳಿಗೆ ಸಂಪಾದಕರೂ ಆಗಿ ಜಿ.ಎಚ್.ನಾಯಕ ಸೇವೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದು, “ಪ್ರಸಿದ್ಧ ಸಾಹಿತಿ ಪ್ರೊ. ಜಿ.ಎಚ್.ನಾಯಕ್ ಅವರ ಅಗಲಿಕೆ ನನಗೆ ಆಘಾತವನ್ನುಂಟು‌ ಮಾಡಿದೆ. ನನ್ನ ಆತ್ಮೀಯರು ಮತ್ತು ಹಿತಚಿಂತಕರಾಗಿದ್ದ ಜಿ.ಎಚ್.ನಾಯಕ್ ಬರವಣಿಗೆಯ ಜೊತೆಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಳುವಳಿಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಹೊಸ ತಲೆಮಾರನ್ನು ಪ್ರಭಾವಿಸಿದವರು. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ” ಎಂದಿದ್ದಾರೆ.

ಚಿಂತಕರಾದ ಶ್ರೀಪಾದ್ ಭಟ್ ಪ್ರತಿಕ್ರಿಯಿಸಿ, “ಅರವತ್ತರ ದಶಕದ ನವ್ಯ ಕಾಲದ ವಿಮರ್ಶ ವಲಯವು ಲೀವಿಸ್ ಮತ್ತು ಎಂ.ಜಿ.ಕೆ. ನಿಷ್ಠತೆಯಲ್ಲಿ ತನ್ನ ಭಕ್ತಿಯನ್ನು ಪ್ರದರ್ಶಿಸುತ್ತಾ ಪಕ್ಕಾ ಬ್ರಾಹ್ಮಣರ ಒಡ್ಡೋಲಗದಂತಿತ್ತು. ಈ ವಿಪ್ರವೃಂದವು ಬ್ರಾಹ್ಮಣೇತರ ಲೇಖಕ/ಲೇಖಕಿಯರೊಂದಿಗೆ ‘ನೀ ಒಳಗೆ ಬಾ, ಆದರೆ ನಿನ್ನ ಆಸ್ತಿತ್ವವನ್ನು ನಾವು ನಿರ್ಧರಿಸುತ್ತೇವೆ’ ಎಂಬಂತೆ ವರ್ತಿಸುತ್ತಿತ್ತು. ಇಂತಹ ಸಂದರ್ಭದಲ್ಲಿ ತಮ್ಮ ಖಚಿತ ನಿಲುವು ಮತ್ತು ಆಳವಾದ ಒಳನೋಟಗಳ ಮೂಲಕ ವಸ್ತುನಿಷ್ಠ ವಿಮರ್ಶೆಯ ಹೊಸ ದಿಕ್ಕನ್ನು ರೂಪಿಸಿದ ಜಿ. ಎಚ್. ನಾಯಕರು ನಿಷ್ಠುರತೆ ಮತ್ತು ಅಗಾಧ ಓದನ್ನು ಒಳಗೊಂಡ ಬಹು ಮುಖ್ಯ ಪರಂಪರೆಯನ್ನು ಕಟ್ಟಿದ್ದಾರೆ” ಎಂದು ನೆನೆದಿದ್ದಾರೆ.

“ಆಗ ಬ್ರಾಹ್ಮಣ ವಿಮರ್ಶಕರ ಅಸಡ್ಡೆಗೆ ಒಳಗಾಗಿದ್ದ ಕುವೆಂಪು ಸಾಹಿತ್ಯದ ಆ ಶಕ್ತಿ, ವೈಚಾರಿಕತೆ, ಸೃಜನಶೀಲತೆಯನ್ನು ತಮ್ಮದೇ ಶೈಲಿಯಲ್ಲಿ ಕನ್ನಡದ ಓದುಗರ ಮುಂದೆ ಕಟ್ಟಿಕೊಟ್ಟ ನಾಯಕರನ್ನು ಮರೆಯಲು ಸಾಧ್ಯವಿಲ್ಲ. ಇಲ್ಲಿ ತೇಜಸ್ವಿಯವರ ಕೊಡುಗೆಯೂ ಸಹ ಮುಖ್ಯ. ನಿಷ್ಠುರವಾದಿಯಾಗಿದ್ದ ನಾಯಕರು ಮೈಸೂರಿನ ಒಕ್ಕಲಿಗ ಅಕಾಡೆಮಿಕ್ ವಲಯದಿಂದಲೂ ಕಿರಿ ಕಿರಿ ಅನುಭವಿಸಿದರು. ಆದರೆ ತಮ್ಮ ‘ನಿಜದನಿ’ಯನ್ನು ಬದಲಿಸಲಿಲ್ಲ. ಕನ್ನಡ ವಿಮರ್ಶೆಗೆ ಹೊಸ ಪರಿಭಾಷೆ ಬರೆದ ನಾಯಕರಿಗೆ ನಮನಗಳು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...