Homeಕರ್ನಾಟಕಕನ್ನಡದ ಹಿರಿಯ ವಿಮರ್ಶಕ ಜಿ.ಎಚ್.ನಾಯಕ ನಿಧನ

ಕನ್ನಡದ ಹಿರಿಯ ವಿಮರ್ಶಕ ಜಿ.ಎಚ್.ನಾಯಕ ನಿಧನ

- Advertisement -
- Advertisement -

ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕ, ನೇರ ನಿಷ್ಠುರ ಮಾತುಗಳಿಗೆ ಹೆಸರಾದ ಪ್ರೊ. ಗೋವಿಂದರಾಯ ಹಮ್ಮಣ್ಣ ನಾಯಕ (ಜಿ.ಎಚ್.ನಾಯಕ) ಅವರು ಶುಕ್ರವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ.

ಬಹುಕಾಲದಿಂದ ಅವರು ವಯೋಸಹಜ ಆರೋಗ್ಯ ಸಮಸ್ಯೆಯಲ್ಲಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ನೆಲೆಸಿದ್ದ ಜಿ.ಎಚ್‌.ನಾಯಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿದ್ದಾರೆ.

ಉತ್ತರ ಕನ್ನಡದ ಅಂಕೋಲ ತಾಲ್ಲೂಕಿನ ಸೂರ್ವೆಯಲ್ಲಿ 1935, ಸೆಪ್ಟೆಂಬರ್‌ 18ರಂದು ಜನಿಸಿದ್ದ ಜಿ.ಎಚ್‌.ನಾಯಕ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಿದ್ಯಾರ್ಥಿ ದೆಸೆಯಿಂದಲೂ ಮೈಸೂರಿನಲ್ಲಿಯೇ ನೆಲೆಸಿದ್ದ ಅವರು ಮೈಸೂರು ಸಾಂಸ್ಕೃತಿಕ ಪ್ರಪಂಚ ಮತ್ತು ಪ್ರಗತಿಪರ ಚಳವಳಿಗಳ ಭಾಗವಾಗಿದ್ದರು.

ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಪುರಸ್ಕೃತರಾಗಿದ್ದ ನಾಯಕರ ಪತ್ನಿ, ಸಾಮಾಜಿಕ ಹೋರಾಟಗಾರ್ತಿ ಮೀರಾನಾಯಕ. ಪುತ್ರಿ ದೀಪಾ.

ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬಹುಕಾಲ ಅಧ್ಯಾಪಕರಾಗಿದ್ದ ಅವರು ವಿಮರ್ಶೆ ಜತೆಗೆ ಸಂಪಾದನೆ, ಕನ್ನಡ ಸಣ್ಣಕಥೆಗಳು, ಹೊಸಗನ್ನಡ ಕವಿತೆಗಳನ್ನೂ ರಚಿಸಿದ್ದರು. ‘ಬಾಳು’ ಹೆಸರಲ್ಲಿ ಆತ್ಮಕಥೆಯನ್ನು ಬರೆದಿದ್ದಾರೆ.

ಇದನ್ನೂ ಓದಿರಿ: ಅಂಬೇಡ್ಕರ್‌‌ ನಿಂದನೆ; ಸಿಮ್ಸ್‌ ನಿರ್ದೇಶಕರ ವಿರುದ್ಧ ತನಿಖೆಗೆ ಸಮಿತಿ ರಚನೆ

ಸಮಕಾಲೀನ (1973 ), ಅನಿವಾರ್ಯ (1980), ನಿರಪೇಕ್ಷೆ (1984), ನಿಜದನಿ (1988), ವಿನಯ ವಿಮರ್ಶೆ (1991), ಸಕಾಲಿಕ (1995), ಗುಣ ಗೌರವ (2002), ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (2002), ಕೃತಿ ಸಾಕ್ಷಿ (2006), ಸ್ಥಿತಿ ಪ್ರಜ್ಞೆ (2007), ಮತ್ತೆ ಮತ್ತೆ ಪಂಪ (2008), ಸಾಹಿತ್ಯ ಸಮೀಕ್ಷೆ (2009), ಉತ್ತರಾರ್ಧ (2011) ಅವರ ಬಹುಮುಖ್ಯ ಕೃತಿಗಳು.

ಉತ್ತರಾರ್ಧ ಕೃತಿಗೆ 2019ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಿರಪೇಕ್ಷ ವಿಮರ್ಶಾ ಕೃತಿಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ’ಯ ಪ್ರಶಸ್ತಿ ದೊರೆತಿವೆ. ನಿಜದನಿ ವಿಮರ್ಶಾ ಕೃತಿಗೆ ‘ವಿ.ಎಂ.ಇನಾಂದಾರ ಸ್ಮಾರಕ’ ಪ್ರಶಸ್ತಿ ಜಿ.ಎಚ್‌.ನಾಯಕ ಅವರಿಗೆ ಲಭಿಸಿದೆ.

ಅಡಿಗರ ಗೌರವ ಗ್ರಂಥ ಸಂವೇದನೆ , ಶ್ರೀ ರಾಮಾಯಣ ದರ್ಶನಂ ಕುವೆಂಪು ಸ್ವಹಸ್ತಾಕ್ಷರ ಪ್ರತಿ, ಶತಮಾನದ ಕನ್ನಡ ಸಾಹಿತ್ಯ 1, 2ನೇ ಸಂಪುಟಗಳಿಗೆ ಸಂಪಾದಕರೂ ಆಗಿ ಜಿ.ಎಚ್.ನಾಯಕ ಸೇವೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದು, “ಪ್ರಸಿದ್ಧ ಸಾಹಿತಿ ಪ್ರೊ. ಜಿ.ಎಚ್.ನಾಯಕ್ ಅವರ ಅಗಲಿಕೆ ನನಗೆ ಆಘಾತವನ್ನುಂಟು‌ ಮಾಡಿದೆ. ನನ್ನ ಆತ್ಮೀಯರು ಮತ್ತು ಹಿತಚಿಂತಕರಾಗಿದ್ದ ಜಿ.ಎಚ್.ನಾಯಕ್ ಬರವಣಿಗೆಯ ಜೊತೆಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಳುವಳಿಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಹೊಸ ತಲೆಮಾರನ್ನು ಪ್ರಭಾವಿಸಿದವರು. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ” ಎಂದಿದ್ದಾರೆ.

ಚಿಂತಕರಾದ ಶ್ರೀಪಾದ್ ಭಟ್ ಪ್ರತಿಕ್ರಿಯಿಸಿ, “ಅರವತ್ತರ ದಶಕದ ನವ್ಯ ಕಾಲದ ವಿಮರ್ಶ ವಲಯವು ಲೀವಿಸ್ ಮತ್ತು ಎಂ.ಜಿ.ಕೆ. ನಿಷ್ಠತೆಯಲ್ಲಿ ತನ್ನ ಭಕ್ತಿಯನ್ನು ಪ್ರದರ್ಶಿಸುತ್ತಾ ಪಕ್ಕಾ ಬ್ರಾಹ್ಮಣರ ಒಡ್ಡೋಲಗದಂತಿತ್ತು. ಈ ವಿಪ್ರವೃಂದವು ಬ್ರಾಹ್ಮಣೇತರ ಲೇಖಕ/ಲೇಖಕಿಯರೊಂದಿಗೆ ‘ನೀ ಒಳಗೆ ಬಾ, ಆದರೆ ನಿನ್ನ ಆಸ್ತಿತ್ವವನ್ನು ನಾವು ನಿರ್ಧರಿಸುತ್ತೇವೆ’ ಎಂಬಂತೆ ವರ್ತಿಸುತ್ತಿತ್ತು. ಇಂತಹ ಸಂದರ್ಭದಲ್ಲಿ ತಮ್ಮ ಖಚಿತ ನಿಲುವು ಮತ್ತು ಆಳವಾದ ಒಳನೋಟಗಳ ಮೂಲಕ ವಸ್ತುನಿಷ್ಠ ವಿಮರ್ಶೆಯ ಹೊಸ ದಿಕ್ಕನ್ನು ರೂಪಿಸಿದ ಜಿ. ಎಚ್. ನಾಯಕರು ನಿಷ್ಠುರತೆ ಮತ್ತು ಅಗಾಧ ಓದನ್ನು ಒಳಗೊಂಡ ಬಹು ಮುಖ್ಯ ಪರಂಪರೆಯನ್ನು ಕಟ್ಟಿದ್ದಾರೆ” ಎಂದು ನೆನೆದಿದ್ದಾರೆ.

“ಆಗ ಬ್ರಾಹ್ಮಣ ವಿಮರ್ಶಕರ ಅಸಡ್ಡೆಗೆ ಒಳಗಾಗಿದ್ದ ಕುವೆಂಪು ಸಾಹಿತ್ಯದ ಆ ಶಕ್ತಿ, ವೈಚಾರಿಕತೆ, ಸೃಜನಶೀಲತೆಯನ್ನು ತಮ್ಮದೇ ಶೈಲಿಯಲ್ಲಿ ಕನ್ನಡದ ಓದುಗರ ಮುಂದೆ ಕಟ್ಟಿಕೊಟ್ಟ ನಾಯಕರನ್ನು ಮರೆಯಲು ಸಾಧ್ಯವಿಲ್ಲ. ಇಲ್ಲಿ ತೇಜಸ್ವಿಯವರ ಕೊಡುಗೆಯೂ ಸಹ ಮುಖ್ಯ. ನಿಷ್ಠುರವಾದಿಯಾಗಿದ್ದ ನಾಯಕರು ಮೈಸೂರಿನ ಒಕ್ಕಲಿಗ ಅಕಾಡೆಮಿಕ್ ವಲಯದಿಂದಲೂ ಕಿರಿ ಕಿರಿ ಅನುಭವಿಸಿದರು. ಆದರೆ ತಮ್ಮ ‘ನಿಜದನಿ’ಯನ್ನು ಬದಲಿಸಲಿಲ್ಲ. ಕನ್ನಡ ವಿಮರ್ಶೆಗೆ ಹೊಸ ಪರಿಭಾಷೆ ಬರೆದ ನಾಯಕರಿಗೆ ನಮನಗಳು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...