Homeಮುಖಪುಟಮಣಿಪುರ ಸಿಎಂ ಕುಕಿ ಸಮುದಾಯದ ವಿರೋಧಿ, ನಮಗೆ ಪ್ರತ್ಯೇಕ ರಾಜ್ಯ ಬೇಕು: ಬಿಜೆಪಿ ಪರ ಕುಕಿ...

ಮಣಿಪುರ ಸಿಎಂ ಕುಕಿ ಸಮುದಾಯದ ವಿರೋಧಿ, ನಮಗೆ ಪ್ರತ್ಯೇಕ ರಾಜ್ಯ ಬೇಕು: ಬಿಜೆಪಿ ಪರ ಕುಕಿ ಮುಖ್ಯಸ್ಥ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಕುಕಿ ಸಮುದಾಯದ ವಿರೋಧಿಯಾಗಿದ್ದು, ನಮಗೆ ಪ್ರತ್ಯೇಕ ರಾಜ್ಯ ಬೇಕು ಮತ್ತು ಅದಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಪರ ಕುಕಿ ಗುಂಪಿನ ಮುಖ್ಯಸ್ಥ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಹೇಳಿದ್ದಾರೆ.

‘ದಿ ವೈರ್‌’ ಜಾಲತಾಣದ ಖ್ಯಾತ ಪತ್ರಕರ್ತ ಕರಣ್ ಥಾಪರ್‌ ನಡೆಸಿರುವ ಸಂದರ್ಶನದಲ್ಲಿ ಕುಕಿ ಪೀಪಲ್ಸ್ ಅಲೈಯನ್ಸ್‌ನ ಪ್ರಧಾನ ಕಾರ್ಯದರ್ಶಿ ಹ್ಯಾಂಗ್‌ಶಿಂಗ್ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಕುಕಿ ಜನರಿಗೆ ಪ್ರತ್ಯೇಕ ಆಡಳಿತ ಬೇಕು. ಇದೇ ರಾಜ್ಯದಲ್ಲಿ ಮೈಥೇಯಿ ಸಮುದಾಯದೊಂದಿಗೆ ಮುಂದೆಯೂ ಇರುವುದು ಅಸಾಧ್ಯವಾಗಿದೆ ಎಂದಿದ್ದಾರೆ.

ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಎನ್. ಬಿರೇನ್ ಸಿಂಗ್ ಸರ್ಕಾರವನ್ನು ಕುಕಿ ಪೀಪಲ್ಸ್ ಅಲಯನ್ಸ್ ಬೆಂಬಲಿಸಿದೆ ಎಂಬುದನ್ನು ಗಮನಿಸಬಹುದು. ಈ ಬಣದ ಪ್ರಭಾವಿ ನಾಯಕ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, “ನಮಗೆ ಪ್ರತ್ಯೇಕ ಆಡಳಿತ ಬೇಕೆಂಬ ಬೇಡಿಕೆಯಿಂದ ಕುಕಿ ಸಮುದಾಯ ಹಿಂದೆ ಸರಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕ ಆಡಳಿತವೆಂದರೆ ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ಆಗಿರಬಹುದು ಎಂದು ಅವರು ಹೇಳಿದ್ದಾರೆ. ಮಣಿಪುರದೊಳಗೆ ಸ್ವಾಯತ್ತ ಪ್ರಾದೇಶಿಕ ಮಂಡಳಿಗಳ ಆಯ್ಕೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲಾಗಿದೆ ಎಂದು ಅವರು ವಿಷಾದಿಸಿದ್ದಾರೆ.

“ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಮೇಲಿನ ನಂಬಿಕೆಯನ್ನು ಕುಕಿ ಪೀಪಲ್ಸ್ ಅಲೈಯನ್ಸ್ ಕಳೆದುಕೊಂಡಿದೆ” ಎಂದಿರುವ ಅವರು, ತಾಂತ್ರಿಕವಾಗಿ ಬೆಂಬಲವನ್ನು ಹಿಂತೆಗೆದುಕೊಳ್ಳದಿದ್ದರೂ, ಮುಂದಿನ ದಿನಗಳಲ್ಲಿ ಬೆಂಬಲ ವಾಪಸ್ ಪಡೆಯುವ ಸೂಚನೆಯನ್ನೂ ಅವರು ನೀಡಿದ್ದಾರೆ.

ಬಿರೇನ್ ಸಿಂಗ್ ಅವರು ತಮ್ಮದೇ ಆದ ಬಹುಮತವನ್ನು ಹೊಂದಿರುವುದರಿಂದ, ಕುಕಿ ಪೀಪಲ್ಸ್ ಅಲೈಯನ್ಸ್‌ನ ಬೆಂಬಲವು ತಾಂತ್ರಿಕವಾಗಿ ಅತ್ಯುತ್ತಮವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿರೇನ್ ಸಿಂಗ್ ‘ಕುಕಿ ವಿರೋಧಿ’ ಎಂದು ಹ್ಯಾಂಗ್‌ಶಿಂಗ್ ಕಿಡಿಕಾರಿದ್ದಾರೆ.

ಕುಕಿ ಮತ್ತು ಮೈಥೇಯಿ ಸಮುದಾಯದ ನಡುವಿನ ಸಮಸ್ಯೆಗೆ ಬಿರೇನ್‌ ಸಿಂಗ್ ಅವರು ಕಳೆದ ನಾಲ್ಕೈದು ವರ್ಷಗಳಲ್ಲಿ ತೋರಿರುವ ವರ್ತನೆಯೇ ಕಾರಣ ಎಂದು ಹ್ಯಾಂಗ್‌ಶಿಂಗ್ ಆರೋಪಿಸಿದ್ದಾರೆ.

ಸಿಎಂ ಬಿರೇನ್ ಸಿಂಗ್ ಅವರು ಬೇಜವಾಬ್ದಾರಿ ತೋರಿದ್ದಾರೆಂದು ಉದಾಹರಣೆಗಳನ್ನು ಅವರು ನೀಡಿದ್ದಾರೆ. “ತಮ್ಮ ಮನೆಯನ್ನು ಲೂಟಿ ಮಾಡಲಾಗುತ್ತಿದೆ, ಸುಟ್ಟು ಹಾಕಲಾಗುತ್ತಿದೆ” ಎಂದು ಹೇಳಲು ಬಿಜೆಪಿ ಶಾಸಕ, ಬಿರೇನ್ ಸಿಂಗ್ ಅವರ ಸರ್ಕಾರದ ಸದಸ್ಯ ಲೆಟ್ಪಾವೊ ಹಾಕಿಪ್ ಅವರು ಬಿರೇನ್ ಸಿಂಗ್ ಅವರಿಗೆ ಪದೇ ಪದೇ ಫೋನ್ ಮಾಡಿದರೂ ಸ್ಪಂದಿಸಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮೋದಿಯ ಕೋಮುವಾದಿ ಒಬಿಸಿ ರಾಜಕಾರಣಕ್ಕೆ, ಸಿದ್ದರಾಮಯ್ಯ ಎಂಬ ವೈಚಾರಿಕ ಒಬಿಸಿಯ ಕೌಂಟರ್‌‌

ಹಾಕಿಪ್ ನೆರೆಹೊರೆಯವರಾಗಿದ್ದರೂ, ಬಿರೇನ್ ಸಿಂಗ್ ಏನೂ ಮಾಡಲಿಲ್ಲ. ಅಂತಿಮವಾಗಿ ಮನೆ ಸುಟ್ಟುಹೋಯಿತು. ಬಿರೇನ್ ಸಿಂಗ್ ಉದ್ದೇಶಪೂರ್ವಕವಾಗಿ ಕುಕಿಗಳನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದಾರೆ ಎಂಬುದಕ್ಕೆ ಇದು ಪುರಾವೆಯಾಗಿದೆ ಎಂದು ಹ್ಯಾಂಗ್‌ಶಿಂಗ್ ಆಪಾದಿಸಿದ್ದಾರೆ. “ಅದಕ್ಕಾಗಿಯೇ ಈಗ ಪ್ರತ್ಯೇಕತೆ ಅಗತ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

ಅಗತ್ಯವಿದ್ದರೆ, ಕುಕಿಗಳು ಪ್ರತ್ಯೇಕ ಆಡಳಿತಕ್ಕಾಗಿ ಹೋರಾಡುತ್ತಾರೆ ಎಂದು ಹ್ಯಾಂಗ್‌ಶಿಂಗ್ ಸ್ಪಷ್ಟಪಡಿಸಿದ್ದಾರೆ. ಇದು ಸಂಘರ್ಷಕ್ಕೆ ಎಡೆ ಮಾಡಿಕೊಡುತ್ತದೆಯೇ ಎಂದು ಕೇಳಿದಾಗ ಹ್ಯಾಂಗ್‌ಶಿಂಗ್‌ ಆ ಮಾತನ್ನು ನಿರಾಕರಿಸಿಲ್ಲ. “ಬದಲಿಗೆ, ಇದು ಆತ್ಮರಕ್ಷಣೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಕುಕಿ-ಮೈಥೇಯಿ ಘರ್ಷಣೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕ್ರಿಯೆಯ ಬಗ್ಗೆಯೂ ಸಾಕಷ್ಟು ಚರ್ಚೆ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...