Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ಮಾಜಿ ಸಚಿವ ಸತ್ಯೇಂದ್ರ ಜೈನ್‌ಗೆ ಸುಪ್ರೀಂ ಜಾಮೀನು

ದೆಹಲಿ ಅಬಕಾರಿ ನೀತಿ ಪ್ರಕರಣ: ಮಾಜಿ ಸಚಿವ ಸತ್ಯೇಂದ್ರ ಜೈನ್‌ಗೆ ಸುಪ್ರೀಂ ಜಾಮೀನು

- Advertisement -
- Advertisement -

ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಶುಕ್ರವಾರ ಸುಪ್ರೀಂ ಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿತು. ಅವರು ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದು ಸರ್ಕಾರಿ ಆಸ್ಪತ್ರೆಯ ಐಸಿಯುಗೆ ದಾಖಲಾದ ಒಂದು ದಿನದ ನಂತರ ಅವರಿಗೆ ಜಾಮೀನು ನೀಡಲಾಗಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿದ್ದರು.

ನ್ಯಾಯಮೂರ್ತಿಗಳಾದ ಜೆ.ಕೆ.ಮಹೇಶ್ವರಿ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ಪೀಠವು 58ರ ವರ್ಷದ ಜೈನ್ ಅವರನ್ನು ಅವರ ಆಯ್ಕೆಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲು ಅವಕಾಶ ಮಾಡಿಕೊಟ್ಟಿತು. ಜುಲೈ 10ರೊಳಗೆ ವೈದ್ಯಕೀಯ ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಿತು. ಜೈನ್ ಅವರ ಮಧ್ಯಂತರ ಜಾಮೀನು ಅವಧಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡದಂತೆ ಸೂಚಿಸಿತು.

ಜೈನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಮಾಜಿ ಸಚಿವರು 35 ಕೆಜಿ ತೂಕ ಕಳೆದುಕೊಂಡಿದ್ದು, ಬೆನ್ನುಮೂಳೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಿದರು.

ಇಡಿ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು, ”ಜೈನ್ ಅವರನ್ನು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಅಥವಾ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ವೈದ್ಯರ ಸಮಿತಿಯಿಂದ ಪರೀಕ್ಷಿಸಲು ಕೋರಿದರು. ವೈದ್ಯಕೀಯ ವರದಿಗಳು ಚಿಕಿತ್ಸೆಯನ್ನು ಸೂಚಿಸಿದರೆ, ತನಿಖಾ ಸಂಸ್ಥೆ ಅದನ್ನು ವಿರೋಧಿಸುವುದಿಲ್ಲ” ಎಂದು ಅವರು ಹೇಳಿದರು.

ಜೈನ್ ಅವರು ಈ ಹಿಂದೆಯೂ ಈ ಪ್ರಕರಣದಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು, ಆದರೆ ಏಜೆನ್ಸಿಯು AIIMS ಅಥವಾ RML ಆಸ್ಪತ್ರೆಯ ವೈದ್ಯಕೀಯ ಮಂಡಳಿಯಿಂದ ಅವರ ಪರೀಕ್ಷೆಯನ್ನು ಕೋರಿದ್ದರಿಂದ ಅರ್ಜಿಗಳನ್ನು ಹಿಂತೆಗೆದುಕೊಳ್ಳಲಾಗಿತ್ತು.

ಇದನ್ನು ಓದಿ: ಅಬಕಾರಿ ನೀತಿ ಅಕ್ರಮ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್

“ಅವರು ದೆಹಲಿಯ ಆರೋಗ್ಯ ಮಂತ್ರಿ ಮತ್ತು ಜೈಲು ಸಚಿವರಾಗಿದ್ದರು. ಅವರ ಅಡಿಯಲ್ಲಿಲ್ಲದ ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಬೇಕಾಗಿದೆ” ಎಂದು ರಾಜು ಹೇಳಿದರು.

ಜೈನ್ ಅವರನ್ನು ಸಧ್ಯ ವೈದ್ಯಕೀಯ ಜಾಮೀನು ನೀಡುತ್ತಿದ್ದು, ಮುಂದಿನ ವಿಚಾರಣೆಯ ದಿನಾಂಕದಂದು AIIMS ಅಥವಾ RML ಆಸ್ಪತ್ರೆಯ ವೈದ್ಯರಿಂದ ಅವರ ಪರೀಕ್ಷೆಯನ್ನು ಪರಿಶೀಲಿಸುವುದಾಗಿ ಪೀಠವು ಹೇಳಿದೆ.

ಗುರುವಾರ ಜೈನ್ ಅವರನ್ನು ಮೊದಲು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ನಂತರ ಉಸಿರಾಟದ ತೊಂದರೆಯಿಂದಾಗಿ ಅವರನ್ನು ಲೋಕನಾಯಕ ಜೈ ಪ್ರಕಾಶ್ ನಾರಾಯಣ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅವರು “ತೀವ್ರವಾಗಿ ಅಸ್ವಸ್ಥರಾಗಿದ್ದರು” ಎಂದು ಎಎಪಿ ಮುಖಂಡರು ತಿಳಿಸಿದ್ದಾರೆ.

ಎಲ್‌ಎನ್‌ಜೆಪಿ ಆಸ್ಪತ್ರೆಯು ದೆಹಲಿ ಸರ್ಕಾರದ ಅಡಿಯಲ್ಲಿ ಅತಿದೊಡ್ಡ ಆಸ್ಪತ್ರೆಯಾಗಿದೆ.

ತಿಹಾರ್ ಜೈಲಿನ ಸ್ನಾನಗೃಹದಲ್ಲಿ ಕುಸಿದು ಬಿದ್ದ ಮಾಜಿ ಸಚಿವರನ್ನು ಒಂದು ವಾರದಲ್ಲಿ ಎರಡನೇ ಬಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಹಿಂದೆಯೂ ಜೈನ್ ಬಾತ್ ರೂಂನಲ್ಲಿ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯವಾಗಿತ್ತು ಎಂದು ಎಎಪಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...