Homeಕರ್ನಾಟಕಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು: ಕಟೀಲ್‌ಗೆ ಕಾಂಗ್ರೆಸ್ ತಿರುಗೇಟು

ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು: ಕಟೀಲ್‌ಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

”ಕೋಮು ಪ್ರಚೋದನೆ ನೀಡಿದರೆ, ಕಾನೂನನ್ನು ಕೈಗೆತ್ತಿಕೊಂಡರೆ ಬಜರಂಗದಳ, ಆರ್‌ಎಸ್‌ಎಸ್‌ ಯಾವುದೇ ಇರಲಿ ನಿಷೇಧಿಸುತ್ತೇವೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಬೆನ್ನಲ್ಲೇ ಬಿಜೆಪಿ-ಕಾಂಗ್ರೆಸ್‌ ನಡುವೆ ವಾಕ್ಸಮರ ಜೋರಾಗಿ ನಡೆಯುತ್ತಿದೆ.

ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ”ಧರ್ಮ ಮತ್ತು ಜಾತಿಯ ಹೆಸಲಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ, ಭಜರಂಗದಳ ಮತ್ತು ಪಿ.ಎಫ್.ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಹೇಳಿದೆ.

ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಅವರ ಪ್ರಣಾಳಿಕೆ ಇಡೇರಿಸುವ ಕುರಿತು ಮಾಧ್ಯಮದರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನೆ ಮಾಡಿದಾಗ ಅವರು, ”ಕೋಮು ಪ್ರಚೋದನೆ ನೀಡಿದರೆ, ಕಾನೂನನ್ನು ಕೈಗೆತ್ತಿಕೊಂಡರೆ ಬಜರಂಗದಳ, ಆರ್‌ಎಸ್‌ಎಸ್‌ ಯಾವುದೇ ಇರಲಿ ನಿಷೇಧಿಸುತ್ತೇವೆ. ಸರ್ವ ಜನಾಂಗದ ಶಾಂತಿಯ ತೋಟ ರೂಪಿಸಲು ನಾವು ಬಜರಂಗದಳ, ಆರ್‌ಎಸ್‌ಎಸ್‌ ಎಂಬುದನ್ನು ನೋಡುವುದಿಲ್ಲ, ಪರಿಗಣಿಸುವುದಿಲ್ಲ. ಕಾನೂನು ಕೈಗೆತ್ತಿಕೊಂಡರೆ ನಿಷೇಧಿಸುತ್ತೇವೆ” ಎಂದು ಹೇಳಿದ್ದಾರೆ. ಅದಲ್ಲದೇ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾನೂನುಗಳನ್ನು ಮರುಪರಿಶೀಲಿಸುತ್ತೇವೆ. ಹಿಜಾಬ್‌ ಬ್ಯಾನ್‌, ಗೋಹತ್ಯೆ ನಿಷೇಧದಂತಹ ಕಾನೂನುಗಳನ್ನು ವಾಪಸ್‌ ಪಡೆಯಲಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ನೇತಾಜಿ ಸುಭಾಷ್‌ ಚಂದ್ರ ಬೋಸ್ ನೆನಪು: ಆರ್‌ಎಸ್‌ಎಸ್‌ ಬಚ್ಚಿಡುವ ಸತ್ಯಗಳಿವು

ಇದೀಗ ರಾಜ್ಯ ಕಾಂಗ್ರೆಸ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ”ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು. ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು” ಎಂದು ಹೇಳಿದೆ.

ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ: ಕಟೀಲ್

ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಆರ್.ಎಸ್.ಎಸ್ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ”ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂ ಸೇವಕ, ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂ ಸೇವಕರು” ಎಂದರು.

”ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಲಿ, ಕಾಂಗ್ರೆಸ್‌ನ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ” ಎಂದು ಕಿಡಿಕಾರಿದರು.

”ಬಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ನೆಹರೂ, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದ್ದಾರೆ. ನಿಷೇಧದ ಕೆಲಸ ಮಾಡಿದಾಗಲೆಲ್ಲ ದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಬಂದಿಲ್ಲ. ಆರ್.ಎಸ್.ಎಸ್ ರಾಷ್ಟ್ರಭಕ್ತಿ ಸಂಕೇತ ಅಂತ ಕಾಂಗ್ರೆಸ್‌ನಲ್ಲೇ ಹೇಳಿದ್ದಾರೆ. ವಿಧಾನಸೌಧದಲ್ಲಿ ಡಿಕೆಶಿಯವರೇ ಪ್ರಾರ್ಥನೆ ಹೇಳಿದ್ದಾರೆ, ಅದರಲ್ಲೇ ಇದೆ. ಆ ಪ್ರಾರ್ಥನೆಯಲ್ಲಿ ಏನಿದೆ ಎನ್ನುವುದನ್ನು ಖರ್ಗೆಯವರು ಡಿಕೆಶಿ ಬಳಿ ಕೇಳಲಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...