Homeಕರ್ನಾಟಕಬಗೆಹರಿದ ಸಂಪುಟ ವಿಸ್ತರಣೆ ಕಸರತ್ತು; ನೂತನ ಸಚಿವರ ಪ್ರಮಾಣವಚನ ಇಂದು

ಬಗೆಹರಿದ ಸಂಪುಟ ವಿಸ್ತರಣೆ ಕಸರತ್ತು; ನೂತನ ಸಚಿವರ ಪ್ರಮಾಣವಚನ ಇಂದು

- Advertisement -
- Advertisement -

ರಾಜ್ಯ ನೂತನ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಯ ಕಗ್ಗಂಟು ಬಗೆಹರಿದಿದ್ದು ಇಂದು (ಶನಿವಾರ) 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜತೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸತತ ಮೂರು ದಿನಗಳ ಕಾಲ ಸಮಾಲೋಚನೆ ನಡೆಸಿ ಸಮಸ್ಯೆಯನ್ನು ಬಿಡಿಸಿದೆ.

ಉಭಯ ಸದನಗಳ ಸದಸ್ಯರೂ ಅಲ್ಲದ ಪಕ್ಷದ ಹಿರಿಯ ಮುಖಂಡ ಎನ್‌.ಎಸ್‌.ಬೋಸರಾಜು ಅವರಿಗೆ ಸಚಿವರಾಗುವ ಅವಕಾಶವನ್ನು ನೀಡಲಾಗಿದೆ. ಹಲವು ಹಿರಿಯ ಶಾಸಕರಿಗೆ ಸಚಿವರಾಗುವ ಅವಕಾಶ ದೊರೆತ್ತಿಲ್ಲ.

ನೂತನ ಸಚಿವರ ಪ್ರಮಾಣವಚನ ಸಮಾರಂಭ ಶನಿವಾರ (ಇಂದು) ಬೆಳಿಗ್ಗೆ 11.45ಕ್ಕೆ ರಾಜಭವನದಲ್ಲಿ ನಡೆಯಲಿದೆ. ಪ್ರಮಾಣವಚನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ರಾಜಭವನಕ್ಕೆ ಶುಕ್ರವಾರ ಮಧ್ಯಾಹ್ನವೇ ಮುಖ್ಯಮಂತ್ರಿ ಸಚಿವಾಲಯ ಸಂದೇಶ ಕಳುಹಿಸಿದೆ.

ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಯ ಸೇರ್ಪಡೆಗೆ ಅವಕಾಶ ಇದೆ. 24 ಮಂದಿಯ ಸೇರ್ಪಡೆಯಿಂದ ಸಂಪುಟ ಭರ್ತಿಯಾದಂತೆ ಆಗಿದೆ.

ಲಿಂಗಾಯತ ಸಮುದಾಯದ ಹಲವು ಒಳಪಂಗಡಗಳನ್ನು ಒಳಗೊಂಡು ಎಂಟು ಜನರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಕ್ಕಲಿಗರಲ್ಲಿ ಡಿ.ಕೆ.ಶಿವಕುಮಾರ್ ಸೇರಿ ಐದು ಮಂದಿಗೆ ಅವಕಾಶ ದೊರೆತಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಒಟ್ಟು 9 ಮಂದಿಗೆ ಸಚಿವ ಸ್ಥಾನ ಲಭಿಸಿದೆ. ಪರಿಶಿಷ್ಟ ಜಾತಿಯ ಕೆ.ಎಚ್‌. ಮುನಿಯಪ್ಪ, ಜಿ.ಪರಮೇಶ್ವರ, ಎಚ್‌.ಸಿ.ಮಹದೇವಪ್ಪ, ಆರ್.ಬಿ.ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಪರಿಶಿಷ್ಟ ಪಂಗಡದ ನಾಗೇಂದ್ರ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ ಸಚಿವರಾಗಿದ್ದಾರೆ.

‘ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯವಾದ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಬೆಸ್ತ ಸಮುದಾಯದ ಮಂಕಾಳ ಸುಬ್ಬ ವೈದ್ಯ, ಮರಾಠ ಸಮಾಜದ ಸಂತೋಷ್ ಲಾಡ್ ಸಂಪುಟ ಸೇರ್ಪಡೆಯಾಗಿದ್ದಾರೆ. ಕುರುಬ ಸಮುದಾಯದಿಂದ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ.

ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ, ಬಸವರಾಜ ರಾಯರಡ್ಡಿ, ಟಿ.ಬಿ.ಜಯಚಂದ್ರ, ತನ್ವೀರ್ ಸೇಠ್‌, ಎನ್‌.ಎ.ಹ್ಯಾರಿಸ್‌, ಸಲೀಂ ಅಹಮದ್‌ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ.  ದಿನೇಶ್‌ ಗುಂಡೂರಾವ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಆರಂಭದಲ್ಲಿ ಒಲವು ವ್ಯಕ್ತವಾಗಿರಲಿಲ್ಲ. ಆದರೆ, ಕೊನೆಯ ಕ್ಷಣದಲ್ಲಿ ಬ್ರಾಹ್ಮಣ ಕೋಟಾದಡಿ ಅವರಿಗೆ ಅವಕಾಶ ದೊರೆತಿದೆ.

ರಾಜೀನಾಮೆಗೆ ಮುಂದಾದ ಹರಿಪ್ರಸಾದ್?

ಸಚಿವ ಸ್ಥಾನ ಸಿಗದ ಕಾರಣಕ್ಕೆ ಬೇಸರವಾಗಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆಂದು ವರದಿಯಾಗಿದೆ.

ಶನಿವಾರವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಾಮಾನ್ಯ ಕಾರ್ಯಕರ್ತನಾಗಿ ಇರುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಅವಕಾಶ ಕೈತಪ್ಪಲು ಸಿದ್ದರಾಮಯ್ಯನವರು ಕಾರಣವೆಂದು ಹರಿಪ್ರಸಾದ್ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ನೂತನ ಸಚಿವರ ಪಟ್ಟಿ

ಎಚ್.ಕೆ.ಪಾಟೀಲ- ನಾಮಧಾರಿ ರೆಡ್ಡಿ

ಕೃಷ್ಣ ಬೈರೇಗೌಡ- ಒಕ್ಕಲಿಗ

ಎನ್.ಚಲುವರಾಯಸ್ವಾಮಿ- ಒಕ್ಕಲಿಗ

ಕೆ.ವೆಂಕಟೇಶ್‌- ಒಕ್ಕಲಿಗ

ಡಾ.ಎಚ್‌.ಸಿ.ಮಹದೇವಪ್ಪ- ಎಸ್‌ಸಿ (ಬಲಗೈ)

ಈಶ್ವರ ಖಂಡ್ರೆ- ಬಣಜಿಗ ಲಿಂಗಾಯತ

ಕೆ.ಎನ್‌.ರಾಜಣ್ಣ- ವಾಲ್ಮೀಕಿ (ಎಸ್‌ಟಿ)

ದಿನೇಶ್‌ ಗುಂಡೂರಾವ್‌- ಬ್ರಾಹ್ಮಣ

ಶರಣಬಸಪ್ಪ ದರ್ಶನಾಪುರ- ರೆಡ್ಡಿ ಲಿಂಗಾಯತ

ಶಿವಾನಂದ ಪಾಟೀಲ- ಪಂಚಮಸಾಲಿ

ಆರ್.ಬಿ.ತಿಮ್ಮಾಪುರ- ಎಸ್‌ಸಿ (ಎಡಗೈ)

ಎಸ್‌.ಎಸ್‌.ಮಲ್ಲಿಕಾರ್ಜುನ- ಸಾದರ ಲಿಂಗಾಯತ

ಶಿವರಾಜ ತಂಗಡಗಿ- ಎಸ್‌ಸಿ (ಭೋವಿ)

ಶರಣ ಪ್ರಕಾಶ ಪಾಟೀಲ- ಬಣಜಿಗ ಲಿಂಗಾಯತ

ಮಂಕಾಳ ಸುಬ್ಬ ವೈದ್ಯ- ಮೊಗವೀರ

ಲಕ್ಷ್ಮಿ ಹೆಬ್ಬಾಳಕರ- ಪಂಚಮಸಾಲಿ

ರಹೀಂ ಖಾನ್‌- ಮುಸ್ಲಿಂ

ಡಿ.ಸುಧಾಕರ್‌- ಜೈನ

ಸಂತೋಷ್‌ ಎಸ್‌.ಲಾಡ್‌- ಮರಾಠ

ಎನ್‌.ಎಸ್.ಬೋಸರಾಜು- ರಾಜು ಕ್ಷತ್ರೀಯ

ಬೈರತಿ ಸುರೇಶ್‌- ಕುರುಬ

ಮಧು ಬಂಗಾರಪ್ಪ- ಈಡಿಗ

ಡಾ.ಎಂ.ಸಿ.ಸುಧಾಕರ್‌- ಒಕ್ಕಲಿಗ

ಬಿ.ನಾಗೇಂದ್ರ- ವಾಲ್ಮೀಕಿ (ಎಸ್‌ಟಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...