Homeಕರ್ನಾಟಕದೇವದುರ್ಗದಲ್ಲಿ ಕಲುಷಿತ ನೀರು ಕುಡಿದ ಬಾಲಕ ಸಾವು, ಹಲವರು ಅಸ್ವಸ್ಥ: ಈ ದುರಂತಗಳಿಗೆ ಕೊನೆ ಇಲ್ಲವೇ?

ದೇವದುರ್ಗದಲ್ಲಿ ಕಲುಷಿತ ನೀರು ಕುಡಿದ ಬಾಲಕ ಸಾವು, ಹಲವರು ಅಸ್ವಸ್ಥ: ಈ ದುರಂತಗಳಿಗೆ ಕೊನೆ ಇಲ್ಲವೇ?

- Advertisement -
- Advertisement -

ರಾಯಚೂರು ಜಿಲ್ಲೆಯಲ್ಲಿ ತಮ್ಮದಲ್ಲದ ತಪ್ಪಿಗೆ ಮತ್ತೊಂದು ಮುಗ್ದ ಜೀವ ಕೊನೆಯುಸಿರೆಳೆದಿದೆ. ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಐದು ವರ್ಷದ ಬಾಲಕ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಇದು ಜಿಲ್ಲೆಯಲ್ಲಿ ಕುಲುಷಿತ ನೀರು ಕುಡಿದ ಪರಿಣಾಮ ಸಾವನಪ್ಪುತ್ತಿರುವವ ಪಟ್ಟಿಗೆ ಮತ್ತೊಂದು ಸೇರ್ಪಡೆಯಾಗಿದ್ದು, ಈ ದುರಂತಗಳಿಗೆ ಕೊನೆ ಇಲ್ಲವೇ ಎಂಬ ಆಕ್ರೋಶಕ್ಕೆ ಕಾರಣವಾಗಿದೆ.

ರೇಕಲಮರಡಿ ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌ ಅನ್ನು ಹಲವು ವರ್ಷಗಳಿಂದ ಸ್ವಚ್ಚಗೊಳಿಸಿಲ್ಲ. ಅದೇ ಟ್ಯಾಂಕ್‌ನಿಂದ ಗ್ರಾಮಕ್ಕೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಟ್ಯಾಂಕ್‌ ಸ್ವಚ್ಛಗೊಳಿಸದ ಕಾರಣ, ನೀರು ಕಲುಷಿತಗೊಂಡಿದ್ದು, ಆ ನೀರು ಕುಡಿದರು ಅಸ್ವಸ್ಥರಾಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಅಸ್ವಸ್ಥರಾದವರಲ್ಲಿ 11 ಮಂದಿಯನ್ನು ರಾಯಚೂರಿನ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಲಕ ಹನುಮಂತ ಈರಪ್ಪ ಮೃತಪಟ್ಟಿದ್ದಾನೆ. ಉಳಿದವರನ್ನು ಅರಕೇರಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಓವರ್‌ಹೆಡ್‌ ಟ್ಯಾಂಕ್‌ ಅರ್ಧದಷ್ಟು ಮಾತ್ರ ತುಂಬುತ್ತಿದೆ. ಗ್ರಾಮಕ್ಕೆ ಡೆಡ್ ಸ್ಟೋರೇಜ್ ನೀರು ಪೂರೈಕೆಯಾಗುತ್ತಿದೆ. ಹೀಗಾಗಿ, ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಟ್ಯಾಂಕ್‌ ಅನ್ನು ಸ್ವಚ್ಚಗೊಳಿಸದ ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮಲ್ಲಮ್ಮ, ಅಬ್ದುಲ್ ಗಫಾರ್ ಮತ್ತು ಮೊಹಮದ್ ನೂರ್ ಎಂಬ ಮೂವರು ಸಾವನ್ನಪ್ಪಿದ್ದರು. ಹಲವು ಮಂದಿ ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರಸಭೆಯ ನಿರ್ಲಕ್ಷಕ್ಕೆ ರಾಯಚೂರು ನಾಗರಿಕ ವೇದಿಕೆಯು ರಾಯಚೂರು ಬಂದ್ ನಡೆಸಿತ್ತು.

ರಾಯಚೂರು ನಗರಕ್ಕೆ ಕುಡಿಯುವ ನೀರಿನ ಸರಬರಾಜು ಮಾಡುವ ರಾಂಪುರದಲ್ಲಿರುವ ನೀರು ಶುದ್ಧಿಕರಣ ಘಟಕವನ್ನು ಕಳೆದ 16 ವರ್ಷಗಳಿಂದ ಸ್ವಚ್ಛಗೊಳಿಸಲಾಗಿಲ್ಲ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

2022ರ  ಜುಲೈ ತಿಂಗಳಿನಲ್ಲಿ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಗೋರ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಲ್ಕಂದಿನ್ನಿ ಮತ್ತು ಜುಕೂರ ಗ್ರಾಮಗಳಲ್ಲಿ ಕಲುಷಿತ ನೀರು ಸೇವಿಸಿ ಇದು 8 ಮಂದಿ ಸಾವಿಗೀಡಾಗಿ, ಹಲವರು ಅನಾರೋಗ್ಯಕ್ಕೊಳಗಾಗಿದ್ದರು. 

ಆ ಸಂದರ್ಭದಲ್ಲಿ ಮಾತನಾಡಿದ್ದ ಅಂದಿನ ಸಿಎಂ ಬಸವರಾಜ ಬೊಮ್ಮಾಯಿಯವರು “ರಾಯಚೂರಿನ ಎಲ್ಲಾ ವಾರ್ಡ್‌ಗಳ ನೀರನ್ನು ಪರೀಕ್ಷೆ ಮಾಡಿಸಬೇಕು. ಕುಡಿಯುವ ನೀರಿನ ಸರ್ಟಿಫಿಕೇಷನ್ ಆಗಬೇಕು. ಇದರಲ್ಲಿ ಅಧಿಕಾರಿಗಳ ಲೋಪದೋಷ ಇದೆಯಾ ಎಂಬುದನ್ನು ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ. ತಪಿತಸ್ಥರು ಕಂಡುಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೆವೆ. ದುರಂತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ನಿಧಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧಾರಿಸಲಾಗಿದೆ” ಎಂದಿದ್ದರು.

ಕಳೆದ ವರ್ಷದ ಜುಲೈನಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಗೋನಾಳ ಗ್ರಾಮದಲ್ಲಿ ನಲ್ಲಿ ನೀರಿನಲ್ಲಿ ಬಂದ ಕಲುಷಿತ ನೀರನ್ನು ಸೇವಿಸಿ 11 ವರ್ಷದ ಬಾಲಕಿ ಮೃತಪಟ್ಟು 20 ಕ್ಕೂ ಹೆಚ್ಚು ಜನರು ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದರು.

ಹೋರಾಟಗಾರರಾದ ರಜಾಕ್ ಉಸ್ತಾದ್‌ರವರು ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಈ ರೀತಿಯಾಗಿ ಪದೇ ಪದೇ ಕಲುಷಿತ ನೀರಿನಿಂದಾಗಿ ಸಾವಿನ ಪ್ರಕರಣಗಳು ಹೆಚ್ಚುತ್ತಲೇ ಇದ್ದರೂ ಸ್ಥಳೀಯಾಡಳಿತ ಮತ್ತು ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಜಿಲ್ಲಾ ಪಂಚಾಯತ್‌ ಸಿಇಓರವರು ನೀರು ಸರಬರಾಜು ಇಲಾಖೆ ಇಂಜಿನಿಯರ್‌ಗಳ ಮೇಲೆ ಕ್ರಮ ತೆಗೆದುಕೊಳ್ಳುವ ಬದಲು ಪಿಡಿಒ ಒಬ್ಬರನ್ನು ಅಮಾನತು ಮಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಇಡೀ ಅಧಿಕಾರಿಗಳಿಗೆ ಚುರುಕು ಮುಟ್ಟಿಸಬೇಕು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳು ಈ ಕುರಿತು ಎಚ್ಚೆತ್ತುಕೊಳ್ಳುವಂತೆ ಮಾಡಬೇಕು” ಎಂದರು.

ಎಲ್ಲಾ ಇಲಾಖೆಯ ಅಧಿಕಾರಿಗಳು ಜಡ್ಡುಗಟ್ಟಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅವರೊಂದಿಗೆ ಸಭೆ ನಡೆಸಿದರೆ ಯಾವುದೇ ಪ್ರಯೋಜನವಾಗುವುದಿಲ್ಲ. ನೇರವಾಗಿ ಜಿಲ್ಲಾ ಮಟ್ಟದಲ್ಲಿ ಜನರ ನಡುವೆಯೇ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಬೇಕು. ಸಮರ್ಪಕವಾಗಿ ಕೆಲಸ ಮಾಡುವಂತೆ ಎಚ್ಚರಿಕೆ ನೀಡಬೇಕು. ಅಲ್ಲದೇ ಸ್ಥಳೀಯ ಆಸ್ಪತ್ರೆಗಳನ್ನು ಸಮರ್ಪಕವಾಗಿಡಬೇಕು. ಈ ರೀತಿಯಾಗಿ ಇಂತಹ ಘಟನೆಗಳು ನಡೆಯದಂತೆ ಉಳಿದವರೆಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದರು.

ಕನಿಷ್ಟ ವಾಟರ್‌ ಟ್ಯಾಂಕ್‌ಗಳನ್ನು ಆಗಾಗ್ಗೆ ಶುದ್ದೀಕರಣ ಮಾಡಲು ಮುಂದಾಗದಿರುವುದು ದೊಡ್ಡ ದುರಂತಗಳಿಗೆ ಎಡೆ ಮಾಡಿಕೊಡುತ್ತಿವೆ. ತಮ್ಮ ತಪ್ಪಿಲ್ಲದ ಮುಗ್ದ ಜೀವಗಳು ಬಲಿಯಾಗುತ್ತಿವೆ. ಈ ಕೂಡಲೇ ಸರ್ಕಾರ ಎಚೆತ್ತುಕೊಂಡು ಸ್ಥಳೀಯಾಡಳಿತಗಳಿಗೆ ಸ್ಪಷ್ಟ ಸೂಚನೆ ನೀಡಬೇಕಾಗಿದೆ. ಆ ಮೂಲಕ ಇಂತಹ ಘಟನೆಗಳು ಮತ್ತೆ ಜರುಗದಂತೆ ತಡೆಯಬೇಕಿದೆ.

ಇದನ್ನೂ ಓದಿ: ರಾಯಚೂರು: ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣ, ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...