Homeಮುಖಪುಟ23 ಜಿಲ್ಲೆಗಳಿಗೆ ಸಚಿವ ಸ್ಥಾನ: 8 ಜಿಲ್ಲೆಗಳಿಗಿಲ್ಲ ಪ್ರಾತಿನಿಧ್ಯ

23 ಜಿಲ್ಲೆಗಳಿಗೆ ಸಚಿವ ಸ್ಥಾನ: 8 ಜಿಲ್ಲೆಗಳಿಗಿಲ್ಲ ಪ್ರಾತಿನಿಧ್ಯ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್‌ ಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು ಸಿಎಂ ಸೇರಿ ಒಟ್ಟು 34 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಪೈಕಿ ರಾಜ್ಯದ 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ಮಾತ್ರವೇ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಕ್ಕಿದ್ದು, ಉಳಿದ ಎಂಟು ಜಿಲ್ಲೆಗಳು ಸಚಿವ ಸ್ಥಾನ ಸಿಕ್ಕಿಲ್ಲ.

ಬೆಂಗಳೂರು ನಗರ ಜಿಲ್ಲೆಯ ಆರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಮೈಸೂರು ಎರಡನೇ ಸ್ಥಾನದಲ್ಲಿದ್ದು, ಸಿದ್ದರಾಮಯ್ಯ ಅವರಲ್ಲದೇ ಇನ್ನೂ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿದೆ.

ತುಮಕೂರು, ವಿಜಯಪುರ, ಕಲಬುರಗಿ, ಬೀದರ್ ಮತ್ತು ಬೆಳಗಾಂ ಜಿಲ್ಲೆಗಳ ತಲಾ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ.

ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ವಿಜಯನಗರ ಜಿಲ್ಲೆಗಳಲ್ಲಿ ಯಾರೊಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ.

ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್‌ನತ್ತ ವಲಸೆ ಬಂದಿರುವ ಹಲವರಿಗೆ ಸಚಿವ ಸ್ಥಾನ ನೀಡಿಲ್ಲ. ಪ್ರಮುಖವಾಗಿ ಬಿಜೆಪಿಯಿಂದ ಬಂದ ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ, ಅಶೋಕ್‌ ರೈ ಸೇರಿದಂತೆ ಹಲವರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಜೆಡಿಎಸ್‌ನಿಂದ ಕೆ.ಎಂ ಶಿವಲಿಂಗೇಗೌಡ, ಗುಬ್ಬಿ ಶ್ರೀನಿವಾಸ್‌ ಸೇರ್ಪಡೆಯಾಗಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಎಲ್ಲರಿಗು ಸಚಿವ ಸ್ಥಾನ ನೀಡುವುದು ಕಷ್ಟವಾದ್ದರಿಂದ ಇವರೆಲ್ಲರೂ ಸಚಿವ ಸ್ಥಾನಿಂದ ವಂಚಿತರಾಗಿದ್ದಾರೆ.

ಇನ್ನು ಸಚಿವ ಸ್ಥಾನ ಸಿಗದವರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡುವುದಾಗಿ ಕಾಂಗ್ರೆಸ್ ಮುಖಂಡರು ಸಮಾಧಾನ ಮಾಡಲು ಯತ್ನಿಸುತ್ತಿದ್ದಾರೆ.

ನೂತನ ಸಚಿವರ ಪಟ್ಟಿ

ಸಿದ್ದರಾಮಯ್ಯ: ಮೈಸೂರು

ಡಿ.ಕೆ ಶಿವಕುಮಾರ್: ರಾಮನಗರ

ಕೆ.ಎಚ್ ಮುನಿಯಪ್ಪ: ಬೆಂಗಳೂರು ಗ್ರಾಮಾಂತರ

ಡಾ.ಜಿ ಪರಮೇಶ್ವರ್: ತುಮಕೂರು

ಸತೀಶ್ ಜಾರಕಿಹೊಳಿ: ಬೆಳಗಾಂ

ಪ್ರಿಯಾಂಕ್ ಖರ್ಗೆ: ಕಲಬುರಗಿ

ರಾಮಲಿಂಗಾರೆಡ್ಡಿ: ಬೆಂಗಳೂರು ನಗರ

ಜಮೀರ್ ಅಹ್ಮದ್ ಖಾನ್: ಬೆಂಗಳೂರು ನಗರ

ಕೆ.ಜೆ ಜಾರ್ಜ್: ಬೆಂಗಳೂರು ನಗರ

ಎಂ.ಬಿ ಪಾಟೀಲ್: ವಿಜಯಪುರ

ಎಚ್.ಕೆ.ಪಾಟೀಲ- ಗದಗ

ಕೃಷ್ಣ ಬೈರೇಗೌಡ- ಬೆಂಗಳೂರು ನಗರ

ಎನ್.ಚಲುವರಾಯಸ್ವಾಮಿ- ಮಂಡ್ಯ

ಕೆ.ವೆಂಕಟೇಶ್‌- ಮೈಸೂರು

ಡಾ.ಎಚ್‌.ಸಿ.ಮಹದೇವಪ್ಪ- ಮೈಸೂರು

ಈಶ್ವರ ಖಂಡ್ರೆ- ಬೀದರ್

ಕೆ.ಎನ್‌.ರಾಜಣ್ಣ- ತುಮಕೂರು

ದಿನೇಶ್‌ ಗುಂಡೂರಾವ್‌- ಬೆಂಗಳೂರು ನಗರ

ಶರಣಬಸಪ್ಪ ದರ್ಶನಾಪುರ- ಯಾದಗಿರಿ

ಶಿವಾನಂದ ಪಾಟೀಲ- ವಿಜಯಪುರ

ಆರ್.ಬಿ.ತಿಮ್ಮಾಪುರ- ಬಾಗಲಕೋಟ

ಎಸ್‌.ಎಸ್‌.ಮಲ್ಲಿಕಾರ್ಜುನ- ದಾವಣಗೆರೆ

ಶಿವರಾಜ ತಂಗಡಗಿ- ಕೊಪ್ಪಳ

ಶರಣ ಪ್ರಕಾಶ ಪಾಟೀಲ- ಕಲಬುರಗಿ

ಮಂಕಾಳ ಸುಬ್ಬ ವೈದ್ಯ- ಉತ್ತರ ಕನ್ನಡ

ಲಕ್ಷ್ಮಿ ಹೆಬ್ಬಾಳ್ಕರ್- ಬೆಳಗಾಂ

ರಹೀಂ ಖಾನ್‌- ಬೀದರ್

ಡಿ.ಸುಧಾಕರ್‌- ಚಿತ್ರದುರ್ಗ

ಸಂತೋಷ್‌ ಎಸ್‌.ಲಾಡ್‌- ಧಾರವಾಡ

ಎನ್‌.ಎಸ್.ಬೋಸರಾಜು- ರಾಯಚೂರು

ಬೈರತಿ ಸುರೇಶ್‌- ಬೆಂಗಳೂರು ನಗರ

ಮಧು ಬಂಗಾರಪ್ಪ- ಶಿವಮೊಗ್ಗ

ಡಾ.ಎಂ.ಸಿ.ಸುಧಾಕರ್‌- ಚಿಕ್ಕಬಳ್ಳಾಪುರ

ಬಿ.ನಾಗೇಂದ್ರ- ಬಳ್ಳಾರಿ

ಇದನ್ನೂ ಓದಿ: ಕರಾವಳಿ ಕೋಮುಹತ್ಯೆಗಳ ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ್ ರೈ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...