Homeಕರ್ನಾಟಕಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ ಎಷ್ಟು ಜಾತಿಗಳಿಗೆ ಪ್ರಾತಿನಿಧ್ಯ ಸಿಕ್ಕಿತ್ತು? ಸಿದ್ದರಾಮಯ್ಯನವರ ಸಂಪುಟ ವಿಶಿಷ್ಟವೇಕೆ?

- Advertisement -
- Advertisement -

ಭಾರತ ಸಾಮಾಜಿಕ ವ್ಯವಸ್ಥೆಯೇ ಜಾತಿ ಆಧಾರಿತವಾದ್ದು. ಹೀಗಾಗಿ ಪ್ರಾತಿನಿಧ್ಯವೆಂಬುದು ಇಲ್ಲಿ ಮಹತ್ವ ಪಡೆದಿದೆ. ಕುರುಬ ಸಮುದಾಯದ ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ, ಯಾವ ಯಾವ ಸಮುದಾಯದವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿದೆ ಎಂಬ ಚರ್ಚೆಯಾಗುತ್ತಿದೆ. ಅದರ ಜೊತೆಗೆ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಯಾರ್‍ಯಾರಿಗೆ ಪ್ರಾತಿನಿಧ್ಯ ಸಿಕ್ಕಿತ್ತು ಎಂಬುದನ್ನೂ ತುಲನೆ ಮಾಡಿ ನೋಡುವ ಅಗತ್ಯವಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಂಟು ಶಾಸಕರು ಸಚಿವರಾಗಿ ಕಳೆದ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದರು. ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಯ ಸೇರ್ಪಡೆಗೆ ಅವಕಾಶ ಇದೆ. 24 ಮಂದಿಯ ಸೇರ್ಪಡೆ ಮೂಲಕ ಸಂಪುಟ ಸಂಪೂರ್ಣ ಭರ್ತಿಯಾದಂತೆ ಆಗಿದೆ.

ಈ ಹಿಂದಿನ ಬೊಮ್ಮಾಯಿಯವರ ಆಡಳಿತದ ಸಚಿವ ಸಂಪುಟಕ್ಕೂ ಈಗಿನ ಸಚಿವ ಸಂಪುಟಕ್ಕೂ ಹೋಲಿಕೆ ಮಾಡಿದರೆ ಹೆಚ್ಚಿನ ಸಮುದಾಯಗಳಿಗೆ ಸಿದ್ದರಾಮಯ್ಯನವರ ಕ್ಯಾಬಿನೆಟ್‌ನಲ್ಲಿ ಅವಕಾಶ ಸಿಕ್ಕಿರುವುದು ಮೇಲು ನೋಟಕ್ಕೆ ಕಾಣುತ್ತಿದೆ.

ಜಾತಿ ಹೊರತಾಗಿ ಮಹಿಳಾ ಪ್ರಾತಿನಿಧ್ಯದಲ್ಲಿ ಎರಡು ಪಕ್ಷಗಳು ಯಥಾಸ್ಥಿತಿಯನ್ನು ಮುಂದುವರಿಸಿವೆ. ಮುಖ್ಯವಾಗಿ ರಾಜ್ಯದ ಅಲ್ಪಸಂಖ್ಯಾತ ಸಮುದಾಯವನ್ನು ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿತ್ತು. ಆದರೆ ಸಿದ್ದರಾಮಯ್ಯನವರ ಕ್ಯಾಬಿನೇಟ್‌ನಲ್ಲಿ ನಾಲ್ವರು ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ದೊರೆತಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಾತಿನಿಧ್ಯದಲ್ಲಿ ಗಣನೀಯ ಪ್ರಗತಿಯನ್ನು ಈಗಿನ ಕಾಂಗ್ರೆಸ್ ಸರ್ಕಾರ ಸಾಧಿಸಿದೆ. ಆದರೆ ಬೊಮ್ಮಾಯಿ ಅವಧಿಯಲ್ಲಿ ಪರಿಶಿಷ್ಟರಿಗೆ ಹೆಚ್ಚಿನ ಸಚಿವ ಸ್ಥಾನಗಳು ದೊರೆತಿರಲಿಲ್ಲ.

2023ರ ಕಾಂಗ್ರೆಸ್ ಸರ್ಕಾರದ ಪ್ರಾತಿನಿಧ್ಯ

ಕುರುಬರು (2 ಪ್ರಾತಿನಿಧ್ಯ): ಸಿದ್ದರಾಮಯ್ಯ (ಮುಖ್ಯಮಂತ್ರಿ), ಬೈರತಿ ಸುರೇಶ್‌

ಲಿಂಗಾಯತರು (8 ಪ್ರಾತಿನಿಧ್ಯ): ಎಂ.ಬಿ.ಪಾಟೀಲ (ಕೂಡು ಒಕ್ಕಲಿಗ ಲಿಂಗಾಯತರು), ಈಶ್ವರ ಖಂಡ್ರೆ (ಬಣಜಿಗ ಲಿಂಗಾಯತ), ಶರಣಬಸಪ್ಪ ದರ್ಶನಾಪುರ (ರಡ್ಡಿ ಲಿಂಗಾಯತ), ಶಿವಾನಂದ ಪಾಟೀಲ (ಪಂಚಮಸಾಲಿ), ಎಸ್‌.ಎಸ್‌.ಮಲ್ಲಿಕಾರ್ಜುನ (ಸಾದರ ಲಿಂಗಾಯತ), ಶರಣ ಪ್ರಕಾಶ ಪಾಟೀಲ (ಆದಿ ಬಣಜಿಗ ಲಿಂಗಾಯತ), ಲಕ್ಷ್ಮಿ ಹೆಬ್ಬಾಳಕರ್‌ (ಪಂಚಮಸಾಲಿ), ಎಚ್.ಕೆ.ಪಾಟೀಲ (ನಾಮಧಾರಿ ರೆಡ್ಡಿ- ಇವರು ಲಿಂಗಾಯತ ಸಂಪ್ರದಾಯ ಹಿನ್ನೆಲೆಯವರಲ್ಲ ಎಂಬ ವಾದವೂ ಇದೆ.)

ಒಕ್ಕಲಿಗರು (6 ಪ್ರಾತಿನಿಧ್ಯ): ಡಿ.ಕೆ.ಶಿವಕುಮಾರ್‌, ರಾಮಲಿಂಗ ರೆಡ್ಡಿ (ರೆಡ್ಡಿ ಒಕ್ಕಲಿಗ), ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್‌, ಡಾ.ಎಂ.ಸಿ.ಸುಧಾಕರ್‌.

ಪರಿಶಿಷ್ಟ ಜಾತಿಗಳು (6 ಪ್ರಾತಿನಿಧ್ಯ): ಬಲಗೈ (ಹೊಲೆಯ) ಸಮುದಾಯದ ಡಾ.ಎಚ್‌.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಎಡಗೈ (ಮಾದಿಗ) ಸಮುದಾಯದ ಆರ್.ಬಿ.ತಿಮ್ಮಾಪುರ, ಕೆ.ಎಚ್.ಮುನಿಯಪ್ಪ, ಭೋವಿ ಸಮುದಾಯದ ಶಿವರಾಜ ತಂಗಡಗಿ.

ಪರಿಶಿಷ್ಟ ಪಂಗಡಗಳು (3 ಪ್ರಾತಿನಿಧ್ಯ): ಸತೀಶ್ ಜಾರಕಿಹೊಳಿ, ಕೆ.ಎನ್‌.ರಾಜಣ್ಣ, ಬಿ.ನಾಗೇಂದ್ರ.

ಅಲ್ಪಸಂಖ್ಯಾತರು (4 ಪ್ರಾತಿನಿಧ್ಯ): ಜಮೀರ್ ಅಹ್ಮದ್ ಖಾನ್- ಮುಸ್ಲಿಂ, ರಹೀಂ ಖಾನ್‌- ಮುಸ್ಲಿಂ, ಕೆ.ಜೆ.ಜಾರ್ಜ್- ಕ್ರಿಶ್ಚಿಯನ್, ಡಿ.ಸುಧಾಕರ್‌- ಜೈನ.

ಇತರೆ ಜಾತಿಗಳಗ ಪ್ರಾತಿನಿಧ್ಯ

ಬ್ರಾಹ್ಮಣ: ದಿನೇಶ್‌ ಗುಂಡೂರಾವ್‌

ಮೊಗವೀರ: ಮಂಕಾಳ ಸುಬ್ಬ ವೈದ್ಯ

ಮರಾಠ: ಸಂತೋಷ್ ಎಸ್.ಲಾಡ್‌

ರಾಜು ಕ್ಷತ್ರೀಯ: ಎನ್‌.ಎಸ್.ಬೋಸರಾಜು

ಈಡಿಗ: ಮಧು ಬಂಗಾರಪ್ಪ

***

ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ

2018ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌- ಜೆಡಿಎಸ್‌ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಉರುಳಿಸಿ ಬಿಜೆಪಿ ಅಧಿಕಾರ ಹಿಡಿದಿತ್ತು. ಲಿಂಗಾಯತ ಸಮುದಾಯದ ಬಿ.ಎಸ್.ಯಡಿಯೂರಪ್ಪನವರ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಬಸವರಾಜ ಬೊಮ್ಮಾಯಿಯವರನ್ನು ಸಿಎಂ ಮಾಡಲಾಗಿತ್ತು. ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ 29 ಮಂದಿ ಸಂಪುಟದರ್ಜೆಯ ಸಚಿವರಿದ್ದರು.

ಬಿಜೆಪಿ ಸರ್ಕಾರದ ಜಾತಿ ಪ್ರಾತಿನಿಧ್ಯ

ಲಿಂಗಾಯತರು (10 ಪ್ರಾತಿನಿಧ್ಯ): ಬಸವರಾಜ ಬೊಮ್ಮಾಯಿ (ಸಾದರ), ಬಿ.ಸಿ.ಪಾಟೀಲ್ (ಸಾದರ), ಉಮೇಶ್ ಕತ್ತಿ (ಬಣಜಿಗರು), ಮುರುಗೇಶ್ ನಿರಾಣಿ (ಪಂಚಮಸಾಲಿ), ಶಶಿಕಲಾ ಜೊಲ್ಲೆ (ಆದಿ ಬಣಜಿಗರು), ಜೆ.ಸಿ.ಮಾಧುಸ್ವಾಮಿ (ನೊಣಬರು), ಶಂಕರ್ ಪಾಟೀಲ್ ಮುನೇನಕೊಪ್ಪ (ಪಂಚಮಸಾಲಿ), ವಿ.ಸೋಮಣ್ಣ (ಗೌಡ ಲಿಂಗಾಯತರು), ಸಿಸಿ‌ ಪಾಟೀಲ್ (ಪಂಚಮಸಾಲಿ), ಹಾಲಪ್ಪ ಆಚಾರ್ (ರಡ್ಡಿ ಲಿಂಗಾಯತ)

ಒಕ್ಕಲಿಗ (7 ಪ್ರಾತಿನಿಧ್ಯ): ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಕೆಸಿ ನಾರಾಯಣಗೌಡ, ಅರಗ ಜ್ಞಾನೇಂದ್ರ, ಗೋಪಾಲಯ್ಯ

ಕುರುಬರು (3 ಪ್ರಾತಿನಿಧ್ಯ) : ಕೆ.ಎಸ್.ಈಶ್ವರಪ್ಪ, ಬೈರತಿ‌ ಬಸವರಾಜ, ಎಂ.ಟಿ.ಬಿ.ನಾಗರಾಜ್

ಪರಿಶಿಷ್ಟ ಜಾತಿ (3 ಪ್ರಾತಿನಿಧ್ಯ): ಗೋವಿಂದ ಕಾರಜೋಳ (ಎಡಗೈ), ಪ್ರಭು ಚವ್ಹಾಣ್‌ ಔರಾದ್‌ (ಬಂಜಾರ), ಎಸ್.ಅಂಗಾರ (ಮೊಗೇರ)

ಪರಿಶಿಷ್ಟ ಪಂಗಡ (1 ಪ್ರಾತಿನಿಧ್ಯ): ಬಿ.ಶ್ರೀ ರಾಮುಲು

ಬ್ರಾಹ್ಮಣರು (2 ಪ್ರಾತಿನಿಧ್ಯ):  ಶಿವರಾಂ ಹೆಬ್ಬಾರ್, ಬಿ.ಸಿ.ನಾಗೇಶ್

ಬಿಲ್ಲವ (2 ಪ್ರಾತಿನಿಧ್ಯ): ಸುನೀಲ್‌ ಕುಮಾರ್‌, ಕೋಟಾ ಶ್ರೀನಿವಾಸ ಪೂಜಾರಿ

ನಾಯ್ಡು (1 ಪ್ರಾತಿನಿಧ್ಯ): ಮುನಿರತ್ನ

ರಜಪೂತ (1 ಪ್ರಾತಿನಿಧ್ಯ): ಆನಂದ್ ಸಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...