Homeಮುಖಪುಟವಿದ್ಯಾರ್ಥಿಯನ್ನು ಕಸಬ್ ಎಂದು ಕರೆದು ಅಮಾನತ್ತಾಗಿದ್ದ ಪ್ರಾಧ್ಯಾಪಕ ಮರಳಿ ಕಾಲೇಜಿಗೆ; ಉಳಿದವರು ಪಾಠ ಕಲಿಯುವರೆ?

ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದು ಅಮಾನತ್ತಾಗಿದ್ದ ಪ್ರಾಧ್ಯಾಪಕ ಮರಳಿ ಕಾಲೇಜಿಗೆ; ಉಳಿದವರು ಪಾಠ ಕಲಿಯುವರೆ?

- Advertisement -
- Advertisement -

ಮುಸ್ಲಿಂ ವಿದ್ಯಾರ್ಥಿಯೊಬ್ಬರನ್ನು ಕಸಬ್ ಎಂದು ಕರೆದು ಭಯೋತ್ಪಾದಕರಿಗೆ ಹೋಲಿಸುವ ಮೂಲಕ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿ ಅಮಾನತ್ತಾಗಿದ್ದ ಉಡುಪಿ ಜಿಲ್ಲೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ರವೀಂದ್ರನಾಥ್ ತಮ್ಮ ಕೆಲಸಕ್ಕೆ ಮರಳಿದ್ದಾರೆ.  ಆದರೆ ಅವರಿಗಿನ್ನೂ ಪಾಠ ಮಾಡಲು ಅವಕಾಶ ಕೊಟ್ಟಿಲ್ಲ ಎನ್ನಲಾಗಿದೆ.

ಪ್ರಾಧ್ಯಾಪಕನ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅವರೀಗ ಉತ್ತಮ ಮನಸ್ಥಿತಿಯಲ್ಲಿದ್ದಾರೆ. ವಿದ್ಯಾರ್ಥಿಯು ಸಹ ರಾಜಿ ಮಾಡಿಕೊಂಡಿದ್ದು, ಪ್ರಾಧ್ಯಾಪಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಬಯಸಲಿಲ್ಲ. ಹಾಗಾಗಿ ಪ್ರಕರಣ ಅಂತ್ಯಗೊಳಿಸಲಾಗಿದೆ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಉಪಕುಲಪತಿಗಳ ಹೇಳಿಕೆ ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ತರಗತಿಯೊಳಗೆ ಎಲ್ಲಾ ವಿದ್ಯಾರ್ಥಿಗಳ ಎದುರು ಮುಸ್ಲಿಂ ವಿದ್ಯಾರ್ಥಿಯ ಹೆಸರು ಕೇಳಿದಾಕ್ಷಣ ಒಹ್ ನೀನು ಕಸಬ್ ಎಂದು ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಕರೆದಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿಯು ನನ್ನನ್ನು ಹಾಗೆ ಹೇಗೆ ಕರೆಯುತ್ತೀರಿ ಎಂದು ಆಕ್ಷೇಪ ವ್ಯಕ್ತಪಡಿಸಿ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

“ಸರ್ ನೀವು ನನ್ನನ್ನು ಭಯೋತ್ಪಾದಕ ಎಂದು ಹೇಗೆ ಕರೆಯುತ್ತೀರಿ? ಒಂದು ಧರ್ಮವನ್ನು ಹೇಗೆ ಭಯೋತ್ಪಾದನೆಗೆ ತಳುಕು ಹಾಕುತ್ತೀರಿ ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಪ್ರಾಧ್ಯಾಪಕ ನೀನು ನನ್ನ ಮಗನಿದ್ದಂತೆ ಎಂದಿದ್ದಾರೆ. ನೀವು ನಿಮ್ಮ ಮಗನನ್ನು ಹೀಗೆ ಕರೆಯುತ್ತೀರಾ? ಆತನನ್ನೂ ಭಯೋತ್ಪಾದಕ ಎಂದು ಕರೆಯುತ್ತೀರಾ, ಇಲ್ಲವೆಂದ ಮೇಲೆ ನನ್ನನ್ನು ಹೇಗೆ ಕರೆದಿರಿ? ಅದು ಇಷ್ಟು ಜನರ ಮುಂದೆ ಎಂದು ವಿದ್ಯಾರ್ಥಿ ಮರುಪ್ರಶ್ನಿಸಿದ್ದಾರೆ.

ಇದು ತಮಾಷೆ ಎಂದಾಗ, ಇಲ್ಲ ಸರ್ ಇದು ತಮಾಷೆಯಲ್ಲ. 26/11 ಭಯೋತ್ಪಾದನಾ ಪ್ರಕರಣವು ತಮಾಷೆಯಲ್ಲ. ಒಬ್ಬ ಮಸ್ಲಿಮನಾಗಿ ನಾನು ಇದನ್ನು ಪ್ರತಿನಿತ್ಯ ಎದುರಿಸುತ್ತಿದ್ದೇನೆ. ಹಾಗಾಗಿ ಇದು ತಮಾಷೆಯ ವಿಷಯವಲ್ಲ. ನೀವು ಪ್ರಾಧ್ಯಾಪಕರು. ನಮಗೆ ಪಾಠ ಮಾಡುತ್ತೀರಿ. ನನ್ನನ್ನು ಹಾಗೆ ಕರೆಯುವ ಹಾಗಿಲ್ಲ ಎಂದು ವಿದ್ಯಾರ್ಥಿ ವಾದಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಂತರ ಪ್ರಾಧ್ಯಾಪಕರು ಕ್ಷಮೆ ಕೇಳುತ್ತೇನೆ ಎಂದಾಗ, ನಿಮ್ಮ ಸಾರಿ ನೀವು ಏನೆಂಬುದನ್ನು ಮತ್ತು ನೀವು ಯೋಚಿಸುವ ವಿಧಾನವನ್ನು ಬದಲಿಸುವುದಿಲ್ಲ ಎಂದು ವಿದ್ಯಾರ್ಥಿ ಅಸಮಾಧಾನ ವ್ಯಕ್ತಪಡಿಸಿದ್ದರು.

ವಿವಾದ ಬಳಿಕ ಮಾತನಾಡಿರುವ ವಿದ್ಯಾರ್ಥಿಯು, “ಜನಾಂಗೀಯ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ದೇಶದ ಸ್ವೀಕರಾರ್ಹನಲ್ಲದ ಭಯೋತ್ಪಾದಕ ಕಸಬ್ ಹೆಸರಿನಿಂದ ನನ್ನನ್ನು ನಾನು ಇಷ್ಟಪಡುವ ಪ್ರಾಧ್ಯಾಪಕರೆ ಕರೆದುದ್ದುದು ಬೇಸರ ತರಿಸಿತು. ಅದಕ್ಕಾಗಿ ಅಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿದೆ. ಆನಂತರ ಅವರೊಡನೆ ಮಾತನಾಡಿದ್ದೇನೆ. ಅವರು ಕ್ಷಮೆ ಯಾಚಿಸಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ” ಎಂದಿದ್ದರು.

ಈ ಘಟನೆ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಲೇಜಿನ ವ್ಯವಸ್ಥಾಪಕ ಮಂಡಳಿಯು, “ಈ ಘಟನೆ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ ಮತ್ತು ತನಿಖೆ ಮುಗಿಯುವವರೆಗೂ ಸಂಬಂಧಿತ ಪ್ರಾಧ್ಯಾಪಕರು ತರಗತಿ ತೆಗೆದುಕೊಳ್ಳದಂತೆ ಸೂಚಿಸಿದ್ದೇವೆ. ಸಂಸ್ಥೆಯು ಈ ರೀತಿಯ ನಡವಳಿಕೆಯನ್ನು ಕ್ಷಮಿಸುವುದಿಲ್ಲ ಮತ್ತು ಈ ಪ್ರತ್ಯೇಕ ಘಟನೆಯನ್ನು ನಿಗದಿಪಡಿಸಿದ ನೀತಿಗಳಿಗೆ ಅನುಗುಣವಾಗಿ ವಿಚಾರಣೆ ನಡೆಸುತ್ತದೆ. ನಮ್ಮ ಸಂಸ್ಥೆಯು ಕ್ಯಾಂಪಸ್‌ನಲ್ಲಿ ಬಹು ವೈವಿಧ್ಯತೆಯನ್ನು ಹೆಮ್ಮೆಯೆಂದು ಭಾವಿಸುತ್ತದೆ ಮತ್ತು ಜಾತಿ, ಧರ್ಮ, ಲಿಂಗ, ಪ್ರದೇಶಗಳನ್ನು ಲೆಕ್ಕಿಸದೆ ಎಲ್ಲರನ್ನು ಸಮಾನವಾಗಿ ಪರಿಗಣಿಸುವ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ” ಎಂದು ಹೇಳಿತ್ತು.

ಇತ್ತೀಚಿಗೆ ಶಿಕ್ಷಕರೊಬ್ಬರು ಬಿಟ್ಟಿ ಭಾಗ್ಯಗಳು ಎಂದು ಸುಳ್ಳು ಸುದ್ದಿಯನ್ನು ಹರಡಿದ್ದಾಗಿ ಅಮಾನತ್ತಾಗಿದ್ದಾರೆ. ಈ ಪ್ರಾಧ್ಯಾಪಕ ಆರು ತಿಂಗಳ ನಂತರ ಕೆಲಸಕ್ಕೆ ಮರಳಿದ್ದಾರೆ. ಶಿಕ್ಷಕ ಸಮುದಾಯ ಯೋಚಿಸಿ, ಸಮಚಿತ್ತತೆಯಿಂದ ವರ್ತಿಬೇಕೆ ಹೊರತು ಪೂರ್ವಾಗ್ರಹಪೀಡಿತರಾಗಿ ಅಲ್ಲ ಎಂಬುದನ್ನು ಈ ಘಟನೆಗಳು ನಿರೂಪಿಸುತ್ತವೆ. ಉಳಿದವರೆ ಇಂತಹ ತಪ್ಪೆಸೆಗುವ ಮುನ್ನ ಇವುಗಳ ಪಾಠವಾಗಬೇಕಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯನವರ ಕುರಿತು ಫೇಕ್ ನ್ಯೂಸ್ ಹಂಚಿ ಅಮಾನತ್ತಾದ ಶಿಕ್ಷಕ: ಈ ಕ್ರಮ ಸರಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...