Homeಮುಖಪುಟ9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ: ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು

9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ: ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು

- Advertisement -
- Advertisement -

ಸಿದ್ದರಾಮಯ್ಯನವರ ಸಚಿವ ಸಂಪುಟ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದೆ. ಸಿಎಂ ಸಿದ್ದರಾಮಯ್ಯನವರು ಸೇರಿ 34 ಸಚಿವ ಸ್ಥಾನಗಳನ್ನು ಎರಡು ಹಂತದಲ್ಲಿ ತುಂಬಲಾಗಿದೆ ಮಾತ್ರವಲ್ಲದೇ ಎಲ್ಲರಿಗೂ ಖಾತೆ ಹಂಚಿಕೆ ಮಾಡಿ ಮುಗಿಸಲಾಗಿದೆ. ಆ ಮೂಲಕ ಅತೃಪ್ತ ಶಾಸಕರಿಗೆ ನೀಡುವುದಕ್ಕಾಗಿ ಕೆಲ ಸ್ಥಾನಗಳನ್ನು ಖಾಲಿ ಬಿಟ್ಟುಕೊಳ್ಳುವ ಸಂಪ್ರದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಹೊಸಬರು ಮತ್ತು ಅನುಭವಿಗಳ ಸಮತೋಲನ ಕಾಪಾಡಿಕೊಳ್ಳುವ ದೃಷ್ಟಿಯಿಂದ ಸಚಿವ ಸಂಪುಟ ರಚಿಸಲಾಗಿದ್ದು, 9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಬ್ಬ ಮಹಿಳೆಗೆ ಮಾತ್ರ ಸಚಿವ ಸ್ಥಾನ ನೀಡಿದ್ದು ಬಿಟ್ಟರೆ ಉಳಿದಂತೆ ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಸಿದ್ದರಾಮಯ್ಯನವರ ಸರ್ಕಾರ ಒತ್ತು ಕೊಟ್ಟಿದೆ.

9 ಶಾಸಕರಿಗೆ ಮೊದಲ ಬಾರಿಗೆ ಸಚಿವರಾಗುವ ಭಾಗ್ಯ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಿಂದ ಕೆ ವೆಂಕಟೇಶ್‌

ತುಮಕೂರು ಜಿಲ್ಲೆಯ ಮಧುಗಿರಿಯಿಂದ ಕೆ ಎನ್ ರಾಜಣ್ಣ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಮಂಕಾಳ್ ವೈದ್ಯ

ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರಿನ ಹೆಬ್ಬಾಳ ಕ್ಷೇತ್ರದ ಬೈರತಿ ಸುರೇಶ್‌

ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಮಧು ಬಂಗಾರಪ್ಪ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಡಾ. ಎಂ ಸಿ ಸುಧಾಕರ್‌

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಬಿ ನಾಗೇಂದ್ರ

ರಾಯಚೂರಿನ ಎನ್ ಎಸ್ ಬೋಸರಾಜುರವರು ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ.

ಸಾಮಾಜಿಕ ನ್ಯಾಯ

ಕುರುಬರು (2 ಪ್ರಾತಿನಿಧ್ಯ): ಸಿದ್ದರಾಮಯ್ಯ (ಮುಖ್ಯಮಂತ್ರಿ), ಬೈರತಿ ಸುರೇಶ್‌

ಲಿಂಗಾಯತರು (8 ಪ್ರಾತಿನಿಧ್ಯ): ಎಂ.ಬಿ.ಪಾಟೀಲ (ಕೂಡು ಒಕ್ಕಲಿಗ ಲಿಂಗಾಯತರು), ಈಶ್ವರ ಖಂಡ್ರೆ (ಬಣಜಿಗ ಲಿಂಗಾಯತ), ಶರಣಬಸಪ್ಪ ದರ್ಶನಾಪುರ (ರಡ್ಡಿ ಲಿಂಗಾಯತ), ಶಿವಾನಂದ ಪಾಟೀಲ (ಪಂಚಮಸಾಲಿ), ಎಸ್‌.ಎಸ್‌.ಮಲ್ಲಿಕಾರ್ಜುನ (ಸಾದರ ಲಿಂಗಾಯತ), ಶರಣ ಪ್ರಕಾಶ ಪಾಟೀಲ (ಆದಿ ಬಣಜಿಗ ಲಿಂಗಾಯತ), ಲಕ್ಷ್ಮಿ ಹೆಬ್ಬಾಳಕರ್‌ (ಪಂಚಮಸಾಲಿ), ಎಚ್.ಕೆ.ಪಾಟೀಲ (ನಾಮಧಾರಿ ರೆಡ್ಡಿ)

ಒಕ್ಕಲಿಗರು (6 ಪ್ರಾತಿನಿಧ್ಯ): ಡಿ.ಕೆ.ಶಿವಕುಮಾರ್‌, ರಾಮಲಿಂಗ ರೆಡ್ಡಿ (ರೆಡ್ಡಿ ಒಕ್ಕಲಿಗ), ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್‌, ಡಾ.ಎಂ.ಸಿ.ಸುಧಾಕರ್‌.

ಪರಿಶಿಷ್ಟ ಜಾತಿಗಳು (6 ಪ್ರಾತಿನಿಧ್ಯ): ಬಲಗೈ (ಹೊಲೆಯ) ಸಮುದಾಯದ ಡಾ.ಎಚ್‌.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಎಡಗೈ (ಮಾದಿಗ) ಸಮುದಾಯದ ಆರ್.ಬಿ.ತಿಮ್ಮಾಪುರ, ಕೆ.ಎಚ್.ಮುನಿಯಪ್ಪ, ಭೋವಿ ಸಮುದಾಯದ ಶಿವರಾಜ ತಂಗಡಗಿ.

ಪರಿಶಿಷ್ಟ ಪಂಗಡಗಳು (3 ಪ್ರಾತಿನಿಧ್ಯ): ಸತೀಶ್ ಜಾರಕಿಹೊಳಿ, ಕೆ.ಎನ್‌.ರಾಜಣ್ಣ, ಬಿ.ನಾಗೇಂದ್ರ.

ಅಲ್ಪಸಂಖ್ಯಾತರು (4 ಪ್ರಾತಿನಿಧ್ಯ): ಜಮೀರ್ ಅಹ್ಮದ್ ಖಾನ್- ಮುಸ್ಲಿಂ, ರಹೀಂ ಖಾನ್‌- ಮುಸ್ಲಿಂ, ಕೆ.ಜೆ.ಜಾರ್ಜ್- ಕ್ರಿಶ್ಚಿಯನ್, ಡಿ.ಸುಧಾಕರ್‌- ಜೈನ.

ಇತರೆ ಜಾತಿಗಳಗ ಪ್ರಾತಿನಿಧ್ಯ

ಬ್ರಾಹ್ಮಣ- ದಿನೇಶ್‌ ಗುಂಡೂರಾವ್‌

ಮೊಗವೀರ- ಮಂಕಾಳ ಸುಬ್ಬ ವೈದ್ಯ

ಮರಾಠ- ಸಂತೋಷ್ ಎಸ್.ಲಾಡ್‌

ರಾಜು ಕ್ಷತ್ರೀಯ- ಎನ್‌.ಎಸ್.ಬೋಸರಾಜು

ಈಡಿಗ- ಮಧು ಬಂಗಾರಪ್ಪ

ಪ್ರಾದೇಶಿಕ ಸಮತೋಲನ

ರಾಜ್ಯದ 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ಸಚಿವ ಸ್ಥಾನ ಲಭಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಮೈಸೂರು ಎರಡನೇ ಸ್ಥಾನದಲ್ಲಿದ್ದು, ಸಿದ್ದರಾಮಯ್ಯ ಅವರಲ್ಲದೇ ಇನ್ನೂ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿದೆ.

ತುಮಕೂರು, ವಿಜಯಪುರ, ಕಲಬುರಗಿ, ಬೀದರ್ ಮತ್ತು ಬೆಳಗಾಂ ಜಿಲ್ಲೆಗಳ ತಲಾ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ.

ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ವಿಜಯನಗರ ಜಿಲ್ಲೆಗಳಲ್ಲಿ ಯಾರೊಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ.

ಇದನ್ನೂ ಓದಿ: ಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...