Homeಮುಖಪುಟ‘30 ಉಗ್ರರನ್ನು ಕೊಲ್ಲಲಾಗಿದೆ’: ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌

‘30 ಉಗ್ರರನ್ನು ಕೊಲ್ಲಲಾಗಿದೆ’: ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌

ಕುಕಿ ಮತ್ತು ಮೈಥೇಯಿ ಸಮುದಾಯಗಳ ನಡುವಿನ ಘರ್ಷಣೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ

- Advertisement -
- Advertisement -

ಮಣಿಪುರದ ವಿವಿಧೆಡೆ ಭದ್ರತಾ ಪಡೆಗಳು ಮತ್ತು ಶಸ್ತ್ರಸಜ್ಜಿತ ಬಂಡುಕೋರರ ನಡುವೆ ಭಾನುವಾರ ಘರ್ಷಣೆ ಭುಗಿಲೆದ್ದಿದೆ. “ಸುಮಾರು 30 ಉಗ್ರರು ಹತರಾಗಿದ್ದಾರೆ ಮತ್ತು ಕೆಲವರನ್ನು ಬಂಧಿಸಲಾಗಿದೆ” ಎಂದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಹೇಳಿದ್ದಾರೆ.

“ನಾಗರಿಕರ ವಿರುದ್ಧ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸುತ್ತಿರುವ ಉಗ್ರಗಾಮಿ ಗುಂಪುಗಳ ವಿರುದ್ಧ ಪ್ರತೀಕಾರ ಮತ್ತು ರಕ್ಷಣಾತ್ಮಕ ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಯ ಭಾಗವಾಗಿ ವಿವಿಧ ಪ್ರದೇಶಗಳಲ್ಲಿ ಸುಮಾರು 30 ಉಗ್ರಗಾಮಿಗಳನ್ನು ಕೊಲ್ಲಲಾಗಿದೆ. ಕೆಲವರನ್ನು ಭದ್ರತಾ ಪಡೆಗಳು ಬಂಧಿಸಿವೆ” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಶಾಂತಿಯನ್ನು ತರುವ ಸಲುವಾಗಿ ಸೈನ್ಯ ಮುಂದಾಗಿದೆ. ಕುಕಿ ಮತ್ತು ಮಥೇಯಿ ಸಮುದಾಯಗಳ ನಡುವಿನ ಘರ್ಷಣೆಯನ್ನು ತಡೆಯಲು ಕಾರ್ಯಾಚರಣೆ ನಡೆದಿದೆ.

ಇಂಫಾಲ್ ಪಶ್ಚಿಮದ ಉರಿಪೋಕ್‌ನಲ್ಲಿರುವ ಬಿಜೆಪಿ ಶಾಸಕ ಖ್ವೈರಕ್‌ಪಾಮ್ ರಘುಮಣಿ ಸಿಂಗ್ ಅವರ ಮನೆಯನ್ನು ಧ್ವಂಸಗೊಳಿಸಲಾಗಿದೆ ಮತ್ತು ಅವರ ಎರಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಉನ್ನತ ಭದ್ರತಾ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದಾರೆ.

ಇಂಫಾಲ್ ಕಣಿವೆಯ ಸುತ್ತಮುತ್ತಲಿನ ವಿವಿಧ ಜಿಲ್ಲೆಗಳ ಹಲವಾರು ಸ್ಥಳಗಳಲ್ಲಿ ಮುಂಜಾನೆ ಘರ್ಷಣೆಗಳು ಪ್ರಾರಂಭವಾದವು ಎಂದು ತಿಳಿಸಿದ್ದಾರೆ.

“ನಮ್ಮ ಮಾಹಿತಿಯ ಪ್ರಕಾರ, ಕಾಕ್ಚಿಂಗ್‌ನ ಸುಗ್ನು, ಚುರಾಚಂದ್‌ಪುರದ ಕಾಂಗ್ವಿ, ಇಂಫಾಲ್ ಪಶ್ಚಿಮದ ಕಾಂಗ್‌ಚುಪ್, ಇಂಫಾಲ್ ಪೂರ್ವದ ಸಗೋಲ್ಮಾಂಗ್, ಬಿಷೆನ್‌ಪುರದ ನುಂಗೋಯಿಪೋಕ್ಪಿ, ಇಂಫಾಲ್ ಪಶ್ಚಿಮದ ಖುರ್ಖುಲ್ ಮತ್ತು ಕಾಂಗ್‌ಪೋಕ್ಪಿಯ ವೈಕೆಪಿಐನಲ್ಲಿ ಗುಂಡಿನ ದಾಳಿ ನಡೆದಿದೆ” ಎಂದಿದ್ದಾರೆ.

ಕಾಕ್ಚಿಂಗ್ ಪೊಲೀಸ್ ಠಾಣೆಯಲ್ಲಿದ್ದ ಶಶ್ತ್ರಾಸ್ತ್ರಗಳನ್ನು ಮೈತೇಯಿ ಗುಂಪಿನವರು ಲೂಟಿ ಮಾಡಿದ್ದಾರೆಂಬ ವರದಿಯೂ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಣಿಪುರದಲ್ಲಿ ಇದುವರೆಗೆ 75 ಕ್ಕೂ ಹೆಚ್ಚು ಜೀವಗಳನ್ನು ಈ ಜನಾಂಗೀಯ ಘರ್ಷಣೆ ಬಲಿ ಪಡೆದಿದೆ. ಎಸ್‌ಟಿ ಮೀಸಲಾತಿ ವಿಚಾರವಾಗಿ ಎರಡು ಸಮುದಾಯಗಳ ನಡುವಿನ ಕಲಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಮಣಿಪುರ ಮುಖ್ಯಮಂತ್ರಿ ಕುಕಿ ಸಮುದಾಯದ ವಿರೋಧಿಯಾಗಿದ್ದು, ನಮಗೆ ಪ್ರತ್ಯೇಕ ರಾಜ್ಯ ಬೇಕು ಮತ್ತು ಅದಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಪರ ಕುಕಿ ಗುಂಪಿನ ಮುಖ್ಯಸ್ಥ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ.

‘ದಿ ವೈರ್‌’ ಜಾಲತಾಣದ ಖ್ಯಾತ ಪತ್ರಕರ್ತ ಕರಣ್ ಥಾಪರ್‌ ನಡೆಸಿರುವ ಸಂದರ್ಶನದಲ್ಲಿ ಕುಕಿ ಪೀಪಲ್ಸ್ ಅಲೈಯನ್ಸ್‌ನ ಪ್ರಧಾನ ಕಾರ್ಯದರ್ಶಿ ಹ್ಯಾಂಗ್‌ಶಿಂಗ್ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದರು.

“ಕುಕಿ ಜನರಿಗೆ ಪ್ರತ್ಯೇಕ ಆಡಳಿತ ಬೇಕು. ಇದೇ ರಾಜ್ಯದಲ್ಲಿ ಮೈಥೇಯಿ ಸಮುದಾಯದೊಂದಿಗೆ ಮುಂದೆಯೂ ಇರುವುದು ಅಸಾಧ್ಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಎನ್. ಬಿರೇನ್ ಸಿಂಗ್ ಸರ್ಕಾರವನ್ನು ಕುಕಿ ಪೀಪಲ್ಸ್ ಅಲಯನ್ಸ್ ಬೆಂಬಲಿಸಿದೆ ಎಂಬುದನ್ನು ಗಮನಿಸಬಹುದು. ಈ ಬಣದ ಪ್ರಭಾವಿ ನಾಯಕ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, “ನಮಗೆ ಪ್ರತ್ಯೇಕ ಆಡಳಿತ ಬೇಕೆಂಬ ಬೇಡಿಕೆಯಿಂದ ಕುಕಿ ಸಮುದಾಯ ಹಿಂದೆ ಸರಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕ ಆಡಳಿತವೆಂದರೆ ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ಆಗಿರಬಹುದು ಎಂದು ಅವರು ಹೇಳಿದ್ದಾರೆ. ಮಣಿಪುರದೊಳಗೆ ಸ್ವಾಯತ್ತ ಪ್ರಾದೇಶಿಕ ಮಂಡಳಿಗಳ ಆಯ್ಕೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲಾಗಿದೆ ಎಂದು ಅವರು ವಿಷಾದಿಸಿದ್ದಾರೆ.

“ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಮೇಲಿನ ನಂಬಿಕೆಯನ್ನು ಕುಕಿ ಪೀಪಲ್ಸ್ ಅಲೈಯನ್ಸ್ ಕಳೆದುಕೊಂಡಿದೆ” ಎಂದಿರುವ ಅವರು, ತಾಂತ್ರಿಕವಾಗಿ ಬೆಂಬಲವನ್ನು ಹಿಂತೆಗೆದುಕೊಳ್ಳದಿದ್ದರೂ, ಮುಂದಿನ ದಿನಗಳಲ್ಲಿ ಬೆಂಬಲ ವಾಪಸ್ ಪಡೆಯುವ ಸೂಚನೆಯನ್ನೂ ಅವರು ನೀಡಿದ್ದಾರೆ.

ಇದನ್ನೂ ಓದಿರಿ: ಮಣಿಪುರ ಹಿಂಸಾಚಾರ: ಅಗತ್ಯ ವಸ್ತುಗಳ ಬೆಲೆ ಮುಗಿಲೆತ್ತರ!

ಬಿರೇನ್ ಸಿಂಗ್ ಅವರು ತಮ್ಮದೇ ಆದ ಬಹುಮತವನ್ನು ಹೊಂದಿರುವುದರಿಂದ, ಕುಕಿ ಪೀಪಲ್ಸ್ ಅಲೈಯನ್ಸ್‌ನ ಬೆಂಬಲವು ತಾಂತ್ರಿಕವಾಗಿ ಅತ್ಯುತ್ತಮವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿರೇನ್ ಸಿಂಗ್ ‘ಕುಕಿ ವಿರೋಧಿ’ ಎಂದು ಹ್ಯಾಂಗ್‌ಶಿಂಗ್ ಕಿಡಿಕಾರಿದ್ದಾರೆ.

ಕುಕಿ ಮತ್ತು ಮೈಥೇಯಿ ಸಮುದಾಯದ ನಡುವಿನ ಸಮಸ್ಯೆಗೆ ಬಿರೇನ್‌ ಸಿಂಗ್ ಅವರು ಕಳೆದ ನಾಲ್ಕೈದು ವರ್ಷಗಳಲ್ಲಿ ತೋರಿರುವ ವರ್ತನೆಯೇ ಕಾರಣ ಎಂದು ಹ್ಯಾಂಗ್‌ಶಿಂಗ್ ಆರೋಪಿಸಿದ್ದಾರೆ.

ಸಿಎಂ ಬಿರೇನ್ ಸಿಂಗ್ ಅವರು ಬೇಜವಾಬ್ದಾರಿ ತೋರಿದ್ದಾರೆಂದು ಉದಾಹರಣೆಗಳನ್ನು ಅವರು ನೀಡಿದ್ದಾರೆ. “ತಮ್ಮ ಮನೆಯನ್ನು ಲೂಟಿ ಮಾಡಲಾಗುತ್ತಿದೆ, ಸುಟ್ಟು ಹಾಕಲಾಗುತ್ತಿದೆ” ಎಂದು ಹೇಳಲು ಬಿಜೆಪಿ ಶಾಸಕ, ಬಿರೇನ್ ಸಿಂಗ್ ಅವರ ಸರ್ಕಾರದ ಸದಸ್ಯ ಲೆಟ್ಪಾವೊ ಹಾಕಿಪ್ ಅವರು ಬಿರೇನ್ ಸಿಂಗ್ ಅವರಿಗೆ ಪದೇ ಪದೇ ಫೋನ್ ಮಾಡಿದರೂ ಸ್ಪಂದಿಸಿಲ್ಲ ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...