Homeಕರ್ನಾಟಕಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸ್ ದರ್ಪ; ಭುಗಿಲೆದ್ದ ಜನಾಕ್ರೋಶ

ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸ್ ದರ್ಪ; ಭುಗಿಲೆದ್ದ ಜನಾಕ್ರೋಶ

- Advertisement -
- Advertisement -

ಅಪ್ರಾಪ್ತ ಮತ್ತು ವಯಸ್ಕ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್‌ನನ್ನು ಬಂಧಿಸಬೇಕೆಂದು ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ತೋರಿಸುವ  ದರ್ಪಕ್ಕೆ ಜನಾಕ್ರೋಶ ವ್ಯಕ್ತವಾಗಿದೆ.

ಕರ್ನಾಟಕದ ಅನೇಕ ಜನರು ಈ ಘಟನೆಯನ್ನು ಖಂಡಿಸಿದ್ದಾರೆ. ನೂತನ ಸಂಸತ್‌ ಭವನದ ಉದ್ಘಾಟನೆಯ ವೈಭವದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವಿದ್ದರೆ, ದೇಶಕ್ಕಾಗಿ ಪದಕಗಳನ್ನು ತಂದುಕೊಟ್ಟ ಕುಸ್ತಿಪಟುಗಳು ಬಂಧನಕ್ಕೊಳಗಾಗಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಆಕ್ರೋಶ ಹೊರಹಾಕುತ್ತಿರುವ ಜನತೆ, ಮೋದಿ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ. ದೇಶಕ್ಕಾಗಿ ಪದಕಗಳನ್ನು ತಂದ ಕುಸ್ತಿಪಟುಗಳ ಸಾಧನೆಯನ್ನು ಸ್ಮರಿಸಿದ್ದಾರೆ. ಕುಸ್ತಿಪಟುಗಳನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಪ್ರತಿಭಟನೆಯೂ ನಡೆದಿದೆ.

ಲೈಂಗಿಕ ಕುರುಕುಳ ಪ್ರಕರಣದ ಆರೋಪಿ ಬ್ರಿಜ್‌ಭೂಷಣ್ ಶರಣ್‌ಸಿಂಗ್‌ನನ್ನು ಬಂಧಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಯಿತು.

“ಕಲ್ಲಿನ ಕಟ್ಟಡದೊಳಗೆ ನಿಂತು ಭಾರತ‌ಮಾತೆಗೆ ಜೈ ಎನ್ನುವವರಿಗೆ ಬೀದಿಯಲ್ಲಿ ಭಾರತ ಮಾತೆಯರನ್ನು ಎಳೆದಾಡುತ್ತಿರುವುದು ಕಾಣುತ್ತಿಲ್ಲವಲ್ಲ, ನಾಚಿಕೆಗೇಡು. ಬಂಧಿಸಲಾದ ಎಲ್ಲ ಕುಸ್ತಿಪಟುಗಳು ಮತ್ತು ಹೋರಾಟಗಾರ್ತಿಯರನ್ನು ಬಿಡುಗಡೆ ಮಾಡಲೇಬೇಕು. ಲೈಂಗಿಕ ದೌರ್ಜನ್ಯದ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಲಿಂಗತ್ವ ಅಲ್ಪಸಂಖ್ಯಾತ ಹೋರಾಟಗಾರ್ತಿ ಮಲ್ಲು ಕುಂಬಾರ್‌ ಆಗ್ರಹಿಸಿದ್ದಾರೆ.

“ಅಂದು ಈ ಮಹಿಳಾ ಕುಸ್ತಿಪಟುಗಳು ದೇಶಕ್ಕೆ ಪದಕದ ಜೊತೆ ಕೀರ್ತಿ ಹೊತ್ತು ತಂದರು. ಇಂದು ನ್ಯಾಯ ಬೇಡಿದ್ದೆ ತಪ್ಪಾಗಿ, ಹೊಡೆದು ಬಡಿದು ಚಿತ್ರಹಿಂಸೆ ನೀಡಿ ಅವರನ್ನು ಜೈಲಿಗೆ ಅಟ್ಟುತ್ತಿದ್ದಾರೆ. ಎಂಥ ದರಿದ್ರ ಆಡಳಿತದಲ್ಲಿ ನಾವಿಂದು ಬದುಕುತ್ತಿದ್ದೇವೆ. ಹೆಣ್ಣುಮಕ್ಕಳಿಗೆ ಗೌರವ ಕೊಡದವನು ಯಾವ ರಾಜದಂಡ ಹಿಡಿದರೇನು ಪ್ರಯೋಜನ?” ಎಂದು ಮಂಜುನಾಥ್ ಎಂಬವರು ಪ್ರಶ್ನಿಸಿದ್ದಾರೆ.

ಲೇಖಕಿ ಪಲ್ಲವಿ ಇಡೂರು ಪ್ರತಿಕ್ರಿಯಿಸಿ, “ನನ್ನಂತಹ ಕೋಟ್ಯಂತರ ಮಂದಿಯ ಮನಸ್ಸು ಬಿಜೆಪಿ ಅಥವಾ ಬಲಪಂಥೀಯರ ಅಸಹ್ಯದ ರಾಜಕಾರಣದೆಡೆಗೆ ತಿರುಗುವುದಿಲ್ಲ, ಆದರೆ ಅದಾಗಲೇ ಭಕ್ತಿಯಲ್ಲಿ ಮಿಂದೇಳುತ್ತಿರುವ ಅಸಹ್ಯದ ಹುಳುಗಳು ಬದಲಾಗುತ್ತಾರೆ ಎನ್ನುವ ಭ್ರಮೆಯೂ ನನಗಿಲ್ಲ. ಇನ್ನು ಅವರನ್ನು ದಿನ ಬೆಳಗಾದರೆ ಖಂಡಿಸುತ್ತಾ ಕೂರುವುದರಿಂದ ನನ್ನ ಮಾನಸಿಕ ಸ್ಥಿತಿ ಒತ್ತಡಕ್ಕೊಳಗಾಗಿ ಜೀವನಕ್ಕೆ ಮಾರಕವೇ ಹೊರತು ಬೇರೆ ಉಪಯೋಗವಂತೂ ಆಗಲಾರದು. ಮನುಷ್ಯ ಪ್ರತಿಯೊಬ್ಬನೂ ಪ್ರತಿಕ್ರಿಯಿಸುವುದು ತನಗೆ ಬಿಸಿಯ ಅನುಭವವಾದಾಗಲೇ! ನಾವೆಷ್ಟೇ ಎಚ್ಚರಿಸಿದರೂ ಎಚ್ಚರಗೊಳ್ಳಲಾರರು” ಎಂದು ವಿಷಾದಿಸಿದ್ದಾರೆ.

“ಈಗ ಹೀಗೆ ಬೀದಿಯಲ್ಲಿ ನಿಂತು ಪ್ರತಿಭಟಿಸುತ್ತಿರುವ ದೇಶದ ಅತ್ಯುನ್ನತ ಕ್ರೀಡಾಪಟುಗಳು ಅವರ ಸಾಧನೆಯ ಸಲುವಾಗಿಯಾದರೂ ಚರ್ಚೆಗೊಳಗಾಗುತ್ತಿದ್ದಾರೆ. ನನ್ನಂತವರು ಹೀಗೆ ಬೀದಿಗಿಳಿದರೆ ಕೇಳುವವರೇ ಇರುವುದಿಲ್ಲ. ಕಹಿ ಅನಿಸಬಹುದು ಆದರೆ ಇದೇ ಸತ್ಯ. ಇಲ್ಲಿ ಸೋಶಿಯಲ್ ಮೀಡಿಯಾಗಳಲ್ಲಿ ಸಾಲಿಡಾರಿಟಿಯ ಪೋಸ್ಟ್‌ಗಳನ್ನು ಬರೆಯಲೂ ನಮಗೆ ಕಮ್ಯುನಿಟಿ ಸ್ಟಾಂಡರ್ಡ್ ಫಿಕ್ಸ್ ಮಾಡಲಾಗಿದೆ. ಇಂತದ್ದೊಂದು ಕೈಕಾಲು ಮುರಿದುಕೊಂಡ ಪ್ರಜಾಪ್ರಭುತ್ವದಲ್ಲಿ ಒಗ್ಗಟ್ಟಿನ ವಿರೋಧ ಮತಗಟ್ಟೆಯಲ್ಲಷ್ಟೇ ತೋರಿಸಲು ಸಾಧ್ಯ ಅನ್ನುವ ದಿವ್ಯಸತ್ಯದ ಅರಿವಾಗಿರುವುದಕ್ಕೇ ಮಾತಿಗಿಂತ ಕೃತಿ ಮೇಲೆನ್ನಿಸಿರುವುದು. ಅಂದಹಾಗೆ ಒಂದುಕಾಲದಲ್ಲಿ ಬಿಜೆಪಿಯ ಪ್ರಧಾನಮಂತ್ರಿಯವರ ಆರಾಧಕರಾಗಿದ್ದ ಈ ಕ್ರೀಡಾಪಟುಗಳು ತಮ್ಮ ಹಕ್ಕಿಗಾಗಿ ತಮ್ಮದೇ ಸರ್ಕಾರದ ಮುಂದೆ ಹೀಗೆ ಬೀದಿ ಬದಿಯಲ್ಲಿ ತುಳಿತಕ್ಕೊಳಗಾಗಬೇಕಾದ ಈ ಪರಿಸ್ಥಿತಿಯನ್ನು ನೋಡುವಾಗ ನೋವಾಗುವುದಂತೂ ನಿಜ. ಸಂವೇದನೆಯನ್ನು ಕಳೆದುಕೊಂಡಿರುವ ಈ ದೇಶದ ಭಕ್ತರು ಬೇಗ ಎಚ್ಚೆತ್ತುಕೊಂಡು ದೇಶ ಉಳಿಸಲಿ ಅನ್ನುವುದಷ್ಟೇ ನನ್ನ ಈ ಕ್ಷಣದ ಆಸೆ” ಎಂದು ಆಶಿಸಿದ್ದಾರೆ.

“ನಿಮ್ಮ ಆತ್ಮವಂಚನೆಗೆ, ಅಷಾಢಭೂತಿತನಕ್ಕೆ ಕೊನೆಯೇ ಇಲ್ಲವೇ ಮಿಸ್ಟರ್ ಪಿಎಂ?” ಎಂದು ಪತ್ರಕರ್ತ ಶಶಿ ಸಂಪಳ್ಳಿ ಪ್ರಶ್ನಿಸಿದ್ದಾರೆ.

“ಸರ್ವಾಧಿಕಾರಿ ಆಡಳಿತದಲ್ಲಿ ಇದೆಲ್ಲಾ ಸಹಜವಾಗಿಯೇ ನಡೆಯುವ ಘಟನಾವಳಿಗಳು ನ್ಯಾಯ ಎಲ್ಲಿದೆ?” ಎಂದು ಯುವ ಹೋರಾಟಗಾರ ಹನುಮೇಶ್ ಗುಂಡೂರು ಪ್ರತಿಕ್ರಿಯಿಸಿದ್ದಾರೆ.

“ಲೈಂಗಿಕ ಕಿರುಕುಳ ನೀಡಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಂಜಿಕೆಯಿಲ್ಲದೆ ಬೀದಿ ಸುತ್ತುತ್ತಿದ್ದಾನೆ. ಸಂತ್ರಸ್ತ ಹೆಣ್ಮಕ್ಳು ಲಾಠಿ, ಬೂಟುಗಳ ಪೆಟ್ಟು ತಿಂದು ಬಂಧಿಯಾಗಿದ್ದಾರೆ. ದೇಶಕ್ಕೆ ಪದಕ, ಹೆಮ್ಮೆ ತಂದ ಕುಸ್ತಿಪಟುಗಳ ಪರಿಸ್ಥಿತಿಯೇ ಹೀಗಾದರೆ, ನ್ಯಾಯಕ್ಕಾಗಿ ಜನಸಾಮಾನ್ಯರು ಧ್ವನಿ ಎತ್ತಿದರೆ ಅವರ ಪಾಡೇನು? ಮಿಸ್ಟರ್ ಮೋದಿ ಅಮಿತ್ ಷಾ ಅವರೇ, ಬೇಟಿ ಬಚಾವೋ, ಬೇಟಿ ಪಡಾವೋ ಎಂಬ ಘೋಷವಾಕ್ಯಕ್ಕೆ ಅರ್ಥವಿದೆಯಾ?” ಎಂದು ಯುವ ಪತ್ರಕರ್ತೆ ಧನಲಕ್ಷ್ಮಿ ಪೋಸ್ಟ್‌ ಮಾಡಿದ್ದಾರೆ.

“ಅಗೋ ಅಲ್ಲಿ ನೋಡಿ ಭವ್ಯ ಸಂಸತ್ತು, ಸಂವಿಧಾನವನ್ನು ಪಕ್ಕಕ್ಕೆ ಎಸೆದು ನಮ್ಮ ಕೋಟ್ಯಾಂತರ ರೂಪಾಯಿ ತೆರಿಗೆ ಹಣದಲ್ಲಿ ಕಟ್ಟಿಸಿ ಸ್ವಂತ ಮನೆಯಂತೆ ಗೃಹ ಪ್ರವೇಶ ಮಾಡಿದ ಕೆಟ್ಟ ಪ್ರಧಾನಿ. ಇಲ್ಲಿ ನೋಡಿ, ನಮ್ಮ ದೇಶದ ಹೆಮ್ಮೆಯ ಕುಸ್ತಿಪಟುಗಳು. ದೇಶದ ಹೆಮ್ಮೆ ಎಂದು ಟೀ ಕುಡಿಯಲು, ಸೆಲ್ಫಿ ತೆಗೆದುಕೊಳ್ಳಲು ಕರೆದ ಸೋಗಲಾಡಿಗೆ ಈಗ ಇವರು ಯಾರು ನೆನಪಿಲ್ಲ. ರಸ್ತೆಯಲ್ಲಿ ಹೀಗೇ ಹೀನಾಯವಾಗಿ ಎಳೆದಾಡುತ್ತಿದ್ದರೂ ಬಿಜೆಪಿಯ ಯಾವ ಮಹಿಳಾ ನಾಯಕಿಯು ತುಟಿ ಬಿಚ್ಚಿಲ್ಲ. ಇವರು ಕೇಳುತ್ತಿರುವುದು ಕೂಡ ಏಳು ಹೆಣ್ಣು ಮಕ್ಕಳ ಮೇಲೆ ಅದರಲ್ಲೂ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಒಬ್ಬ ಬಿಜೆಪಿ ಸಂಸದನ ವಿರುದ್ಧ ಕ್ರಮ! ಅದು ಬಿಜೆಪಿ ಸಾಧ್ಯವಿಲ್ಲ. ಆತ ಮುಂದಿನ ತಿಂಗಳು ಅಯೋಧ್ಯೆಯಲ್ಲಿ ಬೃಹತ್ ರ್‍ಯಾಲಿ ನಡೆಸುತ್ತಿದ್ದಾನೆ. ನೆನಪಿಡಿ ನೀವು ರೈತರನ್ನು ಹೀಗೆ ನಡೆಸಿಕೊಂಡಿದ್ದಿರಿ, ಕೊನೆಗೆ ಏನಾಯಿತು?” ಎಂಬ ಸಂದೇಶವನ್ನು ಶರಣು ಎಂಬವರು ಹಂಚಿಕೊಂಡಿದ್ದಾರೆ.

“ಅವರೆಲ್ಲಾ ದೇಶವನ್ನು ಪ್ರತಿನಿಧಿಸಿ, ದೇಶದ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಹಾರಿಸುವ ಕನಸು ಹೊತ್ತು ಕುಸ್ತಿಪಟುಗಳಾಗಲು ಮುಂದಾದವರು. ಅಪ್ರಾಪ್ತ ವಯಸ್ಸಿನಲ್ಲೇ ಅಭ್ಯಾಸ ನಿರತರಾಗಿ, ವಿಶೇಷ ಕೋಚಿಂಗ್ ಪಡೆದು ಕುಸ್ತಿಪಟುಗಳಾಗಿ ದೇಶಕ್ಕೆ ಒಲಂಪಿಕ್ ನಲ್ಲಿ ಪದಕವನ್ನೂ ತಂದುಕೊಟ್ಟ ಭಾರತಾಂಬೆಯ ಹೆಮ್ಮೆಯ ಕುವರಿಯರು. ಲೈಂಗಿಕ ದೌರ್ಜನ್ಯ ಎಸಗಿದ್ದಾರೆನ್ನುವ ಆರೋಪ ಹೊರಿಸಿರುವ ಮಹಿಳಾ ಕುಸ್ತಿಪಟುಗಳು ತಮಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ತನ್ನ ಸಂಸದನ ಪರವಾಗಿ ನಿಂತು ಈ ಹೆಣ್ಣುಮಕ್ಕಳನ್ನೇ ಬಂಧಿಸಿದೆ ಇಂದು? ಇದೆಂತಹ ಅನ್ಯಾಯ ಸ್ವಾಮಿ, ಈ ದೇಶದಲ್ಲಿ ಕಾನೂನು ಇದೆಯೋ ಇಲ್ಲವೋ? ಲೈಂಗಿಕ ದೌರ್ಜನ್ಯ ಆಗಿದೆ ಎಂದು ನೊಂದು ಪ್ರತಿಭಟಿಸುವ ಈ ಹೆಣ್ಣು ಮಕ್ಕಳನ್ನು ಹಾದಿಬೀದಿಯಲ್ಲಿ ಪ್ರಾಣಿಗಳಂತೆ ಎಳೆದೊಯ್ಯುತ್ತಿರುವುದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಲ್ಲವೇ?” ಎಂದು ಸುಬ್ರಮಣ್ಯ ಭಟ್‌ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...