Homeಕರ್ನಾಟಕಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸ್ ದರ್ಪ; ಭುಗಿಲೆದ್ದ ಜನಾಕ್ರೋಶ

ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸ್ ದರ್ಪ; ಭುಗಿಲೆದ್ದ ಜನಾಕ್ರೋಶ

- Advertisement -
- Advertisement -

ಅಪ್ರಾಪ್ತ ಮತ್ತು ವಯಸ್ಕ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್‌ನನ್ನು ಬಂಧಿಸಬೇಕೆಂದು ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ತೋರಿಸುವ  ದರ್ಪಕ್ಕೆ ಜನಾಕ್ರೋಶ ವ್ಯಕ್ತವಾಗಿದೆ.

ಕರ್ನಾಟಕದ ಅನೇಕ ಜನರು ಈ ಘಟನೆಯನ್ನು ಖಂಡಿಸಿದ್ದಾರೆ. ನೂತನ ಸಂಸತ್‌ ಭವನದ ಉದ್ಘಾಟನೆಯ ವೈಭವದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವಿದ್ದರೆ, ದೇಶಕ್ಕಾಗಿ ಪದಕಗಳನ್ನು ತಂದುಕೊಟ್ಟ ಕುಸ್ತಿಪಟುಗಳು ಬಂಧನಕ್ಕೊಳಗಾಗಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಆಕ್ರೋಶ ಹೊರಹಾಕುತ್ತಿರುವ ಜನತೆ, ಮೋದಿ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ. ದೇಶಕ್ಕಾಗಿ ಪದಕಗಳನ್ನು ತಂದ ಕುಸ್ತಿಪಟುಗಳ ಸಾಧನೆಯನ್ನು ಸ್ಮರಿಸಿದ್ದಾರೆ. ಕುಸ್ತಿಪಟುಗಳನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಪ್ರತಿಭಟನೆಯೂ ನಡೆದಿದೆ.

ಲೈಂಗಿಕ ಕುರುಕುಳ ಪ್ರಕರಣದ ಆರೋಪಿ ಬ್ರಿಜ್‌ಭೂಷಣ್ ಶರಣ್‌ಸಿಂಗ್‌ನನ್ನು ಬಂಧಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಯಿತು.

“ಕಲ್ಲಿನ ಕಟ್ಟಡದೊಳಗೆ ನಿಂತು ಭಾರತ‌ಮಾತೆಗೆ ಜೈ ಎನ್ನುವವರಿಗೆ ಬೀದಿಯಲ್ಲಿ ಭಾರತ ಮಾತೆಯರನ್ನು ಎಳೆದಾಡುತ್ತಿರುವುದು ಕಾಣುತ್ತಿಲ್ಲವಲ್ಲ, ನಾಚಿಕೆಗೇಡು. ಬಂಧಿಸಲಾದ ಎಲ್ಲ ಕುಸ್ತಿಪಟುಗಳು ಮತ್ತು ಹೋರಾಟಗಾರ್ತಿಯರನ್ನು ಬಿಡುಗಡೆ ಮಾಡಲೇಬೇಕು. ಲೈಂಗಿಕ ದೌರ್ಜನ್ಯದ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಲಿಂಗತ್ವ ಅಲ್ಪಸಂಖ್ಯಾತ ಹೋರಾಟಗಾರ್ತಿ ಮಲ್ಲು ಕುಂಬಾರ್‌ ಆಗ್ರಹಿಸಿದ್ದಾರೆ.

“ಅಂದು ಈ ಮಹಿಳಾ ಕುಸ್ತಿಪಟುಗಳು ದೇಶಕ್ಕೆ ಪದಕದ ಜೊತೆ ಕೀರ್ತಿ ಹೊತ್ತು ತಂದರು. ಇಂದು ನ್ಯಾಯ ಬೇಡಿದ್ದೆ ತಪ್ಪಾಗಿ, ಹೊಡೆದು ಬಡಿದು ಚಿತ್ರಹಿಂಸೆ ನೀಡಿ ಅವರನ್ನು ಜೈಲಿಗೆ ಅಟ್ಟುತ್ತಿದ್ದಾರೆ. ಎಂಥ ದರಿದ್ರ ಆಡಳಿತದಲ್ಲಿ ನಾವಿಂದು ಬದುಕುತ್ತಿದ್ದೇವೆ. ಹೆಣ್ಣುಮಕ್ಕಳಿಗೆ ಗೌರವ ಕೊಡದವನು ಯಾವ ರಾಜದಂಡ ಹಿಡಿದರೇನು ಪ್ರಯೋಜನ?” ಎಂದು ಮಂಜುನಾಥ್ ಎಂಬವರು ಪ್ರಶ್ನಿಸಿದ್ದಾರೆ.

ಲೇಖಕಿ ಪಲ್ಲವಿ ಇಡೂರು ಪ್ರತಿಕ್ರಿಯಿಸಿ, “ನನ್ನಂತಹ ಕೋಟ್ಯಂತರ ಮಂದಿಯ ಮನಸ್ಸು ಬಿಜೆಪಿ ಅಥವಾ ಬಲಪಂಥೀಯರ ಅಸಹ್ಯದ ರಾಜಕಾರಣದೆಡೆಗೆ ತಿರುಗುವುದಿಲ್ಲ, ಆದರೆ ಅದಾಗಲೇ ಭಕ್ತಿಯಲ್ಲಿ ಮಿಂದೇಳುತ್ತಿರುವ ಅಸಹ್ಯದ ಹುಳುಗಳು ಬದಲಾಗುತ್ತಾರೆ ಎನ್ನುವ ಭ್ರಮೆಯೂ ನನಗಿಲ್ಲ. ಇನ್ನು ಅವರನ್ನು ದಿನ ಬೆಳಗಾದರೆ ಖಂಡಿಸುತ್ತಾ ಕೂರುವುದರಿಂದ ನನ್ನ ಮಾನಸಿಕ ಸ್ಥಿತಿ ಒತ್ತಡಕ್ಕೊಳಗಾಗಿ ಜೀವನಕ್ಕೆ ಮಾರಕವೇ ಹೊರತು ಬೇರೆ ಉಪಯೋಗವಂತೂ ಆಗಲಾರದು. ಮನುಷ್ಯ ಪ್ರತಿಯೊಬ್ಬನೂ ಪ್ರತಿಕ್ರಿಯಿಸುವುದು ತನಗೆ ಬಿಸಿಯ ಅನುಭವವಾದಾಗಲೇ! ನಾವೆಷ್ಟೇ ಎಚ್ಚರಿಸಿದರೂ ಎಚ್ಚರಗೊಳ್ಳಲಾರರು” ಎಂದು ವಿಷಾದಿಸಿದ್ದಾರೆ.

“ಈಗ ಹೀಗೆ ಬೀದಿಯಲ್ಲಿ ನಿಂತು ಪ್ರತಿಭಟಿಸುತ್ತಿರುವ ದೇಶದ ಅತ್ಯುನ್ನತ ಕ್ರೀಡಾಪಟುಗಳು ಅವರ ಸಾಧನೆಯ ಸಲುವಾಗಿಯಾದರೂ ಚರ್ಚೆಗೊಳಗಾಗುತ್ತಿದ್ದಾರೆ. ನನ್ನಂತವರು ಹೀಗೆ ಬೀದಿಗಿಳಿದರೆ ಕೇಳುವವರೇ ಇರುವುದಿಲ್ಲ. ಕಹಿ ಅನಿಸಬಹುದು ಆದರೆ ಇದೇ ಸತ್ಯ. ಇಲ್ಲಿ ಸೋಶಿಯಲ್ ಮೀಡಿಯಾಗಳಲ್ಲಿ ಸಾಲಿಡಾರಿಟಿಯ ಪೋಸ್ಟ್‌ಗಳನ್ನು ಬರೆಯಲೂ ನಮಗೆ ಕಮ್ಯುನಿಟಿ ಸ್ಟಾಂಡರ್ಡ್ ಫಿಕ್ಸ್ ಮಾಡಲಾಗಿದೆ. ಇಂತದ್ದೊಂದು ಕೈಕಾಲು ಮುರಿದುಕೊಂಡ ಪ್ರಜಾಪ್ರಭುತ್ವದಲ್ಲಿ ಒಗ್ಗಟ್ಟಿನ ವಿರೋಧ ಮತಗಟ್ಟೆಯಲ್ಲಷ್ಟೇ ತೋರಿಸಲು ಸಾಧ್ಯ ಅನ್ನುವ ದಿವ್ಯಸತ್ಯದ ಅರಿವಾಗಿರುವುದಕ್ಕೇ ಮಾತಿಗಿಂತ ಕೃತಿ ಮೇಲೆನ್ನಿಸಿರುವುದು. ಅಂದಹಾಗೆ ಒಂದುಕಾಲದಲ್ಲಿ ಬಿಜೆಪಿಯ ಪ್ರಧಾನಮಂತ್ರಿಯವರ ಆರಾಧಕರಾಗಿದ್ದ ಈ ಕ್ರೀಡಾಪಟುಗಳು ತಮ್ಮ ಹಕ್ಕಿಗಾಗಿ ತಮ್ಮದೇ ಸರ್ಕಾರದ ಮುಂದೆ ಹೀಗೆ ಬೀದಿ ಬದಿಯಲ್ಲಿ ತುಳಿತಕ್ಕೊಳಗಾಗಬೇಕಾದ ಈ ಪರಿಸ್ಥಿತಿಯನ್ನು ನೋಡುವಾಗ ನೋವಾಗುವುದಂತೂ ನಿಜ. ಸಂವೇದನೆಯನ್ನು ಕಳೆದುಕೊಂಡಿರುವ ಈ ದೇಶದ ಭಕ್ತರು ಬೇಗ ಎಚ್ಚೆತ್ತುಕೊಂಡು ದೇಶ ಉಳಿಸಲಿ ಅನ್ನುವುದಷ್ಟೇ ನನ್ನ ಈ ಕ್ಷಣದ ಆಸೆ” ಎಂದು ಆಶಿಸಿದ್ದಾರೆ.

“ನಿಮ್ಮ ಆತ್ಮವಂಚನೆಗೆ, ಅಷಾಢಭೂತಿತನಕ್ಕೆ ಕೊನೆಯೇ ಇಲ್ಲವೇ ಮಿಸ್ಟರ್ ಪಿಎಂ?” ಎಂದು ಪತ್ರಕರ್ತ ಶಶಿ ಸಂಪಳ್ಳಿ ಪ್ರಶ್ನಿಸಿದ್ದಾರೆ.

“ಸರ್ವಾಧಿಕಾರಿ ಆಡಳಿತದಲ್ಲಿ ಇದೆಲ್ಲಾ ಸಹಜವಾಗಿಯೇ ನಡೆಯುವ ಘಟನಾವಳಿಗಳು ನ್ಯಾಯ ಎಲ್ಲಿದೆ?” ಎಂದು ಯುವ ಹೋರಾಟಗಾರ ಹನುಮೇಶ್ ಗುಂಡೂರು ಪ್ರತಿಕ್ರಿಯಿಸಿದ್ದಾರೆ.

“ಲೈಂಗಿಕ ಕಿರುಕುಳ ನೀಡಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಂಜಿಕೆಯಿಲ್ಲದೆ ಬೀದಿ ಸುತ್ತುತ್ತಿದ್ದಾನೆ. ಸಂತ್ರಸ್ತ ಹೆಣ್ಮಕ್ಳು ಲಾಠಿ, ಬೂಟುಗಳ ಪೆಟ್ಟು ತಿಂದು ಬಂಧಿಯಾಗಿದ್ದಾರೆ. ದೇಶಕ್ಕೆ ಪದಕ, ಹೆಮ್ಮೆ ತಂದ ಕುಸ್ತಿಪಟುಗಳ ಪರಿಸ್ಥಿತಿಯೇ ಹೀಗಾದರೆ, ನ್ಯಾಯಕ್ಕಾಗಿ ಜನಸಾಮಾನ್ಯರು ಧ್ವನಿ ಎತ್ತಿದರೆ ಅವರ ಪಾಡೇನು? ಮಿಸ್ಟರ್ ಮೋದಿ ಅಮಿತ್ ಷಾ ಅವರೇ, ಬೇಟಿ ಬಚಾವೋ, ಬೇಟಿ ಪಡಾವೋ ಎಂಬ ಘೋಷವಾಕ್ಯಕ್ಕೆ ಅರ್ಥವಿದೆಯಾ?” ಎಂದು ಯುವ ಪತ್ರಕರ್ತೆ ಧನಲಕ್ಷ್ಮಿ ಪೋಸ್ಟ್‌ ಮಾಡಿದ್ದಾರೆ.

“ಅಗೋ ಅಲ್ಲಿ ನೋಡಿ ಭವ್ಯ ಸಂಸತ್ತು, ಸಂವಿಧಾನವನ್ನು ಪಕ್ಕಕ್ಕೆ ಎಸೆದು ನಮ್ಮ ಕೋಟ್ಯಾಂತರ ರೂಪಾಯಿ ತೆರಿಗೆ ಹಣದಲ್ಲಿ ಕಟ್ಟಿಸಿ ಸ್ವಂತ ಮನೆಯಂತೆ ಗೃಹ ಪ್ರವೇಶ ಮಾಡಿದ ಕೆಟ್ಟ ಪ್ರಧಾನಿ. ಇಲ್ಲಿ ನೋಡಿ, ನಮ್ಮ ದೇಶದ ಹೆಮ್ಮೆಯ ಕುಸ್ತಿಪಟುಗಳು. ದೇಶದ ಹೆಮ್ಮೆ ಎಂದು ಟೀ ಕುಡಿಯಲು, ಸೆಲ್ಫಿ ತೆಗೆದುಕೊಳ್ಳಲು ಕರೆದ ಸೋಗಲಾಡಿಗೆ ಈಗ ಇವರು ಯಾರು ನೆನಪಿಲ್ಲ. ರಸ್ತೆಯಲ್ಲಿ ಹೀಗೇ ಹೀನಾಯವಾಗಿ ಎಳೆದಾಡುತ್ತಿದ್ದರೂ ಬಿಜೆಪಿಯ ಯಾವ ಮಹಿಳಾ ನಾಯಕಿಯು ತುಟಿ ಬಿಚ್ಚಿಲ್ಲ. ಇವರು ಕೇಳುತ್ತಿರುವುದು ಕೂಡ ಏಳು ಹೆಣ್ಣು ಮಕ್ಕಳ ಮೇಲೆ ಅದರಲ್ಲೂ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಒಬ್ಬ ಬಿಜೆಪಿ ಸಂಸದನ ವಿರುದ್ಧ ಕ್ರಮ! ಅದು ಬಿಜೆಪಿ ಸಾಧ್ಯವಿಲ್ಲ. ಆತ ಮುಂದಿನ ತಿಂಗಳು ಅಯೋಧ್ಯೆಯಲ್ಲಿ ಬೃಹತ್ ರ್‍ಯಾಲಿ ನಡೆಸುತ್ತಿದ್ದಾನೆ. ನೆನಪಿಡಿ ನೀವು ರೈತರನ್ನು ಹೀಗೆ ನಡೆಸಿಕೊಂಡಿದ್ದಿರಿ, ಕೊನೆಗೆ ಏನಾಯಿತು?” ಎಂಬ ಸಂದೇಶವನ್ನು ಶರಣು ಎಂಬವರು ಹಂಚಿಕೊಂಡಿದ್ದಾರೆ.

“ಅವರೆಲ್ಲಾ ದೇಶವನ್ನು ಪ್ರತಿನಿಧಿಸಿ, ದೇಶದ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಹಾರಿಸುವ ಕನಸು ಹೊತ್ತು ಕುಸ್ತಿಪಟುಗಳಾಗಲು ಮುಂದಾದವರು. ಅಪ್ರಾಪ್ತ ವಯಸ್ಸಿನಲ್ಲೇ ಅಭ್ಯಾಸ ನಿರತರಾಗಿ, ವಿಶೇಷ ಕೋಚಿಂಗ್ ಪಡೆದು ಕುಸ್ತಿಪಟುಗಳಾಗಿ ದೇಶಕ್ಕೆ ಒಲಂಪಿಕ್ ನಲ್ಲಿ ಪದಕವನ್ನೂ ತಂದುಕೊಟ್ಟ ಭಾರತಾಂಬೆಯ ಹೆಮ್ಮೆಯ ಕುವರಿಯರು. ಲೈಂಗಿಕ ದೌರ್ಜನ್ಯ ಎಸಗಿದ್ದಾರೆನ್ನುವ ಆರೋಪ ಹೊರಿಸಿರುವ ಮಹಿಳಾ ಕುಸ್ತಿಪಟುಗಳು ತಮಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ತನ್ನ ಸಂಸದನ ಪರವಾಗಿ ನಿಂತು ಈ ಹೆಣ್ಣುಮಕ್ಕಳನ್ನೇ ಬಂಧಿಸಿದೆ ಇಂದು? ಇದೆಂತಹ ಅನ್ಯಾಯ ಸ್ವಾಮಿ, ಈ ದೇಶದಲ್ಲಿ ಕಾನೂನು ಇದೆಯೋ ಇಲ್ಲವೋ? ಲೈಂಗಿಕ ದೌರ್ಜನ್ಯ ಆಗಿದೆ ಎಂದು ನೊಂದು ಪ್ರತಿಭಟಿಸುವ ಈ ಹೆಣ್ಣು ಮಕ್ಕಳನ್ನು ಹಾದಿಬೀದಿಯಲ್ಲಿ ಪ್ರಾಣಿಗಳಂತೆ ಎಳೆದೊಯ್ಯುತ್ತಿರುವುದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಲ್ಲವೇ?” ಎಂದು ಸುಬ್ರಮಣ್ಯ ಭಟ್‌ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...