Homeಮುಖಪುಟದುರಹಂಕಾರಿ ರಾಜ ಜನರ ದನಿಯನ್ನು ಬೀದಿಬೀದಿಯಲ್ಲಿ ಹತ್ತಿಕ್ಕುವನು: ಕುಸ್ತಿಪಟುಗಳ ಮೇಲಿನ ಕ್ರಮಕ್ಕೆ ಪ್ರತಿಪಕ್ಷಗಳ ಪ್ರತಿಕ್ರಿಯೆ

ದುರಹಂಕಾರಿ ರಾಜ ಜನರ ದನಿಯನ್ನು ಬೀದಿಬೀದಿಯಲ್ಲಿ ಹತ್ತಿಕ್ಕುವನು: ಕುಸ್ತಿಪಟುಗಳ ಮೇಲಿನ ಕ್ರಮಕ್ಕೆ ಪ್ರತಿಪಕ್ಷಗಳ ಪ್ರತಿಕ್ರಿಯೆ

- Advertisement -
- Advertisement -

ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಖ್ಯಾತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ಜರುಗಿಸಿರುವ ಕ್ರಮದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

“ದುರಹಂಕಾರಿ ರಾಜ ಬೀದಿಗಳಲ್ಲಿ ಸಾರ್ವಜನಿಕರ ಧ್ವನಿಯನ್ನು ಹತ್ತಿಕ್ಕುವನು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಒಂದೆಡೆ ನೂತನ ಸಂಸತ್ ಭವನದ ಉದ್ಘಾಟನೆಯಲ್ಲಿ ಕೇಂದ್ರ ಸರ್ಕಾರ ಮುಳುಗಿದ್ದರೆ, ಸಂಸತ್ ಭವನದಿಂದ ಸುಮಾರು ಎರಡು ಕಿಮೀ ದೂರದಲ್ಲಿ ಪ್ರತಿಭಟಿಸುತ್ತಿದ್ದ ಕುಸ್ತಿಪಟುಗಳನ್ನು ಬಲವಂತವಾಗಿ ಪೊಲೀಸರು ಬಂಧಿಸಿರುವುದು ಆಕ್ರೋಶಕ್ಕೆ ಗುರಿಯಾಗಿದೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥ ಬ್ರಿಜ್‌ಭೂಷಣ್ ಶರಣ್ ಸಿಂಗ್ ಬಂಧಿಸುವಂತೆ ಆಗ್ರಹಿಸಿ ನೂತನ ಸಂಸತ್ ಭವನದ ಮುಂದೆ ಪ್ರತಿಭಟಿಸಲು ಕುಸ್ತಿಪಟುಗಳು ಮುಂದಾಗಿದ್ದರು.

ದೆಹಲಿ ಪೊಲೀಸರ ಕ್ರಮವು ರಾಜಕೀಯ ವಲಯದಲ್ಲಿ ತೀವ್ರ ಖಂಡನೆಗೆ ಒಳಗಾಗಿದೆ. “ಬಿಜೆಪಿ ಸರ್ಕಾರವು ಅನ್ಯಾಯ ಎಸಗುತ್ತಿದೆ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹತ್ತಿಕ್ಕುತ್ತಿದೆ” ಎಂದು ಪ್ರತಿಪಕ್ಷದ ನಾಯಕರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸ್ ದರ್ಪ; ಭುಗಿಲೆದ್ದ ಜನಾಕ್ರೋಶ

ಪೊಲೀಸರ ವರ್ತನೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದಾರೆ. “ಭಾರತದ ಹೆಸರನ್ನು ಎತ್ತರಕ್ಕೆ ಕೊಂಡೊಯ್ಯುವ ನಮ್ಮ ಕ್ರೀಡಾಪಟುಗಳೊಂದಿಗೆ ಇಂತಹ ವರ್ತನೆಯು ತುಂಬಾ ತಪ್ಪು ಮತ್ತು ಖಂಡನೀಯ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, “ಪ್ರಧಾನಿ ಮೋದಿಯವರು ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭವೆಂದು ಪರಿಗಣಿಸಿದ್ದಾರೆ. ಪಟ್ಟಾಭಿಷೇಕ ಮುಗಿದಿದೆ – ದುರಹಂಕಾರಿ ರಾಜ ಬೀದಿಬೀದಿಗಳಲ್ಲಿ ಸಾರ್ವಜನಿಕರ ಧ್ವನಿಯನ್ನು ಹತ್ತಿಕ್ಕುತ್ತಿದ್ದಾನೆ” ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, “ಬಿಜೆಪಿ ಸರ್ಕಾರದ ದುರಹಂಕಾರವು ಎಷ್ಟು ಹೆಚ್ಚಾಗಿದೆ ಎಂದರೆ- ಸರ್ಕಾರವು ನಮ್ಮ ಮಹಿಳಾ ಆಟಗಾರರ ಧ್ವನಿಯನ್ನು ನಿರ್ದಯವಾಗಿ ಬೂಟಿನ ಕೆಳಗೆ ಹಾಕಿ ತುಳಿಯುತ್ತಿದೆ” ಎಂದು ಟೀಕಿಸಿದ್ದಾರೆ.

“ಕ್ರೀಡಾಪಟುಗಳ ಎದೆಯ ಮೇಲಿರುವ ಪದಕಗಳು ನಮ್ಮ ದೇಶದ ಹೆಮ್ಮೆ” ಎಂದು ಅವರು ತಿಳಿಸಿದ್ದಾರೆ.

ಆಡಳಿತಾರೂಢ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಪ್ರಜಾಪ್ರಭುತ್ವ ಎಂದರೆ ಕೇವಲ ಕಟ್ಟಡಗಳಲ್ಲ, ಸಾರ್ವಜನಿಕರ ಧ್ವನಿಯ ಮೂಲಕ ಪ್ರಜಾಪ್ರಭುತ್ವ ನಡೆಯುತ್ತದೆ” ಎಂದು ಸರ್ಕಾರಕ್ಕೆ ಕಿವಿಹಿಂಡಿದ್ದಾರೆ.

ಇದನ್ನೂ ಓದಿರಿ: ಮಹಿಳಾ ಕುಸ್ತಿಪಟುಗಳು ಭಾರತದ ’ಬೇಟಿ’ಗಳಲ್ಲವೇ?

“ಸರ್ವಾಧಿಕಾರಿ ಧೋರಣೆಯ ಮೂಲಕ ಮಹಿಳಾ ಆಟಗಾರ್ತಿಯರ ಮೇಲೆ ಬೀದಿಬೀದಿಯಲ್ಲಿ ಹಲ್ಲೆ ಮಾಡಲಾಗಿದೆ. ಬಿಜೆಪಿ-ಆರ್‌ಎಸ್‌ಎಸ್ ಆಡಳಿತಗಾರರ 3 ಸುಳ್ಳುಗಳು ಈಗ ದೇಶದ ಮುಂದೆ ಬಯಲಾಗಿವೆ 1. ಪ್ರಜಾಪ್ರಭುತ್ವ 2. ರಾಷ್ಟ್ರೀಯತೆ 3. ಬೇಟಿ ಬಜಾವೋ” ಎಂದು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಮೋದಿ ಸರ್ಕಾರ ಇಂದು ಹೊಸ ಸಂಸತ್ ಭವನವನ್ನು ಉದ್ಘಾಟಿಸಿರಬಹುದು. ಆದರೆ ಸರ್ಕಾರ ಪ್ರಜಾಪ್ರಭುತ್ವದ ಬಗ್ಗೆ ನಿಜವಾಗಿಯೂ ಏನು ಯೋಚಿತ್ತಿದೆ ಎಂಬುದನ್ನು ದೆಹಲಿ ಪೊಲೀಸರು ಬೀದಿಯಲ್ಲಿ ತೋರಿಸಿದ್ದಾರೆ” ಎಂದು ಸಿಪಿಐ(ಎಂ) ಅಭಿಪ್ರಾಯಪಟ್ಟಿದೆ.

ತೃಣಮೂಲ ಕಾಂಗ್ರೆಸ್ ವರಿಷ್ಠೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿ ಕುಸ್ತಿಪಟುಗಳ ವಿರುದ್ಧ ದೆಹಲಿ ಪೊಲೀಸರು ತೆಗೆದುಕೊಂಡಿರುವ ಕ್ರಮವನ್ನು ಖಂಡಿಸಿದ್ದಾರೆ. “ನಮ್ಮ ಚಾಂಪಿಯನ್‌ಗಳನ್ನು ಈ ರೀತಿ ನಡೆಸಿಕೊಳ್ಳುವುದು ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...