Homeಮುಖಪುಟದುರಹಂಕಾರಿ ರಾಜ ಜನರ ದನಿಯನ್ನು ಬೀದಿಬೀದಿಯಲ್ಲಿ ಹತ್ತಿಕ್ಕುವನು: ಕುಸ್ತಿಪಟುಗಳ ಮೇಲಿನ ಕ್ರಮಕ್ಕೆ ಪ್ರತಿಪಕ್ಷಗಳ ಪ್ರತಿಕ್ರಿಯೆ

ದುರಹಂಕಾರಿ ರಾಜ ಜನರ ದನಿಯನ್ನು ಬೀದಿಬೀದಿಯಲ್ಲಿ ಹತ್ತಿಕ್ಕುವನು: ಕುಸ್ತಿಪಟುಗಳ ಮೇಲಿನ ಕ್ರಮಕ್ಕೆ ಪ್ರತಿಪಕ್ಷಗಳ ಪ್ರತಿಕ್ರಿಯೆ

- Advertisement -
- Advertisement -

ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಖ್ಯಾತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ಜರುಗಿಸಿರುವ ಕ್ರಮದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

“ದುರಹಂಕಾರಿ ರಾಜ ಬೀದಿಗಳಲ್ಲಿ ಸಾರ್ವಜನಿಕರ ಧ್ವನಿಯನ್ನು ಹತ್ತಿಕ್ಕುವನು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಒಂದೆಡೆ ನೂತನ ಸಂಸತ್ ಭವನದ ಉದ್ಘಾಟನೆಯಲ್ಲಿ ಕೇಂದ್ರ ಸರ್ಕಾರ ಮುಳುಗಿದ್ದರೆ, ಸಂಸತ್ ಭವನದಿಂದ ಸುಮಾರು ಎರಡು ಕಿಮೀ ದೂರದಲ್ಲಿ ಪ್ರತಿಭಟಿಸುತ್ತಿದ್ದ ಕುಸ್ತಿಪಟುಗಳನ್ನು ಬಲವಂತವಾಗಿ ಪೊಲೀಸರು ಬಂಧಿಸಿರುವುದು ಆಕ್ರೋಶಕ್ಕೆ ಗುರಿಯಾಗಿದೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥ ಬ್ರಿಜ್‌ಭೂಷಣ್ ಶರಣ್ ಸಿಂಗ್ ಬಂಧಿಸುವಂತೆ ಆಗ್ರಹಿಸಿ ನೂತನ ಸಂಸತ್ ಭವನದ ಮುಂದೆ ಪ್ರತಿಭಟಿಸಲು ಕುಸ್ತಿಪಟುಗಳು ಮುಂದಾಗಿದ್ದರು.

ದೆಹಲಿ ಪೊಲೀಸರ ಕ್ರಮವು ರಾಜಕೀಯ ವಲಯದಲ್ಲಿ ತೀವ್ರ ಖಂಡನೆಗೆ ಒಳಗಾಗಿದೆ. “ಬಿಜೆಪಿ ಸರ್ಕಾರವು ಅನ್ಯಾಯ ಎಸಗುತ್ತಿದೆ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹತ್ತಿಕ್ಕುತ್ತಿದೆ” ಎಂದು ಪ್ರತಿಪಕ್ಷದ ನಾಯಕರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸ್ ದರ್ಪ; ಭುಗಿಲೆದ್ದ ಜನಾಕ್ರೋಶ

ಪೊಲೀಸರ ವರ್ತನೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದಾರೆ. “ಭಾರತದ ಹೆಸರನ್ನು ಎತ್ತರಕ್ಕೆ ಕೊಂಡೊಯ್ಯುವ ನಮ್ಮ ಕ್ರೀಡಾಪಟುಗಳೊಂದಿಗೆ ಇಂತಹ ವರ್ತನೆಯು ತುಂಬಾ ತಪ್ಪು ಮತ್ತು ಖಂಡನೀಯ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, “ಪ್ರಧಾನಿ ಮೋದಿಯವರು ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭವೆಂದು ಪರಿಗಣಿಸಿದ್ದಾರೆ. ಪಟ್ಟಾಭಿಷೇಕ ಮುಗಿದಿದೆ – ದುರಹಂಕಾರಿ ರಾಜ ಬೀದಿಬೀದಿಗಳಲ್ಲಿ ಸಾರ್ವಜನಿಕರ ಧ್ವನಿಯನ್ನು ಹತ್ತಿಕ್ಕುತ್ತಿದ್ದಾನೆ” ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, “ಬಿಜೆಪಿ ಸರ್ಕಾರದ ದುರಹಂಕಾರವು ಎಷ್ಟು ಹೆಚ್ಚಾಗಿದೆ ಎಂದರೆ- ಸರ್ಕಾರವು ನಮ್ಮ ಮಹಿಳಾ ಆಟಗಾರರ ಧ್ವನಿಯನ್ನು ನಿರ್ದಯವಾಗಿ ಬೂಟಿನ ಕೆಳಗೆ ಹಾಕಿ ತುಳಿಯುತ್ತಿದೆ” ಎಂದು ಟೀಕಿಸಿದ್ದಾರೆ.

“ಕ್ರೀಡಾಪಟುಗಳ ಎದೆಯ ಮೇಲಿರುವ ಪದಕಗಳು ನಮ್ಮ ದೇಶದ ಹೆಮ್ಮೆ” ಎಂದು ಅವರು ತಿಳಿಸಿದ್ದಾರೆ.

ಆಡಳಿತಾರೂಢ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಪ್ರಜಾಪ್ರಭುತ್ವ ಎಂದರೆ ಕೇವಲ ಕಟ್ಟಡಗಳಲ್ಲ, ಸಾರ್ವಜನಿಕರ ಧ್ವನಿಯ ಮೂಲಕ ಪ್ರಜಾಪ್ರಭುತ್ವ ನಡೆಯುತ್ತದೆ” ಎಂದು ಸರ್ಕಾರಕ್ಕೆ ಕಿವಿಹಿಂಡಿದ್ದಾರೆ.

ಇದನ್ನೂ ಓದಿರಿ: ಮಹಿಳಾ ಕುಸ್ತಿಪಟುಗಳು ಭಾರತದ ’ಬೇಟಿ’ಗಳಲ್ಲವೇ?

“ಸರ್ವಾಧಿಕಾರಿ ಧೋರಣೆಯ ಮೂಲಕ ಮಹಿಳಾ ಆಟಗಾರ್ತಿಯರ ಮೇಲೆ ಬೀದಿಬೀದಿಯಲ್ಲಿ ಹಲ್ಲೆ ಮಾಡಲಾಗಿದೆ. ಬಿಜೆಪಿ-ಆರ್‌ಎಸ್‌ಎಸ್ ಆಡಳಿತಗಾರರ 3 ಸುಳ್ಳುಗಳು ಈಗ ದೇಶದ ಮುಂದೆ ಬಯಲಾಗಿವೆ 1. ಪ್ರಜಾಪ್ರಭುತ್ವ 2. ರಾಷ್ಟ್ರೀಯತೆ 3. ಬೇಟಿ ಬಜಾವೋ” ಎಂದು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಮೋದಿ ಸರ್ಕಾರ ಇಂದು ಹೊಸ ಸಂಸತ್ ಭವನವನ್ನು ಉದ್ಘಾಟಿಸಿರಬಹುದು. ಆದರೆ ಸರ್ಕಾರ ಪ್ರಜಾಪ್ರಭುತ್ವದ ಬಗ್ಗೆ ನಿಜವಾಗಿಯೂ ಏನು ಯೋಚಿತ್ತಿದೆ ಎಂಬುದನ್ನು ದೆಹಲಿ ಪೊಲೀಸರು ಬೀದಿಯಲ್ಲಿ ತೋರಿಸಿದ್ದಾರೆ” ಎಂದು ಸಿಪಿಐ(ಎಂ) ಅಭಿಪ್ರಾಯಪಟ್ಟಿದೆ.

ತೃಣಮೂಲ ಕಾಂಗ್ರೆಸ್ ವರಿಷ್ಠೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿ ಕುಸ್ತಿಪಟುಗಳ ವಿರುದ್ಧ ದೆಹಲಿ ಪೊಲೀಸರು ತೆಗೆದುಕೊಂಡಿರುವ ಕ್ರಮವನ್ನು ಖಂಡಿಸಿದ್ದಾರೆ. “ನಮ್ಮ ಚಾಂಪಿಯನ್‌ಗಳನ್ನು ಈ ರೀತಿ ನಡೆಸಿಕೊಳ್ಳುವುದು ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...