Homeಮುಖಪುಟಕುಸ್ತಿಪಟುಗಳು ಬಂಧನದಲ್ಲೂ ನಗುತ್ತಿದ್ದಾರೆ ಎಂದು ನಕಲಿ ಫೋಟೋ ಹರಿಬಿಟ್ಟ ಐಟಿ ಸೆಲ್: ಬಜರಂಗ್ ಪೂನಿಯಾ ಆರೋಪ

ಕುಸ್ತಿಪಟುಗಳು ಬಂಧನದಲ್ಲೂ ನಗುತ್ತಿದ್ದಾರೆ ಎಂದು ನಕಲಿ ಫೋಟೋ ಹರಿಬಿಟ್ಟ ಐಟಿ ಸೆಲ್: ಬಜರಂಗ್ ಪೂನಿಯಾ ಆರೋಪ

- Advertisement -
- Advertisement -

ಐಟಿ ಸೆಲ್‌ನವರು ಪ್ರತಿಭಟನಾ ನಿರತ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಸಂಗೀತಾ ಫೋಗಟ್ ಅವರ ಮಾರ್ಫ್ ಮಾಡಿದ ಚಿತ್ರವನ್ನು ಪ್ರಸಾರ ಮಾಡುತ್ತಿದ್ದಾರೆ ಎಂದು ಒಲಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಭಾನುವಾರ ಆರೋಪಿಸಿದ್ದಾರೆ.

ಲೈಂಗಿಕ ಕಿರುಕುಳ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನವದೆಹಲಿಯ ಹೊಸ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಲು ಹೊರಟಿದ್ದ ಭಾರತದ ಹಲವಾರು ಪ್ರಮುಖ ಕುಸ್ತಿಪಟುಗಳನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಈ ವೇಳೆ ವಿನೇಶ್ ಫೋಗಟ್ ಮತ್ತು ಸಂಗೀತಾ ಫೋಗಟ್ ಅವರನ್ನು ಪೊಲೀಸ್ ಅಧಿಕಾರಿಗಳು ಬಸ್‌ನಲ್ಲಿ ಎಳೆದೊಯ್ಯುವಾಗ ಅವರು ನಗುತ್ತಿರುವಂತೆ ನಕಲಿ ಫೋಟೋ ಚಿತ್ರಸಿ, ಕುಸ್ತಿಪಟುಗಳು ತಮ್ಮ ಪ್ರತಿಭಟನೆಯ ಬಗ್ಗೆ ಗಂಭೀರವಾಗಿಲ್ಲ ಎಂಬ ಹೇಳಿಕೆಯೊಂದಿಗೆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

ಪತ್ರಕರ್ತ ಮಂದೀಪ್ ಪುನಿಯಾ ಅವರು ಮೂಲ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಮಾರ್ಫ್ ಮಾಡಲಾದ ಚಿತ್ರ ಹೊರಬರುವ ಮುನ್ನ ತಗೆದ ಫೋಟೊವನ್ನು ತೋರಿಸಿ, ಇದು ವಿನೇಶ್ ಫೋಗಟ್ ಮತ್ತು ಸಂಗೀತಾ ಫೋಗಟ್ ನಗುತ್ತಿರುವುದನ್ನು ತೋರಿಸುವುದಿಲ್ಲ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪುನಿಯಾ, ”ಐಟಿ ಸೆಲ್‌ನವರು ಈ ನಕಲಿ ಚಿತ್ರವನ್ನು ಹರಡುತ್ತಿದ್ದಾರೆ. ಈ ನಕಲಿ ಚಿತ್ರವನ್ನು ಪೋಸ್ಟ್ ಮಾಡಿದವರ ವಿರುದ್ಧ ದೂರು ದಾಖಲಿಸಲಾಗುವುದು ಎಂದು ನಾವು ಸ್ಪಷ್ಟಪಡಿಸುತ್ತೇವೆ” ಎಂದಿದ್ದಾರೆ.

ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆ ಎಎಫ್‌ಪಿಯಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತ ಉಝೈರ್ ರಿಜ್ವಿ ಅವರು ಕುಸ್ತಿಪಟುಗಳ ಮೂಲ ಚಿತ್ರವನ್ನು ಹೇಗೆ ಮಾರ್ಪಡಿಸಲು ಸಾಫ್ಟ್‌ವೇರ್ ಅನ್ನು ಬಳಸಲಾಗಿದೆ ಎಂಬುದನ್ನು ಪ್ರದರ್ಶಿಸಲು ಟ್ವಿಟರ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. FaceApp ಎಂಬ ಸಾಫ್ಟ್‌ವೇರ್, ಬಳಕೆದಾರರಿಗೆ “ಸ್ಮೈಲ್” ಫಿಲ್ಟರ್ ಅನ್ನು ಪ್ರಯತ್ನಿಸಲು ಮತ್ತು ಜನರು ನಗುತ್ತಿರುವಂತೆ ಕಾಣುವಂತೆ ಅವರ ಮುಖಗಳನ್ನು ಮಾರ್ಪಡಿಸುತ್ತದೆ ಎಂಬುದು ಅಲ್ಲಿ ಕಾಣಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸುತ್ತಿದ್ದಂತೆಯೇ ಕುಸ್ತಿಪಟುಗಳು ಅದರತ್ತ ಮೆರವಣಿಗೆ ನಡೆಸಲು ಯತ್ನಿಸಿದರು. ಆದರೆ ನೂರಾರು ಪೊಲೀಸರು ಅವರನ್ನು ತಡೆದರು.

2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಸಾಕ್ಷಿ ಮಲಿಕ್, ಕುಸ್ತಿಪಟುಗಳನ್ನು ಪೊಲೀಸ್ ಅಧಿಕಾರಿಗಳು ಎಳೆದೊಯ್ದ ಫೋಟೋಗಳು ಮತ್ತು ವೀಡಿಯೊವನ್ನು ಹಂಚಿಕೊಂಡಿದ್ದಾರೆ.

”ನಮ್ಮ ಚಾಂಪಿಯನ್‌ಗಳನ್ನು ಹೀಗೆ ನಡೆಸಿಕೊಳ್ಳಲಾಗುತ್ತಿದೆ. ಜಗತ್ತು ನಮ್ಮನ್ನು ನೋಡುತ್ತಿದೆ” ಎಂದು ಸಾಕ್ಷಿ ಮಲಿಕ್ ಟ್ವೀಟ್ ಮಾಡಿದ್ದಾರೆ.

ಹಲವಾರು ವಿರೋಧ ಪಕ್ಷದ ನಾಯಕರು ಪೊಲೀಸರ ಕ್ರಮಗಳನ್ನು ಟೀಕಿಸಿದ್ದು, ಇದು ”ಅತ್ಯಂತ ನಾಚಿಕೆಗೇಡಿನ ಮತ್ತು ದುರದೃಷ್ಟಕರ” ಎಂದು ಹೇಳಿದರು.

ಇದನ್ನೂ ಓದಿ: ಒಲಿಂಪಿಕ್ಸ್ ಪದಕ ವಿಜೇತರ ಮೇಲೆ ಗಲಭೆ ಪ್ರಕರಣ ದಾಖಲು: ದೇಶದಲ್ಲಿ ಸರ್ವಾಧಿಕಾರ ಆರಂಭವಾಗಿದೆಯೇ?; ವಿನೇಶ್ ಫೋಗಟ್ ಪ್ರಶ್ನೆ

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮಾತನಾಡಿ, ಬಿಜೆಪಿಯು ಮತಗಳ ಅಗತ್ಯವಿದ್ದಾಗ ”ಬೇಟಿ ಬಚಾವೋ” ಅಭಿಯಾನವನ್ನು ಪ್ರಾರಂಭಿಸಿತು. ಆದರೆ ಈಗ ಅವರು ”ದೇಶದ ಹೆಣ್ಣುಮಕ್ಕಳನ್ನು ಅವಮಾನಿಸುತ್ತಿದ್ದಾರೆ” ಎಂದು ಹೇಳಿದರು.

“ದುರಹಂಕಾರಿ ರಾಜ ಬೀದಿಗಳಲ್ಲಿ ಸಾರ್ವಜನಿಕರ ಧ್ವನಿಯನ್ನು ಹತ್ತಿಕ್ಕುವನು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ”ಆಟಗಾರರ ಎದೆಯ ಮೇಲಿರುವ ಪದಕಗಳು ನಮ್ಮ ದೇಶದ ಹೆಮ್ಮೆ. ಆ ಪದಕಗಳಿಂದ ಕ್ರೀಡಾ ಪಟುಗಳ ಪರಿಶ್ರಮದಿಂದ ದೇಶದ ಗೌರವ ಹೆಚ್ಚುತ್ತದೆ. ಬಿಜೆಪಿ ಸರ್ಕಾರದ ದುರಹಂಕಾರ ಎಷ್ಟರಮಟ್ಟಿಗೆ ಹೆಚ್ಚಿದೆ ಎಂದರೆ ಸರ್ಕಾರ ನಮ್ಮ ಮಹಿಳಾ ಆಟಗಾರ್ತಿಯರ ದನಿಯನ್ನು ನಿರ್ದಯವಾಗಿ ಅವರ ಬೂಟಿನ ಕೆಳಗೆ ತುಳಿಯುತ್ತಿದೆ. ಇದು ಸಂಪೂರ್ಣವಾಗಿ ತಪ್ಪು. ಸರ್ಕಾರದ ದುರಹಂಕಾರ ಹಾಗೂ ಈ ಅನ್ಯಾಯವನ್ನು ಇಡೀ ದೇಶವೇ ನೋಡುತ್ತಿದೆ” ಎಂದು ಟೀಕಿಸಿದ್ದಾರೆ.

ಪೊಲೀಸರ ವರ್ತನೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದಾರೆ. “ಭಾರತದ ಹೆಸರನ್ನು ಎತ್ತರಕ್ಕೆ ಕೊಂಡೊಯ್ಯುವ ನಮ್ಮ ಕ್ರೀಡಾಪಟುಗಳೊಂದಿಗೆ ಇಂತಹ ವರ್ತನೆಯು ತುಂಬಾ ತಪ್ಪು ಮತ್ತು ಖಂಡನೀಯ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...