Homeಕರ್ನಾಟಕಜಂತರ್‌ಮಂತರ್‌‌ನಲ್ಲಿ ಹೋರಾಟ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ: ದೆಹಲಿ ಪೊಲೀಸ್

ಜಂತರ್‌ಮಂತರ್‌‌ನಲ್ಲಿ ಹೋರಾಟ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ: ದೆಹಲಿ ಪೊಲೀಸ್

- Advertisement -
- Advertisement -

ಗಲಭೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪ್ರಕರಣಗಳನ್ನು ದಾಖಲಿಸಿದ ಒಂದು ದಿನದ ನಂತರ ದೆಹಲಿ ಪೊಲೀಸರು ಪ್ರತಿಕ್ರಿಯಿಸಿದ್ದು, “ಜಂತರ್‌ ಮಂತರ್‌ನಲ್ಲಿ ಕುಸ್ತಿಪಟುಗಳು ಹೋರಾಟ ನಡೆಸಲು ಅವಕಾಶ ನೀಡುವುದಿಲ್ಲ” ಎಂದಿದ್ದಾರೆ.

ಪೊಲೀಸರು ನಿನ್ನೆ ಮತ್ತೆ ಮತ್ತೆ ಕೇಳಿಕೊಂಡರೂ ಪ್ರತಿಭಟನಾಕಾರರು ಉನ್ಮಾದದಲ್ಲಿ ಕಾನೂನನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಪ್ರತಿಭಟನೆಗಾಗಿ ನಿಯೋಜಿತವಾದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಅವರ ಹೋರಾಟವನ್ನು ತಡೆಯಬೇಕಾಯಿತು.

“ನಮ್ಮ ಸತ್ಯಾಗ್ರಹ ಇಲ್ಲಿಯವರೆಗೆ ಸುಗಮವಾಗಿ ನಡೆಯುತ್ತಿದೆ” ಎಂದಿರುವ ಕುಸ್ತಿಪಟುಗಳು, ಗಲಭೆ ಮತ್ತು ಹಿಂಸಾಚಾರದ ಆರೋಪಗಳನ್ನು ನಿರಾಕರಿಸಿದ್ದಾರೆ.

“ಕುಸ್ತಿಪಟುಗಳು ಮುಂದೇನಾದರೂ ಮತ್ತೆ ಧರಣಿ ನಡೆಸಲು ಅನುಮತಿಗಾಗಿ ಅರ್ಜಿ ಸಲ್ಲಿಸಿದರೆ, ಜಂತರ್ ಮಂತರ್ ಹೊರತುಪಡಿಸಿ ಯಾವುದೇ ಸೂಕ್ತ, ಅಧಿಸೂಚಿತ ಸ್ಥಳಗಳಲ್ಲಿ ಅವರನ್ನು ಅನುಮತಿಸಲಾಗುವುದು” ಎಂದು ನವದೆಹಲಿಯ ಉಪ ಪೊಲೀಸ್ ಆಯುಕ್ತರು ಟ್ವೀಟ್ ಮಾಡಿದ್ದಾರೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಅವರನ್ನು ಪ್ರತಿಭಟನೆ ವೇಳೆ ಭಾನುವಾರ ದೆಹಲಿ ಪೊಲೀಸರು ಬಂಧಿಸಿದ್ದರು. ಕುಸ್ತಿಪಟುಗಳು ಹೊಸ ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಪೊಲೀಸರು ಮತ್ತು ಕುಸ್ತಿಪಟುಗಳ ನಡುವೆ ನೂಕಾಟ ನಡೆದಿತ್ತು. ಕುಸ್ತಿಪಟುಗಳನ್ನು ಬಲವಂತವಾಗಿ ಪೊಲೀಸರು ಬಂಧನ ಮಾಡಿದ್ದರು. ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು ಹಾಕಿದ್ದ ತಾತ್ಕಾಲಿಕ ಟೆಂಟ್‌ಗಳನ್ನೂ ತೆರವು ಮಾಡಿದರು.

ಐಪಿಸಿ ಸೆಕ್ಷನ್ 147 (ಗಲಭೆ), 149 (ಕಾನೂನುಬಾಹಿರ ಸಭೆ), 186 (ಕರ್ತವ್ಯನಿರತ ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು), 188 (ಸಾರ್ವಜನಿಕ ಸೇವಕರು ಘೋಷಿಸಿದ ಆದೇಶಕ್ಕೆ ಅಸಹಕಾರ), 332 (ಸಾರ್ವಜನಿಕ ಸೇವಕರ ಕರ್ತವ್ಯ ತಡೆದು ಸ್ವಯಂಪ್ರೇರಣೆಯಿಂದ ಅಡ್ಡಿ) ಮತ್ತು ಪಿಡಿಪಿಪಿ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಕುಸ್ತಿಪಟುಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಪ್ರತಿಕ್ರಿಯಿಸಿ, “ವೀಡಿಯೊದಲ್ಲಿ ಎಲ್ಲವೂ ದಾಖಲಾಗಿದೆ. ಒಬ್ಬ ಕುಸ್ತಿಪಟುವನ್ನು ತಡೆಯಲು 20-30 ಮಂದಿ ಕಾನ್‌ಸ್ಟೆಬಲ್‌ಗಳು ಇರುವಾಗ, ನಾವು ಯಾವುದೇ ರೀತಿಯ ಗಲಭೆಗಳನ್ನು ಹೇಗೆ ಮಾಡಬಹುದು?” ಎಂದು ಪ್ರಶ್ನಿಸಿದ್ದಾರೆ.

“ದಯವಿಟ್ಟು ನಮ್ಮನ್ನು ಕರೆದುಕೊಂಡು ಹೋಗಬೇಡಿ ಎಂದು ನಾವು ಅವರಿಗೆ ಹೇಳಲು ಪ್ರಯತ್ನಿಸುತ್ತಿದ್ದೇವೆ. ನಾವು ಹಾಗೆಯೇ ನಡೆದುಕೊಳ್ಳಲು ಬಯಸುತ್ತೇವೆ. ಶಾಂತಿಯುತ ಮೆರವಣಿಗೆಯ ವೇಳೆ ಯಾರೂ ನಮ್ಮ ಮಾತು ಕೇಳಲಿಲ್ಲ. ನಮ್ಮನ್ನು ಬಲವಂತವಾಗಿ ಬಸ್ಸಿನೊಳಗೆ ಎಳೆದೊಯ್ದರು, ಅದರಿಂದಾಗಿ ನಮಗೆ ಗಾಯಗಳಾದವು. ನಾವು ಯಾವುದೇ ಗಲಭೆ ಮಾಡಿಲ್ಲ, ಯಾವುದೇ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿಲ್ಲ, ನಾವು ಬ್ಯಾರಿಕೇಡಿಂಗ್ ಅನ್ನು ಎಳೆದಿಲ್ಲ ಅಥವಾ ತಳ್ಳಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ನಾವು ಮೊದಲ ದಿನದಿಂದಲೂ ಶಾಂತಿಯುತ ಪ್ರತಿಭಟನೆಯನ್ನು ಮಾಡುತ್ತಿದ್ದೇವೆ. ಹೊಸ ಸಂಸತ್ ಭವನದ ಎದುರು ಹಮ್ಮಿಕೊಳ್ಳಲಾಗಿದ್ದ ಹೋರಾಟಕ್ಕೆ ಹೋಗಲು ಬಿಡುವಂತೆ ಅವರಲ್ಲಿ ಮನವಿ ಮಾಡಿದೆವು. ಆದರೆ ನಮಗೆ ಹೋಗಲು ಅವಕಾಶ ನೀಡಲಿಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...