Homeಕರ್ನಾಟಕಮೈಸೂರು: ಭೀಕರ ಅಪಘಾತದಲ್ಲಿ ಹತ್ತು ಮಂದಿ ದಾರುಣ ಸಾವು

ಮೈಸೂರು: ಭೀಕರ ಅಪಘಾತದಲ್ಲಿ ಹತ್ತು ಮಂದಿ ದಾರುಣ ಸಾವು

- Advertisement -
- Advertisement -

ಕೊಳ್ಳೇಗಾಲ ಮತ್ತು ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿನ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿ ಹತ್ತು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ಭೀಕರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದವರು ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.

ಸೋಮವಾರ ಮಧ್ಯಾಹ್ನ ಮೈಸೂರು ಜಿಲ್ಲೆಯ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.

ಮೃತ ಹತ್ತು ಜನರು ಬಳ್ಳಾರಿ ಮೂಲದವರೆಂದು ತಿಳಿದು ಬಂದಿದೆ. ಟಿ.ನರಸೀಪುರ ಮುಖ್ಯ ರಸ್ತೆಯ ಮಾರ್ಗವಾಗಿ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಆಗಮಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧ ಟಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿ ಇಬ್ಬರು ಮಕ್ಕಳು ಹಾಗೂ ಮಹಿಳೆಯರು ಸೇರಿ 13 ಮಂದಿ ಇದ್ದರು ಎನ್ನಲಾಗಿದೆ. ಖಾಸಗಿ ಬಸ್‌ ಕೊಳ್ಳೇಗಾಲದ ಕಡೆಗೆ ಹೋಗುತ್ತಿತ್ತು. ಮೃತರ ವಿವರ ಲಭ್ಯವಾಗಿಲ್ಲ. ಸ್ಥಳೀಯರ ನೆರವಿನಲ್ಲಿ ಶವಗಳನ್ನು ಹೊರ ತೆಗೆಯಲಾಗುತ್ತಿದೆ.

ನಿನ್ನೆ ಕೊಪ್ಪಳದಲ್ಲಿ ಅಪಘಾತ; ಆರು ಮಂದಿ ಸಾವು

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಕಲಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಆರು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ ಮೃತರ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದರು.

ಸೊಲ್ಲಾಪುರದ ಜಯಶ್ರೀ ಕಾಂಬಳೆ (25), ಚಾಲಕ ರಾಘವೇಂದ್ರ ಕಾಂಬಳೆ (28), ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ನಂದ್ರಾಳ ಗ್ರಾಮದ ಖಾಜಪ್ಪ ಬನಸೋಡೆ (36), ಶಿರನಾಳದ ಅಕ್ಷಯ ಶಿವಶರಣ (22), ರಾಕಿ (4) ಮತ್ತು ರಶ್ಮಿಕಾ (2) ಮೃತಪಟ್ಟವರು.

ಜಯಶ್ರೀ ಗೃಹಿಣಿಯಾಗಿದ್ದರು. ರಾಘವೇಂದ್ರ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದರು. ಖಾಜಪ್ಪ ಮತ್ತು ಅಕ್ಷಯ ಕೂಲಿ ಕೆಲಸ ಮಾಡುತ್ತಿದ್ದರು. ತಮಿಳುನಾಡಿನ ಲಾರಿ ಗುಜರಾತ್ ಕಡೆಗೆ ತೆರಳುತ್ತಿತ್ತು. ಕಾರು ವಿಜಯಪುರದಿಂದ ಬೆಂಗಳೂರು ಕಡೆಗೆ ತೆರಳುವಾಗ ಅಪಘಾತ ಸಂಭವಿಸಿತ್ತು.

‘ವೇಗವಾಗಿ ಬರುತ್ತಿದ್ದ ಕಾರಿನ ಟಯರ್‌ ಸಿಡಿದು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...