Homeಕರ್ನಾಟಕಮೈಸೂರು: ಭೀಕರ ಅಪಘಾತದಲ್ಲಿ ಹತ್ತು ಮಂದಿ ದಾರುಣ ಸಾವು

ಮೈಸೂರು: ಭೀಕರ ಅಪಘಾತದಲ್ಲಿ ಹತ್ತು ಮಂದಿ ದಾರುಣ ಸಾವು

- Advertisement -
- Advertisement -

ಕೊಳ್ಳೇಗಾಲ ಮತ್ತು ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿನ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿ ಹತ್ತು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ಭೀಕರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದವರು ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.

ಸೋಮವಾರ ಮಧ್ಯಾಹ್ನ ಮೈಸೂರು ಜಿಲ್ಲೆಯ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.

ಮೃತ ಹತ್ತು ಜನರು ಬಳ್ಳಾರಿ ಮೂಲದವರೆಂದು ತಿಳಿದು ಬಂದಿದೆ. ಟಿ.ನರಸೀಪುರ ಮುಖ್ಯ ರಸ್ತೆಯ ಮಾರ್ಗವಾಗಿ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಆಗಮಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧ ಟಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿ ಇಬ್ಬರು ಮಕ್ಕಳು ಹಾಗೂ ಮಹಿಳೆಯರು ಸೇರಿ 13 ಮಂದಿ ಇದ್ದರು ಎನ್ನಲಾಗಿದೆ. ಖಾಸಗಿ ಬಸ್‌ ಕೊಳ್ಳೇಗಾಲದ ಕಡೆಗೆ ಹೋಗುತ್ತಿತ್ತು. ಮೃತರ ವಿವರ ಲಭ್ಯವಾಗಿಲ್ಲ. ಸ್ಥಳೀಯರ ನೆರವಿನಲ್ಲಿ ಶವಗಳನ್ನು ಹೊರ ತೆಗೆಯಲಾಗುತ್ತಿದೆ.

ನಿನ್ನೆ ಕೊಪ್ಪಳದಲ್ಲಿ ಅಪಘಾತ; ಆರು ಮಂದಿ ಸಾವು

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಕಲಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಆರು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ ಮೃತರ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದರು.

ಸೊಲ್ಲಾಪುರದ ಜಯಶ್ರೀ ಕಾಂಬಳೆ (25), ಚಾಲಕ ರಾಘವೇಂದ್ರ ಕಾಂಬಳೆ (28), ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ನಂದ್ರಾಳ ಗ್ರಾಮದ ಖಾಜಪ್ಪ ಬನಸೋಡೆ (36), ಶಿರನಾಳದ ಅಕ್ಷಯ ಶಿವಶರಣ (22), ರಾಕಿ (4) ಮತ್ತು ರಶ್ಮಿಕಾ (2) ಮೃತಪಟ್ಟವರು.

ಜಯಶ್ರೀ ಗೃಹಿಣಿಯಾಗಿದ್ದರು. ರಾಘವೇಂದ್ರ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದರು. ಖಾಜಪ್ಪ ಮತ್ತು ಅಕ್ಷಯ ಕೂಲಿ ಕೆಲಸ ಮಾಡುತ್ತಿದ್ದರು. ತಮಿಳುನಾಡಿನ ಲಾರಿ ಗುಜರಾತ್ ಕಡೆಗೆ ತೆರಳುತ್ತಿತ್ತು. ಕಾರು ವಿಜಯಪುರದಿಂದ ಬೆಂಗಳೂರು ಕಡೆಗೆ ತೆರಳುವಾಗ ಅಪಘಾತ ಸಂಭವಿಸಿತ್ತು.

‘ವೇಗವಾಗಿ ಬರುತ್ತಿದ್ದ ಕಾರಿನ ಟಯರ್‌ ಸಿಡಿದು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...