Homeಕರ್ನಾಟಕನೂತನ ಸಚಿವರ ಪೈಕಿ 24 ಮಂದಿಯ ಮೇಲಿವೆ ಕ್ರಿಮಿನಲ್ ಪ್ರಕರಣ: ವರದಿ

ನೂತನ ಸಚಿವರ ಪೈಕಿ 24 ಮಂದಿಯ ಮೇಲಿವೆ ಕ್ರಿಮಿನಲ್ ಪ್ರಕರಣ: ವರದಿ

- Advertisement -
- Advertisement -

ಕರ್ನಾಟಕದಲ್ಲಿ ಹೊಸದಾಗಿ ನೇಮಕಗೊಂಡ 32 ಸಚಿವರಲ್ಲಿ 31 ಮಂದಿ ಒಂದು ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂದು ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಚುನಾವಣಾ ಕಾವಲು ಸಮಿತಿಯ ವಿಶ್ಲೇಷಣೆಯು 24 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇರುವುದನ್ನು ಬಹಿರಂಗಪಡಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದು, ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾರೆ. ಮೇ 20 ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಒಂಬತ್ತು ಇತರ ಸಚಿವರು ಸಂಪುಟಕ್ಕೆ ಸೇರ್ಪಡೆಗೊಂಡರು. ಮೇ 27 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು 24 ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. 34 ಸಂಖ್ಯಾಬಲದ ರಾಜ್ಯ ಸಚಿವ ಸಂಪುಟವು ಸಂಪೂರ್ಣ ವಿಸ್ತರಣೆಯಾಗಿದೆ.

ತನ್ನ ವರದಿಯಲ್ಲಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್, “34 ಮಂತ್ರಿಗಳಲ್ಲಿ 32 ಮಂದಿಯ ಚುನಾವಣಾ ಪ್ರಮಾಣ ಪತ್ರಗಳನ್ನು ವಿಶ್ಲೇಷಿಸಲಾಗಿದೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಸ್ಪಷ್ಟ ಮತ್ತು ಸಂಪೂರ್ಣ ಅಫಿಡವಿಟ್‌ಗಳ ಅಲಭ್ಯತೆಯಿಂದಾಗಿ ಸಚಿವ ಕೆ.ಜೆ.ಜಾರ್ಜ್ ಅವರ ಪ್ರಮಾಣಪತ್ರವನ್ನು ಸರಿಯಾಗಿ ವಿಶ್ಲೇಷಲು ಸಾಧ್ಯವಾಗಿಲ್ಲ” ಎಂದಿದೆ. ಮತ್ತೊಬ್ಬ ಸಚಿವ ಎನ್.ಎಸ್.ಬೋಸರಾಜು ಅವರು ರಾಜ್ಯ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನ ಸದಸ್ಯರಲ್ಲದ ಕಾರಣ ಅವರ ವಿವರಗಳನ್ನು ವಿಶ್ಲೇಷಿಸಲು ಸಾಧ್ಯವಾಗಿಲ್ಲ.

32 ಸಚಿವರ ಸರಾಸರಿ ಆಸ್ತಿ 119.06 ಕೋಟಿ ರೂಪಾಯಿ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ತಿಳಿಸಿದೆ. ಡಿ.ಕೆ.ಶಿವಕುಮಾರ್ ಅವರು 1,413.80 ಕೋಟಿ ರೂಪಾಯಿ ಮೌಲ್ಯದ ಘೋಷಿತ ಆಸ್ತಿ ಹೊಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 51.93 ಕೋಟಿ ರೂ. ಆಸ್ತಿ ಹೊಂದಿದ್ದಾರೆ.

58.56 ಲಕ್ಷ ಆಸ್ತಿ ಹೊಂದಿರುವ, ಕೋಟ್ಯಾಧಿಪತಿಯಲ್ಲದ ಏಕೈಕ ಸಚಿವ ತಿಮ್ಮಾಪುರ್‌ ಆರ್‌.ಬಾಳಪ್ಪ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಏಳು ಸಚಿವರು ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳಿರುವುದನ್ನು ಘೋಷಿಸಿಕೊಂಡಿದ್ದಾರೆ ಎಂದು ವರದಿ ತೋರಿಸಿದೆ. ಡಿ.ಕೆ.ಶಿವಕುಮಾರ್, ಡಿ ಸುಧಾಕರ್, ಜಮೀರ್ ಅಹಮದ್ ಖಾನ್, ಕೆಎಚ್ ಮುನಿಯಪ್ಪ, ಸಿದ್ದರಾಮಯ್ಯ, ಬಿ ನಾಗೇಂದ್ರ ಮತ್ತು ಈಶ್ವರ್ ಖಂಡ್ರೆ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆಗಳಿವೆ.

ಸಚಿವ ನಾಗೇಂದ್ರ ವಿರುದ್ಧ 105 ಗಂಭೀರ ಕ್ರಿಮಿನಲ್ ಪ್ರಕರಣಗಳಿವೆ. ಹೋರಾಟದ ಸಂದರ್ಭದಲ್ಲಿಯೂ ಅನೇಕ ಸಂದರ್ಭದಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಸಾಧ್ಯತೆಗಳು ಇರುತ್ತವೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಗಂಭೀರ ಅಪರಾಧಗಳನ್ನು ಜಾಮೀನು ರಹಿತ ಅಪರಾಧಗಳೆಂದು ವ್ಯಾಖ್ಯಾನಿಸಿದೆ. ಇಂತಹ ಅಪರಾಧಗಳಲ್ಲಿ ಗರಿಷ್ಠ ಐದು ವರ್ಷಗಳು ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷೆಯನ್ನು ನೀಡಲಾಗುತ್ತದೆ. ಹಲ್ಲೆ, ಕೊಲೆ, ಅಪಹರಣ, ಅತ್ಯಾಚಾರ, ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ಭ್ರಷ್ಟಾಚಾರ ಪ್ರಕರಣಗಳಿಗೆ ಇವುಗಳು ಸಂಬಂಧಿಸಿರುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...