Homeಕರ್ನಾಟಕಪಠ್ಯಪುಸ್ತಕ ಪರಿಷ್ಕರಣೆ ವಿಚಾರ: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ...

ಪಠ್ಯಪುಸ್ತಕ ಪರಿಷ್ಕರಣೆ ವಿಚಾರ: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಭಾರೀ ವಿವಾದ ಹುಟ್ಟುಹಾಕಿತ್ತು. ರೋಹಿತ್ ಚಕ್ರತೀರ್ಥ ಎನ್ನುವವರ ಮುಂದಾಳತ್ವದಲ್ಲಿ ನಡೆದ ಪರಿಷ್ಕರಣೆಯಲ್ಲಿ ಪಠ್ಯದಲ್ಲಿ ಅನೇಕ ಮುಖ್ಯವಾದ ವಿಚಾರಗಳನ್ನು ಕೈ ಬಿಟ್ಟು ಅನಗತ್ಯ ವಿಚಾರಗಳನ್ನು ಸೇರಿಸಲಾಗಿದೆ ಎಂದು ನಾಡಿನ ಸಾಹಿತಿಗಳು, ವಿಚಾರವಂತರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಪಠ್ಯಪುಸ್ತಕ ಪರಿಷ್ಕರಣೆಗೆ ತಕ್ಷಣವೇ ಸಮಿತಿ ರಚಿಸಬೇಕು ಎಂದು ಸಮಾನ ಮನಸ್ಕರ ಒಕ್ಕೂಟ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿ ಮಾಡಿದ ಹಿರಿಯ ಸಾಹಿತಿ, ಕಲಾವಿದರು, ಇಂದಿನ ಬದಲಾವಣೆಗೆ ತಕ್ಕಂತೆ ಪಠ್ಯ ಪುಸ್ತಕಗಳನ್ನು ಪರಿಷ್ಕರಿಸಲು ಕೂಡಲೇ ಒಂದು ತಜ್ಞರ ಸಮಿತಿಯನ್ನು ರಚಿಸಬೇಕು’ ಎಂದು ಸಮಾನ ಮನಸ್ಥರ ಒಕ್ಕೂಟದ ಮುಖಂಡರಾದ ಡಾ. ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಪ್ರೊ.ರವಿವರ್ಮಕುಮಾರ್, ಪ್ರೊ. ನಿರಂಜನಾರಾಧ್ಯ, ಡಾ.ವಸುಂಧರ ಭೂಪತಿ ಸೇರಿದಂತೆ ಹಿರಿಯ ಸಾಹಿತಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಗೆ ತಕ್ಷಣವೇ ಸಮಿತಿ ರಚಿಸಲು 'ಸಮಾನ ಮನಸ್ಕರ ಒಕ್ಕೂಟ'ದಿಂದ ಸಿಎಂಗೆ ಮನವಿ - Varthabharati

”ಬಿಜೆಪಿ ಸರಕಾರವು ಶಿಕ್ಷಣವನ್ನು ಸಂಪೂರ್ಣ ರಾಜಕಾರಣಕ್ಕೆ ಬಳಸಿಕೊಂಡು, ಗೊಂದಲವನ್ನು ಸೃಷ್ಟಿಸಿತ್ತು. ಈಗಾಗಲೇ ಮುದ್ರಣವಾಗಿ ಶಾಲೆಗಳಿಗೆ ತಲುಪಿರುವ ಕಲುಷಿತ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು. ಬದಲಾದ ಪ್ರಮುಖ ಪಾಠಗಳನ್ನು ಮತ್ತು ಕಲಿಕಾಂಶಗಳನ್ನು ಈ ಪುಸ್ತಕಗಳಿಂದ ತೆಗೆದು ಹಾಕಿ ವಿತರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಡಾ.ಬಂಜಗೆರೆ ಜಯಪ್ರಕಾಶ್, ಜಾಣಗೆರೆ ವೆಂಕಟರಾಮಯ್ಯ, ಡಾ.ಜಾಫೆಟ್, ರುದ್ರಪ್ಪ ಹನಗವಾಡಿ, ಪ್ರೊ. ಎಲ್.ಎನ್.ಮುಕುಂದರಾಜ್, ಕೆ.ಶರೀಫಾ, ಕೆ.ಎಸ್.ವಿಮಲಾ, ಡಾ.ಲೀಲಾ ಸಂಪಿಗೆ, ಶ್ರೀಪಾದಭಟ್, ಎ.ಕೆ.ಕರುಣಾಕರ, ಎಚ್‌. ಆರ್.ಜಯರಾಮ್, ಬಿ.ಎ.ನರಸಿಂಹನ್, ಕೆ.ಸುದೀಶ್, ಡಾ.ಗಿರೀಶ್ ಮೂಡ್, ದಿನೇಶ್ ಅಮಿನ್ ಮಟ್ಟು, ಸುರೇಂದ್ರ ರಾವ್, ಜಿ.ಶರಣಪ್ಪ ರಾಜೇಂದ್ರ ಸಿಂಗ್ ಬಾಬು, ಎನ್. ಹನುಮೇಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಪರಿಷ್ಕರಣೆಗೊಂಡ ಪಠ್ಯಪುಸ್ತಕ ರದ್ದು ಮಾಡಿ, ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳಿ: ಸಿಎಂಗೆ ಶಿಕ್ಷಣ ತಜ್ಞರಿಂದ ಪತ್ರ

ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ಬಿಜೆಪಿ ಮಾಡಿದ ಎಡವಟ್ಟುಗಳು

ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕ ಪರಿಶೀಲನೆಗಾಗಿ ರಚಿಸಿದ್ದ ಸಮಿತಿಯು, ತನ್ನ ಮಿತಿಯನ್ನು ಮೀರಿ ತಿರುಚಿದ ಇತಿಹಾಸ ಹಾಗೂ ಜಗತ್ತಿಗೆ ಕೊಡುಗೆ ನೀಡಿದ ದಾರ್ಶನಿಕರ ಪಾಠಗಳಿಗೆ ಕತ್ತರಿ ಹಾಕಿ ಪಠ್ಯವನ್ನು ಪರಿಷ್ಕರಿಸಿತ್ತು.

2019ರಲ್ಲಿ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವರಾಗಿದ್ದ ಎಸ್. ಸುರೇಶ್‌ಕುಮಾರ್ ಅವರು, ಪಠ್ಯಪುಸ್ತಕ ಪರಿಶೀಲನೆಗಾಗಿ ಶಿಕ್ಷಣ ತಜ್ಞರೇ ಅಲ್ಲದ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದರು.

ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು, ಪಠ್ಯ ಪರಿಷ್ಕರಣೆ ಹೊಣೆಯನ್ನೂ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿಗೆ ವಹಿಸಿದ್ದರು. ಸಮಿತಿ ನೀಡಿದ್ದ ಸಲಹೆ ಆಧರಿಸಿ, ಪಠ್ಯಗಳನ್ನು ಪರಿಷ್ಕರಣೆ ಮಾಡಿ, ತರಾತುರಿಯಲ್ಲಿ ಮುದ್ರಣಕ್ಕೂ ಕಳುಹಿಸಲಾಗಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಅನೇಕ ಲೇಖಕರು, ಸಾಹಿತಿಗಳು ತಮ್ಮ ಕವಿತೆ, ಲೇಖನಗಳನ್ನು ವಾಪಸ್‌ ಪಡೆದಿದ್ದರು. ವಿವಾದ ಭುಗಿಲೆದ್ದ ಅವಧಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದ ನಾಗೇಶ್, ಚಕ್ರತೀರ್ಥ ಅವರನ್ನು ‘ಐಐಟಿ ಪ್ರೊಫೆಸರ್ ಎಂದು ಸಮರ್ಥಿಸಿಕೊಂಡಿದ್ದು ಅಪಹಾಸ್ಯಕ್ಕೆ ಈಡಾಗಿತ್ತು.

ಪಠ್ಯಪುಸ್ತಕ ಪರಿಷ್ಕರಣೆ ವರದಿ; ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠಾಂಶ ಅಳವಡಿಕೆಗೆ ಆದೇಶ – The File

ಈ ಪಠ್ಯಪುಸ್ತಕ ಪರಿಷ್ಕರಣೆಯನ್ನು ತೀವ್ರವಾಗಿ ಖಂಡಿಸಿದ್ದ ಅಂದಿನ ವಿರೋಧ ಪಕ್ಷ ಕಾಂಗ್ರೆಸ್, ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿತ್ತು. ಅಲ್ಲದೇ, ವೈಜ್ಞಾನಿಕ ಮನೋಭಾವ ಬೆಳೆಸುವ ಪಠ್ಯವನ್ನು ಸೇರಿಸಲಾಗುವುದು ಎಂದೂ ಪ್ರತಿಪಾದಿಸಿತ್ತು. ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಪಠ್ಯ ಪರಿಷ್ಕರಣೆಯನ್ನು ವಿರೋಧಿಸಿದ ಆಂದೋಲನದಲ್ಲಿ ಸಕ್ರಿಯರಾಗಿದ್ದ ಅನೇಕರು, ಚುನಾವಣೆ ವೇಳೆ ಸಮಾನ ಮನಸ್ಕರ ಒಕ್ಕೂಟವನ್ನು ರಚಿಸಿಕೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಮವಾರ ಭೇಟಿ ಮಾಡಿದ ಒಕ್ಕೂಟದ ಪ್ರಮುಖರಿದ್ದ ನಿಯೋಗ, ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಪರಿಷ್ಕರಿಸಿದ್ದ ಪಠ್ಯವನ್ನೇ ಮುಂದುವರಿಸುವಂತೆ ಮನವಿ ಮಾಡಿದೆ.

ಸಿದ್ದರಾಮಯ್ಯ ಪ್ರತಿಕ್ರಿಯೆ:

”ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ. ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಬಗ್ಗೆ ಪ್ರೊ.ಬರಗೂರು ರಾಮಚಂದ್ರಪ್ಪ ತಮ್ಮ ಅನಿಸಿಕೆ ತಿಳಿಸಿದ್ದು, ”ಪರಿಷ್ಕೃತ ಪಠ್ಯಪುಸ್ತಕಗಳು ಈಗಾಗಲೇ ಮುದ್ರಣಗೊಂಡು ಶಾಲೆಗಳನ್ನು ತಲುಪಿರುವುದರಿಂದ ಈ ಹಂತದಲ್ಲಿ ಬದಲಾವಣೆ ಅಥವಾ ಪರಿಷ್ಕರಣೆ ಕಾರ್ಯಸಾಧುವಲ್ಲ. ಕೊಟ್ಟ ಮಾತೂ ಉಳಿಯಬೇಕು. ಯಡವಟ್ಟುಗಳೂ ಸರಿಯಾಗಬೇಕು”ಎಂದು ಹೇಳಿದ್ದಾರೆ.

”ಪಠ್ಯಪುಸ್ತಕ ಪರಿಷ್ಕರಣೆ ಸುದೀರ್ಘ ಸಮಯ ತೆಗೆದುಕೊಳ್ಳುವ ಪ್ರಕ್ರಿಯೆ. ಮರುಮುದ್ರಣವೂ ವೆಚ್ಚದಾಯಕ. ಶೈಕ್ಷಣಿಕ ವರ್ಷ ಆರಂಭವಾಗಿರುವುದರಿಂದ ಈಗ ಅಂತಹ ಸಾಹಸ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಸದ್ಯಕ್ಕೆ ಪಠ್ಯಪುಸ್ತಕದಲ್ಲಿರುವ ಸಾಮಾಜಿಕ, ಪ್ರಾದೇಶಕ ಅಸಮಾನತೆಗೆ ಕಾರಣವಾದ ಕೆಲ ಪಾಠಗಳನ್ನು ಕೈಬಿಟ್ಟು, ಪೂರಕವಾದ ಕೆಲ ಪಾಠಗಳನ್ನು ಸೇರಿಸಿಕೊಂಡು ಪಾಠ ಮಾಡಲು ಸುತ್ತೋಲೆ ಹೊರಡಿಸಬೇಕು. ಮಹಾರಾಷ್ಟ್ರದಲ್ಲಿರುವಂತೆ ವಿಷಯ ತಜ್ಞರು, ಅಧಿಕಾರಿಗಳನ್ನು ಒಳಗೊಂಡ ಶಾಶ್ವತವಾದ ಪಠ್ಯಪುಸ್ತಕ ಆಯೋಗ ಅಥವಾ ಪ್ರಾಧಿಕಾರ ರಚಿಸಬೇಕು. ಭವಿಷ್ಯದಲ್ಲಿ ಪಠ್ಯಪುಸ್ತಕಗಳು ಯಾವುದೇ ಪಕ್ಷದ ಪುಸ್ತಕಗಳಾಗದಂತೆ ಕಾನೂನು ರೂಪಿಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...