Homeಕರ್ನಾಟಕಪಠ್ಯಪುಸ್ತಕ ಪರಿಷ್ಕರಣೆ ವಿಚಾರ: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ...

ಪಠ್ಯಪುಸ್ತಕ ಪರಿಷ್ಕರಣೆ ವಿಚಾರ: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಭಾರೀ ವಿವಾದ ಹುಟ್ಟುಹಾಕಿತ್ತು. ರೋಹಿತ್ ಚಕ್ರತೀರ್ಥ ಎನ್ನುವವರ ಮುಂದಾಳತ್ವದಲ್ಲಿ ನಡೆದ ಪರಿಷ್ಕರಣೆಯಲ್ಲಿ ಪಠ್ಯದಲ್ಲಿ ಅನೇಕ ಮುಖ್ಯವಾದ ವಿಚಾರಗಳನ್ನು ಕೈ ಬಿಟ್ಟು ಅನಗತ್ಯ ವಿಚಾರಗಳನ್ನು ಸೇರಿಸಲಾಗಿದೆ ಎಂದು ನಾಡಿನ ಸಾಹಿತಿಗಳು, ವಿಚಾರವಂತರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಪಠ್ಯಪುಸ್ತಕ ಪರಿಷ್ಕರಣೆಗೆ ತಕ್ಷಣವೇ ಸಮಿತಿ ರಚಿಸಬೇಕು ಎಂದು ಸಮಾನ ಮನಸ್ಕರ ಒಕ್ಕೂಟ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿ ಮಾಡಿದ ಹಿರಿಯ ಸಾಹಿತಿ, ಕಲಾವಿದರು, ಇಂದಿನ ಬದಲಾವಣೆಗೆ ತಕ್ಕಂತೆ ಪಠ್ಯ ಪುಸ್ತಕಗಳನ್ನು ಪರಿಷ್ಕರಿಸಲು ಕೂಡಲೇ ಒಂದು ತಜ್ಞರ ಸಮಿತಿಯನ್ನು ರಚಿಸಬೇಕು’ ಎಂದು ಸಮಾನ ಮನಸ್ಥರ ಒಕ್ಕೂಟದ ಮುಖಂಡರಾದ ಡಾ. ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಪ್ರೊ.ರವಿವರ್ಮಕುಮಾರ್, ಪ್ರೊ. ನಿರಂಜನಾರಾಧ್ಯ, ಡಾ.ವಸುಂಧರ ಭೂಪತಿ ಸೇರಿದಂತೆ ಹಿರಿಯ ಸಾಹಿತಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಗೆ ತಕ್ಷಣವೇ ಸಮಿತಿ ರಚಿಸಲು 'ಸಮಾನ ಮನಸ್ಕರ ಒಕ್ಕೂಟ'ದಿಂದ ಸಿಎಂಗೆ ಮನವಿ - Varthabharati

”ಬಿಜೆಪಿ ಸರಕಾರವು ಶಿಕ್ಷಣವನ್ನು ಸಂಪೂರ್ಣ ರಾಜಕಾರಣಕ್ಕೆ ಬಳಸಿಕೊಂಡು, ಗೊಂದಲವನ್ನು ಸೃಷ್ಟಿಸಿತ್ತು. ಈಗಾಗಲೇ ಮುದ್ರಣವಾಗಿ ಶಾಲೆಗಳಿಗೆ ತಲುಪಿರುವ ಕಲುಷಿತ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು. ಬದಲಾದ ಪ್ರಮುಖ ಪಾಠಗಳನ್ನು ಮತ್ತು ಕಲಿಕಾಂಶಗಳನ್ನು ಈ ಪುಸ್ತಕಗಳಿಂದ ತೆಗೆದು ಹಾಕಿ ವಿತರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಡಾ.ಬಂಜಗೆರೆ ಜಯಪ್ರಕಾಶ್, ಜಾಣಗೆರೆ ವೆಂಕಟರಾಮಯ್ಯ, ಡಾ.ಜಾಫೆಟ್, ರುದ್ರಪ್ಪ ಹನಗವಾಡಿ, ಪ್ರೊ. ಎಲ್.ಎನ್.ಮುಕುಂದರಾಜ್, ಕೆ.ಶರೀಫಾ, ಕೆ.ಎಸ್.ವಿಮಲಾ, ಡಾ.ಲೀಲಾ ಸಂಪಿಗೆ, ಶ್ರೀಪಾದಭಟ್, ಎ.ಕೆ.ಕರುಣಾಕರ, ಎಚ್‌. ಆರ್.ಜಯರಾಮ್, ಬಿ.ಎ.ನರಸಿಂಹನ್, ಕೆ.ಸುದೀಶ್, ಡಾ.ಗಿರೀಶ್ ಮೂಡ್, ದಿನೇಶ್ ಅಮಿನ್ ಮಟ್ಟು, ಸುರೇಂದ್ರ ರಾವ್, ಜಿ.ಶರಣಪ್ಪ ರಾಜೇಂದ್ರ ಸಿಂಗ್ ಬಾಬು, ಎನ್. ಹನುಮೇಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಪರಿಷ್ಕರಣೆಗೊಂಡ ಪಠ್ಯಪುಸ್ತಕ ರದ್ದು ಮಾಡಿ, ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳಿ: ಸಿಎಂಗೆ ಶಿಕ್ಷಣ ತಜ್ಞರಿಂದ ಪತ್ರ

ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ಬಿಜೆಪಿ ಮಾಡಿದ ಎಡವಟ್ಟುಗಳು

ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕ ಪರಿಶೀಲನೆಗಾಗಿ ರಚಿಸಿದ್ದ ಸಮಿತಿಯು, ತನ್ನ ಮಿತಿಯನ್ನು ಮೀರಿ ತಿರುಚಿದ ಇತಿಹಾಸ ಹಾಗೂ ಜಗತ್ತಿಗೆ ಕೊಡುಗೆ ನೀಡಿದ ದಾರ್ಶನಿಕರ ಪಾಠಗಳಿಗೆ ಕತ್ತರಿ ಹಾಕಿ ಪಠ್ಯವನ್ನು ಪರಿಷ್ಕರಿಸಿತ್ತು.

2019ರಲ್ಲಿ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವರಾಗಿದ್ದ ಎಸ್. ಸುರೇಶ್‌ಕುಮಾರ್ ಅವರು, ಪಠ್ಯಪುಸ್ತಕ ಪರಿಶೀಲನೆಗಾಗಿ ಶಿಕ್ಷಣ ತಜ್ಞರೇ ಅಲ್ಲದ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದರು.

ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು, ಪಠ್ಯ ಪರಿಷ್ಕರಣೆ ಹೊಣೆಯನ್ನೂ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿಗೆ ವಹಿಸಿದ್ದರು. ಸಮಿತಿ ನೀಡಿದ್ದ ಸಲಹೆ ಆಧರಿಸಿ, ಪಠ್ಯಗಳನ್ನು ಪರಿಷ್ಕರಣೆ ಮಾಡಿ, ತರಾತುರಿಯಲ್ಲಿ ಮುದ್ರಣಕ್ಕೂ ಕಳುಹಿಸಲಾಗಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಅನೇಕ ಲೇಖಕರು, ಸಾಹಿತಿಗಳು ತಮ್ಮ ಕವಿತೆ, ಲೇಖನಗಳನ್ನು ವಾಪಸ್‌ ಪಡೆದಿದ್ದರು. ವಿವಾದ ಭುಗಿಲೆದ್ದ ಅವಧಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದ ನಾಗೇಶ್, ಚಕ್ರತೀರ್ಥ ಅವರನ್ನು ‘ಐಐಟಿ ಪ್ರೊಫೆಸರ್ ಎಂದು ಸಮರ್ಥಿಸಿಕೊಂಡಿದ್ದು ಅಪಹಾಸ್ಯಕ್ಕೆ ಈಡಾಗಿತ್ತು.

ಪಠ್ಯಪುಸ್ತಕ ಪರಿಷ್ಕರಣೆ ವರದಿ; ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠಾಂಶ ಅಳವಡಿಕೆಗೆ ಆದೇಶ – The File

ಈ ಪಠ್ಯಪುಸ್ತಕ ಪರಿಷ್ಕರಣೆಯನ್ನು ತೀವ್ರವಾಗಿ ಖಂಡಿಸಿದ್ದ ಅಂದಿನ ವಿರೋಧ ಪಕ್ಷ ಕಾಂಗ್ರೆಸ್, ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿತ್ತು. ಅಲ್ಲದೇ, ವೈಜ್ಞಾನಿಕ ಮನೋಭಾವ ಬೆಳೆಸುವ ಪಠ್ಯವನ್ನು ಸೇರಿಸಲಾಗುವುದು ಎಂದೂ ಪ್ರತಿಪಾದಿಸಿತ್ತು. ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಪಠ್ಯ ಪರಿಷ್ಕರಣೆಯನ್ನು ವಿರೋಧಿಸಿದ ಆಂದೋಲನದಲ್ಲಿ ಸಕ್ರಿಯರಾಗಿದ್ದ ಅನೇಕರು, ಚುನಾವಣೆ ವೇಳೆ ಸಮಾನ ಮನಸ್ಕರ ಒಕ್ಕೂಟವನ್ನು ರಚಿಸಿಕೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಮವಾರ ಭೇಟಿ ಮಾಡಿದ ಒಕ್ಕೂಟದ ಪ್ರಮುಖರಿದ್ದ ನಿಯೋಗ, ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಪರಿಷ್ಕರಿಸಿದ್ದ ಪಠ್ಯವನ್ನೇ ಮುಂದುವರಿಸುವಂತೆ ಮನವಿ ಮಾಡಿದೆ.

ಸಿದ್ದರಾಮಯ್ಯ ಪ್ರತಿಕ್ರಿಯೆ:

”ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ. ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಬಗ್ಗೆ ಪ್ರೊ.ಬರಗೂರು ರಾಮಚಂದ್ರಪ್ಪ ತಮ್ಮ ಅನಿಸಿಕೆ ತಿಳಿಸಿದ್ದು, ”ಪರಿಷ್ಕೃತ ಪಠ್ಯಪುಸ್ತಕಗಳು ಈಗಾಗಲೇ ಮುದ್ರಣಗೊಂಡು ಶಾಲೆಗಳನ್ನು ತಲುಪಿರುವುದರಿಂದ ಈ ಹಂತದಲ್ಲಿ ಬದಲಾವಣೆ ಅಥವಾ ಪರಿಷ್ಕರಣೆ ಕಾರ್ಯಸಾಧುವಲ್ಲ. ಕೊಟ್ಟ ಮಾತೂ ಉಳಿಯಬೇಕು. ಯಡವಟ್ಟುಗಳೂ ಸರಿಯಾಗಬೇಕು”ಎಂದು ಹೇಳಿದ್ದಾರೆ.

”ಪಠ್ಯಪುಸ್ತಕ ಪರಿಷ್ಕರಣೆ ಸುದೀರ್ಘ ಸಮಯ ತೆಗೆದುಕೊಳ್ಳುವ ಪ್ರಕ್ರಿಯೆ. ಮರುಮುದ್ರಣವೂ ವೆಚ್ಚದಾಯಕ. ಶೈಕ್ಷಣಿಕ ವರ್ಷ ಆರಂಭವಾಗಿರುವುದರಿಂದ ಈಗ ಅಂತಹ ಸಾಹಸ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಸದ್ಯಕ್ಕೆ ಪಠ್ಯಪುಸ್ತಕದಲ್ಲಿರುವ ಸಾಮಾಜಿಕ, ಪ್ರಾದೇಶಕ ಅಸಮಾನತೆಗೆ ಕಾರಣವಾದ ಕೆಲ ಪಾಠಗಳನ್ನು ಕೈಬಿಟ್ಟು, ಪೂರಕವಾದ ಕೆಲ ಪಾಠಗಳನ್ನು ಸೇರಿಸಿಕೊಂಡು ಪಾಠ ಮಾಡಲು ಸುತ್ತೋಲೆ ಹೊರಡಿಸಬೇಕು. ಮಹಾರಾಷ್ಟ್ರದಲ್ಲಿರುವಂತೆ ವಿಷಯ ತಜ್ಞರು, ಅಧಿಕಾರಿಗಳನ್ನು ಒಳಗೊಂಡ ಶಾಶ್ವತವಾದ ಪಠ್ಯಪುಸ್ತಕ ಆಯೋಗ ಅಥವಾ ಪ್ರಾಧಿಕಾರ ರಚಿಸಬೇಕು. ಭವಿಷ್ಯದಲ್ಲಿ ಪಠ್ಯಪುಸ್ತಕಗಳು ಯಾವುದೇ ಪಕ್ಷದ ಪುಸ್ತಕಗಳಾಗದಂತೆ ಕಾನೂನು ರೂಪಿಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...