Homeಮುಖಪುಟರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆಹ್ಲೋಟ್, ಪೈಲಟ್ ಒಗ್ಗಟ್ಟಿನಿಂದ ಹೋರಾಡಲು ಒಪ್ಪಿದ್ದಾರೆ: ಕಾಂಗ್ರೆಸ್

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಗೆಹ್ಲೋಟ್, ಪೈಲಟ್ ಒಗ್ಗಟ್ಟಿನಿಂದ ಹೋರಾಡಲು ಒಪ್ಪಿದ್ದಾರೆ: ಕಾಂಗ್ರೆಸ್

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಅವರ ಮಾಜಿ ಉಪ ಸಚಿನ್ ಪೈಲಟ್ ನಡುವೆ ವೈಮನಸ್ಸು ಉಂಟಾಗಿತ್ತು. ಸಧ್ಯ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಕಾಂಗ್ರೆಸ್ ಹೈಕಮಾಂಡ್, ಇಬ್ಬರನ್ನು ಕರೆದು ಮಾತನಾಡಿದ್ದಾರೆ. ಸಧ್ಯ ಸಂಧಾನ ಯಶಸ್ವಿಯಾಗಿದ್ದು, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಲು ಇಬ್ಬರು ನಾಯಕರು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಸೋಮವಾರ ತಿಳಿಸಿದೆ.

ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾತನಾಡಿ, ”ಇಬ್ಬರೂ ನಾಯಕರು ತಮ್ಮಲ್ಲಿರುವ ಎಲ್ಲ ಸಮಸ್ಯೆಗಳನ್ನು ಪಕ್ಷದ ಹೈಕಮಾಂಡ್ ಪರಿಹರಿಸಲು ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ.

”ಕಾಂಗ್ರೆಸ್ ಪಕ್ಷಕ್ಕೆ ರಾಜಸ್ಥಾನವು ಪ್ರಬಲ ರಾಜ್ಯವಾಗಲಿದೆ ಎಂಬುದು ಸ್ಪಷ್ಟವಾಗಿದೆ. ನಾವು ಗೆಲ್ಲಲಿದ್ದೇವೆ. ಆದ್ದರಿಂದ, ಇಬ್ಬರೂ ನಾಯಕರು ಗೆಹ್ಲೋಟ್ ಜಿ ಮತ್ತು ಸಚಿನ್ ಜಿ ಒಟ್ಟಿಗೆ ಹೋಗಲು ನಿರ್ಧರಿಸಿದ್ದಾರೆ ಎಂದು ” ಎಂದು ವೇಣುಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹಿಂದಿನ ದಿನ ಅಂದರೆ ರವಿವಾರದಂದು ಉಭಯ ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಪ್ರತ್ಯೇಕವಾಗಿ ಮತ್ತು ಒಟ್ಟಿಗೆ ಭೇಟಿಯಾಗಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ, ಮಧ್ಯಪ್ರದೇಶದಲ್ಲೂ ಪುನರಾವರ್ತನೆ: 150 ಸ್ಥಾನ ಗೆಲ್ಲುತ್ತೇವೆ ಎಂದ ರಾಹುಲ್ ಗಾಂಧಿ

ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಗೆಹ್ಲೋಟ್ ಮತ್ತು ಪೈಲಟ್ ನಡುವಿನ ಕದನದಿಂದಾಗಿ ಕಾಂಗ್ರೆಸ್‌ನ ರಾಜಸ್ಥಾನ ಘಟಕದಲ್ಲಿ ರಣಕಹಳೆ ಮೊಳಗಿದೆ ಎಂದು ವ್ಯಾಖ್ಯಾನಿಸಲಾಗಿತ್ತು. ಆದರೆ ಇದೀಗ ಒಟ್ಟಿಗೆ ಚುನಾವಣೆಗೆ ಹೋಗಲು ಒಪ್ಪಿಕೊಂಡಿದ್ದಾರೆ.

ಈ ಹಿಂದೆ ಪೈಲಟ್ ನೇತೃತ್ವದ 19 ಶಾಸಕರು ಗೆಹ್ಲೋಟ್ ಅವರನ್ನು ಬದಲಿಸಿ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಬೇಡಿಕೆಯನ್ನು ಎತ್ತಿದ್ದರು. ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ, ಪೈಲಟ್‌ನ ಕಳವಳಗಳನ್ನು ಪರಿಹರಿಸಲು ಕಾಂಗ್ರೆಸ್ ಮೂರು ಸದಸ್ಯರ ಸಮಿತಿಯನ್ನು ರಚಿಸಿತು. ನಂತರ ಪೈಲಟ್ ಅವರನ್ನು ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಯಿತು.

ಇತ್ತೀಚಿನ ದಿನಗಳಲ್ಲಿ, ಗೆಹ್ಲೋಟ್ ಪೈಲಟ್‌ರನ್ನು ದೇಶದ್ರೋಹಿ ಎಂದು ಕರೆದಿದ್ದಾರೆ, ಆದರೆ ನಂತರದವರು ಹಿಂದಿನ ಬಿಜೆಪಿ ಆಡಳಿತದಲ್ಲಿ ನಡೆದ ಆರೋಪದ ಭ್ರಷ್ಟಾಚಾರದ ವಿರುದ್ಧ ತಮ್ಮದೇ ಸರ್ಕಾರವನ್ನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು ಒಂದು ದಿನದ ಉಪವಾಸ ಮತ್ತು ಪಾದಯಾತ್ರೆ ನಡೆಸಿದರು.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಬದಲಿಗೆ ಬಿಜೆಪಿಯ ವಸುಂಧರಾ ರಾಜೇ ಅವರನ್ನು ಗೆಹ್ಲೋಟ್ ತಮ್ಮ ನಾಯಕಿ ಎಂದು ಪರಿಗಣಿಸುತ್ತಾರೆ ಎಂದು ಮೇ 10 ರಂದು ಪೈಲಟ್ ಹೇಳಿದ್ದರು. 2020ರಲ್ಲಿ ಪೈಲಟ್ ನೇತೃತ್ವದ ಶಾಸಕರು ದಂಗೆ ಎದ್ದಾಗ ರಾಜೇ ಸೇರಿದಂತೆ ಮೂವರು ಬಿಜೆಪಿ ನಾಯಕರು ತಮ್ಮ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಹೇಳಿಕೊಂಡ ನಂತರ ಈ ಬೆಳವಣಿಗೆ ನಡೆದಿದೆ.

ಕಾಂಗ್ರೆಸ್ ನಾಯಕರನ್ನು ಹುದ್ದೆಯಿಂದ ಸಮಾಧಾನಪಡಿಸುವುದಿಲ್ಲ: ಗೆಹ್ಲೋಟ್

ಸೋಮವಾರದ ಸಭೆಯ ಮೊದಲು, ಪೈಲಟ್ ಅವರನ್ನು ಸಮಾಧಾನಪಡಿಸಲು ಕಾಂಗ್ರೆಸ್‌ನಿಂದ ವ್ಯವಸ್ಥೆ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಗೆಹ್ಲೋಟ್ ಅವರು ಪ್ರತಿಕ್ರಿಯಿಸಿದ್ದು, ಸಮಾಧಾನಪಡಿಸಲು ಯಾವುದೇ ನಾಯಕ ಅಥವಾ ಕಾರ್ಯಕರ್ತರಿಗೆ ಯಾವುದೇ ಸ್ಥಾನವನ್ನು ನೀಡುವ ಸಂಪ್ರದಾಯವು ಕಾಂಗ್ರೆಸ್‌ನಲ್ಲಿ ಇಲ್ಲ ಎಂದು ಹೇಳಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

”ನಾನು ಈ ಹಿಂದೆ ಅಂತಹ ವಿಷಯವನ್ನು ಕೇಳಿಲ್ಲ … ಕಾಂಗ್ರೆಸ್‌ನಲ್ಲಿ ಅಂತಹ ಸಂಪ್ರದಾಯವಿಲ್ಲ, ಯಾವುದೇ ನಾಯಕರು ಏನನ್ನಾದರೂ ಒತ್ತಾಯಿಸುತ್ತಾರೆ ಮತ್ತು ಪಕ್ಷದ ಹೈಕಮಾಂಡ್ ಆ ಸ್ಥಾನವನ್ನು ನೀಡುತ್ತದೆ. ನಾವು ಅಂತಹ ಸೂತ್ರದ ಬಗ್ಗೆ ಕೇಳಿಲ್ಲ” ಎಂದು ಅವರು ಹೇಳಿದರು.

ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷರಾಗಿ ಪೈಲಟ್ ಅವರನ್ನು ಮತ್ತೆ ನೇಮಿಸಬಹುದು ಎಂಬ ಮಾಧ್ಯಮ ವರದಿಗಳನ್ನು ಗೆಹ್ಲೋಟ್ ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...