Homeಕರ್ನಾಟಕಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ, ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ

ಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ, ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ

ನಾಲ್ವರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಕುಕ್ಕೆ ಸುಬ್ರಮಣ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಸುಳ್ಯ: ತಾಲ್ಲೂಕಿನ ಕೊಲ್ಲಮೊಗ್ರು ಗ್ರಾಮದ ಕಟ್ಟ ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿತರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಸಂಬಂಧ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೀವ್ರಗಾಯಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತನನ್ನು ಹಲ್ಲೆನಡೆಸಿದವರೇ ಆಸ್ಪತ್ರೆಗೆ ದಾಖಲಿಸಿ, “ಬೈಕ್‌ನಲ್ಲಿ ಬಿದ್ದು ಗಾಯಗೊಂಡಿದ್ದರು. ಮಾನವೀಯತೆಯ ಆಧಾರದಲ್ಲಿ ಇವರನ್ನು ಆಸ್ಪತ್ರೆಗೆ ಕರೆತಂದಿದ್ದೇವೆ” ಎಂದು ಸುಳ್ಳು ಹೇಳಿದ್ದಾರೆಂಬ ಆರೋಪ ಬಂದಿದೆ.

ಕೊಲ್ಲಮೊಗ್ರು ಗ್ರಾಪಂ ಮಾಜಿ ಅಧ್ಯಕ್ಷ ಟಿ.ಎನ್.ಸತೀಶ್, ಮಾಜಿ ಉಪಾಧ್ಯಕ್ಷ ಮಣಿಕಂಠ ಮತ್ತು ಇವರ ಬೆಂಬಲಿಗರಾದ ದುರ್ಗಾದಾಸ್ ಬಂಬಿಲ, ಸುಂದರ ಗುಡ್ಡನ ಮನೆ ಎಂಬವರು ಕಾಂಗ್ರೆಸ್ ಕಾರ್ಯಕರ್ತರಾದ ಕುಮಾರ್‌ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ.

ಹತ್ತು ದಿನಗಳ ಹಿಂದೆ ಬಿಜೆಪಿಯ ಬೆಂಬಲಿತ ಮಣಿಕಂಠ ಮತ್ತು ಕಾಂಗ್ರೆಸ್ ಕಾರ್ಯಕರ್ತ ಕುಮಾರ್‌ ಎಂಬವರ ನಡುವೆ ಕೌಟುಂಬಿಕ ವಿಚಾರಗಳಿಗೆ ಘರ್ಷಣೆಯಾಗಿತ್ತು. ನಂತರದಲ್ಲಿ ಕುಮಾರ್‌ ಅವರು ಅನಾರೋಗ್ಯದ ನಿಮಿತ್ತ ಆಸ್ಪತ್ರೆ ಸೇರಿದ್ದರು. ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿ ಮನೆಗೆ ಬಂದ ಬಳಿಕ ಈ ಘಟನೆ ನಡೆದಿದೆ.

ಹತ್ತು ದಿನಗಳ ಹಿಂದೆ ನಡೆದಿದ್ದ ಗಲಾಟೆಯ ಸಂಬಂಧ ಸಂಧಾನಕ್ಕಾಗಿ ಕುಮಾರ್‌ ಅವರನ್ನು ಬಿಜೆಪಿ ಮುಖಂಡರಾದ ದುರ್ಗಾದಾಸ್ ಬಂಬಿಲ, ಟಿ.ಎನ್.ಸತೀಶ್ ಮಾತುಕತೆಗೆ ಕರೆದಿದ್ದರು. “ಊರಿನಲ್ಲಿ ನಮ್ಮೆಲ್ಲರ ಹೆಸರು ಹಾಳಾಗುತ್ತಿದೆ. ಕೂತು ಬಗೆಹರಿಸಿಕೊಳ್ಳೋಣ, ರಾಜಿಯಾಗೋಣ” ಎಂದು ಕುಮಾರ್‌ ಅವರನ್ನು ನಂಬಿಸಿದ್ದರು.

ಹತ್ತಿರದಲ್ಲೇ ಇದ್ದ ಮನೆಗೆ ತೆರಳಿದಾಗ ಸತೀಶ್ ಮತ್ತು ಮಣಿಕಂಠ ಇಬ್ಬರೇ ಇದ್ದರು. ಹೋಗಿ ಮಾತನಾಡುತ್ತಿರುವಾಗ ದುರ್ಗಾದಾಸ್ ಬಂಬಿಲ ಮತ್ತು ಸುಂದರ ಗುಡ್ಡನ ಮನೆ ಎಂಬವರು ಹಿಂದಿನಿಂದ ಬಂದು ರಾಡಿನಲ್ಲಿ ಹೊಡೆದಿದ್ದಾರೆ. ಹೊಡೆತದ ರಭಸಕ್ಕೆ ಕುಮಾರ್‌ ಅವರು ಪ್ರಜ್ಞೆ ಕಳೆದುಕೊಂಡಿದ್ದರು.

ಆನಂತರ ಆಂಬುಲೆನ್ಸ್‌ಗೆ ಕರೆ ಮಾಡಿರುವ ಆರೋಪಿಗಳು, “ಮದ್ಯ ಸೇವನೆ ಮಾಡಿ ಬೈಕ್‌ನಲ್ಲಿ ಬರುವಾಗ ಒಬ್ಬಾತ ಬಿದ್ದಿದ್ದಾನೆ. ನಾವು ಸ್ಥಳೀಯವಾಗಿ ಮಾಡಿಕೊಂಡಿರುವ ವಿಪತ್ತು ನಿರ್ವಹಣಾ ತಂಡದ ಭಾಗವಾಗಿ, ಮಾನವೀಯತೆಯ ಆಧಾರದಲ್ಲಿ ಇವರನ್ನು ಆಸ್ಪತ್ರೆಗೆ ಸೇರಿಸಲು ಮುಂದಾಗಿದ್ದೇವೆ. ನೀವು ತುರ್ತಾಗಿ ಬನ್ನಿ” ಎಂದು ತಿಳಿಸಿದ್ದಾರೆ. ಆಸ್ಪತ್ರೆಯಲ್ಲೂ ಹಾಗೆಯೇ ಹೇಳಿ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಗಾಯಗೊಂಡ ವ್ಯಕ್ತಿ ಸುಳ್ಯ ಕೆ.ವಿ.ಜಿ. ಮೆಡಿಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಕುಮಾರ್‌ ಅವರ ಮನೆಯಲ್ಲಿ ವಿಚಾರ ಗೊತ್ತಿರಲಿಲ್ಲ. ನಂತರ ಪ್ರಕರಣ ಕುಕ್ಕೆಸುಬ್ರಮಣ್ಯ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಗಂಭೀರವಾಗಿ ಗಾಯಗೊಂಡಿರುವುದು ಊರಿಗೆಲ್ಲ ಗೊತ್ತಾಗಿದೆ. ಇದರ ಹಿಂದೆ ಬಿಜೆಪಿ ಕಾರ್ಯಕರ್ತರು ಇದ್ದಾರೆಂಬುದು ಚರ್ಚೆಯಾಗುತ್ತಿದೆ. ಪ್ರಕರಣ ದಾಖಲಾದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸುಬ್ರಹ್ಮಣ್ಯ ಪೊಲೀಸರು ಆಸ್ಪತ್ರೆಗೆ ತೆರಳಿ ಹಲ್ಲೆಗೊಳಗಾದ ಕುಮಾರ್ ಅವರ ಹೇಳಿಕೆ ಪಡೆದಿದ್ದು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

“ಹಲ್ಲೆಗೊಳಗಾದ ಕುಮಾರ್‌ ಅವರಿಗೆ ಬೈಕ್‌ ಓಡಿಸಲು ಬರುವುದಿಲ್ಲ” ಎಂದು ಕುಮಾರ್‌ ಅವರ ಆಪ್ತರು ಹೇಳಿಕೊಂಡಿದ್ದಾರೆ.

ಘಟನೆಯ ಸಂಬಂಧ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಕುಕ್ಕೆಸುಬ್ರಮಣ್ಯ ಪೊಲೀಸ್ ಠಾಣೆಯ ಅಧಿಕಾರಿ ಮಂಜುನಾಥ್‌, “ರಾಜಕೀಯ ಪ್ರೇರಿತ ಎಂಬುದಕ್ಕಿಂತ ಕೌಟುಂಬಿಕ ಕಲಹದ ವಿಚಾರ ಇಲ್ಲಿದೆ. ಮಣಿಕಂಠ ಮತ್ತು ಕುಮಾರ್‌ ಕುಟುಂಬಗಳ ನಡುವೆ ಜಗಳವಾಗಿತ್ತು. ಇದರಲ್ಲಿ ಇನ್ನುಳಿದವರು ಯಾಕೆ ಭಾಗಿಯಾಗಿದ್ದಾರೆಂಬುದು ತನಿಖೆಯಿಂದ ಬಯಲಾಗುತ್ತದೆ. ಹಲ್ಲೆ ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್‌ 324, 323, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲಾಗುವುದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...