Homeಮುಖಪುಟದೇವೇಗೌಡರ ರಾಜಕೀಯ ತಂತ್ರಗಳ ಎದುರು ಗೆದ್ದ ಶ್ರೇಯ: ಕೃಷಿ ಸಚಿವ ಚಲುವರಾಯಸ್ವಾಮಿಯವರ ಹಾದಿ

ದೇವೇಗೌಡರ ರಾಜಕೀಯ ತಂತ್ರಗಳ ಎದುರು ಗೆದ್ದ ಶ್ರೇಯ: ಕೃಷಿ ಸಚಿವ ಚಲುವರಾಯಸ್ವಾಮಿಯವರ ಹಾದಿ

- Advertisement -
- Advertisement -

ಮಂಡ್ಯ ಜಿಲ್ಲೆಯ ನಾಗಮಂಗಲದ ಶಾಸಕರಾದ ಎನ್. ಚಲುವರಾಯಸ್ವಾಮಿಯವರು ಸಿಎಂ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕೃಷಿ ಮಂತ್ರಿಗಳಾಗಿದ್ದಾರೆ. ಮಾಜಿ ಪ್ರಧಾನಿ, ಜೆಡಿಎಸ್ ಮುಖ್ಯಸ್ಥ ಹೆಚ್.ಡಿ ದೇವೇಗೌಡರ ರಾಜಕೀಯ ತಂತ್ರಗಳ ಎದುರು ಗೆದ್ದ ಅವರಿಗೆ ಈ ಶ್ರೇಯ ದೊರಕಿದೆ.

ಹೊಡಿ-ಬಡಿ ರಾಜಕಾರಣಕ್ಕೆ ಕುಖ್ಯಾತಿಯಾದ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚಿನ ದಿನಗಳಲ್ಲಿ ದೇವೇಗೌಡರ ಕುಟುಂಬದ್ದೇ ಪ್ರಾಬಲ್ಯವಿತ್ತು. ಅವರ ಮರ್ಜಿಯಲ್ಲಿಯೇ ಬೆಳೆದುಬಂದಿದ್ದ, ಹೆಚ್.ಡಿ ಕುಮಾರಸ್ವಾಮಿಯವರ ಆಪ್ತರಾಗಿದ್ದ ಎನ್.ಚಲುವರಾಯಸ್ವಾಮಿಯವರು ಅವರ ಜೊತೆಗಿನ ಮನಸ್ತಾಪಕ್ಕೆ ಬೇಸತ್ತು 2017ರಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಇದು ಜೆಡಿಎಸ್ ಪಕ್ಷಕ್ಕೆ ಮತ್ತು ಹೆಚ್.ಡಿ ದೇವೇಗೌಡರಿಗೆ ಮಾಡಿದ ದ್ರೋಹ ಎಂದು ಬಿಂಬಸಲಾಗಿತ್ತು. ಹಾಗಾಗಿ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಭದ್ರಕೋಟೆಯಲ್ಲಿಯೇ 47,667 ಮತಗಳ ಬೃಹತ್ ಅಂತರದಿಂದ ಸೋಲು ಕಂಡಿದ್ದರು! ದೇವೇಗೌಡರನ್ನು ಎದುರು ಹಾಕಿಕೊಂಡವರಿಗೆ ಎಂತಹ ಗತಿ ಬರುತ್ತದೆ ನೋಡಿ ಎಂಬ ಸಂದೇಶ ನೀಡಲಾಗಿತ್ತು. ಆದರೆ ಧೃತಿಗೆಡದ ಚಲುವರಾಯಸ್ವಾಮಿಯವರು ಅದನ್ನು ಸವಾಲಾಗಿ ಸ್ವೀಕರಿಸಿ ಕ್ಷೇತ್ರದಲ್ಲಿ ಮತ್ತು ಇಡೀ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬೆಳೆಸಿದರು. 2023ರ ಚುನಾವಣೆಯಲ್ಲಿ ದೇವೇಗೌಡರ ರಾಜಕೀಯ ತಂತ್ರವನ್ನು ಮೀರಿ 4,414 ಮತಗಳ ಅಂತರದಲ್ಲಿ ಗೆದ್ದು ಬಂದಿದ್ದಾರೆ. ಹಾಗಾಗಿ ಅವರಿಗೆ ಮೂರನೇ ಬಾರಿ ಸಚಿವರಾಗುವ ಅವಕಾಶ ದೊರೆತಿದೆ.

ರಾಜಕೀಯ ಹಾದಿ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಇಜ್ಜಲಘಟ್ಟ ಗ್ರಾಮದಲ್ಲಿ ಜೂನ್ 1, 1960ರಲ್ಲಿ ಚಲುವರಾಯಸ್ವಾಮಿ ಜನಿಸಿದರು. ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮೊ ಪದವಿ ಪಡೆದ ಅವರು ರಾಜಕೀಯದತ್ತ ಹೊರಳಿದರು. 1994 ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಅವರು 1996ರಲ್ಲಿ ಜಿ.ಪಂ ಉಪಾಧ್ಯಕ್ಷರಾದರು. 1999ರ ಚುನಾವಣೆ ವೇಳೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಲ್.ಆರ್ ಶಿವರಾಮೇಗೌಡರನ್ನು ಮಣಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.

2004ರಲ್ಲಿಯೂ ಸಹ ಇವರಿಬ್ಬರ ನಡುವೆ ಕಾದಾಟ ನಡೆಯುತ್ತದೆ. ಜೆಡಿಎಸ್‌ನ ಚಲುವರಾಯಸ್ವಾಮಿಯವರು ಮತ್ತೆ ಗೆಲುವು ಸಾಧಿಸುತ್ತಾರೆ. ಧರ್ಮಸಿಂಗ್‌ರವರ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಆರೋಗ್ಯ ಇಲಾಖೆ ಸಚಿವರಾಗುತ್ತಾರೆ. ಆನಂತರ ಕುಮಾರಸ್ವಾಮಿಯವರು ಸಿಎಂ ಆದಾಗ ಚಲುವರಾಯಸ್ವಾಮಿ ಸಾರಿಗೆ ಸಚಿವರಾಗಿ ಕಾರ್ಯನಿರ್ವಹಿಸುತ್ತಾರೆ. ಈ ವೇಳೆಗೆ ಕುಮಾರಸ್ವಾಮಿಯವರ ಬಂಟನಾಗಿ ಚಲುವರಾಯಸ್ವಾಮಿ ಗುರುತಿಸಿಕೊಳ್ಳುತ್ತಾರೆ.

ಮೊದಲ ಸೋಲು

2008ರ ಚುನಾವಣೆ ವೇಳೆಗೆ ಚಲುವರಾಯಸ್ವಾಮಿಯವರು ಮೂರನೇ ಬಾರಿಗೆ ಜೆಡಿಎಸ್‌ನಿಂದ ಸ್ಪರ್ಧಿಸುತ್ತಾರೆ. ಆಗ ಕಾಂಗ್ರೆಸ್ ಪಕ್ಷವು ಕೆ.ಸುರೇಶ್‌ಗೌಡರಿಗೆ ಟಿಕೆಟ್ ನೀಡುತ್ತದೆ. ಅವರು 69,259 ಮತಗಳನ್ನು ಪಡೆಯುವ ಮೂಲಕ 5,493 ಮತಗಳ ಅಂತರದಿಂದ ಚಲುವರಾಯಸ್ವಾಮಿಯವರನ್ನು (63,766 ಮತಗಳು) ಮಣಿಸಿ ಶಾಸಕರಾಗುತ್ತಾರೆ. ಸೋತ ಚಲುವರಾಯಸ್ವಾಮಿಯವರು 2009ರಲ್ಲಿ ನಡೆಯುವ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಅಂಬರೀಶ್‌ರವರನ್ನು ಮಣಿಸಿ ಸಂಸದರಾಗುತ್ತಾರೆ.

2013ರ ವಿಧಾನಸಭಾ ಚುನಾವಣೆ ಎದುರಾದಾಗ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಕಾಂಗ್ರೆಸ್‌ನ ಸುರೇಶ್‌ಗೌಡರನ್ನು 20,363 ಮತಗಳ ಅಂತರದಲ್ಲಿ ಸೋಲಿಸುತ್ತಾರೆ. ಚಲುವರಾಯಸ್ವಾಮಿಯವರಿಂದ ತೆರವಾದ ಸಂಸತ್ ಸ್ಥಾನಕ್ಕೆ ಚಿತ್ರನಟಿ ರಮ್ಯಾರವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸುತ್ತಾರೆ. ಆನಂತರ ಅವರ ಮತ್ತು ಹೆಚ್.ಡಿ ಕುಮಾರಸ್ವಾಮಿಯವರ ನಡುವೆ ಮನಸ್ತಾಪ ಉಂಟಾಗುತ್ತದೆ. 2017ರ ರಾಜ್ಯಸಭಾ ಚುನಾವಣೆಯಲ್ಲಿ ಅವರು ಜೆಡಿಎಸ್ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ಮಾಡುತ್ತಾರೆ. 2018ರ ವೇಳೆಗೆ ದೇವೇಗೌಡರ ಕುಟುಂಬವು ಪಕ್ಷಪಾತ ಮಾಡುತ್ತಿದೆ ಎಂದು ಆರೋಪಿಸಿ ಚಲುವರಾಯಸ್ವಾಮಿಯವರು ಇತರ ಹಲವರೊಂದಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಾರೆ. ಹಾಗಾಗಿ ಇಷ್ಟು ದಿನ ಕಾಂಗ್ರೆಸ್‌ನಲ್ಲಿದ್ದ ಸುರೇಶ್‌ಗೌಡರು ಜೆಡಿಎಸ್ ಸೇರುತ್ತಾರೆ. 2018ರಲ್ಲಿ ಇವರಿಬ್ಬರ ನಡುವೆ ಮತ್ತೆ ಸ್ಪರ್ಧೆ ನಡೆಯುತ್ತದೆ. ಆದರೆ ಚಲುವರಾಯಸ್ವಾಮಿ ದೇವೇಗೌಡರಿಗೆ ದ್ರೋಹ ಮಾಡಿದರು ಎಂಬ ಆರೋಪ, ಕುಮಾರಸ್ವಾಮಿ ಸಿಎಂ ಆಗುತ್ತಾರೆ ಎಂಬ ಒಕ್ಕಲಿಗರ ಅಲೆಯಲ್ಲಿ ಜೆಡಿಎಸ್‌ನ ಸುರೇಶ್‌ಗೌಡರು 47,667 ಮತಗಳ ಬೃಹತ್ ಅಂತರದಿಂದ ಗೆದ್ದುಬರುತ್ತಾರೆ. ಅವರು 1,12,396 ಮತಗಳನ್ನು ಪಡೆದರೆ ಚಲುವರಾಯಸ್ವಾಮಿ ಕೇವಲ 64,729 ಮತಗಳಿಗೆ ಕುಸಿಯುತ್ತಾರೆ.

ಚಲುವರಾಯಸ್ವಾಮಿಯವರು ಆಯುರ್ವೇದಿಕ್ ಕಾಲೇಜು ಸ್ಥಾಪನೆ, ಮಾರ್ಕೋನಹಳ್ಳಿ ಡ್ಯಾಂನಿಂದ ಕುಡಿಯುವ ನೀರು ತಂದಿದ್ದು, ನಾಗಮಂಗಲಕ್ಕೆ ಆರ್‌ಟಿಓ ಕಚೇರಿ ತಂದಿದ್ದು ಸೇರಿ ತಾನು ಶಾಸಕ-ಸಚಿವನಾಗಿದ್ದಾಗ ಮಾಡಿದ ಕೆಲಸಗಳನ್ನು ಮುಂದಿಟ್ಟುಕೊಂಡು ಈ ಚುನಾವಣೆ ಎದುರಿಸಿದರು. ಕಾಂಗ್ರೆಸ್ ಪಕ್ಷದ ಪರವಾಗಿನ ಅಲೆಯ ಜೊತೆಗೆ ಅವರು ಕಳೆದ ಬಾರಿಗಿಂತ 25,905 ಹೆಚ್ಚುವರಿ ಮತಗಳನ್ನು ಪಡೆದ ಅವರು ಜೆಡಿಎಸ್ ಪಕ್ಷದ ಸುರೇಶ್ ಗೌಡರನ್ನು 4,414 ಮತಗಳಿಂದ ಸೋಲಿಸಿ ನಾಲ್ಕನೇ ಬಾರಿಗೆ ಶಾಸಕರಾದರು. ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಮುಖಂಡರಾಗಿ ಗುರುತಿಸಿಕೊಂಡಿದ್ದ ಅವರಿಗೆ ಕೃಷಿ ಮಂತ್ರಿ ಸ್ಥಾನ ದೊರಕಿದೆ.

ಇದನ್ನೂ ಓದಿ; ನಮ್ಮ ಸಚಿವರಿವರು; ಬೆಂಗಳೂರಿನ ಪ್ರಭಾವಿ ಮುಸ್ಲಿಂ ಶಾಸಕರಲ್ಲಿ ಒಬ್ಬರಾದ ಜಮೀರ್ ಅಹ್ಮದ್ ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...