Homeಕರ್ನಾಟಕಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

- Advertisement -
- Advertisement -

ಬೆಂಗಳೂರು ಸೇರಿದಂತೆ ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ಮಂಗಳವಾರ ‘ಯೆಲ್ಲೋ’ (ಹಳದಿ) ಅಲರ್ಟ್ ಘೋಷಣೆ ಮಾಡಿದೆ.

ಬೆಂಗಳೂರು, ಕೊಡಗು, ಮೈಸೂರು, ಉಡುಪಿ, ಗುಲ್ಬರ್ಗ, ಶಿವಮೊಗ್ಗ, ಚಿತ್ರದುರ್ಗ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಳದಿ (ಯೆಲ್ಲೋ) ಅಲರ್ಟ್ ಜಾರಿಯಾಗಿದೆ.

“ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಮತ್ತು ಸಣ್ಣ ಮಟ್ಟದ ಸಂಚಾರ ದಟ್ಟಣೆ ಆಗಬಹುದು, ಮರ ಮತ್ತು ಕೊಂಬೆಗಳು ಮುರಿದು ಬೀಳುವ ಸಾಧ್ಯತೆ ಇದೆ” ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬೆಂಗಳೂರಿನಲ್ಲಿ ಜೂನ್ 3ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಮಾರ್ಚ್ 1ರಿಂದ ನಗರದಲ್ಲಿ 277 ಮಿಮೀ ಮಳೆ ದಾಖಲಾಗಿದ್ದರೆ, ಕಳೆದ ವರ್ಷ ಇದೇ ಅವಧಿಯಲ್ಲಿ ನಗರದಲ್ಲಿ 421 ಮಿಮೀ ಮಳೆಯಾಗಿತ್ತು.

ಹವಾಮಾನ ಇಲಾಖೆಯ ವಿಜ್ಞಾನಿಗಳ ಪ್ರಕಾರ, ಜೂನ್ 4 ರಂದು ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಪ್ರವೇಶಿಸಲಿದೆ.

“ನೈಋತ್ಯ ಮಾನ್ಸೂನ್ ಇಂದು ನೈಋತ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಗಳಲ್ಲಿ ಮುಂದುವರಿದಿದೆ. ಹೀಗಾಗಿ ಕರಾವಳಿ ಆಂಧ್ರಪ್ರದೇಶದಲ್ಲಿ, ತೆಲಂಗಾಣದ ಕೆಲವು ಭಾಗಗಳಲ್ಲಿ, ತಮಿಳುನಾಡು, ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಮಳೆಯಾಗಿದೆ. ನಾಳೆಯೂ ಮಳೆ ಮುಂದುವರಿಯುತ್ತದೆ. ಮೇ 30ರಿಂದ ಜೂನ್ 3 ರವರೆಗೆ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ” ಎಂದು ಇಲಾಖೆಯ ವಿಜ್ಞಾನಿಗಳು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. “ಮಳೆಯಿಂದ ಬೆಂಗಳೂರಿನ ನಿವಾಸಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಜನರೊಂದಿಗೆ ಸೌಹಾರ್ದಯುತವಾಗಿ ಬಿಬಿಎಂಪಿ ಸ್ಪಂದಿಸಬೇಕು. ಮಳೆಗಾಲದಲ್ಲಿ ಮಳೆ ನೀರು ಮುಕ್ತವಾಗಿ ಹರಿಯುವಂತೆ ವ್ಯವಸ್ಥೆ ಮಾಡಬೇಕು” ಎಂದು ನಿರ್ದೇಶಿಸಿದ್ದಾರೆ.

ಏನಿವು ಅಲರ್ಟ್‌ಗಳು?

ಮಳೆಗಾಲದಲ್ಲಿ ಅಥವಾ ಯಾವುದೇ ಅನಿರೀಕ್ಷಿತ ಚಂಡಮಾರುತಗಳು ಬೀಸುವ ಸಂದರ್ಭದಲ್ಲಿ ಜನಸಾಮಾನ್ಯರ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಹವಾಮಾನ ಇಲಾಖೆಯು ಹಸಿರು, ಕಿತ್ತಳೆ, ಕೆಂಪು ಮತ್ತು ಹಳದಿ ಅಲರ್ಟ್‌ಗಳನ್ನು ಹೊರಡಿಸುತ್ತದೆ. ಅವುಗಳ ಅರ್ಥವೇನು? ಅವು ಏನನ್ನು ಸೂಚಿಸುತ್ತವೆ?

ನಮ್ಮ ದೇಶದಲ್ಲಿ ಭಾರತೀಯ ಹವಾಮಾನ ಇಲಾಖೆ (IMD)ಯು ಈ ಎಚ್ಚರಿಕೆಗಳನ್ನು ನೀಡುತ್ತದೆ ಮತ್ತು ವಿಭಿನ್ನ ಸಂದೇಶಗಳನ್ನು ವಿವರಿಸಲು 4 ವಿಭಿನ್ನ ಬಣ್ಣದ ಕೋಡ್‌ಗಳನ್ನು ಬಳಸುತ್ತದೆ.

1. ಹಸಿರು ಎಚ್ಚರಿಕೆ (ಗ್ರೀನ್ ಅಲರ್ಟ್)

ಗ್ರೀನ್ ಅಲರ್ಟ್ ಎಂದರೆ ಸಾಮಾನ್ಯವಾಗಿ ಹವಾಮಾನ ಪರಿಸ್ಥಿತಿಗಳು ಉತ್ತಮವಾಗಿವೆ ಎಂದರ್ಥ. ಬಹುತೇಕ ಸಮಯದಲ್ಲಿ ಈ ಅಲರ್ಟ್ ಜಾರಿಯಲ್ಲಿರುತ್ತದೆ. ಅಲ್ಲದೆ ಈ ಎಚ್ಚರಿಕೆಯ ಸಮಯದಲ್ಲಿ ಭಾರತೀಯ ಹವಾಮಾನ ಇಲಾಖೆಯು ನಾಗರಿಕರಿಗೆ ಯಾವುದೇ ಸಲಹೆಯನ್ನು ನೀಡುವುದಿಲ್ಲ.

2. ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್)

ಹವಾಮಾನ ಇಲಾಖೆಯು ಜನರಿಗೆ ಎಚ್ಚರಿಕೆ ನೀಡಲು ಹಳದಿ ಅಲರ್ಟ್ ಅನ್ನು ನೀಡುತ್ತದೆ. 7.5 ರಿಂದ 15 ಮಿಮೀ ವರೆಗೆ ಭಾರೀ ಮಳೆಯಾಗಲಿದ್ದು, ಇದು ಮುಂದಿನ 1 ಅಥವಾ 2 ಗಂಟೆಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದಾಗ ಇದನ್ನು ಹೊರಡಿಸುತ್ತದೆ. ಅಂದರೆ ಇದು ಕೇವಲ ಮುಂದೊದಗಬಹುದಾದ ಅಪಾಯದ ಬಗ್ಗೆ ಎಚ್ಚರವಿರಲಿ ಎಂದರ್ಥ. ಹಳದಿ ಎಚ್ಚರಿಕೆಯ ಸಮಯದಲ್ಲಿ ಹವಾಮಾನವನ್ನು ನಿರಂತರವಾಗಿ ಮತ್ತು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ.

3. ಕಿತ್ತಳೆ ಎಚ್ಚರಿಕೆ (ಆರೆಂಜ್ ಅಲರ್ಟ್)

ಹವಾಮಾನವು ಹದಗೆಟ್ಟಾಗ, ಹಳದಿ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ಆಗಿ ಬದಲಾಯಿಸಲಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳುತ್ತದೆ. “ಈ ಚಂಡಮಾರುತವು ಹವಾಮಾನ ಪರಿಸ್ಥಿತಿಗಳು ಹದಗೆಡಲು ಕಾರಣವಾಗಬಹುದು. ಇದು ರಸ್ತೆ ಮತ್ತು ವಾಯು ಸಾರಿಗೆಗೆ ಹಾನಿಯನ್ನುಂಟುಮಾಡುತ್ತದೆ ಮತ್ತು ಜೀವ ಮತ್ತು ಆಸ್ತಿ ನಷ್ಟವನ್ನು ಉಂಟುಮಾಡಬಹುದು” ಎಂಬುದನ್ನು ಆರೆಂಜ್ ಅಲರ್ಟ್ ವಿವರಿಸುತ್ತದೆ.

ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಿದ ಸಮಯದಲ್ಲಿ ಜನರು ತಮ್ಮ ಮನೆಗಳಲ್ಲಿಯೇ ಇರುವಂತೆ ಸೂಚಿಸಲಾಗುತ್ತದೆ. ಅಂತಹ ಪರಿಸ್ಥಿತಿಗಳಲ್ಲಿ ಗಾಳಿಯ ವೇಗ ಗಂಟೆಗೆ 65 ರಿಂದ 75 ಕಿಮೀ ಮತ್ತು 15 ರಿಂದ 33 ಮಿಮೀ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಆರೆಂಜ್ ಅಲರ್ಟ್ ಘೋಷಿಸಿದಾಗ ಮಳೆ ಪೀಡಿತ ಪ್ರದೇಶದಲ್ಲಿ ಅಪಾಯಕಾರಿ ಪ್ರವಾಹದ ಸಾಧ್ಯತೆಯಿರುವುದರಿಂದ ಪೀಡಿತ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಸ್ಥಳೀಯ ಆಡಳಿತಗಳಿಗೆ ಸೂಚಿಸಲಾಗುತ್ತದೆ.

4. ಕೆಂಪು ಎಚ್ಚರಿಕೆ (ರೆಡ್ ಅಲರ್ಟ್)

ರೆಡ್ ಅಲರ್ಟ್ ಎಂದರೆ ಅಪಾಯಕಾರಿ ಪರಿಸ್ಥಿತಿ ಎಂದರ್ಥ. ಇದು ಅಂತಿಮ ಎಚ್ಚರಿಕೆಯಾಗಿದೆ. ಈ ಸಮಯದಲ್ಲಿ ಜನರು ಹೊರಗಡೆ ಹೋಗದಂತೆ ಸೂಚಿಸಲಾಗುತ್ತದೆ. ಚಂಡಮಾರುತವು ಗಂಟೆಗೆ 130 ಕಿಮೀ ಗಾಳಿಯ ವೇಗದ ತೀವ್ರತೆಯೊಂದಿಗೆ ಬೀಸಿದಾಗ ಮತ್ತು ತೀವ್ರ ಮಳೆ ಬಂದಾಗ ಭಾರತೀಯ ಹವಾಮಾನ ಇಲಾಖೆಯು ಕೆಂಪು ಎಚ್ಚರಿಕೆ ನೀಡುತ್ತದೆ. ಆ ಪ್ರದೇಶದ ಆಡಳಿತವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗುತ್ತದೆ.

ಹವಾಮಾನವು ಅಪಾಯಕಾರಿ ಮಟ್ಟಕ್ಕೆ ತಲುಪಿದಾಗ ಮತ್ತು ಭಾರೀ ಹಾನಿಯ ಅಪಾಯವಿದ್ದರೆ, ಆಗ ರೆಡ್ ಅಲರ್ಟ್ ನೀಡಲಾಗುವುದು ಎಂದು ಹವಾಮಾನ ಇಲಾಖೆ ಹೇಳಿದೆ. 30 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಮತ್ತು ಕನಿಷ್ಠ 2 ಗಂಟೆಗಳ ಕಾಲ ಇದು ಮುಂದುವರಿಯುವ ಸಾಧ್ಯತೆ ಇದ್ದಾಗ ಮಾತ್ರ ಈ ರೀತಿಯ ಎಚ್ಚರಿಕೆಯನ್ನು ಘೋಷಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...