Homeಮುಖಪುಟಪದಕಗಳನ್ನು ಗಂಗಾ ನದಿಗೆ ಹಾಕಲು ಮುಂದಾದ ಕ್ರೀಡಾಪಟುಗಳ ಮನವೊಲಿಸಿದ ರೈತ ನಾಯಕ ಟಿಕಾಯತ್; ಆರೋಪಿ ಬಂಧನಕ್ಕೆ...

ಪದಕಗಳನ್ನು ಗಂಗಾ ನದಿಗೆ ಹಾಕಲು ಮುಂದಾದ ಕ್ರೀಡಾಪಟುಗಳ ಮನವೊಲಿಸಿದ ರೈತ ನಾಯಕ ಟಿಕಾಯತ್; ಆರೋಪಿ ಬಂಧನಕ್ಕೆ 5 ದಿನಗಳ ಗಡುವು

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕಳೆದ ಒಂದು ತಿಂಗಳಿನಿಂದ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ಪ್ರತಿಭಟನಾಕಾರರತ್ತ ತಿರುಗಿಯೂ ನೋಡುತ್ತಿಲ್ಲ. ಹಾಗಾಗಿ ಹೋರಾಟ ತೀವ್ರಗೊಳಿಸಿರುವ ಕ್ರೀಡಾಪಟುಗಳು, ಪ್ರತಿಭಟನೆಯ ಭಾಗವಾಗಿ ಒಲಿಂಪಿಕ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಗೆದ್ದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕಲು ಹರಿದ್ವಾರಕ್ಕೆ ಬಂದಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖಂಡ ನರೇಶ್ ಟಿಕಾಯತ್ ಅವರು ಮನವೊಲಿಸಿದ್ದಾರೆ.

ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶಾ ಫೋಗಟ್‌, ಬಜರಂಗ್ ಪೂನಿಯಾ ಹಾಗೂ ಅವರ ನೂರಾರು ಬೆಂಬಲಿಗರು ದೆಹಲಿಯಿಂದ ಹೊರಟು, ಹರಿದ್ವಾರದ ಹರ್ ಕಿ ಪೌರಿ ಘಾಟ್ ತಲುಪಿದರು. ಈ ವೇಳೆ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

ಕಣ್ಣೀರು ಹಾಕುತ್ತಿದ್ದ ಸಾಕ್ಷಿ ಮಲಿಕ್, ವಿನೇಶಾ ಹಾಗೂ ಅವರ ಸಂಬಂಧಿ ಸಂಗೀತಾ ಅವರನ್ನು ಸಮಾಧಾನಪಡಿಸಲಾಗುತ್ತಿತ್ತು. ಮತ್ತೊಂದೆಡೆ, ಅವರು ಕುಳಿತಿದ್ದ ಸ್ಥಳವನ್ನು ಬೆಂಬಲಿಗರು ಸುತ್ತುವರಿದಿದ್ದಕ್ಕೆ ‘ಹರ್ ಕಿ ಪೌರಿ’ ಘಾಟ್ ಸಾಕ್ಷಿಯಾಗಿತ್ತು. ನಂತರ, ಕುಸ್ತಿಪಟುಗಳು 20 ನಿಮಿಷಗಳಷ್ಟು ಮೌನಕ್ಕೆ ಮೊರೆ ಹೋದರು. ಬಳಿಕ ತಮ್ಮ ಪ್ರಶಸ್ತಿ ಫಲಕಗಳನ್ನು ಹಿಡಿದುಕೊಂಡು ನದಿ ತೀರದಲ್ಲಿ ಕಣ್ಣೀರು ಹಾಕಿದರು.

ಆರೋಪಿ ಬಿಜೆಪಿಯ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕುಸ್ತಿಪಟುಗಳು ಮಂಗಳವಾರ ಐದು ದಿನಗಳ ಗಡುವು ನೀಡಿದರು.

ಈ ಕುಸ್ತಿಪಟುಗಳು ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಭಾನುವಾರ ಸಂಸತ್‌ ಭವನಕ್ಕೆ ತೆರಳಿ ‘ಮಹಿಳಾ ಮಹಾ ಪಂಚಾಯತ್’ ನಡೆಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ಮಾರ್ಗ ಮಧ್ಯೆಯೇ ತಡೆದು, ಪದಕ ವಿಜೇತ ಕ್ರೀಡಾಪುಗಳನ್ನು ದಾರಿಯಲ್ಲಿ ಎಳೆದಾಡಿ ಬಹಳ ಕೆಟ್ಟದಾಗಿ ನಡೆಸಿಕೊಂಡರು. ಅಷ್ಟೇ ಅಲ್ಲದೇ ಕ್ರೀಡಾಪಟುಗಳ ವಿರುದ್ಧ ಕೇಸ್‌ಗಳನ್ನು ಹಾಕಿ ಕೆಲ ಕಾಲ ಬಂಧನ ಕೂಡ ಮಾಡಲಾಯಿತು. ಆನಂತರ ಪೊಲೀಸರು ಅವರಿಗೆ ಜಂತ‌ ಮಂತರ್‌ಗೆ ತೆರಳಲು ಅವಕಾಶ ನೀಡಿರಲಿಲ್ಲ.

ಇದನ್ನೂ ಓದಿ: ಮೆಡಲ್‌ಗಳನ್ನು ಗಂಗಾ ನದಿಗೆ ಎಸೆದು, ಆಮರಣಾಂತ ಉಪವಾಸ ಕೂರುತ್ತೇವೆ: ಕುಸ್ತಿಪಟು ಸಾಕ್ಷಿ ಮಲಿಕ್

‘ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ನಮ್ಮ ಹೋರಾಟವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ’ ಎಂದು ಆರೋಪಿಸಿದ್ದ ಪ್ರತಿಭಟನಕಾರರು, ತಮ್ಮ ಸಾಧನೆಗೆ ಸಂದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕುತ್ತೇವೆ. ಬಳಿಕ ಇಂಡಿಯಾ ಗೇಟ್ ಬಳಿ ಆಮರಣ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ್ದರು.

2016ರ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಈ ಬಗ್ಗೆ ಟ್ವಿಟ್ ಮಾಡಿದ್ದರು. ಇತರ ಕುಸ್ತಿಪಟುಗಳು ಈ ಟ್ವಿಟ್ ಅನ್ನು ಹಂಚಿಕೊಂಡಿದ್ದರು.

”ನಾವು ಗೆದ್ದಿಕೊಂಡಿರುವ ಈ ಪದಕಗಳು ಗಂಗೆಯಷ್ಟೇ ಪವಿತ್ರವಾಗಿವೆ” ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ.

ಸಾಕ್ಷಿ ಮಲಿಕ್ ಟ್ವೀಟ್‌ನಲ್ಲಿ ಏನು ಹೇಳಿದ್ದಾರೆ?

”ಈ ಪದಕಗಳು ಇಡೀ ದೇಶದ ಪಾಲಿಗೂ ಪವಿತ್ರವಾಗಿವೆ. ಆದರೆ, ತಪ್ಪು ಎಸಗಿರುವ ವ್ಯಕ್ತಿಯ ಪರವಾಗಿ ನಿಲ್ಲುತ್ತಿರುವ ವ್ಯವಸ್ಥೆಯೊಂದರ ಮುಖವಾಡವಾದಂತೆ ಈ ಪದಕಗಳನ್ನು ಬಳಸುವ ಬದಲು ಅವುಗಳನ್ನು ಕೊರಳಲ್ಲಿ ಹಾಕುವ ಬದಲು ಪವಿತ್ರವಾದ ಗಂಗಾ ನದಿಯೇ ಹೆಚ್ಚು ಸೂಕ್ತವಾದ ಸ್ಥಳ” ಎಂದು ತಿಳಿಸಿದ್ದಾರೆ.

”ದೇಶಕ್ಕಾಗಿ ಹುತಾತ್ಮರಾದವರ ಸ್ಮರಣೆಗಾಗಿ ಇಂಡಿಯಾ ಗೇಟ್ ನಿರ್ಮಿಸಲಾಗಿದೆ. ಆ ಹುತಾತ್ಮರಷ್ಟು ನಾವು ಪೂಜನೀಯರಲ್ಲ. ಆದರೆ, ಅಂತರರಾಷ್ಟ್ರೀಯ ಮಟ್ಟದ ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸುತ್ತಿದ್ದಾಗ, ನಮ್ಮ ಯೋಧರಷ್ಟೇ ನಾವೂ ಭಾವುಕರಾಗಿದ್ದೆವು” ಎಂದಿದ್ದಾರೆ.

”ನಮಗೆ ಕಿರುಕುಳ ನೀಡಿದ ವ್ಯಕ್ತಿಯನ್ನು ಬಂಧಿಸುವ ಬದಲು, ವ್ಯವಸ್ಥೆಯು ಸಂತ್ರಸ್ತರನ್ನೇ ಹೆದರಿಸಲು ಮತ್ತು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ’ ಎಂದೂ ಹೇಳಿದ್ದಾರೆ.

ಕುಸ್ತಿಪಟುಗಳಿಗೆ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸುವ ಅವಕಾಶ ನೀಡಲ್ಲ ಎಂದ ಪೊಲೀಸರು

”ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ. ಪ್ರತಿಭಟನೆ ನಡೆಸಲು ರಾಷ್ಟ್ರೀಯ ಸ್ಮಾರಕವು ಪ್ರತಿಭಟನೆ ನಡೆಸುವಂತಹ ಸ್ಥಳವಲ್ಲ. ಧರಣಿ ನಡೆಸಲು ಬೇರೆ ಸ್ಥಳದ ಬಗ್ಗೆ ಮಾಹಿತಿ ನೀಡಲಾಗುವುದು” ಎಂದು ಪೊಲೀಸ್ ಮೂಲಗಳು ಮಂಗಳವಾರ ಹೇಳಿವೆ.

ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿದ್ದು, ”ಇಂಡಿಯಾ ಗೇಟ್ ಬಳಿ ಧರಣಿ ನಡೆಸುವುದಕ್ಕೆ ಅನುಮತಿ ಕೋರಿ ಅವರು (ಕುಸ್ತಿಪಟುಗಳು) ಈ ವರೆಗೆ ನಮಗೆ ಮನವಿ ಸಲ್ಲಿಸಿಲ್ಲ. ಪ್ರತಿಭಟನೆ ನಡೆಸುವ ಸಂಬಂಧ ಅವರು ಡಿಸಿಪಿಗೆ ಮನವಿ ಸಲ್ಲಿಸಿದ ನಂತರ ನಿರ್ಧಾರ ತಿಳಿಸಲಾಗುವುದು” ಎಂದು ಹೇಳಿದ್ದಾರೆ.

ರಾಮಲೀಲಾ ಮೈದಾನ ಮತ್ತು ಬುರಾರಿಯಲ್ಲಿ ಪ್ರತಿಭಟನೆ ನಡೆಸುವಂತೆ ದೆಹಲಿ ಪೊಲೀಸರು ಸಲಹೆ ನೀಡುವ ಸಾಧ್ಯತೆ ಇದೆ ಎಂದು ಇವೇ ಮೂಲಗಳು ಹೇಳಿವೆ.

ಮಾನವ ಹಕ್ಕುಗಳ ಆಯೋಗಕ್ಕೆ ಟಿಎಂಸಿ ವಕ್ತಾರ ದೂರು:

”ಮಹಿಳಾ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಾಗಾಗಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಷ್ಟ್ರೀ ಯ ಮಾನವ ಹಕ್ಕುಗಳ ಆಯೋಗಕ್ಕೆ ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ದೂರು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...