Homeಮುಖಪುಟಮಣಿಪುರ ಹಿಂಸಾಚಾರ: ರಾಜ್ಯದ ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾದರೆ ಪ್ರಶಸ್ತಿ ವಾಪಸ್; ಕ್ರೀಡಾಪಟುಗಳಿಂದ ಜ್ಞಾಪಕ ಪತ್ರ

ಮಣಿಪುರ ಹಿಂಸಾಚಾರ: ರಾಜ್ಯದ ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾದರೆ ಪ್ರಶಸ್ತಿ ವಾಪಸ್; ಕ್ರೀಡಾಪಟುಗಳಿಂದ ಜ್ಞಾಪಕ ಪತ್ರ

- Advertisement -
- Advertisement -

ರಾಜ್ಯದ ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ಉಂಟಾದರೆ ಸರ್ಕಾರ ನೀಡಿದ ಬಹುಮಾನಗಳನ್ನು ಹಿಂದಿರುಗಿಸುವುದಾಗಿ ಮಣಿಪುರದ ಅಂತರರಾಷ್ಟ್ರೀಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಕ್ರೀಡಾಪಟುಗಳು ಮಂಗಳವಾರ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜ್ಯ ಪ್ರವಾಸದ ಸಂದರ್ಭದಲ್ಲಿ ಎಲ್ ಅನಿತಾ ಚಾನು (ಧ್ಯಾನ್ ಚಂದ್ ಪ್ರಶಸ್ತಿ ಪುರಸ್ಕೃತರು), ಅರ್ಜುನ ಪ್ರಶಸ್ತಿ ಪುರಸ್ಕೃತರಾದ ಎನ್ ಕುಂಜರಾಣಿ ದೇವಿ (ಪದ್ಮಶ್ರೀ), ಎಲ್ ಸರಿತಾ ದೇವಿ ಮತ್ತು ಡಬ್ಲ್ಯು ಸಂಧ್ಯಾರಾಣಿ ದೇವಿ (ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು) ಮತ್ತು ಎಸ್ ಮೀರಾಬಾಯಿ ಚಾನು (ಪದ್ಮಶ್ರೀ ಮತ್ತು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರು) ಸೇರಿದಂತೆ 11 ಕ್ರೀಡಾಪಟುಗಳು ಈ ವಿಷಯದ ಬಗ್ಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಲ್ ಅನಿತಾ ಚಾನು, ”ಮಣಿಪುರದ ಸಮಗ್ರತೆಯ ರಕ್ಷಣೆಯ ಬಗ್ಗೆ ಅಮಿತ್ ಶಾ ನಮಗೆ ಭರವಸೆ ನೀಡದಿದ್ದರೆ, ಭಾರತ ಸರ್ಕಾರ ನೀಡಿದ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತೇವೆ” ಎಂದು ಹೇಳಿದರು.

”ಬೇಡಿಕೆಯನ್ನು ಪೂರೈಸದಿದ್ದರೆ, ಕ್ರೀಡಾ ವ್ಯಕ್ತಿಗಳು ಭವಿಷ್ಯದಲ್ಲಿ ಭಾರತವನ್ನು ಪ್ರತಿನಿಧಿಸುವುದಿಲ್ಲ ಅಥವಾ ಅವರು ಯಾವುದೇ ಉದಯೋನ್ಮುಖ ಪ್ರತಿಭೆಗಳಿಗೆ ತರಬೇತಿ ನೀಡುವುದಿಲ್ಲ” ಎಂದು ಅವರು ಹೇಳಿದರು.

11 ಕ್ರೀಡಾಪಟುಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಶಾ ಅವರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲು ಹೋದರು ಆದರೆ ಕೇಂದ್ರ ಗೃಹ ಸಚಿವರು ಕುಕಿ ಸಂತ್ರಸ್ತರು ಮತ್ತು ಸಂಘಟನೆಗಳನ್ನು ಭೇಟಿ ಮಾಡಲು ಚುರಚಂದಪುರಕ್ಕೆ ತೆರಳಿದ್ದರಿಂದ ಅವರನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗಲಿಲ್ಲ.

”ನಾವು ಜ್ಞಾಪಕದ ಪ್ರತಿಯನ್ನು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ ಸಲ್ಲಿಸಿದ್ದೇವೆ. ಚುರಾಚಂದ್‌ಪುರದಿಂದ ವಾಪಸಾದ ನಂತರ ಸಂಜೆ ಶಾ ಅವರೊಂದಿಗೆ ಸಭೆಯನ್ನು ಏರ್ಪಡಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ನಂತರ ನಾವು ಅವರಿಗೆ ಜ್ಞಾಪಕ ಪತ್ರವನ್ನು ಹಸ್ತಾಂತರಿಸುತ್ತೇವೆ” ಎಂದು ಚಾನು ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಸಹಜ ಸ್ಥತಿಗೆ ಬರಲು ರಾಷ್ಟ್ರಪತಿ ಮಧ್ಯಸ್ಥಿಕೆ ವಹಿಸಬೇಕು: ದ್ರೌಪದಿ ಮುರ್ಮುರನ್ನು ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ

”ಜ್ಞಾಪಕ ಪತ್ರಕ್ಕೆ ರಾಜ್ಯದ ಇತರ ಅರ್ಜುನ್ ಪ್ರಶಸ್ತಿ ಪುರಸ್ಕೃತರು ಸಹ ಸಹಿ ಮಾಡಿದ್ದಾರೆ. ಅವರೆಂದರೆ ಒಯಿನಮ್ ಬೆಂಬೆಮ್ ದೇವಿ (ಪದ್ಮಶ್ರೀ ಕೂಡ), ಎನ್ ಸೋನಿಯಾ ಚಾನು, ಎಂ ಬಿಯೋಜಿತ್ ಸಿಂಗ್, ವೈ ಸನತೋಯ್ ದೇವಿ, ಎಲ್ ಶುಶೀಲಾ ದೇವಿ ಮತ್ತು ಎಂ ಸುರಂಜಯ್ ಸಿಂಗ್” ಎಂದು ತಿಳಿಸಿದರು.

”ಕುಕಿ ಭಯೋತ್ಪಾದಕರು ಮಣಿಪುರದ ಸಮಗ್ರತೆಗೆ ಸವಾಲು ಹಾಕುತ್ತಿದ್ದಾರೆ” ಜನರನ್ನು ಕೊಂದು ಮನೆಗಳನ್ನು ಸುಡುವ ಮೂಲಕ ಹಿಂಸಾಚಾರ ನಡೆಸುತ್ತಿದ್ದಾರೆ. ಕೇಂದ್ರ ಭದ್ರತಾ ಪಡೆಗಳು ಇದನ್ನು ನಿಯಂತ್ರಿಸುವಲ್ಲಿ ವಿಫಲಾಗಿವೆಯೇ? ಎಂದು ಕ್ರೀಡಾಪಟುಗಳು ಪ್ರಶ್ನಿಸಿದ್ದಾರೆ.

”ವಿಶೇಷವಾಗಿ ಕಣಿವೆ ಜಿಲ್ಲೆಗಳ ಬಾಹ್ಯ ಪ್ರದೇಶಗಳಲ್ಲಿ ನಿರಾಯುಧ ನಾಗರಿಕರ ಮೇಲೆ ನಡೆಯುತ್ತಿರುವ ಇಂತಹ ದಾಳಿಗಳನ್ನು ನಾವು ಖಂಡಿಸುತ್ತೇವೆ” ಎಂದು ಅವರು ಹೇಳಿದರು.

”ಕುಕಿ ಉಗ್ರಗಾಮಿ ಗುಂಪುಗಳೊಂದಿಗಿನ ಕಾರ್ಯಾಚರಣೆಯ ಅಮಾನತು (SoO) ಒಪ್ಪಂದವನ್ನು ರದ್ದುಗೊಳಿಸಬೇಕು, ಶಾಂತಿ ಮತ್ತು ಸಹಜತೆಯನ್ನು ಶೀಘ್ರವಾಗಿ ಮರುಸ್ಥಾಪಿಸಬೇಕು ಮತ್ತು ಮಣಿಪುರದ ಏಕತೆ ಮತ್ತು ಸಮಗ್ರತೆಯನ್ನು ರಕ್ಷಿಸಬೇಕು” ಎಂದು ಕ್ರೀಡಾಪಟುಗಳು ಒತ್ತಾಯಿಸಿದರು.

”ಮಣಿಪುರವನ್ನು ವಿಭಜಿಸುವ ಬೇಡಿಕೆಯು ಯಾವುದೇ ಸಂದರ್ಭದಲ್ಲೂ ಸ್ವೀಕಾರಾರ್ಹವಲ್ಲ, ಎಲ್ಲಾ ಅಕ್ರಮ ವಲಸಿಗರನ್ನು ಗಡೀಪಾರು ಮಾಡುಬೇಕು ಎಂದು ” ಎಂದು ಮೆಮೊರಾಂಡಮ್ ಒತ್ತಾಯಿಸಿದೆ.

ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಲು ಕಾರಣವಾಗಿರುವುದರಿಂದ NH2 ನಲ್ಲಿನ ದಿಗ್ಬಂಧನವನ್ನು ಹಿಂತೆಗೆದುಕೊಳ್ಳುವಂತೆ ಕ್ರೀಡಾಪಟುಗಳು ಸರ್ಕಾರವನ್ನು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...