Homeಮುಖಪುಟಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

ಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ನನ್ನು ಬಂಧಿಸುವಂತೆ ಆಗ್ರಹಿಸುತ್ತಿರುವ ಒಲಂಪಿಕ್ ಮತ್ತು ಕಾಮನ್‌ವೆಲ್ತ್‌ ಕ್ರೀಡಾಕೂಟಗಳ ಪದಕ ವಿಜೇತರು, “ಗಂಗಾ ನದಿಗೆ ನಮ್ಮ ಪದಕಗಳನ್ನು ಅರ್ಪಿಸುತ್ತೇವೆ” ಎಂದಿದ್ದು ಇತಿಹಾಸದಲ್ಲಿ ಉಳಿಯುವ ಘಟನೆ.

ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ಅನೇಕರು ನಡೆಸುತ್ತಿರುವ ಈ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಇದೆ. ಸರ್ಕಾರ ತಾಳಿರುವ ನಿರ್ಲಕ್ಷ್ಯದಿಂದಾಗಿ ಕುಸ್ತಿಪಟುಗಳು ತೀವ್ರವಾಗಿ ನೊಂದಿದ್ದು- ಪದಕಗಳನ್ನು ಗಂಗಾನದಿಗೆ ಬಿಡುವ ಕ್ರಮದ ಕುರಿತು ಚಿಂತಿಸಿದ್ದಾರೆ.

“ನಮ್ಮ ಕುತ್ತಿಗೆಯಲ್ಲಿ ಅಲಂಕರಿಸಲ್ಪಟ್ಟ ಈ ಪದಕಗಳಿಗೆ ಇನ್ನು ಮುಂದೆ ಯಾವುದೇ ಅರ್ಥವಿಲ್ಲ ಎಂದು ತೋರುತ್ತದೆ” ಎಂದು ಕುಸ್ತಿಪಟುಗಳು ಹೇಳಿದ್ದಾರೆ. “ಪೊಲೀಸ್ ಮತ್ತು ವ್ಯವಸ್ಥೆಯು ನಮ್ಮನ್ನು ಅಪರಾಧಿಗಳಂತೆ ಪರಿಗಣಿಸುತ್ತಿದೆ. ಕಿರುಕುಳ ನೀಡಿದಾಗ ಸಾರ್ವಜನಿಕ ಸಭೆಗಳಲ್ಲಿ ನಮ್ಮ ಮೇಲೆ ಬಹಿರಂಗವಾಗಿ ದಾಳಿ ನಡೆಸುತ್ತಿದ್ದಾನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಗಂಗಾ ನದಿಗೆ ಪದಕಗಳನ್ನು ಬೀಸಾಡುವ ಯೋಚನೆ’ಯು ಭಾರತದ ಕ್ರೀಡಾ ಇತಿಹಾಸದಲ್ಲಿ ಅಸಾಮಾನ್ಯ ಹೆಜ್ಜೆಯಾಗಿದ್ದರೂ, ಪ್ರಪಂಚದಾದ್ಯಂತದ ಅನೇಕ ಕ್ರೀಡಾಪಟುಗಳು ಸಾಮಾಜಿಕ ಅನಿಷ್ಟಗಳ ವಿರುದ್ಧ ಪ್ರತಿಭಟಿಸಲು ಇಂತಹ ಕಠಿಣ ಕ್ರಮಗಳನ್ನು ಕೈಗೊಂಡಿದ್ದು ಉಂಟು. ಅಂತಹ ಐತಿಹಾಸಿಕ ಘಟನೆಗಳ ಪೈಕಿ- ಪ್ರಖ್ಯಾತ ಅಮೆರಿಕನ್ ಬಾಕ್ಸರ್‌ ಮುಹಮ್ಮದ್ ಅಲಿ ಅವರ ಪ್ರತಿರೋಧವೂ ಸೇರಿದೆ.

ಜನವರಿ 17, 1942 ರಂದು ಕೆಂಟುಕಿಯ ಲೂಯಿಸ್ವಿಲ್ಲೆಯಲ್ಲಿ ಜನಿಸಿದ ಮುಹಮ್ಮದ್ ಅಲಿ ಬಾಕ್ಸಿಂಗ್ ಜಗತ್ತಿಗೆ ಕಾಲಿಟ್ಟಿದ್ದು 12ನೇ ವಯಸ್ಸಿನಲ್ಲಿ. ಅಲಿ ಅವರ ಬೈಸಿಕಲ್ ಕಳವಾದ ಬಳಿಕ ಬಾಕ್ಸಿಂಗ್ ಕಡೆಗೆ ಆಕರ್ಷಿತರಾಗುತ್ತಾರೆ. ತಮ್ಮ ಬೈಸಿಕಲ್ ಕದ್ದವನಿಗೆ ಥಳಿಸುತ್ತೇನೆ ಎಂದು ಪೊಲೀಸರಲ್ಲಿ ಅಲಿ ಹೇಳಿಕೊಂಡಿದ್ದರು.

ಅಲಿ ಬಾಕ್ಸಿಂಗ್ ಜಗತ್ತಿನಲ್ಲಿ ಸಾಧನೆಗೈದರು. ‘ದಿ ಗ್ರೇಟೆಸ್ಟ್’ ಎಂಬ ಖ್ಯಾತಿಯನ್ನೂ ಪಡೆದರು. ಕೇವಲ ಆರು ವರ್ಷಗಳಲ್ಲಿ, ಅಂದರೆ 1960ರಲ್ಲಿ ಒಲಂಪಿಕ್ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡರು. ಆದರೆ 48 ಗಂಟೆಗಳ ಕಾಲ ಪದಕವನ್ನು ಸ್ವೀಕರಿಸಿರಲಿಲ್ಲ. ಯಾಕೆಂದರೆ ಈ ಪ್ರಚಂಡ ಯಶಸ್ಸಿನ ನಂತರವೂ ಅಲಿ ವರ್ಣಭೇದ ನೀತಿಯನ್ನು ಎದುರಿಸುತ್ತಲೇ ಇದ್ದರು.

ಅಲಿ ಅವರಿಗೆ ಸಂಬಂಧಿಸಿದ ಮತ್ತೊಂದು ಘಟನೆ ಪ್ರಸಿದ್ಧವಾಗಿದೆ.  ಅವರು ತಮ್ಮ ಒಲಿಂಪಿಕ್ ಚಿನ್ನದ ಪದಕದೊಂದಿಗೆ ಹಿಂದಿರುಗಿದಾಗ, ಬಿಳಿ ಜನರಿಗೆ ಮಾತ್ರ ಸೇವೆ ಸಲ್ಲಿಸುವ ರೆಸ್ಟೋರೆಂಟ್‌ನಲ್ಲಿ ಇವರಿಗೆ ಪ್ರವೇಶ ನಿರಾಕರಿಸಲಾಯಿತು. ಬಿಳಿಕ ಮೋಟಾರ್‌ಸೈಕಲ್ ಗ್ಯಾಂಗ್‌ನೊಂದಿಗೆ ಅವರು ಜಗಳವಾಡಿದ್ದರು.

ಸಮಯದಲ್ಲಿ ಕಪ್ಪು ಜನರಿಗೆ ಊಟ ಮಾಡಲು ಅವಕಾಶವಿರಲಿಲ್ಲ. ಆಗ ತನ್ನ ಪದಕವನ್ನು ಧರಿಸಿದ ಅಲಿ, ಊಟವನ್ನು ಕೇಳಿದರು. ಆದರೂ ಅನುಮತಿ ನೀಡಲಾಗಲಿಲ್ಲ.

ಇದನ್ನೂ ಓದಿರಿ: ಆರೋಪಿ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ

ತನ್ನ ಆತ್ಮಚರಿತ್ರೆಯಾದ “ದಿ ಗ್ರೇಟೆಸ್ಟ್”ನಲ್ಲಿ ಈ ಘಟನೆಯ ಕುರಿತು ಅಲಿ ಬರೆದುಕೊಂಡಿದ್ದಾರೆ. ಆ ಅವಮಾನದ ಬಳಿಕ ಅಲಿ ಅವರು ತಮ್ಮ ಪದಕವನ್ನು ಓಹಿಯೋ ನದಿಗೆ ಎಸೆದರು ಎಂದು ದಾಖಲಾಗಿದೆ.

ಆದಾಗ್ಯೂ, ಈ ಆವೃತ್ತಿಯ ಬಗ್ಗೆ ಅನೇಕರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಅಲಿಯವರು ಪದಕವನ್ನು ಕಳೆದುಕೊಂಡಿರಬಹುದು ಎಂದು ಕೆಲವು ನಿಕಟವರ್ತಿಗಳು ಹೇಳಿಕೊಂಡಿದ್ದಾರೆ.

ನ್ಯೂಯಾರ್ಕ್ ಟೈಮ್ಸ್‌ನ 2016ರ ವರದಿಯು ವಿಭಿನ್ನ ಆಯಾಮಗಳನ್ನು ನೀಡಿತ್ತು. ಮೌಖಿಕ ಇತಿಹಾಸದ ಲೇಖಕ ಥಾಮಸ್ ಹೌಸರ್, “ಬಾಕ್ಸರ್ ಮೊಹಮ್ಮದ್ ಅಲಿಯವರು ತಮ್ಮ ಪದಕವನ್ನು ಕಳೆದುಕೊಂಡಿದ್ದರು” ಎಂದು ತಿಳಿಸಿದ್ದಾರೆ. ಅವರಿಗೆ (ಅಲಿಯವರಿಗೆ) ಅಂತಿಮವಾಗಿ 1996 ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ಪದಕದ ಪ್ರತಿರೂಪವನ್ನು ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...