Homeಮುಖಪುಟಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

ಪ್ರಸಿದ್ಧ ಬಾಕ್ಸರ್‌ ಮುಹಮ್ಮದ್ ಅಲಿ ಜೀವನ ಕಥೆ ನೆನಪಿಸಿದ ಭಾರತೀಯ ಕುಸ್ತಿಪಟುಗಳ ಹೋರಾಟ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ನನ್ನು ಬಂಧಿಸುವಂತೆ ಆಗ್ರಹಿಸುತ್ತಿರುವ ಒಲಂಪಿಕ್ ಮತ್ತು ಕಾಮನ್‌ವೆಲ್ತ್‌ ಕ್ರೀಡಾಕೂಟಗಳ ಪದಕ ವಿಜೇತರು, “ಗಂಗಾ ನದಿಗೆ ನಮ್ಮ ಪದಕಗಳನ್ನು ಅರ್ಪಿಸುತ್ತೇವೆ” ಎಂದಿದ್ದು ಇತಿಹಾಸದಲ್ಲಿ ಉಳಿಯುವ ಘಟನೆ.

ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ಅನೇಕರು ನಡೆಸುತ್ತಿರುವ ಈ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಇದೆ. ಸರ್ಕಾರ ತಾಳಿರುವ ನಿರ್ಲಕ್ಷ್ಯದಿಂದಾಗಿ ಕುಸ್ತಿಪಟುಗಳು ತೀವ್ರವಾಗಿ ನೊಂದಿದ್ದು- ಪದಕಗಳನ್ನು ಗಂಗಾನದಿಗೆ ಬಿಡುವ ಕ್ರಮದ ಕುರಿತು ಚಿಂತಿಸಿದ್ದಾರೆ.

“ನಮ್ಮ ಕುತ್ತಿಗೆಯಲ್ಲಿ ಅಲಂಕರಿಸಲ್ಪಟ್ಟ ಈ ಪದಕಗಳಿಗೆ ಇನ್ನು ಮುಂದೆ ಯಾವುದೇ ಅರ್ಥವಿಲ್ಲ ಎಂದು ತೋರುತ್ತದೆ” ಎಂದು ಕುಸ್ತಿಪಟುಗಳು ಹೇಳಿದ್ದಾರೆ. “ಪೊಲೀಸ್ ಮತ್ತು ವ್ಯವಸ್ಥೆಯು ನಮ್ಮನ್ನು ಅಪರಾಧಿಗಳಂತೆ ಪರಿಗಣಿಸುತ್ತಿದೆ. ಕಿರುಕುಳ ನೀಡಿದಾಗ ಸಾರ್ವಜನಿಕ ಸಭೆಗಳಲ್ಲಿ ನಮ್ಮ ಮೇಲೆ ಬಹಿರಂಗವಾಗಿ ದಾಳಿ ನಡೆಸುತ್ತಿದ್ದಾನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಗಂಗಾ ನದಿಗೆ ಪದಕಗಳನ್ನು ಬೀಸಾಡುವ ಯೋಚನೆ’ಯು ಭಾರತದ ಕ್ರೀಡಾ ಇತಿಹಾಸದಲ್ಲಿ ಅಸಾಮಾನ್ಯ ಹೆಜ್ಜೆಯಾಗಿದ್ದರೂ, ಪ್ರಪಂಚದಾದ್ಯಂತದ ಅನೇಕ ಕ್ರೀಡಾಪಟುಗಳು ಸಾಮಾಜಿಕ ಅನಿಷ್ಟಗಳ ವಿರುದ್ಧ ಪ್ರತಿಭಟಿಸಲು ಇಂತಹ ಕಠಿಣ ಕ್ರಮಗಳನ್ನು ಕೈಗೊಂಡಿದ್ದು ಉಂಟು. ಅಂತಹ ಐತಿಹಾಸಿಕ ಘಟನೆಗಳ ಪೈಕಿ- ಪ್ರಖ್ಯಾತ ಅಮೆರಿಕನ್ ಬಾಕ್ಸರ್‌ ಮುಹಮ್ಮದ್ ಅಲಿ ಅವರ ಪ್ರತಿರೋಧವೂ ಸೇರಿದೆ.

ಜನವರಿ 17, 1942 ರಂದು ಕೆಂಟುಕಿಯ ಲೂಯಿಸ್ವಿಲ್ಲೆಯಲ್ಲಿ ಜನಿಸಿದ ಮುಹಮ್ಮದ್ ಅಲಿ ಬಾಕ್ಸಿಂಗ್ ಜಗತ್ತಿಗೆ ಕಾಲಿಟ್ಟಿದ್ದು 12ನೇ ವಯಸ್ಸಿನಲ್ಲಿ. ಅಲಿ ಅವರ ಬೈಸಿಕಲ್ ಕಳವಾದ ಬಳಿಕ ಬಾಕ್ಸಿಂಗ್ ಕಡೆಗೆ ಆಕರ್ಷಿತರಾಗುತ್ತಾರೆ. ತಮ್ಮ ಬೈಸಿಕಲ್ ಕದ್ದವನಿಗೆ ಥಳಿಸುತ್ತೇನೆ ಎಂದು ಪೊಲೀಸರಲ್ಲಿ ಅಲಿ ಹೇಳಿಕೊಂಡಿದ್ದರು.

ಅಲಿ ಬಾಕ್ಸಿಂಗ್ ಜಗತ್ತಿನಲ್ಲಿ ಸಾಧನೆಗೈದರು. ‘ದಿ ಗ್ರೇಟೆಸ್ಟ್’ ಎಂಬ ಖ್ಯಾತಿಯನ್ನೂ ಪಡೆದರು. ಕೇವಲ ಆರು ವರ್ಷಗಳಲ್ಲಿ, ಅಂದರೆ 1960ರಲ್ಲಿ ಒಲಂಪಿಕ್ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡರು. ಆದರೆ 48 ಗಂಟೆಗಳ ಕಾಲ ಪದಕವನ್ನು ಸ್ವೀಕರಿಸಿರಲಿಲ್ಲ. ಯಾಕೆಂದರೆ ಈ ಪ್ರಚಂಡ ಯಶಸ್ಸಿನ ನಂತರವೂ ಅಲಿ ವರ್ಣಭೇದ ನೀತಿಯನ್ನು ಎದುರಿಸುತ್ತಲೇ ಇದ್ದರು.

ಅಲಿ ಅವರಿಗೆ ಸಂಬಂಧಿಸಿದ ಮತ್ತೊಂದು ಘಟನೆ ಪ್ರಸಿದ್ಧವಾಗಿದೆ.  ಅವರು ತಮ್ಮ ಒಲಿಂಪಿಕ್ ಚಿನ್ನದ ಪದಕದೊಂದಿಗೆ ಹಿಂದಿರುಗಿದಾಗ, ಬಿಳಿ ಜನರಿಗೆ ಮಾತ್ರ ಸೇವೆ ಸಲ್ಲಿಸುವ ರೆಸ್ಟೋರೆಂಟ್‌ನಲ್ಲಿ ಇವರಿಗೆ ಪ್ರವೇಶ ನಿರಾಕರಿಸಲಾಯಿತು. ಬಿಳಿಕ ಮೋಟಾರ್‌ಸೈಕಲ್ ಗ್ಯಾಂಗ್‌ನೊಂದಿಗೆ ಅವರು ಜಗಳವಾಡಿದ್ದರು.

ಸಮಯದಲ್ಲಿ ಕಪ್ಪು ಜನರಿಗೆ ಊಟ ಮಾಡಲು ಅವಕಾಶವಿರಲಿಲ್ಲ. ಆಗ ತನ್ನ ಪದಕವನ್ನು ಧರಿಸಿದ ಅಲಿ, ಊಟವನ್ನು ಕೇಳಿದರು. ಆದರೂ ಅನುಮತಿ ನೀಡಲಾಗಲಿಲ್ಲ.

ಇದನ್ನೂ ಓದಿರಿ: ಆರೋಪಿ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ

ತನ್ನ ಆತ್ಮಚರಿತ್ರೆಯಾದ “ದಿ ಗ್ರೇಟೆಸ್ಟ್”ನಲ್ಲಿ ಈ ಘಟನೆಯ ಕುರಿತು ಅಲಿ ಬರೆದುಕೊಂಡಿದ್ದಾರೆ. ಆ ಅವಮಾನದ ಬಳಿಕ ಅಲಿ ಅವರು ತಮ್ಮ ಪದಕವನ್ನು ಓಹಿಯೋ ನದಿಗೆ ಎಸೆದರು ಎಂದು ದಾಖಲಾಗಿದೆ.

ಆದಾಗ್ಯೂ, ಈ ಆವೃತ್ತಿಯ ಬಗ್ಗೆ ಅನೇಕರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಅಲಿಯವರು ಪದಕವನ್ನು ಕಳೆದುಕೊಂಡಿರಬಹುದು ಎಂದು ಕೆಲವು ನಿಕಟವರ್ತಿಗಳು ಹೇಳಿಕೊಂಡಿದ್ದಾರೆ.

ನ್ಯೂಯಾರ್ಕ್ ಟೈಮ್ಸ್‌ನ 2016ರ ವರದಿಯು ವಿಭಿನ್ನ ಆಯಾಮಗಳನ್ನು ನೀಡಿತ್ತು. ಮೌಖಿಕ ಇತಿಹಾಸದ ಲೇಖಕ ಥಾಮಸ್ ಹೌಸರ್, “ಬಾಕ್ಸರ್ ಮೊಹಮ್ಮದ್ ಅಲಿಯವರು ತಮ್ಮ ಪದಕವನ್ನು ಕಳೆದುಕೊಂಡಿದ್ದರು” ಎಂದು ತಿಳಿಸಿದ್ದಾರೆ. ಅವರಿಗೆ (ಅಲಿಯವರಿಗೆ) ಅಂತಿಮವಾಗಿ 1996 ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ಪದಕದ ಪ್ರತಿರೂಪವನ್ನು ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...