Homeಮುಖಪುಟಜೂ.1ರಿಂದ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತ: ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಣೆ

ಜೂ.1ರಿಂದ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತ: ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಣೆ

- Advertisement -
- Advertisement -

ಜೂನ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತವಾಗಿ ಪೂರೈಕೆ ಮಾಡಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಮಹತ್ವದ ಘೋಷಣೆ ಮಾಡಿದ್ದಾರೆ.

ಈಗ ಇರುವ ಹಣದುಬ್ಬರ ಪರಿಹಾರ ಶಿಬಿರಗಳನ್ನು ನೋಡಿಕೊಂಡು ಸಾರ್ವಜನಿಕರೊಂದಿಗೆ ಮಾತನಾಡಿದ ಸಿಎಂ ಗೆಹ್ಲೋಟ್ ಅವರು ವಿದ್ಯುತ್ ಬಿಲ್ ನಲ್ಲಿ ವಿನಾಯಿತಿಯಲ್ಲಿ ಸ್ವಲ್ಪ ಬದಲಾವಣೆ ಆಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಮೇ ತಿಂಗಳಲ್ಲಿ ವಿದ್ಯುತ್ ಬಿಲ್‌ಗಳಲ್ಲಿ ಇಂಧನ ಹೆಚ್ಚುವರಿ ಶುಲ್ಕದ ಬಗ್ಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಸ್ವೀಕರಿಸಲಾಗಿದೆ. ಅದರ ಆಧಾರದ ಮೇಲೆ ಈ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಗೆಹ್ಲೋಟ್ ತಿಳಿಸಿದ್ದಾರೆ.

ಈಗ ಹೊಸ ನಿಯಮಗಳ ಪ್ರಕಾರ ರಾಜಸ್ಥಾನದಲ್ಲಿ ಪ್ರತಿ ತಿಂಗಳು 100 ಯೂನಿಟ್ ವಿದ್ಯುತ್ ಬಳಕೆ ಮಾಡುವವರ ಬಿಲ್ ಸಂಪೂರ್ಣ ಶೂನ್ಯವಾಗಲಿದೆ. ಅವರು ಮುಂಗಡವಾಗಿ ಯಾವುದೇ ಬಿಲ್ ಪಾವತಿಸಬೇಕಾಗಿಲ್ಲ. 100 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಖರ್ಚು ಮಾಡುವ ಕುಟುಂಬಗಳು ಅವರು 100 ಯುನಿಟ್‌ಗಳ ರಿಯಾಯಿತಿಯನ್ನು ಸಹ ಪಡೆಯುತ್ತಾರೆ. ಅಂದರೆ 100 ಯೂನಿಟ್ ಗಿಂತ ಹೆಚ್ಚಿಗೆ ಎಷ್ಟೇ ಬಿಲ್ ಬಂದರೂ ಮೊದಲ 100 ಯೂನಿಟ್‌ಗೆ ಯಾವುದೇ ವಿದ್ಯುತ್ ಶುಲ್ಕವನ್ನು ಪಾವತಿಸಬೇಕಾಗಿಲ್ಲ..

ಇದನ್ನೂ ಓದಿ: ವಿವಾದಿತ ಪಠ್ಯ ಕೈಬಿಡುವುದು ಗ್ಯಾರೆಂಟಿ; ‘ಜ್ಞಾನದೇಗುಲಕ್ಕೆ ಸ್ವಾಗತ, ಕೈಮುಗಿದು ಒಳಗೆ ಬನ್ನಿ’: ರಾಜ್ಯದ ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಕೆಲವು ಕುಟುಂಬಗಳು ತಿಂಗಳಿಗೆ 200 ಯೂನಿಟ್ ವರೆಗೆ ವಿದ್ಯುತ್ ಬಳಸುತ್ತವೆ ಅಂತಹ ಕುಟುಂಬಗಳಿಗೂ ಈ ರಿಯಾಯಿತಿ ನೀಡಲಾಗಿದೆ. ಇದರಲ್ಲಿ, ಮೊದಲ 100 ಯುನಿಟ್‌ಗಳು ಉಚಿತವಾಗಿರುತ್ತದೆ. ಆದರೆ ಅದಕ್ಕಿಂತ ಹೆಚ್ಚಿನ ಬಳಕೆಯ ಮೇಲೆ, ಸ್ಥಿರ ಶುಲ್ಕಗಳು, ಇಂಧನ ಹೆಚ್ಚುವರಿ ಶುಲ್ಕಗಳು ಸೇರಿದಂತೆ ಎಲ್ಲಾ ಇತರ ಶುಲ್ಕಗಳನ್ನು ಮನ್ನಾ ಮಾಡಲಾಗುತ್ತದೆ.

ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್‌ನಿಂದ ಜನರ ಮನಗೆಲ್ಲಲು ಉಚಿತ ವಿದ್ಯುತ್‌ ಯೋಜನೆ ಘೋಷಣೆ ಮಾಡಲಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ವಿದ್ಯುತ್​ ಅನ್ನು ಎಷ್ಟೇ ಬಳಕೆ ಮಾಡಿದರೂ, ಬಳಕೆದಾರರು ಮೊದಲ 100 ಯೂನಿಟ್‌ಗಳಿಗೆ ಯಾವುದೇ ವಿದ್ಯುತ್ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...