Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ: ಇಂದು ರೈತ ಮುಖಂಡ ನರೇಶ್ ಟಿಕಾಯತ್ ನೇತೃತ್ವದಲ್ಲಿ 'ಮಹಾಪಂಚಾಯತ್'

ಕುಸ್ತಿಪಟುಗಳ ಪ್ರತಿಭಟನೆ: ಇಂದು ರೈತ ಮುಖಂಡ ನರೇಶ್ ಟಿಕಾಯತ್ ನೇತೃತ್ವದಲ್ಲಿ ‘ಮಹಾಪಂಚಾಯತ್’

- Advertisement -
- Advertisement -

ಭಾರತದ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ, ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆಯನ್ನು ಮುಂದುವರೆಸಿದ್ದು, ದೇಶದ ಪ್ರಮುಖ ರೈತ ಸಂಘಟನೆಗಳು ಅವರಿಗೆ ಬೆಂಬಲ ನೀಡುತ್ತಿದ್ದಾರೆ. ಮುಂದಿನ ಪ್ರತಿಭಟನೆಯ ರೂಪುರೇಷೆಗಳ ಬಗ್ಗೆ ಚರ್ಚಿಸಲು ರೈತರು ಗುರುವಾರ ‘ಮಹಾಪಂಚಾಯತ್’ ನಡೆಸಲಿದ್ದಾರೆ.

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಕುಸ್ತಿಪಟುಗಳ ಪ್ರತಿಭಟನೆ ಕುರಿತು ಚರ್ಚಿಸಲು ಗುರುವಾರ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಎಲ್ಲಾ ಖಾಪ್‌ಗಳ ಮಹಾ ಸಭೆ ನಡೆಯಲಿದೆ. ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ರಾಜಸ್ಥಾನ ಮತ್ತು ದೆಹಲಿಯ ವಿವಿಧ ಖಾಪ್‌ಗಳ ಹಲವಾರು ಪ್ರತಿನಿಧಿಗಳು ಮತ್ತು ಅವರ ಮುಖ್ಯಸ್ಥರು ಮಹಾಪಂಚಾಯತ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಹೇಳಿದೆ ಮುಖಂಡ ನರೇಶ್ ಟಿಕಾಯತ್ ಹೇಳಿದ್ದಾರೆ.

ಭಾರತದ ಕೆಲವು ಅತ್ಯುತ್ತಮ ಕುಸ್ತಿಪಟುಗಳು ತಾವು ಗೆದ್ದಿರುವ ಪದಕಗಳನ್ನು ಮಂಗಳವಾರ ಗಂಗಾ ನದಿಯಲ್ಲಿ ಬಿಡಲು ತೆರಳಿದ್ದ ವೇಳೆ ಅವರ ಮನವೊಲಿಸುವಲ್ಲಿ ರೈತ ಮುಖಂಡ ನರೇಶ್ ಟಿಕಾಯತ್ ಪ್ರಮುಖ ಪಾತ್ರ ವಹಿಸಿದ್ದಾರೆ. ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಮಂಗಳವಾರ ಹರಿದ್ವಾರಕ್ಕೆ ತೆರಳಿ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳದ ಕಾರಣ ತಮ್ಮ ಪದಕಗಳನ್ನು ನದಿಯಲ್ಲಿ ಮುಳುಗಿಸುವುದಾಗಿ ಹೇಳಿದ್ದರು. ರೈತ ಮುಖಂಡರು ಮನವೊಲಿಸಿದ ಬಳಿಕ ಪೊಲೀಸರಿಗೆ ಐದು ದಿನಗಳ ಗಡುವು ನೀಡಿ ತಮ್ಮನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಇದನ್ನೂ ಓದಿ: ಕುಸ್ತಿಪಟುಗಳು ಬಂಧನದಲ್ಲೂ ನಗುತ್ತಿದ್ದಾರೆ ಎಂದು ನಕಲಿ ಫೋಟೋ ಹರಿಬಿಟ್ಟ ಐಟಿ ಸೆಲ್: ಬಜರಂಗ್ ಪೂನಿಯಾ ಆರೋಪ

ಅಪ್ರಾಪ್ತ ವಯಸ್ಕರು ಸೇರಿದಂತೆ ಏಳು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜನವರಿಯಿಂದ ಕುಸ್ತಿಪಟುಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ತಮ್ಮ ಮೇಲಿನ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಘೋಷಿಸಿದ್ದಾರೆ.

”ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ. ನಿಮ್ಮ ಬಳಿ (ಕುಸ್ತಿಪಟುಗಳು) ಏನಾದರೂ ಸಾಕ್ಷ್ಯಾಧಾರಗಳಿದ್ದರೆ ಅದನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತು ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ” ಎಂದು ಬುಧವಾರ ಬ್ರಿಜ್‌ಭೂಷಣ್ ಸಿಂಗ್ ಘೋಷಿಸಿದ್ದಾರೆ.

ಭಾರತದಲ್ಲಿ ಕುಸ್ತಿಪಟುಗಳನ್ನು ಹೀಗೆ ನಡೆಸಿಕೊಳ್ಳುತ್ತಿರುವುದಕ್ಕೆ ಅಂತಾರಾಷ್ಟ್ರೀಯ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (UWW) ಆಡಳಿತ ಮಂಡಳಿಯು ಆಕ್ಷೇಪವ್ಯಕ್ತಪಡಿಸಿದೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ 45 ದಿನಗಳಲ್ಲಿ WFIಗಾಗಿ ಹೊಸ ಚುನಾವಣೆಗಳನ್ನು ನಡೆಸುವ ತನ್ನ ಭರವಸೆಯನ್ನು ಉಳಿಸಿಕೊಳ್ಳದಿದ್ದರೇ ಫೆಡರೇಶನ್‌ಅನ್ನು ಅಮಾನತುಗೊಳಿಸುವ ಎಚ್ಚರಿಕೆಯನ್ನೂ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...