Homeಮುಖಪುಟಆರೋಪಿ ಬ್ರಿಜ್ ಬೆಂಬಲಕ್ಕೆ ನಿಂತ ಸ್ವಾಮೀಜಿಗಳು, ಬಿಜೆಪಿ ನಾಯಕರು; ಪೋಕ್ಸೋ ವಿರುದ್ಧ ವಾಗ್ದಾಳಿ

ಆರೋಪಿ ಬ್ರಿಜ್ ಬೆಂಬಲಕ್ಕೆ ನಿಂತ ಸ್ವಾಮೀಜಿಗಳು, ಬಿಜೆಪಿ ನಾಯಕರು; ಪೋಕ್ಸೋ ವಿರುದ್ಧ ವಾಗ್ದಾಳಿ

- Advertisement -
- Advertisement -

ಭಾರತದಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟವನ್ನು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸೇರಿದಂತೆ ಅಂತಾರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಬೆಂಬಲಿಸುತ್ತಿದ್ದರೆ, ಮತ್ತೊಂದೆಡೆ ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಪರವಾಗಿ ಬಿಜೆಪಿ ನಾಯಕರು ನಿಂತಿದ್ದಾರೆ.

ಆರೋಪಿಯನ್ನು ಬಂಧಿಸಬೇಕು ಎಂಬ ಆಗ್ರಹ ತೀವ್ರವಾಗುತ್ತಿದ್ದರೂ ಸಂತ್ರಸ್ತರ ಪರವಾಗಿ ನಿಲ್ಲದ ಬಿಜೆಪಿ ನಾಯಕರು ಬ್ರಿಜ್‌ಭೂಷಣ್ ಪರ ಅಖಾಡಕ್ಕೆ ಇಳಿದಿದ್ದಾರೆ.

ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್ ವ್ಯಾಪಕವಾದ ರಾಜಕೀಯ ಪ್ರಭಾವವನ್ನು ಹೊಂದಿರುವ ದೇವಿಪಟನ್ ಪ್ರದೇಶದ ಹಲವಾರು ಬಿಜೆಪಿ ಶಾಸಕರು ಆರೋಪಿಯ ಬೆಂಬಲಕ್ಕೆ ಬಂದಿದ್ದಾರೆ. ಅಯೋಧ್ಯೆಯಲ್ಲಿ ಆರೋಪಿ ಬ್ರಿಜ್‌ ಆರೋಜಿಸಿರುವ ರ್‍ಯಾಲಿಯಲ್ಲಿ ಶಕ್ತಿ ಪ್ರದರ್ಶನವಾಗಲಿದೆ.

ಜೂನ್ 5ರಂದು ಅಯೋಧ್ಯೆಯಲ್ಲಿ ‘ಜನ್ ಚೇತನ ಮಹಾ ರ್‍ಯಾಲಿ’ಯನ್ನು ಆಯೋಜಿಸುವುದಾಗಿ ಬ್ರಿಜ್ ಭೂಷಣ್ ಹೇಳಿದ್ದಾರೆ. ನವದೆಹಲಿಯಲ್ಲಿ ಆರೋಪಿಯ ವಿರುದ್ಧ ನಡೆಯುತ್ತಿರುವ ಮಹಿಳಾ ಕುಸ್ತಿಪಟುಗಳ ವಿರುದ್ಧ ಹಿಂದೂ ಧಾರ್ಮಿಕ ಮುಖಂಡರ ಬೆಂಬಲವನ್ನು ಪಡೆಯುವ ಪ್ರಯತ್ನವೆಂದೇ ಈ ರ್‍ಯಾಲಿಯನ್ನು ಪರಿಗಣಿಸಲಾಗಿದೆ.

ಅಯೋಧ್ಯೆಯ ಪ್ರಮುಖ ಸ್ವಾಮೀಜಿಗಳು ಕೂಡ ಸಿಂಗ್‌ ಬೆಂಬಲಕ್ಕೆ ನಿಂತಿದ್ದಾರೆ ಎಂದು ವರದಿಯಾಗಿದೆ.

ಅಯೋಧ್ಯೆಯಲ್ಲಿನ ಸ್ವಾಮೀಜಿಗಳು ಬ್ರಿಜ್‌ನನ್ನು ಬೆಂಬಲಿಸಿ ಅಯೋಧ್ಯೆಯಲ್ಲಿ ರ್‍ಯಾಲಿಯನ್ನು ಆಯೋಜಿಸುವವರೆಗೂ ಹೋಗಿದ್ದಾರೆ. “ಪೋಕ್ಸೋ ಕಾಯಿದೆಯು ಅನೇಕ ಲೋಪದೋಷಗಳು ಮತ್ತು ದೋಷಪೂರಿತ ಷರತ್ತುಗಳನ್ನು ಹೊಂದಿದೆ” ಎಂದು ಕಾಯ್ದೆಯ ವಿರುದ್ಧವೂ ಪ್ರತಿಭಟಿಸಲಿದ್ದಾರೆ ಎಂದು ‘ಪಿಟಿಐ’ ವರದಿ ಮಾಡಿದೆ.

“ನಾವು ಅಯೋಧ್ಯೆಯ ಧರ್ಮಗುರುಗಳು ಮತ್ತು ದೇಶದ ಇತರ ಧಾರ್ಮಿಕ ಸ್ಥಳಗಳಿಂದ ಬಂದವರು. ಬ್ರಿಜ್ ಭೂಷಣ್ ಶರಣ್ ಸಿಂಗ್ ಪರವಾಗಿ ರ್‍ಯಾಲಿಯನ್ನು ನಡೆಸುತ್ತೇವೆ” ಎಂದು ಮಹಂತ್ ಸತ್ಯೇಂದ್ರ ದಾಸ್ ಪ್ರತಿಕ್ರಿಯಿಸಿದ್ದಾರೆ.

“ಪೋಕ್ಸೊ ಕಾಯಿದೆಯಲ್ಲಿ ಹಲವು ಲೋಪದೋಷಗಳು ಮತ್ತು ದೋಷಪೂರಿತ ಷರತ್ತುಗಳಿರುವುದರಿಂದ ನಾವು ಅದನ್ನು ವಿರೋಧಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಕುಸ್ತಿಪಟುಗಳ ಪ್ರತಿಭಟನೆ: ಇಂದು ರೈತ ಮುಖಂಡ ನರೇಶ್ ಟಿಕಾಯತ್ ನೇತೃತ್ವದಲ್ಲಿ ‘ಮಹಾಪಂಚಾಯತ್’

ಜೂನ್ 5ರಂದು ರ್‍ಯಾಲಿ ನಡೆಸುವುದಾಗಿ ಸಿಂಗ್ ಈ ಹಿಂದೆ ಘೋಷಿಸಿದ್ದರು. ಸ್ವಾಮೀಜಿಗಳು ಹೇಳುತ್ತಿರುವುದು ಅದೇ ರ್‍ಯಾಲಿಯೆಂದು ತೋರುತ್ತಿದೆ.

ಸಿಂಗ್ ವಿರುದ್ಧದ ಎರಡು ಎಫ್‌ಐಆರ್‌ಗಳಲ್ಲಿ ಒಂದು ಪೋಕ್ಸೊ ಕಾಯ್ದೆಯಡಿಯಲ್ಲಿದ್ದರೂ, ಪೊಲೀಸರು ಮತ್ತು ಬಿಜೆಪಿ ಸರ್ಕಾರವು ಆರೋಪಿಯ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಈ ಕಾನೂನಿನ ಪ್ರಕಾರ ಸಾಮಾನ್ಯವಾಗಿ ತ್ವರಿತ ಮತ್ತು ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೂತನ ಸಂಸತ್ ಭವನದ ಉದ್ಘಾಟನೆ ಭಾನುವಾರ ನಡೆಯಿತು. ಸಮಾರಂಭದಲ್ಲಿ ಬ್ರಿಜ್‌ ಭೂಷಣ್‌ ಭಾಗಹಿಸಿದ್ದರು. ಈ ಮೂಲಕ ಬಿಜೆಪಿ ತನ್ನ ಪರ ಇದೆ ಎಂಬುದನ್ನು ಸೂಚ್ಯವಾಗಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...