Homeಮುಖಪುಟಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ 'ಪ್ರಜಾಪ್ರಭುತ್ವ' ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

ಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ ‘ಪ್ರಜಾಪ್ರಭುತ್ವ’ ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು ಹತ್ತನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ‘ಪ್ರಜಾಪ್ರಭುತ್ವ’ ಪಾಠ ಹಾಗೂ ವಿಜ್ಞಾನ ಪಠ್ಯಪುಸ್ತಕದಿಂದ ‘ಆವರ್ತಕ ಕೋಷ್ಟಕ’ (ಪಿರಿಯಾಡಿಕ್ ಟೇಬಲ್) ಪಾಠಗಳನ್ನು ಕೈಬಿಟ್ಟಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಎನ್‌ಸಿಇಆರ್‌ಟಿ, ”ಪಠ್ಯವನ್ನು ತರ್ಕಬದ್ಧಗೊಳಿಸುವ ಜತೆಗೆ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಹೊರೆ ಇಳಿಸುವ ಉದ್ದೇಶದಿಂದ ಈ ವಿರ್ಧಾರ ಕೈಗೊಳ್ಳಲಾಗಿದೆ” ಎಂದು ಹೇಳಿದೆ.

ಎನ್‌ಸಿಇಆರ್‌ಟಿ ನಡೆಗೆ ಶಿಕ್ಷಣತಜ್ಞರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಪಠ್ಯಪುಸ್ತಕದಿಂದ ಮೊಘಲ್ ಸಾಮ್ರಾಜ್ಯ, ಮಹಾತ್ಮಗಾಂಧಿ ಹತ್ಯೆ, ಗುಜರಾತ್ ದಂಗೆ, ಡಾರ್ವಿನ್‌ನ ವಿಕಾಸವಾದ ಸಿದ್ಧಾಂತದ ಕುರಿತ ವಿವರಗಳನ್ನು ಪಠ್ಯಪುಸ್ತಕದಿಂದ ಕೈಬಿಡಲಾಗಿತ್ತು. ಮಂಡಳಿಯ ಈ ಕ್ರಮಕ್ಕೆ ಪ್ರತಿಪಕ್ಷಗಳು ಮತ್ತು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ 10ನೇ ತರಗತಿ ಪಠ್ಯಪುಸ್ತಕದಲ್ಲೂ ಪ್ರಮುಖ ವಿಷಯದ ಪಠ್ಯಗಳನ್ನು ಕೈ ಬಿಟ್ಟಿದೆ.

ಈ ಬಗ್ಗೆ ಎನ್‌ಇಆರ್‌ಟಿಯ ಮಾಜಿ ಅಧ್ಯಕ್ಷ ಪ್ರೊ.ಕೃಷ್ಣಕುಮಾರ್ ಅವರು, ”ಮಂಡಳಿಯು ಮಾಡಿದ ಈ ಬದಲಾವಣೆಯು ತರ್ಕಬದ್ಧವೇ ಅಥವಾ ಸಮರ್ಥನೀಯವೇ?” ಎಂದು ಪ್ರಶ್ನೆ ಮಾಡಿದ್ದಾರೆ. ”ಇಂತಹ ಬದಲಾವಣೆಗೆ ವಿವರ ನೀಡಲು ಆಗುವುದಿಲ್ಲ. ವಿಕಾಸವಾದದ ಸಿದ್ಧಾಂತ ಇಲ್ಲದೆ ಒಬ್ಬ ಶಿಕ್ಷಕ, ವಿದ್ಯಾರ್ಥಿಗಳಿಗೆ ಬೋಧಿಸಲು ಹೇಗೆ ಸಾಧ್ಯ? ಪರಿವರ್ತಕ ಕೋಷ್ಟಕ ಇಲ್ಲದೆ ರಸಾಯನ ವಿಜ್ಞಾನ ಇಲ್ಲ” ಎಂದು ತಿಳಿಹೇಳಿದ್ದಾರೆ.

”ಪರಿಷ್ಕರಣೆ ಮಾಡಿರುವ ವಿಜ್ಞಾನ ಪಠ್ಯಪುಸ್ತಕದಲ್ಲಿ ಆವರ್ತಕ ಕೋಷ್ಟಕವನ್ನು ತೆಗೆದುಹಾಕಲಾಗಿದೆ. ಇದರಡಿ ಬರುವ ಪರಿಸರ ಸುಸ್ಥಿರತೆ ಹಾಗೂ ಇಂಧನ ಮೂಲಗಳು ಅಧ್ಯಾಯಗಳನ್ನು ಕೈಬಿಡಲಾಗಿದೆ. ವಿದ್ಯುತ್ ಮತ್ತು ಕಾಂತೀಯತೆಗೆ ವಿಜ್ಞಾನಿ ಮೈಕಲ್ ಫ್ಯಾರಡೆ ಸಲ್ಲಿಸಿದ ಕೊಡುಗೆಯ ಅಧ್ಯಯನದಿಂದ ವಿದ್ಯಾರ್ಥಿಗಳು ವಂಚಿತರಾಗುವಂತಾಗಿದೆ” ಎಂದು ಹೇಳಿದ್ದಾರೆ.

”ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ಪ್ರಜಾಪ್ರಭುತ್ವ ರಾಜಕೀಯ- 1ರಡಿ ಬರುವ ಮಹತ್ವದ ಸಂಘರ್ಷಗಳು ಮತ್ತು ಚಳವಳಿಗಳು, ಪ್ರಜಾಪ್ರಭುತ್ವದ ಸವಾಲುಗಳು, ರಾಜಕೀಯ ಪಕ್ಷಗಳು ಅಧ್ಯಾಯಗಳನ್ನೂ ಕೈಬಿಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: NCERT ಪುಸ್ತಕದಿಂದ ‘ಡಾರ್ವಿನ್‌ನ ವಿಕಾಸದ ಸಿದ್ಧಾಂತ’ ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

ಎನ್‌ಸಿಇಆರ್‌ಟಿ ಸ್ಪಷ್ಟಣೆ

ಮಕ್ಕಳು ಈ ಕೋವಿಡ್ ಪಿಡುಗಿನ ಸಂದರ್ಭದಲ್ಲಿ ಡಿಜಿಟಲ್ ಕಲಿಕೆಯ ಮಹತ್ವದ ಅರಿತಿದ್ದಾರೆ. ಪಠ್ಯಪುಸ್ತಕದಲ್ಲಿದ್ದ ಕಷ್ಟಕರ, ಪುನರಾವರ್ತಿತ ಹಾಗೂ ಅನಗತ್ಯ ಅಂಶಗಳನ್ನು ಕೈಬಿಡಲಾಗಿದೆ ಎಂದು ಎನ್‌ಸಿಇಆರ್‌ಟಿ ತಿಳಿಸಿದೆ.

11 ಮತ್ತು 12ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಈ ವಿಷಯಗಳನ್ನು ಪ್ರತ್ಯೇಕವಾಗಿ ಆಯ್ಕೆ ಮಾಡಿಕೊಂಡು ಕಲಿಯುವ ಅವಕಾಶವಿದೆ. ಪದವಿ ಪೂರ್ವ ಶಿಕ್ಷಣ ಹಂತದಲ್ಲಿ ರಸಾಯನ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಆವರ್ತಕ ಕೋಷ್ಟಕ ಕಲಿಯುವ ಅವಕಾಶವಿದೆ ಎಂದು ವಿವರಿಸಿದೆ.

”ಕೋವಿಡ್ ಸಂದರ್ಭದಲ್ಲಿನ ಶೈಕ್ಷಣಿಕ ಸ್ಥಿತಿ ಆಧರಿಸಿ ಪಠ್ಯ ತರ್ಕಬದ್ಧಗೊಳಿಸುವಿಕೆಯ ಪ್ರಕ್ರಿಯೆ ಆರಂಭವಾಗಿದೆ. ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಹೊರೆ ಕಡಿಮೆ ಮಾಡುವ ಆಶಯವೂ ಇದರ ಹಿಂದಿದೆ’ ಎಂದು ಕೇಂದ್ರ ಶಿಕ್ಷಣ ಖಾತೆಯ ರಾಜ್ಯ ಸಚಿವ ಸುಭಾಷ್‌ ಸರ್ಕಾ‌ರ್ ಸಮರ್ಥಿಸಿಕೊಂಡಿದ್ದಾರೆ.

ಮತ್ತೊಂದೆಡೆ ದೇಶದ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್‌ಇಪಿ) ಜಾರಿಗೊಳಿಸಬೇಕು ಎಂದು ಆರೆಸ್ಸೆಸ್ ಈಗಾಗಲೇ ಕೇಂದ್ರದ ಮೇಲೆ ಒತ್ತಡ ಹೇರಿದೆ. ಆರೆಸ್ಸೆಸ್‌ನ ಅಂಗ ಸಂಸ್ಥೆಯಾದ ಶಿಕ್ಷಾ ಸಂಸ್ಕೃತಿ ಉತ್ಪಾನ್ ನ್ಯಾಸ್, ಎನ್‌ಸಿಇಆರ್‌ಟಿಯ ಈ ಕ್ರಮಕ್ಕೆ ಬೆಂಬಲ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...