Homeಮುಖಪುಟಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ 'ಪ್ರಜಾಪ್ರಭುತ್ವ' ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

ಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ ‘ಪ್ರಜಾಪ್ರಭುತ್ವ’ ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು ಹತ್ತನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ‘ಪ್ರಜಾಪ್ರಭುತ್ವ’ ಪಾಠ ಹಾಗೂ ವಿಜ್ಞಾನ ಪಠ್ಯಪುಸ್ತಕದಿಂದ ‘ಆವರ್ತಕ ಕೋಷ್ಟಕ’ (ಪಿರಿಯಾಡಿಕ್ ಟೇಬಲ್) ಪಾಠಗಳನ್ನು ಕೈಬಿಟ್ಟಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಎನ್‌ಸಿಇಆರ್‌ಟಿ, ”ಪಠ್ಯವನ್ನು ತರ್ಕಬದ್ಧಗೊಳಿಸುವ ಜತೆಗೆ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಹೊರೆ ಇಳಿಸುವ ಉದ್ದೇಶದಿಂದ ಈ ವಿರ್ಧಾರ ಕೈಗೊಳ್ಳಲಾಗಿದೆ” ಎಂದು ಹೇಳಿದೆ.

ಎನ್‌ಸಿಇಆರ್‌ಟಿ ನಡೆಗೆ ಶಿಕ್ಷಣತಜ್ಞರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಪಠ್ಯಪುಸ್ತಕದಿಂದ ಮೊಘಲ್ ಸಾಮ್ರಾಜ್ಯ, ಮಹಾತ್ಮಗಾಂಧಿ ಹತ್ಯೆ, ಗುಜರಾತ್ ದಂಗೆ, ಡಾರ್ವಿನ್‌ನ ವಿಕಾಸವಾದ ಸಿದ್ಧಾಂತದ ಕುರಿತ ವಿವರಗಳನ್ನು ಪಠ್ಯಪುಸ್ತಕದಿಂದ ಕೈಬಿಡಲಾಗಿತ್ತು. ಮಂಡಳಿಯ ಈ ಕ್ರಮಕ್ಕೆ ಪ್ರತಿಪಕ್ಷಗಳು ಮತ್ತು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ 10ನೇ ತರಗತಿ ಪಠ್ಯಪುಸ್ತಕದಲ್ಲೂ ಪ್ರಮುಖ ವಿಷಯದ ಪಠ್ಯಗಳನ್ನು ಕೈ ಬಿಟ್ಟಿದೆ.

ಈ ಬಗ್ಗೆ ಎನ್‌ಇಆರ್‌ಟಿಯ ಮಾಜಿ ಅಧ್ಯಕ್ಷ ಪ್ರೊ.ಕೃಷ್ಣಕುಮಾರ್ ಅವರು, ”ಮಂಡಳಿಯು ಮಾಡಿದ ಈ ಬದಲಾವಣೆಯು ತರ್ಕಬದ್ಧವೇ ಅಥವಾ ಸಮರ್ಥನೀಯವೇ?” ಎಂದು ಪ್ರಶ್ನೆ ಮಾಡಿದ್ದಾರೆ. ”ಇಂತಹ ಬದಲಾವಣೆಗೆ ವಿವರ ನೀಡಲು ಆಗುವುದಿಲ್ಲ. ವಿಕಾಸವಾದದ ಸಿದ್ಧಾಂತ ಇಲ್ಲದೆ ಒಬ್ಬ ಶಿಕ್ಷಕ, ವಿದ್ಯಾರ್ಥಿಗಳಿಗೆ ಬೋಧಿಸಲು ಹೇಗೆ ಸಾಧ್ಯ? ಪರಿವರ್ತಕ ಕೋಷ್ಟಕ ಇಲ್ಲದೆ ರಸಾಯನ ವಿಜ್ಞಾನ ಇಲ್ಲ” ಎಂದು ತಿಳಿಹೇಳಿದ್ದಾರೆ.

”ಪರಿಷ್ಕರಣೆ ಮಾಡಿರುವ ವಿಜ್ಞಾನ ಪಠ್ಯಪುಸ್ತಕದಲ್ಲಿ ಆವರ್ತಕ ಕೋಷ್ಟಕವನ್ನು ತೆಗೆದುಹಾಕಲಾಗಿದೆ. ಇದರಡಿ ಬರುವ ಪರಿಸರ ಸುಸ್ಥಿರತೆ ಹಾಗೂ ಇಂಧನ ಮೂಲಗಳು ಅಧ್ಯಾಯಗಳನ್ನು ಕೈಬಿಡಲಾಗಿದೆ. ವಿದ್ಯುತ್ ಮತ್ತು ಕಾಂತೀಯತೆಗೆ ವಿಜ್ಞಾನಿ ಮೈಕಲ್ ಫ್ಯಾರಡೆ ಸಲ್ಲಿಸಿದ ಕೊಡುಗೆಯ ಅಧ್ಯಯನದಿಂದ ವಿದ್ಯಾರ್ಥಿಗಳು ವಂಚಿತರಾಗುವಂತಾಗಿದೆ” ಎಂದು ಹೇಳಿದ್ದಾರೆ.

”ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ಪ್ರಜಾಪ್ರಭುತ್ವ ರಾಜಕೀಯ- 1ರಡಿ ಬರುವ ಮಹತ್ವದ ಸಂಘರ್ಷಗಳು ಮತ್ತು ಚಳವಳಿಗಳು, ಪ್ರಜಾಪ್ರಭುತ್ವದ ಸವಾಲುಗಳು, ರಾಜಕೀಯ ಪಕ್ಷಗಳು ಅಧ್ಯಾಯಗಳನ್ನೂ ಕೈಬಿಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: NCERT ಪುಸ್ತಕದಿಂದ ‘ಡಾರ್ವಿನ್‌ನ ವಿಕಾಸದ ಸಿದ್ಧಾಂತ’ ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

ಎನ್‌ಸಿಇಆರ್‌ಟಿ ಸ್ಪಷ್ಟಣೆ

ಮಕ್ಕಳು ಈ ಕೋವಿಡ್ ಪಿಡುಗಿನ ಸಂದರ್ಭದಲ್ಲಿ ಡಿಜಿಟಲ್ ಕಲಿಕೆಯ ಮಹತ್ವದ ಅರಿತಿದ್ದಾರೆ. ಪಠ್ಯಪುಸ್ತಕದಲ್ಲಿದ್ದ ಕಷ್ಟಕರ, ಪುನರಾವರ್ತಿತ ಹಾಗೂ ಅನಗತ್ಯ ಅಂಶಗಳನ್ನು ಕೈಬಿಡಲಾಗಿದೆ ಎಂದು ಎನ್‌ಸಿಇಆರ್‌ಟಿ ತಿಳಿಸಿದೆ.

11 ಮತ್ತು 12ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಈ ವಿಷಯಗಳನ್ನು ಪ್ರತ್ಯೇಕವಾಗಿ ಆಯ್ಕೆ ಮಾಡಿಕೊಂಡು ಕಲಿಯುವ ಅವಕಾಶವಿದೆ. ಪದವಿ ಪೂರ್ವ ಶಿಕ್ಷಣ ಹಂತದಲ್ಲಿ ರಸಾಯನ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಆವರ್ತಕ ಕೋಷ್ಟಕ ಕಲಿಯುವ ಅವಕಾಶವಿದೆ ಎಂದು ವಿವರಿಸಿದೆ.

”ಕೋವಿಡ್ ಸಂದರ್ಭದಲ್ಲಿನ ಶೈಕ್ಷಣಿಕ ಸ್ಥಿತಿ ಆಧರಿಸಿ ಪಠ್ಯ ತರ್ಕಬದ್ಧಗೊಳಿಸುವಿಕೆಯ ಪ್ರಕ್ರಿಯೆ ಆರಂಭವಾಗಿದೆ. ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಹೊರೆ ಕಡಿಮೆ ಮಾಡುವ ಆಶಯವೂ ಇದರ ಹಿಂದಿದೆ’ ಎಂದು ಕೇಂದ್ರ ಶಿಕ್ಷಣ ಖಾತೆಯ ರಾಜ್ಯ ಸಚಿವ ಸುಭಾಷ್‌ ಸರ್ಕಾ‌ರ್ ಸಮರ್ಥಿಸಿಕೊಂಡಿದ್ದಾರೆ.

ಮತ್ತೊಂದೆಡೆ ದೇಶದ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್‌ಇಪಿ) ಜಾರಿಗೊಳಿಸಬೇಕು ಎಂದು ಆರೆಸ್ಸೆಸ್ ಈಗಾಗಲೇ ಕೇಂದ್ರದ ಮೇಲೆ ಒತ್ತಡ ಹೇರಿದೆ. ಆರೆಸ್ಸೆಸ್‌ನ ಅಂಗ ಸಂಸ್ಥೆಯಾದ ಶಿಕ್ಷಾ ಸಂಸ್ಕೃತಿ ಉತ್ಪಾನ್ ನ್ಯಾಸ್, ಎನ್‌ಸಿಇಆರ್‌ಟಿಯ ಈ ಕ್ರಮಕ್ಕೆ ಬೆಂಬಲ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...