Homeಮುಖಪುಟಕುಸ್ತಿಪಟುಗಳಿಗೆ ನ್ಯಾಯ ಕೇಳಲು ರಾಷ್ಟ್ರಪತಿಗಳನ್ನು ಭೇಟಿ ಮಾಡುತ್ತೇವೆ: ರೈತ ಮುಖಂಡ ರಾಕೇಶ್ ಟಿಕಾಯತ್

ಕುಸ್ತಿಪಟುಗಳಿಗೆ ನ್ಯಾಯ ಕೇಳಲು ರಾಷ್ಟ್ರಪತಿಗಳನ್ನು ಭೇಟಿ ಮಾಡುತ್ತೇವೆ: ರೈತ ಮುಖಂಡ ರಾಕೇಶ್ ಟಿಕಾಯತ್

- Advertisement -
- Advertisement -

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಕೇಳಲು ಖಾಪ್ ಪ್ರತಿನಿಧಿಗಳ ನಿಯೋಗ ಅಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಗುರುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಕ್ರೀಡಾಪಟುಗಳು ಭಾರತದ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಒಂದು ತಿಂಗಳಿಗೂ ಹೆಚ್ಚು ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಹಿಳಾ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮೇಲಿದೆ.

ಭಾರತೀಯ ಜನತಾ ಪಕ್ಷದ ಸಂಸದರೂ ಆಗಿರುವ ಸಿಂಗ್ ಯಾವುದೇ ತಪ್ಪು ಮಾಡಿಲ್ಲ ಎಂದು ನಿರಾಕರಿಸಿದ್ದಾರೆ. ಆದರೆ ಕುಸ್ತಿಪಟುಗಳು ಅವರ ವಿರುದ್ಧ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ರಾಜಧಾನಿ ಲಖನೌದಿಂದ 500 ಕಿ.ಮೀ. ದೂರವಿರುವ ಮುಜಫರನಗರ ಜಿಲ್ಲೆಯ ಸೋರಮ್ ಗ್ರಾಮದಲ್ಲಿ ನಡೆದ ‘ಮಹಾಪಂಚಾಯತ್’ ಉದ್ದೇಶಿಸಿ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ಮಾಂಗೆರಾಮ್ ತ್ಯಾಗಿ, ‘ಮಹಿಳಾ ಕುಸ್ತಿಪಟುಗಳು ದೇಶವೇ ಹೆಮ್ಮೆಪಡುವಂತೆ ಮಾಡಿದ್ದಾರೆ. ಅವರಿಗೆ ನ್ಯಾಯ ಸಿಗುವಂತೆ ಮಾಡಲು ಎಲ್ಲ ರೀತಿಯ ಹೋರಾಟ ನಡೆಸುತ್ತೇವೆ’ ಎಂದರು.

‘ಜಾತಿ ಆಧಾರದ ಮೇಲೆ ಕುಸ್ತಿಪಟುಗಳನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ’ ಎಂದು ಕಿಡಿಕಾರಿದ ತ್ಯಾಗಿ, ‘ಕುಸ್ತಿಪಟುಗಳು ಪದಕಗಳನ್ನು ಗೆದ್ದಾಗ ಯಾರಾದರೂ ಅವರ ಜಾತಿಯ ಬಗ್ಗೆ ಕೇಳಿದ್ದರೆ’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ದೇಶದ ವಿವಿಧ ಭಾಗಗಳಿಂದ ದೆಹಲಿಯತ್ತ ನುಗ್ಗಿ ಬರುತ್ತಿರುವ ರೈತರು; ಗಡಿಯಲ್ಲಿ ಪೊಲೀಸ್ ಬಿಗಿ ಭದ್ರತೆ

”ಹರಿಯಾಣದ ಕುರುಕ್ಷೇತ್ರದಲ್ಲಿ ಶುಕ್ರವಾರ ಖಾಪ್ ಮುಖಂಡರ ಮತ್ತೊಂದು ಸಭೆ ನಡೆಸಿ ಕುಸ್ತಿಪಟುಗಳ ಹೋರಾಟ ಕುರಿತು ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲಾಗುವುದು” ಎಂದು ಬಿಕೆಯು ಮುಖಂಡ ರಾಕೇಶ್ ಟಿಕಾಯತ್‌ ಹೇಳಿದರು.

‘ಮಹಾ ಪಂಚಾಯತ್‌ ಉದ್ದೇಶಿಸಿ ಮಾತನಾಡಿದ ಅವರು ”ಎಲ್ಲ ಖಾಪ್‌ಗಳ ಪ್ರತಿನಿಧಿಗಳ ನಿಯೋಗ ಒಯ್ದು ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಕುಸ್ತಿಪಟುಗಳ ಬೇಡಿಕೆಗಳಿಗೆ ಸಂಬಂಧಿಸಿ ಮನವಿ ಸಲ್ಲಿಸಲಾಗುವುದು. ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಆಗಲೂ ಕ್ರಮ ಕೈಗೊಳ್ಳದಿದ್ದರೆ ನಮ್ಮ ಹೋರಾಟದ ಮುಂದಿನ ಹೆಜ್ಜೆ ಕುರಿತು ನಿರ್ಧರಿಸಲಾಗುವುದು” ಎಂದು ಹೇಳಿದರು.

ಕುಸ್ತಿಪಟುಗಳನ್ನು ಬೆಂಬಲಿಸಲು ಖಾಪ್‌ಗಳ ಪ್ರತಿನಿಧಿಗಳು, ರಾಷ್ಟ್ರಪತಿಗಳನ್ನು ಮತ್ತು ಸರ್ಕಾರವನ್ನು ಭೇಟಿ ಮಾಡುತ್ತಾರೆ ಮತ್ತು ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದರು.

”ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೆ, ನಾವು ಮುಂದಿನ ಹೆಜ್ಜೆ ಇಡುತ್ತೇವೆ. ಆದರೆ ಈ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಆ ಹಣ್ಣು ಮಕ್ಕಳಿಗೆ ಅನ್ಯಾಯ ಆಗಲು ನಾವು ಬಿಡುವುದಿಲ್ಲ” ಎಂದರು.

ಕುಸ್ತಿಪಟುಗಳ ಕುಂದುಕೊರತೆಗಳನ್ನು ಪರಿಹರಿಸಲು ಶುಕ್ರವಾರ ಹರಿಯಾಣದ ಕುರುಕ್ಷೇತ್ರದಲ್ಲಿ ಖಾಪ್‌ಗಳು ಮತ್ತೊಂದು ಸಭೆ ನಡೆಸಲಿದ್ದಾರೆ ಎಂದು ರಾಕೇಶ್ ಟಿಕಿಯಾಟ್ ಗುರುವಾರ ಹೇಳಿದ್ದಾರೆ.

”ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯಡಿ (ಪೋಕ್ಸೊ) ಪ್ರಕರಣಗಳನ್ನು ದಾಖಲಿಸಿದರೂ ಆರೋಪಿಗೆ ಮಾತನಾಡಲು ಸ್ವಾತಂತ್ರ್ಯ ನೀಡಲಾಗಿದೆ, ಆದರೆ ಸರ್ಕಾರ ಈ ಬಗ್ಗೆ ಮೌನವಾಗಿದೆ” ಎಂದು ಅವರು ಹೇಳಿದರು.

ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಪೈಕಿ ಹಲವರು ಜಾಟ್ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಈ ಸಮುದಾಯದವರ ಜನಸಂಖ್ಯೆ ಹೆಚ್ಚಿದ್ದು, 12ರಷ್ಟು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಫಲಿತಾಂಶದ ಮೇಲೆ ಜಾಟ್‌ಗಳ ಮತ ಪ್ರಭಾವ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಕುಸ್ತಿಪಟುಗಳ ಹೋರಾಟ ಬೆಂಬಲಿಸಿ ನಡೆದ ‘ಮಹಾಪಂಚಾಯತ್’ಗೆ ಮಹತ್ವ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...