Homeಮುಖಪುಟಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

ಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಒಂದು ತಿಂಗಳಿನಿಂದ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಹರಿಯಾಣದ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಬೆಂಬಲ ವ್ಯಕ್ತಪಡಿಸಿದ ನಂತರ ಇದೀಗ ಮಹಾರಾಷ್ಟ್ರದ ಬಿಜೆಪಿ ನಾಯಕಿ ಪ್ರೀತಮ್ ಮುಂಡೆ ಹಾಗೂ ಬಿಜೆಪಿಯ ಹಿರಿಯ ಸಂಸದೆ ಮೇನಕಾ ಗಾಂಧಿ ಅವರು ಬೆಂಬಲ ನೀಡಿದ್ದಾರೆ.

ಬಿಜೆಪಿಯ ಮಹಿಳಾ ಸಂಸದರೂ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕುಸ್ತಿಪಟುಗಳಿಗೆ ಪರ ನಿಂತು ನ್ಯಾಯ ಕೇಳಿದ್ದಾರೆ. ಮಹಾರಾಷ್ಟ್ರದ ಬಿಜೆಪಿಯ ಲೋಕಸಭಾ ಸಂಸದೆ ಪ್ರೀತಮ್ ಮುಂಡೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಬೆಂಬಲಿಸಿದ್ದಾರೆ. ಇದಾದ ಒಂದು ದಿನದ ನಂತರ, ಪಕ್ಷದ ಹಿರಿಯ ಸಂಸದೆ ಮೇನಕಾ ಗಾಂಧಿ ಅವರು ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಅವರು ಒತ್ತಾಯಿಸಿದ್ದಾರೆ. ”ಅವರಿಗೆ ( ಕುಸ್ತಿಪಟುಗಳಿಗೆ ) ಕೊನೆಯಲ್ಲಿ ನ್ಯಾಯ ಸಿಗುತ್ತದೆ ಎಂಬುದು ನನಗೆ ಖಾತ್ರಿಯಿದೆ” ಎಂದು ಕಾಶ್ಮೀರದ ಶ್ರೀನಗರದಲ್ಲಿ ಮಾಧ್ಯಮಗಳಿಗೆ ಮನೇಕಾ ಗಾಂಧಿ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿರುವ ಸಂಸದೆ ಪ್ರೀತಮ್ ಮುಂಡೆ ಅವರು, ”ಮಹಿಳೆಯೊಬ್ಬರು ಈ ರೀತಿಯ ಗಂಭೀರ ದೂರು ನೀಡಿದಾಗ ಅದನ್ನು ನಿಸ್ಸಂದೇಹವಾಗಿ ನಿಜವೆಂದು ಪರಿಗಣಿಸಬೇಕು” ಎಂದು ಪ್ರೀತಮ್ ಮುಂಡೆ ಹೇಳಿದ್ದಾರೆ.

”ಯಾವುದೇ ಸರ್ಕಾರ ಅಥವಾ ಯಾವುದೇ ಪಕ್ಷವಾಗಿರಬಹುದು, ಈ ಮಟ್ಟದ ಚಳುವಳಿಯನ್ನು ಗಮನಿಸದೆ ಹೋದರೆ ಅದು ನ್ಯಾಯೋಚಿತವಲ್ಲ. ಇಂತಹ ಪ್ರತಿಭಟನೆಗಳು ನಡೆದಾಗ ಸರ್ಕಾರಗಳು ಗಮನಿಸದೆ ಇರಬಾರದು, ಅದರ ಬಗ್ಗೆ ಅಗತ್ಯ ಗಮನ ನೀಡಬೇಕು” ಎಂದು ಪ್ರೀತಮ್ ಮುಂಡೆ ಹೇಳಿದರು.

”ನಾನು ಈ ಸರ್ಕಾರದ ಭಾಗವಾಗಿದ್ದರೂ, ನಾವು ಕುಸ್ತಿಪಟುಗಳೊಂದಿಗೆ ಸಂವಹನ ನಡೆಸಬೇಕಾದ ರೀತಿಯಲ್ಲಿ ನಡೆದಿಲ್ಲ ಎಂಬುದನ್ನು ಒಪ್ಪಿಕೊಳ್ಳಬೇಕು” ಎಂದು ಪ್ರೀತಮ್ ಮುಂಡೆ ಹೇಳಿದರು.

ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಅವರು ಒತ್ತಾಯಿಸಿದ್ದಾರೆ. ‘ಅವರಿಗೆ ( ಕುಸ್ತಿಪಟುಗಳಿಗೆ ) ಕೊನೆಯಲ್ಲಿ ನ್ಯಾಯ ಸಿಗುತ್ತದೆ ಎಂಬುದು ನನಗೆ ಖಾತ್ರಿಯಿದೆ’ ಎಂದು ಕಾಶ್ಮೀರದ ಶ್ರೀನಗರದಲ್ಲಿ ಮಾಧ್ಯಮಗಳಿಗೆ ಮನೇಕಾ ಗಾಂಧಿ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ಎಫ್‌ಐಆರ್‌ನಲ್ಲಿ ಕ್ರೀಡಾಪಟುಗಳು ಉಲ್ಲೇಖಿಸಿದ ಅಂಶಗಳು ಇಲ್ಲಿವೆ..

ಪ್ರೀತಮ್ ಮುಂಡೆಗಿಂತ ಮುಂಚಿತವಾಗಿ ಕ್ರೀಡಾಪಟುಗಳಿಗೆ ಹರಿಯಾಣದ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಕ್ರೀಡಾಪಟುಗಳು ಪ್ರತಿಭಟನೆಯ ಭಾಗವಾಗಿ ತಮ್ಮ ಪದಕಗಳನ್ನು ಹರಿದ್ವಾರದ ಗಂಗಾದಲ್ಲಿ ಎಸೆಯಲು ಹೋದಾಗ, ಇದು ‘ಸಂಪೂರ್ಣ ಹೃದಯವಿದ್ರಾವಕ’ ಎಂದು ಬ್ರಿಜೇಂದ್ರ ಸಿಂಗ್ ಕರೆದರು. ರೈತ ಸಂಘದ ನಾಯಕ ನರೇಶ್ ಟಿಕಾಯತ್ ಅವರು ಈ ವೇಳೆ ಕ್ರೀಡಾಪಟುಗಳನ್ನು ತಡೆದರು.

ಪ್ರೀತಮ್ ಮುಂಡೆ ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ಪಕ್ಷದ ನಿಲುವಿನಿಂದ ಭಿನ್ನವಾಗಿದ್ದರೆ, ಅವರ ಸಹೋದರಿ ಪಂಕಜಾ ಮುಂಡೆ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಪ್ರೀತಮ್ ಅವರು ಬಿಜೆಪಿಗೆ ಸೇರಿದವರು, ಬಿಜೆಪಿಯೇ ಅವರಿಗೆ ಸೇರಿಲ್ಲ ಎಂದು ಹೇಳಿದರು.

ಪಂಕಜಾ ಮತ್ತು ಪ್ರೀತಮ್ ಮುಂಡೆ ಅವರು, ಈ ಹಿಂದೆ 2014ರಲ್ಲಿ ಕಾರು ಅಪಘಾತದಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ ಪುತ್ರಿಯರು. ಪ್ರೀತಮ್ ಮುಂಡೆಗೆ ಕೇಂದ್ರದಲ್ಲಿ ಮಂತ್ರಿಗಿರಿ ಸಿಗಲಿಲ್ಲ, ಏಕನಾಥ್ ಶಿಂಧೆ-ದೇವೇಂದ್ರ ಫಡ್ನವಿಸ್ ಸಂಪುಟದಲ್ಲಿ ಪಂಕಜಾ ಅವರನ್ನು ಕಡೆಗಣಿಸಲಾಯಿತು.

ಈ ವಿಚಾರವಾಗಿ ಸಾರ್ವಜನಿಕರು, ರೈತ ಮುಖಂಡರು ಹಾಗೂ ವಿರೋಧ ಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯ ಸಿಗುವವರೆಗೂ ಕುಸ್ತಿಪಟುಗಳ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದ್ದಾರೆ. ಒಲಿಂಪಿಕ್ಸ್‌ ಮೆಡಲ್‌ಗಳನ್ನು ಗೆದ್ದಿರುವ ಕುಸ್ತಿಪಟುಗಳಿಗೆ ಈ ಸ್ಥಿತಿ ಬಂದಿರುವುದಕ್ಕೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಶದ ಅಗ್ರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಭಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ತಮ್ಮ ಬೆಂಬಲಿಗರೊಂದಿಗೆ ಹರಿದ್ವಾರಕ್ಕೆ ತೆರಳಿದ್ದರು. ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯಲು ಹೋಗಿದ್ದರು. ಖಾಪ್‌ಗಳು ಮತ್ತು ರೈತ ಮುಖಂಡರು ಅದನ್ನು ತಡೆಯಲು ಯಶಸ್ವಿಯಾದರು. ಕೇಂದ್ರ ಸರ್ಕಾರಕ್ಕೆ ಐದು ದಿನಗಳ ಕಾಲ ಗಡುವು ನೀಡಿದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಮೊದಲ ಎಫ್‌ಐಆರ್ ಅಪ್ರಾಪ್ತ ಕುಸ್ತಿಪಟುವಿನ ಆರೋಪಗಳಿಗೆ ಸಂಬಂಧಿಸಿದೆ ಇದೆ. ಇದು ಪೋಕ್ಸೊ ಕಾಯ್ದೆಯಡಿಯಲ್ಲಿ ದಾಖಲಾಗಿದೆ. ಎರಡನೆಯದು ಕುಸ್ತಿಪಟುಗಳ ಆರೋಪದ ಮೇಲೆ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...