Homeಮುಖಪುಟಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ, ಜುಲೈ ಒಂದರಿಂದ ಬಿಪಿಎಲ್ ಕಾರ್ಡುದಾರರಿಗೆ ತಲಾ 10 ಕೆಜಿ ಅಕ್ಕಿ, ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

- Advertisement -
- Advertisement -

ಜುಲೈ 1 ರಿಂದ ಪ್ರತಿಯೊಂದು ಕುಟುಂಬಕ್ಕೆ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ನೀಡಲಾಗುವುದು. ಆಗಸ್ಟ್ 15 ರಂದು ಮನೆಯೊಡತಿಯ ಖಾತೆಗೆ 2,000 ರೂ ಜಮಾ ಮಾಡಲಾಗುವುದು. ಜುಲೈ ಒಂದರಿಂದ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಜೂನ್ 11 ರಂದು ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮೊದಲ ಗ್ಯಾರಂಟಿ – ಗೃಹ ಜ್ಯೋತಿ

200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಎಲ್ಲರಿಗೂ ಕೊಡುತ್ತೇವೆ. ಇದನ್ನು ಜಾರಿ ಮಾಡಲು ತೀರ್ಮಾನಿಸಿದ್ದೇವೆ. 199 ಯೂನಿಟ್‌ವರೆಗೂ ಫ್ರಿ ವಿದ್ಯುತ್ ಕೊಡುತ್ತೇವೆ. 12 ತಿಂಗಳ ಸರಾಸರಿ ನೋಡುತ್ತೇವೆ. ಅದರ ಮೇಲೆ 10% ಉಚಿತವಾಗಿ ಕೊಡುತ್ತೇವೆ. ಈ ವರ್ಷದ ಜುಲೈ 1 ರಿಂದ ಫ್ರೀ ಜಾರಿಯಾಗುತ್ತದೆ ಎಂದರು. ಆದರೆ ಇದುವರೆಗೂ ಉಳಿಸಿಕೊಂಡಿರುವ ಬಾಕಿಯನ್ನು ಜನರೇ ಕಟ್ಟಬೇಕು ಎಂದರು.

ಎರಡನೇ ಗ್ಯಾರಂಟಿ – ಗೃಹ ಲಕ್ಷ್ಮೀ

ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತೇವೆ. ಅದಕ್ಕಾಗಿ ಅರ್ಜಿ ಆಧಾರ್ ಕಾರ್ಡ್, ಬ್ಯಾಂಕ್ ಡಿಟೈಲ್ಸ್ ಕೊಡಬೇಕು. ಮನೆ ಯಜಮಾನಿಗೆ ಎಂದು ಹೇಳಿದ್ದೇವೆ. ಅವರ ಖಾತೆಗೆ ತಿಂಗಳಿಗೆ 2,000 ರೂ ಜಮಾ ಮಾಡುತ್ತೇವೆ. ಜೂನ್ 15 ರಿಂದ ಜುಲೈ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 15 ರಿಂದ ಆಗಸ್ಟ್ 15 ರೊಳಗೆ ಪ್ರಕ್ರಿಯೆ ಮಾಡಿ ಆಗಸ್ಟ್ 15ನೇ ತಾರೀಖು ಎಲ್ಲ ಮನೆಯೊಡತಿಯರ ಖಾತೆಗೆ ಹಣ ಜಮಾ ಮಾಡುತ್ತೇವೆ. ಬಿಪಿಎಲ್ ಮತ್ತು ಎಪಿಎಲ್ ಇಬ್ಬರೂ ಅರ್ಜಿ ಹಾಕಬಹುದು. ಎಲ್ಲರಿಗೂ ಕೊಡುತ್ತೇವೆ ಎಂದರು. ಅರ್ಜಿ ಸಲ್ಲಿಸುವಾಗ ಮನೆಯಲ್ಲಿ ಯಾರು ಯಜಮಾನಿ ಎಂದು ಸ್ಪಷ್ಟಪಡಿಸಬೇಕು ಎಂದರು.

ಇದುವರೆಗೂ ವಿಶೇಷ ಚೇತನರು, ಹಿರಿಯ ವಯಸ್ಸಿನವರು, ವಿಧವಾ ವೇತನ ಪಡೆಯುತ್ತಿರುವವರು ಸಹ ಈ ಗೃಹ ಲಕ್ಷ್ಮೀ ಯೋಜನೆಗೆ ಅರ್ಹರಾಗಿದ್ದಾರೆ. ಆ ಪಿಂಚಣಿ ಜೊತೆಗೆ ಈ 2,000 ರೂ ಸಹ ಕೊಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

10 ಕೆಜಿ ಅಕ್ಕಿ ಉಚಿತ

ಜುಲೈ 1ನೇ ತಾರೀಖಿನಿಂದ ಎಲ್ಲಾ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು. ಅಂತ್ಯೋದಯ ಕಾರ್ಡು ಹೊಂದಿರುವವರಿಗೆ ಸದ್ಯ 35 ಕೆಜಿ ಅಕ್ಕಿ ಕೊಡಲಾಗುತ್ತಿದೆ. ಮುಂದೆ ಅವರಿಗೂ ತಲಾ 10 ಕೆಜಿ ಕೊಡಲಾಗುವುದು. ಸದ್ಯಕ್ಕೆ ಸ್ಟಾಕ್ ಇಲ್ಲ. ಒಂದು ತಿಂಗಳಲ್ಲಿ ಹೇಗಾದರೂ ಮಾಡಿ ಕೊಂಡುಕೊಂಡು ಜುಲೈ 1 ರಿಂದ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ.

4 ನೇ ಗ್ಯಾರಂಟಿ – ಶಕ್ತಿ

ಸಮಾಜದಲ್ಲಿ 50% ಮಹಿಳೆಯರು ಇದ್ದಾರೆ. ಎಲ್ಲಾ ಮಹಿಳೆಯರಿಗೆ ಅವರ ಆರ್ಥಿಕ ಸ್ಥಾನಮಾನ ಹೊರತು ಪಡಿಸಿ ಎಲ್ಲರಿಗೂ ಉಚಿತ ಬಸ್ ಪ್ರಯಾಣ ಘೋಷಿಸುತ್ತಿದ್ದೇವೆ. ಜೂನ್ 11 ರಂದು ಈ ಯೋಜನೆಗೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತೇವೆ ಎಂದು ಸಿದ್ದರಾಮಯ್ಯ ಘೋಷಿಸಿದರು.

ನಮ್ಮ ರಾಜ್ಯದೊಳಗೆ, ಕರ್ನಾಟಕದವರಿಗೆ ಮಾತ್ರ ಉಚಿತ ಪ್ರಯಾಣ ಇರುತ್ತದೆ. ಎ.ಸಿ ಬಸ್ ಮತ್ತು ಸ್ಲೀಪರ್ ಬಸ್, ಲಕ್ಸುರಿ ಬಸ್ ಹೊರತುಪಡಿಸಿ ಉಳಿದ ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣವಿರುತ್ತದೆ. ಅಂದರೆ ಶೇ.90 ರಷ್ಟು ಬಸ್‌ಗಳಲ್ಲಿ ರಾಜ್ಯದ ಎಲ್ಲೆಡೆ ಉಚಿತ ಪ್ರಯಾಣ ಇರುತ್ತದೆ. ಇನ್ನು ಪುರುಷರಿಗೆ 50% ಆಸನ ಮೀಸಲು ಮಾಡಲಾಗುತ್ತದೆ.

5ನೇ ಗ್ಯಾರಂಟಿ ಯುವನಿಧಿ – ಯುವಜನರಿಗೆ 3000 ನಿರುದ್ಯೋಗ ಭತ್ಯೆ

2022-23 ರಲ್ಲಿ ವ್ಯಾಸಂಗ ಮಾಡಿ ಪದವಿ ಪಡೆದವರಿಗೆ 24 ತಿಂಗಳುಗಳವರೆಗೆ ಪ್ರತಿ ತಿಂಗಳಿಗೆ 3000 ರೂ ನೀಡಲಾಗುವುದು. ಅರ್ಹರು ಅರ್ಜಿ ಸಲ್ಲಿಸಬೇಕು. ಎಲ್ಲಾ ಜಾತಿ ವರ್ಗದವರೂ, ಟ್ರಾನ್ಸ್‌ಜೆಂಡರ್‌ ಸಮುದಾಯದವರು ಸಹ ಇದಕ್ಕೆ ಅರ್ಹರು ಎಂದರು.

ಇದೇ ಸಂದರ್ಭದಲ್ಲಿ ಪ್ರತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿಯವರು ಪ್ರತಿಯೊಬ್ಬರಿಗೂ 15 ಲಕ್ಷ ರೂ ಕೊಡುತ್ತೇವೆ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ, ಅಚ್ಛೇದಿನ್ ತರುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅವುಗಳನ್ನು ಜಾರಿಗೆ ತಂದರೆ? ನಾವು ಹಿಂದೆಯೂ ನುಡಿದಂತೆ ನಡೆದಿದ್ದೇವೆ, ಮುಂದಿಯೂ ನುಡಿದಂತೆ ನಡೆಯುತ್ತೇವೆ ಎಂದರು.

ಇದನ್ನೂ ಓದಿ; ಶಾಲಾ ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದು: ಡಾ.ಹೆಚ್.ಸಿ ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...