Homeಮುಖಪುಟ''ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ: ಕುಸ್ತಿಪಟುಗಳಿಗೆ ಕಪಿಲ್ ದೇವ್ ಸಲಹೆ; ಪ್ರತಿಭಟನೆಗೆ 1983ರ ವಿಶ್ವಕಪ್ ವಿಜೇತ ಕ್ರಿಕೆಟ್...

”ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ: ಕುಸ್ತಿಪಟುಗಳಿಗೆ ಕಪಿಲ್ ದೇವ್ ಸಲಹೆ; ಪ್ರತಿಭಟನೆಗೆ 1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದಿಂದ ಬೆಂಬಲ

- Advertisement -
- Advertisement -

ಪ್ರತಿಭಟನಾ ನಿರತ ಕುಸ್ತಿಪಟುಗಳ ಜೊತೆಗೆ ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರು ನಡೆದುಕೊಳ್ಳುತ್ತಿರುವ ನಡೆಯ ವಿರುದ್ಧ 1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ಸದಸ್ಯರು ಶುಕ್ರವಾರ ತಮ್ಮ ಅಸಮ್ಮತಿಯನ್ನು ವ್ಯಕ್ತಪಡಿಸಿದರು. ಅದರ ಜೊತೆಗೆ ಕ್ರೀಡಾಪಟುಗಳಿಗೆ ಯಾವುದೇ ಹಠಾತ್ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಸಲಹೆ ನೀಡಿದರು.

ಲೈಂಗಿಕ ಕಿರುಕುಳದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಗಳವಾರ ನೊಂದ ಕುಸ್ತಿಪಟುಗಳು ತಮ್ಮ ಪದಕಗಳನ್ನು ಪವಿತ್ರ ಗಂಗಾ ನದಿಗೆ ಎಸೆಯಲು ಯೋಜಿಸಿದ್ದರು, ಆದರೆ ಷರತ್ತಿನ ಮೇಲೆ ರೈತ ನಾಯಕ ನರೇಶ್ ಟಿಕಾಯತ್ ಅವರು ಕ್ರೀಡಾಪಟುಗಳನ್ನು ತಡೆದರು. ಇದೀಗ ವಿಶ್ವಕಪ್ ವಿಜೇತ ತಂಡ ಕೂಡ ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.

”ನಮ್ಮ ಚಾಂಪಿಯನ್ ಕುಸ್ತಿಪಟುಗಳನ್ನು ಅಮಾನುಷವಾಗಿ ನಡೆಸುತ್ತಿರುವ ದೃಶ್ಯಗಳನ್ನು ನೀಓಡಿದ ಮೇಲೆ ನಮಗೆ ತುಂಬಾ ದುಖಃವಾಗಿದೆ. ಇದರಿಂದ ನಾವು ವಿಚಲಿತರಾಗಿದ್ದೇವೆ. ಅವರು ಕಷ್ಟಪಟ್ಟು ಗಳಿಸಿದ ಪದಕಗಳನ್ನು ಗಂಗಾ ನದಿಗೆ ಎಸೆಯಲು ಯೋಚಿಸುತ್ತಿದ್ದಾರೆ ಎಂದು ನಾವು ಹೆಚ್ಚು ಕಾಳಜಿ ವಹಿಸುತ್ತೇವೆ” ಎಂದು 1983 ರ ವಿಶ್ವಕಪ್ ವಿಜೇತ ತಂಡವು ಹೇಳಿದೆ.

“ಆ ಪದಕಗಳು ವರ್ಷಗಳ ಪ್ರಯತ್ನ, ತ್ಯಾಗ, ಸಂಕಲ್ಪ ಮತ್ತು ಶ್ರದ್ಧೆಗಳನ್ನು ಒಳಗೊಂಡಿವೆ ಮತ್ತು ಅವು ಕೇವಲ ನಿಮಗೆ ಮಾತ್ರ ಸಂಬಂಧಸಿದ್ದಲ್ಲ, ಅವು ರಾಷ್ಟ್ರದ ಹೆಮ್ಮೆ ಮತ್ತು ಸಂತೋಷವಾಗಿವೆ. ಈ ವಿಷಯದಲ್ಲಿ ಯಾವುದೇ ಆತುರದ ನಿರ್ಧಾರವನ್ನು ತೆಗೆದುಕೊಳ್ಳದಂತೆ ನಾವು ಅವರನ್ನು ಒತ್ತಾಯಿಸುತ್ತೇವೆ ಮತ್ತು ಅವರ ಕುಂದುಕೊರತೆಗಳನ್ನು ಕೇಳುತ್ತೇವೆ. ನೆಲದ ಕಾನೂನು ಮೇಲುಗೈ ಸಾಧಿಸಲಿ” ಎಂದು ಹೇಳಿದೆ.

“ಈ ವಿಷಯದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳದಂತೆ ನಾವು ಅವರನ್ನು ಒತ್ತಾಯಿಸುತ್ತೇವೆ ಮತ್ತು ಅವರ ಕುಂದುಕೊರತೆಗಳನ್ನು ಆಲಿಸಿ ಶೀಘ್ರವಾಗಿ ಪರಿಹರಿಸಲಾಗುತ್ತದೆ. ನೆಲದ ಕಾನೂನು ಮೇಲುಗೈ ಸಾಧಿಸಲಿ” ಎಂದು ಲೆಜೆಂಡರಿ ನಾಯಕ ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ತಂಡ ಮತ್ತು ಐಕಾನ್‌ಗಳು ಸೇರಿದಂತೆ ಸುನಿಲ್ ಗವಾಸ್ಕರ್ ಮತ್ತು ಮೊಹಿಂದರ್ ಅಮರನಾಥ್ ಮನವಿ ಮಾಡಿದರು.

ಇದನ್ನೂ ಓದಿ: ಬಿಜೆಪಿ ಸಂಸದನ ವಿರುದ್ಧ ಗಂಭೀರ ಆರೋಪಗಳಿದ್ದರೂ ಕ್ರಮ ಏಕೆ ಕೈಗೊಂಡಿಲ್ಲ?: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ಮಂಗಳವಾರ, ಅಂತರಾಷ್ಟ್ರೀಯ ಕುಸ್ತಿ ಸಂಸ್ಥೆ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (UWW) ಫೆಡರೇಶನ್ ಮುಖ್ಯಸ್ಥರ ವಿರುದ್ಧ ‘ತನಿಖೆ ಬಗ್ಗೆ ನಿರಾಶೆ’ ವ್ಯಕ್ತಪಡಿಸಿದೆ ಮತ್ತು 45 ದಿನಗಳಲ್ಲಿ ಅದರ ಅಧ್ಯಕ್ಷ ಸ್ಥಾನಕ್ಕೆ  ಚುನಾವಣೆಗಳನ್ನು ನಡೆಸದಿದ್ದರೆ ಫೆಡರೇಶನ್ ಅನ್ನು ಅಮಾನತುಗೊಳಿಸುವುದಾಗಿ ಬೆದರಿಕೆ ಹಾಕಿದೆ.

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಶೋಷಣೆ ಮಾಡಿದ ಆರೋಪದ ಮೇಲೆ ಕುಸ್ತಿಪಟುಗಳು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬಿರ್ಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಬೇಕೆಂದು ಅಂತರಾಷ್ಟ್ರೀಯ ಕುಸ್ತಿ ಸಂಸ್ಥೆ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಒತ್ತಾಯಿಸಿದ್ದಾರೆ.

ಮೇ 28ರಂದು, ದೆಹಲಿ ಪೊಲೀಸರು ಅನುಮತಿಯಿಲ್ಲದೆ ಹೊಸ ಸಂಸತ್ ಭವನದ ಕಡೆಗೆ ಮೆರವಣಿಗೆ ನಡೆಸಿದಾಗ ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆಗಾಗಿ ಕುಸ್ತಿಪಟುಗಳನ್ನು ಬಂಧಿಸಿದ್ದರು. ಅಷ್ಟೇ ಅಲ್ಲದೇ ಕ್ರೀಡಾಪಟುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ದೆಹಲಿಯ ಜಂತರ್‌ಮಂತರ್‌ ನಲ್ಲಿ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದರು ಆದರೆ ಈ ಬೆಳವಳಿಗೆ ನಂತರ ಇದೀಗ ಅವರಿಗೆ ಅಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಕುಸ್ತಿಪಟುಗಳ ವಿರುದ್ಧ ಪೊಲೀಸರ ಕ್ರಮಕ್ಕೆ ವಿವಿಧ ವಲಯಗಳಿಂದ ಟೀಕೆ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...