Homeಕರ್ನಾಟಕಗ್ಯಾರಂಟಿ ಜಾರಿಯ ಕುರಿತು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಗ್ಯಾರಂಟಿ ಜಾರಿಯ ಕುರಿತು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

- Advertisement -
- Advertisement -

ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದು, “ಈ ಯೋಜನೆಗಳು ಜನರ ದಿಕ್ಕು ತಪ್ಪಿಸುತ್ತಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, “ಚುನಾವಣೆ ವೇಳೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿದ್ದರು. ಆದರೆ ಈಗ 200 ಯೂನಿಟ್ ಒಳಗೆ ಬಳಸಿದರೆ ಮಾತ್ರ ಉಚಿತ ಎನ್ನುತ್ತಿದ್ದಾರೆ. ಈಗ ಸಿಎಂ ವಾರ್ಷಿಕ ಸರಾಸರಿ ಲೆಕ್ಕ ಹಾಕಿ ಉಚಿತ ಕೊಡುವುದಾಗಿ ಹೇಳುತ್ತಾರೆ. ಇದು ಇವರ ಹಿಡನ್ ಅಜೆಂಡಾ ಆಗಿದೆ. ಇದರಿಂದ ಸರಾಸರಿ 120 ರಿಂದ 125 ಯೂನಿಟ್ ವ್ಯತ್ಯಾಸವಾಗುತ್ತದೆ.‌ ಸರಾಸರಿ ಬಳಕೆ ಲೆಕ್ಕ ಹಾಕುವುದು ಹಿಡನ್ ಅಜೆಂಡಾ. ಇವರು ಗ್ಯಾರಂಟಿಯಲ್ಲಿ ದೋಖಾ ಮಾಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

“ಸಿದ್ದರಾಮಯ್ಯ ಅವರದ್ದು ಚುನಾವಣೆ ಮೊದಲು ಒಂದು ಮಾತು ಈಗ ಒಂದು ಮಾತು. ಅನ್ನಭಾಗ್ಯ ಯೋಜನೆ ಜಾರಿಯಲ್ಲೂ ಸ್ಪಷ್ಟತೆ ಇಲ್ಲ. ಮೊದಲು ನಾವೇ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಈಗ ಆಹಾರ ಧಾನ್ಯ ಕೊಡುತ್ತೇವೆ ಎಂದಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರದ ಉಚಿತ ಅಕ್ಕಿಯನ್ನೂ ಬಳಸಿಕೊಂಡು ತಮ್ಮ ಕ್ರೆಡಿಟ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನ ಯಾಮಾರಿಸುವ ಕೆಲಸ ಮಾಡುತ್ತಿದೆ. 10 ಕೆಜಿಯಲ್ಲಿ ರಾಗಿ, ಜೋಳ ಸೇರಿದೆಯಾ, ಇಲ್ಲಾ ಹೆಚ್ಚುವರಿ ಕೊಡ್ತಾರಾ?” ಎಂದು ಪ್ರಶ್ನಿಸಿದ್ದಾರೆ.

“ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ದೋಖಾ ಇದೆ. ವಿಶೇಷವಾಗಿ ಬಡವರ ಮನೆಯಲ್ಲಿ ಹಿರಿಯ ಮಹಿಳೆಯರಿರುತ್ತಾರೆ. ಆನ್‌ಲೈನ್ ಅರ್ಜಿ ಹಾಕಲು ಹೇಳಿ ಅವರಿಗೆ ಯೋಜನೆ ಲಾಭ ಸಿಗದಂತೆ ಮಾಡುವ ಹುನ್ನಾರ ಅಡಗಿದೆ. ಎಲ್ಲ ಪಂಚಾಯತಿಗಳಲ್ಲಿ ಪಿಡಿಒಗಳಿದ್ದಾರೆ. ಅವರ ಮೂಲಕ ಮಾಹಿತಿ ಸಂಗ್ರಹಿಸಿ ಕೊಡಬೇಕಿತ್ತು. ಅರ್ಜಿ ಹಾಕಲು ಒಂದು ತಿಂಗಳು, ಪ್ರಕ್ರಿಯೆ ಮಾಡಲು ಒಂದು ತಿಂಗಳು ಕಾಲಹರಣ ಮಾಡುವ ಲೆಕ್ಕ ಇದರಲ್ಲಿ ಅಡಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

“ರಾಜ್ಯ ಸರ್ಕಾರವೇ ಎಲ್ಲರ ಮನೆಗಳಿಗೆ ಹೋಗಿ ಮಾಹಿತಿ ಪಡೆದು ಯೋಜನೆ ಜಾರಿ ಮಾಡಬೇಕು. ಇನ್ನು ಎಸಿ ಬಸ್ಸು, ಲಗ್ಜುರಿ ಬಸ್ ಇಲ್ಲ ಅಂತ ಹೇಳಿದ್ದಾರೆ. ಕೆಂಪು ಬಸ್ ಮಾತ್ರ ಗ್ಯಾರಂಟಿ ಅಂತ ಆಯಿತು. ಯುವ ನಿಧಿ ಯೋಜನೆಯನ್ನು 2022-23 ಪಾಸಾದ ಡಿಗ್ರಿ ಹೋಲ್ಡರ್ಸ್‌ಗೆ ಕೊಡುವುದಾಗಿ ಹೇಳುತ್ತಾರೆ. ಡಿಗ್ರಿ ಮುಗಿಸಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತೆರಳುತ್ತಾರೆ. ಹೀಗಾಗಿ ಹೆಚ್ಚಿನ ನಿರುದ್ಯೋಗಿಗಳಿಗೆ ಅನುಕೂಲ ಆಗುವುದಿಲ್ಲ. ಮತ್ತೆ ಈ ಯೋಜನೆಗಳ ಜಾರಿಗೆ ಎಷ್ಟು ಖರ್ಚಾಗುತ್ತದೆ ಎನ್ನುವುದನ್ನು ಹೇಳಿಲ್ಲ” ಎಂದಿದ್ದಾರೆ.

“ಸರ್ಕಾರ ಹೆಚ್ಚಿನ ಆದಾಯ ತರದೇ ಇರುವ ಹಣವನ್ನೇ ಖರ್ಚು ಮಾಡಿದರೆ, ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ. ನಮ್ಮ ರಾಜ್ಯ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯವಾಗಿದೆ. ಈಗಿರುವ ಆರ್ಥಿಕ ಪರಿಸ್ಥಿತಿ ಸರಿಯಾಗಿ ನಿರ್ವಹಣೆ ಮಾಡದೇ ಹೋದರೆ, ಆರ್ಥಿಕ ಹೊರೆ ಬೀಳಲಿದೆ. ಇವರು ಯಾವ ರೀತಿಯ ಸಾಲ ಪಡೆಯುತ್ತಾರೆ ಎನ್ನುವುದು ಸ್ಪಷ್ಟವಾಗಬೇಕು” ಎಂದು ಆಗ್ರಹಿಸಿದ್ದಾರೆ.

“ಇವರು ತಾವು ಮಾಡುವ ಯೋಜನೆಗಳಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ ಮಾಡಬಾರದು. ಅವರು ಮಾತಿಗೆ ತಪ್ಪಿದ್ದಾರೆ‌. ಹೇಳುವುದೊಂದು ಮಾಡುವುದೊಂದು ಮಾಡಿದ್ದಾರೆ. ರಾಜ್ಯದ ಜನತೆ ಇದೆಲ್ಲವನ್ನು ಗಮನಿಸುತ್ತಿದೆ. ರಾಜ್ಯದ ಜನರ ನಿರೀಕ್ಷೆಗಳು ಹುಸಿಯಾಗಿವೆ. ಒಟ್ಟಿನಲ್ಲಿ ರಾಜ್ಯದ ಜನರ ತೆರಿಗೆ ಹಣ ಅಭಿವೃದ್ದಿ ಯೋಜನೆಗೆ ಖರ್ಚಾಗಲಿ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...