Homeಕರ್ನಾಟಕನಮ್ಮ ಸಚಿವರಿವರು; ಮಗ್ಗಲು ಬದಲಿಸಿದ ಮಧು ಬಂಗಾರಪ್ಪನವರ ರಾಜಕೀಯ ಬದುಕು

ನಮ್ಮ ಸಚಿವರಿವರು; ಮಗ್ಗಲು ಬದಲಿಸಿದ ಮಧು ಬಂಗಾರಪ್ಪನವರ ರಾಜಕೀಯ ಬದುಕು

- Advertisement -
- Advertisement -

ಕರ್ನಾಟಕ ರಾಜಕಾರಣದ ದಿಕ್ಕುದೆಸೆಯನ್ನೇ ಬದಲಿಸುವ ತಾಕತ್ತಿನ ಮಾಸ್‌ಲೀಡರ್ ಎನಿಸಿದ್ದ ಸಾರೆಕೊಪ್ಪ ಬಂಗಾರಪ್ಪನವರ ಮುದ್ದಿನ ಮಗ ಮಧು ಬಂಗಾರಪ್ಪರ ಎರಡು ದಶಕದ ಹೊಯ್ದಾಟದ ರಾಜಕಾರಣ ಅಂತೂ ಹಳಿಗೇರಿದೆ; ಮಹತ್ವದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಮಂತ್ರಿಯಾಗುವ ಮೂಲಕ ಮಧು ರಾಜ್ಯ ರಾಜಕಾರಣದ ಮುನ್ನಲೆಗೆ ಬಂದಿದ್ದಾರೆ. ತನ್ಮೂಲಕ ಶಿವಮೊಗ್ಗ ಜಿಲ್ಲೆಯ ರಾಜಕೀಯವೂ ದೀರ್ಘ ಹೊರಳಾಟದ ಬಳಿಕ ಮಗ್ಗಲು ಬದಲಿಸಿದೆ. ಮತೀಯ ಮಸಲತ್ತಿನ ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತಾಡಬಲ್ಲ ಮಧು ಮೇಲ್ವರ್ಗದ ಲಿಂಗಾಯತ ತಂತ್ರಗಾರಿಕೆ ಎದುರಿಸುತ್ತಲೇ ಶಿವಮೊಗ್ಗ ಜಿಲ್ಲೆಯನ್ನು ಕೋಮು ರಾಜಕಾರಣದ ಗುಂಗಿನಿಂದ ಅದು ಹೇಗೆ ಹೊರತರುತ್ತಾರೆಂಬ ಕುತೂಹಲವೀಗ ಮೂಡಿದೆ.

ಹಠ-ಛಲಗಳ ಬಂಗಾರಪ್ಪನವರ ಕೌಟುಂಬಿಕ ಬಿಕ್ಕಟ್ಟಿನ ಕುಲುಮೆಯಲ್ಲಿ ರಾಜಕಾರಣಿಯಾಗಿ ರೂಪುಗೊಂಡ ಮಧು ಮೊದಲು ಸಿನೆಮಾ, ಆಡಿಯೋ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಅಣ್ಣ ಕುಮಾರ್ ಬಂಗಾರಪ್ಪನವರಿಗೆ ಅಪ್ಪ ರಾಜಕೀಯ ದೀಕ್ಷೆ ಕೊಟ್ಟಾಗಲೂ ಮಧು ರಾಜಕೀಯದತ್ತ ಆಕರ್ಷಿತರಾದವರಲ್ಲ. ಯಾವಾಗ ಹಿರಿಯ ಮಗ ಮತ್ತು ಬಂಗಾರಪ್ಪರ ನಡುವೆ ಸಾಂಸಾರಿಕ ವೈಷಮ್ಯ ಬೆಳೆಯಿತೋ ಆಗ ಅನಿವಾರ್ಯವಾಗಿ ಮಧು ಅಪ್ಪನ ಆಣತಿಯಂತೆ ರಾಜಕಾರಣ ಮಾಡಬೇಕಾಗಿ ಬಂತು. ಕುಮಾರ್ ನಟ್ಟಿರುಳಿನಲಿ ತನ್ನನ್ನು ಮನೆಯಿಂದ ಹೊರಗಟ್ಟಿದ್ದಾನೆ ಎಂದು ಸೊರಬದ ನೆಲದಲ್ಲಿ ನಿಂತು ಕಣ್ಣೀರುಗರೆಯುತ್ತ ಬಂಗಾರಪ್ಪ ಮಧುರನ್ನು ಉತ್ತರಾಧಿಕಾರಿ ಎಂದು ಘೋಷಿಸಿದ್ದರು.

ಎಸ್ ಬಂಗಾರಪ್ಪ

ಬಂಗಾರಪ್ಪ ಮೂರು ಬಾರಿ ಕುಮಾರ್‌ರನ್ನು ಸೊರಬದ ಶಾಸಕನಾಗಿ ಮಾಡಿದ್ದರು; ಅಲ್ಲೇ ಕುಮಾರ್ ಅವರ ರಾಜಕೀಯಕ್ಕೆ ಇತಿಶ್ರೀ ಹಾಡಲು ಮಧು ಪಟ್ಟಾಭಿಷೇಕಕ್ಕೆ ಶತಾಯಗತಾಯ ಪ್ರಯತ್ನಿಸಿದ್ದರು. ಆದರೆ ಬಂಗಾರಪ್ಪರ ಜೀವಿತಾವಧಿವರೆಗಿದು ಸಾಧ್ಯವಾಗಿರಲಿಲ್ಲ. 2004ರಲ್ಲಿ ಬಂಗಾರಪ್ಪ ಬಿಜೆಪಿ ಸೇರಿದಾಗ ಎಸ್.ಎಂ.ಕೃಷ್ಣ ಸರಕಾರದಲ್ಲಿ ಮಂತ್ರಿಯಾಗಿದ್ದ ಕುಮಾರ್ ತಾನು ಅಪ್ಪನನ್ನು ಹಿಂಬಾಲಿಸುತ್ತೇನೆ ಎನ್ನುತ್ತ ಮಂತ್ರಿಗಿರಿ ತೊರೆದು ಬಿಜೆಪಿ ಬಾಗಿಲಿಗೆ ಹೋಗಿನಿಂತಿದ್ದರು. ಆದರೆ ಬಂಗಾರಪ್ಪ ಕುಮಾರ್‌ಗೆ ಪ್ರವೇಶ ಸಿಗದಂತೆ ಮಾಡಿದರು; ವಾಪಸ್ ಕಾಂಗ್ರೆಸ್ ಸೇರಿಕೊಂಡ ಕುಮಾರ್‌ಗೆ ಎದುರಾಳಿಯಾಗಿ ಮಧುವನ್ನು ಬಿಜೆಪಿ ಅಭ್ಯರ್ಥಿಯಾಗಿ ಬಂಗಾರಪ್ಪ ನಿಲ್ಲಿಸಿದರು. ಪಾರ್ಲಿಮೆಂಟ್ ಮತ್ತು ಅಸೆಂಬ್ಲಿಗೆ ಜತೆಯಾಗಿ ಚುನಾವಣೆ ನಡೆದ ಆ ಸಂದರ್ಭದಲ್ಲಿ ಬಂಗಾರಪ್ಪ ಸಂಸದರಾದರೂ ಮಧುರವರಿಗೆ ಮಾತ್ರ ಗೆಲುವು ದಕ್ಕಲಿಲ್ಲ; ಅಪ್ಪನ ದೈತ್ಯ ಶಕ್ತಿ ಎದುರಿಸಿ ಗೆದ್ದು ಕುಮಾರ್ ಅಚ್ಚರಿ ಮೂಡಿಸಿದ್ದರು.

2008ರ ಚುನಾವಣೆ ಹೊತ್ತಲ್ಲಿ ಬಂಗಾರಪ್ಪ ಜೆಡಿಎಸ್‌ನಲ್ಲಿ ಇದ್ದರು. ಮಧು ಜೆಡಿಎಸ್ ಹುರಿಯಾಳಾದರೆ, ಕುಮಾರ್ ಕಾಂಗ್ರೆಸ್ ಅಭ್ಯರ್ಥಿ; ಬಂಗಾರಪ್ಪರಿಂದಲೆ ಹೊಸನಗರದ ಬಿಜೆಪಿ ಶಾಸಕನಾಗಿದ್ದ ಹರತಾಳು ಹಾಲಪ್ಪ ಗುರುವಿಗೆ ತಿರುಮಂತ್ರ ಹಾಕಿ ಬಿಜೆಪಿಯಿಂದ ಸ್ಪರ್ಧೆಗಿಳಿದಿದ್ದರು. ಅಣ್ಣ-ತಮ್ಮರ ಕಾಳಗದಲ್ಲಿ ದಾಯಾದಿ ಹಾಲಪ್ಪ ಸುಲಭವಾಗಿ ಶಾಸಕನಾದರು. 2013ರ ಚುನಾವಣೆ ವೇಳೆ ಬಂಗಾರಪ್ಪ ಇರಲಿಲ್ಲ; ತಂದೆಯ ಸಾವಿನ ಸಿಂಪಥಿಯಲ್ಲಿ ಮಧು ಜೆಡಿಎಸ್ ಶಾಸಕನಾಗಿ ಚುನಾಯಿತರಾದರು. ಅರಣ್ಯ ಸಾಗುವಳಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ರೈತರಿಗೆ ಹಕ್ಕುಪತ್ರ ಕೊಡಿಸಲು ಪಾದಯಾತ್ರೆ ಮಾಡಿದ್ದ ಮಧು ಶಾಸಕನಾಗುತ್ತಲೆ ರಾಜ್ಯ ನಾಯಕನಾಗುವ ಅವಸರಕ್ಕೆ ಬಿದ್ದರು; ರಾಜ್ಯದಾದ್ಯಂತ ಓಡಾಡುತ್ತ ಈಡಿಗರ ಮುಂದಾಳಾಗುವ ಪ್ರಯತ್ನದಲ್ಲಿ ಕ್ಷೇತ್ರದ ಮೇಲಿನ ಹಿಡಿತ ಕಳೆದುಕೊಂಡರು. ಹೀಗಾಗಿ ಮಧು 2018ರಲ್ಲಿ ಪರಾಭವ ಅನುಭವಿಸಬೇಕಾಯಿತು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

ಇದನ್ನೂ ಓದಿ: ನಮ್ಮ ಸಚಿವರಿವರು; ನೇರ ನಿಷ್ಠುರಿ, ಅಹಿಂದದ ಮುಂಚೂಣಿ ರಾಜಕಾರಣಿ ಕ್ಯಾತ್ಸಂದ್ರ ಎನ್. ರಾಜಣ್ಣ

ಈ ನಡುವೆ ಎರಡು ಬಾರಿ ಯಡಿಯೂರಪ್ಪರ ಮಗ ರಾಘವೇಂದ್ರ ವಿರುದ್ಧ ಲೋಕಸಭೆಗೆ ಜೆಡಿಎಸ್‌ನಿಂದ ಸ್ಪರ್ಧಿಸಿದ ಮಧು ಸೋಲು ಕಂಡರು. 2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದಾಗ ಸಿಎಂ ಕುಮಾರಸ್ವಾಮಿ ತನಗೆ ಪುನರ್‌ವಸತಿ ಕಲ್ಪಿಸಲಿಲ್ಲವೆಂದು ಬೇಜಾರು ಮಾಡಿಕೊಂಡ ಮಧು ಅವರಿಗೆ ಆ ಪಕ್ಷದಲ್ಲಿ ಭವಿಷ್ಯವಿಲ್ಲವೆಂಬುದು ಖಾತ್ರಿಯಾಗಿತ್ತು. ಪದೇಪದೇ ತಾನು ಬಂಗಾರಪ್ಪನವರ ಶಿಷ್ಯನೆಂದು ಹೇಳಿಕೊಳ್ಳುವ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗುತ್ತಲೆ ಕಾಂಗ್ರೆಸ್ ಸೇರಿದ ಮಧುರವರಿಗೆ ಅಲ್ಲಿ ಮಹತ್ವವೂ ದೊರೆಯಿತು. ರಾಜ್ಯ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರಾಗಿ ರಾಜ್ಯ ಸುತ್ತಿದ ಮಧು ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷರಾಗಿದ್ದರು. ಈ ಬಾರಿ ಅಣ್ಣ ಕುಮಾರ್‌ರನ್ನು ಭರ್ಜರಿ 44,352 ಮತದಂತರದಿಂದ ಮಣಿಸಿ ಎಮ್ಮೆಲ್ಲೆಯಾದರು. ಭಾವ (ಅಕ್ಕ ಗೀತಾ ಪತಿ), ಸ್ಯಾಂಡಲ್‌ವುಡ್ ಸೆಲೆಬ್ರಿಟಿ ಶಿವರಾಜ್‌ಕುಮಾರ್‌ರನ್ನು ಕಾಂಗ್ರೆಸ್ ಪ್ರಚಾರಕ್ಕೆ ಬರುವಂತೆ ಮಾಡಿ ಪಕ್ಷದಲ್ಲಿ ವರ್ಚಸ್ಸು ಹೆಚ್ಚಿಸಿಕೊಂಡಿದ್ದ ಮಧು ಪಕ್ಕದ ಶಿರಸಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಸ್ಪೀಕರ್ ಕಾಗೇರಿ ಎದುರಾಳಿಯಾಗಿದ್ದ ಸೋದರ ಮಾವ ಭೀಮಣ್ಣ ನಾಯ್ಕ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಸತತ ಐದಾರು ಚುನಾವಣೆಯಲ್ಲಿ ಸೋತಿದ್ದ ಭೀಮಣ್ಣ ಈ ಬಾರಿ ಗೆಲ್ಲಲು, ಮಧು ಕ್ಷೇತ್ರದ ಬಹುಸಂಖ್ಯಾತ ದೀವರ ನಾಯಕರಲ್ಲಿ ಒಗ್ಗಟ್ಟು ಮೂಡಿಸಿದ್ದೇ ಕಾರಣವೆಂಬ ಮಾತು ಸಾಮಾನ್ಯವಾಗಿದೆ.

ಕುಮಾರ್ ಬಂಗಾರಪ್ಪ

ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರ ಜತೆಗೂ ಸಮಾನ ಸಂಬಂಧ ಕಾಯ್ದುಕೊಂಡಿದ್ದ ಮಧು ಈಡಿಗ ಸಮುದಾಯದ ಕೋಟಾದಲ್ಲಿ ಬಿ.ಕೆ.ಹರಿಪ್ರಸಾದ್‌ರಂಥ ಹಿರಿಯ ಮತ್ತು ದಿಲ್ಲಿ ದರ್ಬಾರಿನಲ್ಲಿ ಶ್ರಮದಾತರಿದ್ದ ಪ್ರಭಾವಿಯನ್ನು ಹಿಂದಿಕ್ಕಿ ಮಂತ್ರಿಗಿರಿ ಗಳಿಸಲು ಸಫಲರಾಗಿದ್ದಾರೆ. ಒಂದು ಹಂತದಲ್ಲಿ ಸಿದ್ದು ವಿರೋಧಿ ಹರಿ ಪರವಾಗಿ ಡಿಕೆಶಿ ವಕಾಲತ್ತು ಮಾಡಿದ್ದರೆನ್ನಲಾಗುತ್ತಿದೆ; ಆದರೆ ಮಲೆನಾಡು ಮತ್ತು ಉತ್ತರ ಕರಾವಳಿಯಲ್ಲಿ ಗಣನೀಯವಾಗಿರುವ ದೀವರ ಮೇಲೆ ಪ್ರಭಾವ ಬೀರಬಲ್ಲ ಯುವ ನಾಯಕ ಮಧು ಮಂತ್ರಿಯಾದರೆ ಫಾಯ್ದೆ ಜಾಸ್ತಿಯೆಂಬ ಲೆಕ್ಕಾಚಾರ ಸಿದ್ದು ಅವರದಾಗಿತ್ತೆಂಬ ಮಾತು ಕಾಂಗ್ರೆಸ್ ಬಿಡಾರದಿಂದ ಹೊರಬರುತ್ತಿದೆ. ಸ್ವಜಾತಿಗಳವರನ್ನು ಪ್ರಭಾವಿಸುವ ಸಾಮರ್ಥ್ಯ ಹರಿಗಿಂತಲೂ ಮಧುಗೆ ಜಾಸ್ತಿ ಎಂಬ ತರ್ಕ ಕರಾವಳಿ ಮತ್ತು ಮಲೆನಾಡಿನ ರಾಜಕೀಯ ಪಡಸಾಲೆಯಲ್ಲಿದೆ. ಜನಾರ್ದನ ಪೂಜಾರಿ, ಕಾಗೋಡು ತಿಮ್ಮಪ್ಪರಂಥ ಮುತ್ಸದ್ಧಿಗಳ ವಯೋ ಸಹಜ ನಿವೃತ್ತಿ, ಗೋಪಾಲ ಪೂಜಾರಿ, ವಿನಯ್‌ಕುಮಾರ್ ಸೊರಕೆ ಸೋಲು, ಮಾಲಿಕಯ್ಯ ಗುತ್ತೇದಾರ್ ಪಕ್ಷಾಂತರ ಮತ್ತು ಬೇಳೂರು ಗೋಪಾಲಕೃಷ್ಣ ಮತ್ತು ಭೀಮಣ್ಣ ನಾಯ್ಕ್‌ರಿಗೆ ಕ್ಷೇತ್ರದಾಚೆ ಪ್ರಭಾವ ಬೆಳೆಸಿಕೊಳ್ಳಲಾಗದ ನಿರ್ವಾತ ಸಂದರ್ಭದಲ್ಲಿ ಮಧು ಈಡಿಗ ಸಮುದಾಯದ ವರ್ಚಸ್ವಿ ಮುಂದಾಳಾಗಿ ಬೆಳೆಯುವ ಸೂಚನೆಗಳು ಗೋಚರಿಸುತ್ತಿವೆ.

ಮಧು ಉತ್ಸಾಹಿ ತರುಣ; ತಂದೆಯಂತೆ ಹಿಂದುಳಿದವರ ಮುಂದಾಳಾಗಬೇಕೆಂಬ ಒಳ ತುಡಿತದವರು. ಆದರೆ ಸ್ವಪಕ್ಷ ಮತ್ತು ವಿರೋಧ ಪಕ್ಷದಲ್ಲಿ ಘಟಾನುಘಟಿಗಳಿರುವ ಶಿವಮೊಗ್ಗ ರಾಜಕಾರಣದಲ್ಲಿ ಎಚ್ಚರಿಕೆಯ ಹೆಜ್ಜೆಗಳನ್ನಿಡಬೇಕಾದ ಪರಿಸ್ಥಿತಿಯಿದೆ. ಶಿವಮೊಗ್ಗ ಮತೀಯವಾಗಷ್ಟೇ ಅಲ್ಲ, ರಾಜಕೀಯವಾಗಿಯೂ ಸೂಕ್ಷ್ಮವೇ. ಹಿಂದು-ಮುಸ್ಲಿಮ್ ಎರಡೂ ಕಡೆ ಅತಿರೇಕಿಗಳಿರುವ ಶಿವಮೊಗ್ಗ ನಗರದಲ್ಲಿ ಕೋಮು ಸೌಹಾರ್ದ ಬೆಳೆಸುವ ಹೊಣೆಗಾರಿಕೆ ಮಧು ಮೇಲಿದೆ. ಯಾರದೋ ರಾಜಕೀಯ ತೆವಲಿಗೆ ಅಮಾಯಕರ ಬದುಕು ಬರ್ಬಾದ್ ಆಗಬಾರದು. ಅರಣ್ಯ ಸಾಗುವಳಿ ಮಾಡಿ ಬದುಕು ಕಟ್ಟಿಕೊಂಡಿರುವ ರೈತರ ಸಮಸ್ಯೆ ಶಾಶ್ವತ ಪರಿಹಾರ ಕಾಣಬೇಕಾಗಿದೆ. ಜಿಲ್ಲೆಯ ಆರ್ಥಿಕ ಮೂಲವಾದ ಅಡಿಕೆ ತೋಟಗಳಿಗೆ ತಗಲುತ್ತಿರುವ ನಾನಾ ನಮೂನೆಯ ರೋಗ, ಅಡಿಕೆ ನಿಷೇಧ ಭಯ, ವಿದೇಶಿ ಅಡಿಕೆ ಹಾವಳಿ ಮತ್ತು ಅಸ್ಥಿರ ಧಾರಣೆಯಿಂದ ತೋಟ ಮಾಡುವವರು ಕಂಗೆಟ್ಟಿದ್ದಾರೆ. ಕಸ್ತೂರಿರಂಗನ್ ವರದಿ ತೂಗುಗತ್ತಿ ಮಲೆನಾಡಿಗರನ್ನು ಸತಾಯಿಸುತ್ತಿದೆ. ಈ ಸವಾಲುಗಳನ್ನೆಲ್ಲ ಮಧು ಗಂಭೀರವಾಗಿ ಪರಿಗಣಿಸಿ ಜನಪರವಾಗಿ ಉತ್ತರಿಸಿದರಷ್ಟೇ ಶಿವಮೊಗ್ಗದ ರಾಜಕಾರಣದಲ್ಲಿ “ಸ್ಥಿರ”ವಾಗಲು ಸಾಧ್ಯ ಎಂಬ ಮಾತು ಕೇಳಿಬರುತ್ತಿದೆ.

ಭೀಮಣ್ಣ ನಾಯ್ಕ್

ಸಚಿವ ಮಧುರವರಿಗೆ ಸಿಕ್ಕಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯೂ ಸಹ ಗಂಭೀರ ಹೋಮ್ ವರ್ಕ್‌ನ ಅನಿವಾರ್ಯತೆಯದ್ದಾಗಿದೆ. ಹಿಜಾಬ್‌ನಂಥ ಅನವಶ್ಯಕ ವಿವಾದವನ್ನು ಹಿಂದಿನ ಬಿಜೆಪಿ ಸರಕಾರ ಸೃಷ್ಟಿಸಿಹೋಗಿದೆ; ಎಳೆಯರ ಮನಸ್ಸು ಕೆಡಿಸುವ ಕೇಸರಿ ಕೆಸರನ್ನು ಪಠ್ಯಪುಸ್ತಕದಲ್ಲಿ ತುಂಬಲಾಗಿದೆ. ಈ ಸಿಕ್ಕುಗಳನ್ನೆಲ್ಲ ಮಧು ಸೂಕ್ಷ್ಮವಾಗಿ ಬಿಡಿಸಬೇಕಾಗಿದೆ. ಸರಕಾರಿ ಶಾಲೆಗಳು ದುಬಾರಿ ಖಾಸಗಿ ಕಾನ್ವೆಂಟ್‌ಗಳ ಜತೆ ಪೈಪೋಟಿ ನಡೆಸಲಾಗದೆ ಸೋಲುತ್ತಿವೆ. ಕನ್ನಡ ಮಾಧ್ಯಮದಲ್ಲಿ ಕಲಿತರೆ ಹೊಟ್ಟೆಪಾಡಿನ ಉದ್ಯೋಗಕ್ಕೆ ತೊಂದರೆ ಇಲ್ಲ ಎಂಬಂಥ ವಾತಾವರಣ ಸೃಷ್ಟಿ ಆಗಬೇಕಿದೆ.

ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ಬಂದಿರುವ ಗ್ರಾಮೀಣ ಕೃಪಾಂಕ-ಗ್ರಾಮೀಣ ಮೀಸಲಾತಿಯಲ್ಲಿನ ನ್ಯೂನತೆಯನ್ನು ಶಿಕ್ಷಣ ಸಚಿವ ಮಧು ಸರಿಪಡಿಸಬೇಕಾಗಿದೆ. ಬಂಗಾರಪ್ಪ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಾಂತಿಕಾರಿ ನಿಯಮ ರೂಪಿಸಿದ್ದರು. ಆದರೆ ಗ್ರಾಮೀಣ ಮೀಸಲಾತಿಯನ್ನು ಆಧುನಿಕ ಸಕಲ ಸೌಲಭ್ಯದ ಶಿಕ್ಷಣ ಪೂರೈಸಿರುವ ಅನರ್ಹ ನಗರವಾಸಿಗಳು ಕೂಡ ಲಪಟಾಯಿಸುತ್ತಿದ್ದಾರೆ. ಹಾಸ್ಟೆಲ್ ಮತ್ತಿತರ ಶೈಕ್ಷಣಿಕ ಸೌಲಭ್ಯದ ಕೊರತೆಯಿಂದಾಗಿ ಅನಿವಾರ್ಯವಾಗಿ ಪಟ್ಟಣದ ಶಾಲೆಯಲ್ಲಿ ಕಲಿತ ಅಸಹಾಯಕ ಹಳ್ಳಿಗಾಡಿನ ಅಭ್ಯರ್ಥಿಗಳಿಗೆ ಗ್ರಾಮೀಣ ಮೀಸಲಾತಿ ಸಿಗುತ್ತಿಲ್ಲ; ಗ್ರಾಮೀಣ ಸಮಸ್ಯೆ-ಸಂಕಷ್ಟ ಒಂಚೂರೂ ಗೊತ್ತಿಲ್ಲದ, ನಗರದ ಸಕಲ ಸವಲತ್ತಲ್ಲಿ ಬೆಳೆದ ವಿದ್ಯಾರ್ಥಿಗಳು, ನಗರದ ಅಂಚಿನ ಹೈ-ಫೈ ಶಾಲೆಯಲ್ಲಿ ವಿದ್ಯಾರ್ಜನೆ ಮಾಡಿದರೂ ಅಂಥವರಿಗೆ ಗ್ರಾಮೀಣ ಮೀಸಲಾತಿ ಸಿಗುತ್ತಿದೆ. ಶಾಲಾ ಕಟ್ಟಡ ಗ್ರಾಮೀಣ ಪ್ರದೇಶದಲ್ಲಿರುವ ಸಂಗತಿಯಷ್ಟೇ ಗ್ರಾಮೀಣ ಮೀಸಲಾತಿ ಮಾನದಂಡ ಆಗಿರುವುದು ಸಾಮಾಜಿಕ ಅನ್ಯಾಯವೇ ಸರಿ. ವಿದ್ಯಾರ್ಥಿಗಳ ಗ್ರಾಮೀಣ ಹಿನ್ನೆಲೆ ಮಾನದಂಡ ಆಗಬೇಕೇ ಹೊರತು ಶಾಲೆಯ ಭೌತಿಕ ಇರುವಿಕೆ ಅಲ್ಲ. ಈ ವಿಪರ್ಯಾಸ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪಗೆ ಅರ್ಥವಾದೀತು ಎಂಬ ನಂಬಿಕೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...